ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.
ಕಣ್ಣು ಮುಚ್ಚಾಲೆ : ಇದು Hide and Seek ಗೆ ಹೋಲಿಸಬಹುದು, ಇದು ಮಕ್ಕಳ ಆಟ, ಇದನ್ನು ಸುಮಾರು ಐದರಿ೦ದ ಹತ್ತು ಮಕ್ಕಳಗು೦ಪು ಆಡಬಹುದು, ಗೋಡೆಗೆ ಮುಖ ಮಾಡಿ ಕಣ್ಣು ಮುಚ್ಚಿಕೊ೦ಡು ಒ೦ದರಿ೦ದ ನೂರರವರೆಗೆ ಎಣಿಸುತ್ತಿರುವಾಗ ಉಳಿದವರು ಹೋಗಿ ಬಚ್ಚಿಟ್ಟುಕೊಳ್ಳಬೇಕು. ಎಣಿಕೆ ಮುಗಿದನ೦ತರ ಬಚ್ಚಿಟ್ಟುಕೊ೦ಡಿರುವವರನ್ನು ಹುಡುಕಿ ಅವರ ಹೆಸರನ್ನು ಕೂಗಿ ಗೋಡೆಗೆ ಕೈ ತಾಕಿಸಬೇಕು.
ಬುಗುರಿ : ಈ ಆಟವನ್ನು ಸಾಮಾನ್ಯವಾಗಿ ಗಂಡು ಮಕ್ಕಳು ಹಳ್ಳಿಗಳಲ್ಲಿ ಬುಗುರಿ ಆಟವನ್ನು ಹೆಚ್ಚಾಗಿ ಆಡುತ್ತಾರೆ. ಈ ಬುಗುರಿ ಆಟಕ್ಕೆ ಇತಿಹಾಸದ ಹಿನ್ನೆಲೆ ಸಮೃದ್ದಿಯಾಗಿ ಮಹಾಭಾರತ ಕಥೆಯಲ್ಲಿ ಪಾಂಡವರು ಮತ್ತು ಕೌರವರು ಆಟದ ಸನ್ನಿವೇಶದಲ್ಲಿ ಕಾಣಿಸುತ್ತದೆ.
ಹಳ್ಳಿಗಳಲ್ಲಿ ಈಗಲೂ ಕೆಲುವು ಕಡೆ ಈ ಆಟದ ಕುರುಹು ಕಾಣಬರುತ್ತದೆ. ಉದಾ: ಗೌರಿಬಿದನೂರಿನ ತಾಲೂಕಿನ ಮಂಚೇನ ಹಳ್ಳಿಯಾ ” ಭೀಮನ ಬುಗುರಿ (ಬೆಟ್ಟ).
ಈ ಆಟದ ನಿಯಮ ಈ ರೀತಿ : ಮೊದಲು ಹುಡಗರು ಬುಗುರಿಯನ್ನು ದಾರದಿಂದ ಹೊಸೆದ ಚಾಟಿಯನ್ನು ಸುತ್ತಿ ಆಟದಲ್ಲಿ ಇರುವ ಹುಡುಗುರು ಬಂಗರವನ್ನು ಸ್ಪರ್ಶಿಸಿ ತಕ್ಷಣ ನೆಲಕ್ಕೆ ಹಾಕಿ ನಂತರ ಚಾಟಿಯ ಸಹಾಯದಿಂದ ಯಾರು ಕ್ಯಲ್ಲಿ ಹಿಡಿಯುತ್ತಾರು… ಅವರು ಆಟ ಆಡಲು ಸಿದ್ದವಾಗುತ್ತಾರೆ. ಅಂತಿಮವ ಬುಗುರಿಯನ್ನು ನೆಲದಲ್ಲಿ ಇಡುತ್ತಾನೆ. ಮಿಕ್ಕವರು ನೆಲದಲ್ಲಿ ಬಿದ್ದ ಬುಗುರಿಗೆ ಗುರಿ ಇಟ್ಟು ಹೋಡೆದು ಗುನ್ನ (ತೂತು) ಮಾಡುತ್ತಾರೆ.
ಹೀಗೆಯೇ ಆಟ ಮುಂದುವರೆಯುತ್ತದೆ. ಈ ಆಟದಲ್ಲಿ ಬುಗುರಿಗಳು ಎರಡು ಹೋಳು ಆಗುವುದು ಸರ್ವೇ ಸಾಮಾನ್ಯ. ನೆಲಕ್ಕೆ ಬುಗುರಿ ಬೀಳದ ಹಾಗೆ ಕ್ಯೆಲ್ಲಿ ಹಿಡಿದರೆ ಅದಕ್ಕೆ “ಅಂತರ ಮಂಗ” ಎನ್ನುತ್ತಾರೆ. ಆಟಗಾರನ ಅನುಭವದಿಂದ ಬುಗುರಿಯನ್ನು ಅನೇಕ ರೀತಿ ಆಡಿಸುತ್ತಾನೆ.
ಕುಂಟು ಬಿಲ್ಲೆ : ಇದು ಚಿಕ್ಕ ಹೆಣ್ಣು ಮಕ್ಕಳು ಆಡುವ ಆಟ. ಚೌಕಾಕಾರಾದ ಮನೆಗಳನ್ನು ಬರೆದು ಮನೆಯಿಂದ ಮನೆಗೆ ಕುಣಿಯುತ್ತ ಆಡುವ ಆಟ
ಚಿನ್ನಿ ದಾಂಡು : ಚಿನ್ನಿ ದಾಂಡು ಅಥವಾ ಗಿಲ್ಲಿ ದಾಂಡು ಅಥವಾ ಹಾಣೆ ಗೆಂಡೆ ಅಥವಾ ಚಿನ್ನಿ ಕೋಲು ಒಂದು ಜನಪ್ರಿಯ ಗ್ರಾಮೀಣ ಆಟ. ಇದರಲ್ಲಿ ಮರದ ಕೋಲಿನಿಂದ ಮಾಡಿದ ಒಂದು ಚಿಕ್ಕ ಚಿನ್ನಿ ಅಥವಾ ಗಿಲ್ಲಿ ಅಥವಾ ಹಾಣೆ ಮತ್ತು ಸ್ವಲ್ಪ ದೊಡ್ಡದಾದ ಒಂದು ದಾಂಡು ಅಥವಾ ಕೋಲು ಇವುಗಳ ಸಹಾಯದಿಂದ ಆಡಲಾಗುತ್ತದೆ . ಇದನ್ನು ವೈಯಕ್ತಿಕವಾಗಿ ಅಥವಾ ತಂಡಗಳಾಗಿ ಆಡಬಹುದು.
ವ್ಯವಸ್ಥೆ/ಸಲಕರಣೆಗಳು : ಆಡಲು ಸಾಕಷ್ಟು ಜಾಗ.
ಸುಮಾರು ಒಂದು ಗೇಣು ಉದ್ದದ ನೆಲದ ಮೇಲೆ ಕೊರೆದ ಒಂದು ಗುಂಡಿ / ಕುಳಿ / ಉಳ್ಳ.
ಗುಂಡಿಯಷ್ಟೇ ಉದ್ದವಾದ ಮರದ ಕೋಲಿನಿಂದ ಮಾಡಿದ ಚಿನ್ನಿ / ಹಾಣೆ / ಗಿಲ್ಲಿ. ಇದರ ಎರಡೂ ಬದಿ ಚೂಪಾಗಿರಬೇಕು.
ಚಿನ್ನಿಗಿಂತ ಕನಿಷ್ಠ ಎರಡೂವರೆ-ಮೂರು ಪಟ್ಟು ಉದ್ದವಾದ, ಮರದ ಕೋಲಿನಿಂದ ಮಾಡಿದ ನೇರವಾದ ದಾಂಡು.
ಲಗೋರಿ : ಲಗೋರಿ !!! ಅಂತ ಕಿರುಚಿದಾಗ ಮೈ ಎಲ್ಲ ಜುಮ್ ಅನ್ನುವುದು. ನಮ್ಮ ನಾಡಿನಲ್ಲಿ ಹಲವಾರು ವರ್ಷಗಳಿಂದ ಮಕ್ಕಳಿಂದ ಹಿಡಿದು ಹಿರಿಯರ ತನಕ ಸಾಯಂಕಾಲ ಎಲ್ಲರೂ ಜೊತೆಗೂಡಿ ಆಡುತ್ತಿದ್ದ ಆಟ ಲಗೋರಿ. ಈಗ ಲಗೋರಿ ಆಡುವವರು ಅತಿ ಕಡಿಮೆ, ಗ್ರಾಮ್ಯ ಪ್ರದೇಶಗಳಲ್ಲಿ ಮಾತ್ರ ಸಿಗುವವರು.
ಈ ಆಟವನ್ನು ಇಬ್ಬರಿಗಿಂತ ಹೆಚ್ಚಾಗಿ ಎಷ್ಟು ಜನರು ಕೂಡ ಆಡಬಹುದು. ಅವರನ್ನು ಎರಡು ತಂಡಗಳಲ್ಲಿ ವಿಭಜಿಸಿವವರು. ಮೊದಲನೆಯ ತಂಡದವರು ೭ ರಿಂದ ೯ ಕಲ್ಲುಗಳನ್ನು ಒಂದರ ಮೇಲೊಂದು ಜೋಡಿಸುವರು. ಹಾಗೆ ಜೋಡಿಸಿದ ಕಲ್ಲುಗಳಿಗೆ ಸ್ವಲ್ಪದೂರದಿಂದ ಮತ್ತೊಂದು ತಂಡದವರು ಒಂದು ಚೆಂಡನ್ನು ಎಸೆಯುವರು. ಆ ಚೆಂಡು ತಾಗಿ ಕಲ್ಲುಗಳು ಚದುರಿದಾಗ, ಮೊದಲನೆಯ ತಂಡದವರು ಅದನ್ನು ಮತ್ತೆ ಯಥಾಸ್ಥಿತಿಗೆ ತರಲು ಪ್ರಯತ್ನಿಸುವರು. ಅದನ್ನು ತಡೆಯುವುದೇ ಎದುರಾಳಿ ತಂಡದ ಗುರಿ.
ಮೊದಲನೆಯ ತಂಡದವರು ಆ ಕಲ್ಲುಗಳನ್ನು ಜೋಡಿಸುವ ಪ್ರಯತ್ನದಲ್ಲಿರುವಾಗ ಎದುರಾಳಿ ತಂಡದವರು ಆ ಚೆಂಡನ್ನು ಯಾರೊಬ್ಬರಿಗೆ ತಾಗುವಂತೆ ಎಸೆದರೆ, ತಾಗಿದಾತ ಆಟದಿಂದ ಹೊರಗೆ ಹೋಗುತ್ತಾನೆ. ಹೀಗೆ ಎದುರಾಳಿಯ ಪ್ರತಿಯೊಬ್ಬರನ್ನು ಆಟದಿಂದ ಹೊರ ಕಳುಹಿಸುವುದೇ ಆಟದ ಗುರಿ. ಈ ಸಮಯದಲ್ಲಿ ಎದುರಾಳಿ ತಂಡವೇನಾದರು ಕಲ್ಲುಗಳನ್ನು ಜೋಡಿಸುವುದರಲ್ಲಿ ಯಶಸ್ವಿಯಾದಲ್ಲಿ ಆ ತಂಡವೇ ಈ ಆಟದಲ್ಲಿ ವಿಜಯಿಗಳು.
ಚನ್ನೆಮಣೆ : ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು. ಮತ್ತೆ ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು… ಹೀಗೆ ಸಾಗುತ್ತದೆ ಚನ್ನೆಮನೆ ಆಟ. ಎರಡು ಆಟಗಾರರು, ಪ್ರತಿಯೊಬ್ಬರಿಗೂ ೭ ಮನೆಗಳು. ಪ್ರತೀ ಮನೆಗಳಲ್ಲೂ ೪ ಕಾಳುಗಳು. ಮೊದಲು ಆಟ ಶುರುಮಾಡಿದವ ತನ್ನ ೭ ಮನೆಗಳಲ್ಲಿ ಯಾವುದಾದರೊಂದು ಮನೆಯನ್ನು ಆಯ್ದುಕೊಂಡು ಅದರಲ್ಲಿರುವ ೪ ಕಾಳುಗಳನ್ನು ತನ್ನ ಹಾಗೂ ತನ್ನ ಸಹ ಆಟಗಾರನ ಮನೆಗಳಿಗೆ ಹಂಚುತ್ತಾ ಹೋಗಬೇಕು.
ಹೀಗೆ ಹಂಚುತ್ತಾ ಹೋಗುವಾಗ ಮತ್ತೆ ೪ ಕಾಳುಗಳು ಒಟ್ಟುಗೂಡಿದರೆ ಮನೆಯಲ್ಲಿ ಕರು ಹಾಕಿತೆಂದೂ, ಆ ಕರು ಮನೆಯ ಯಜಮಾನನ (ಆ ೭ ಮನೆಯ ಆಟಗಾರ ಮನೆ ಒಡೆಯ) ಸ್ವತ್ತೆಂದೂ, ಅವನು ಅದನ್ನು ತೆಗೆದಿರಿಸಿಕೊಳ್ಳುತ್ತಾನೆ. ಒಬ್ಬನ ಆಟ ಮುಗಿಯುವುದು ಆತನ ಕೈಯಲ್ಲಿರುವ ಕಾಳುಗಳು ಖಾಲಿಯಾಗಿ, ಮುಂದೆ ಕಾಳಿರದ ಬರಿಯ ಖಾಲಿ ಮನೆಗಳು ಸಿಕ್ಕಾಗ….
ಹೀಗೆ ಚದುರಿಸಿ ಹಂಚುವ, ಕೂಡಿಸುವ ಆಟದಲ್ಲಿ ಯಾರಾದರೊಬ್ಬರು ಗೆಲ್ಲುತಾರೆ (ಹೆಚ್ಹು ಕಾಳನ್ನು ಕೂಡಿ ಹಾಕಿದವನು).
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್ಲೈನ್, ಗ್ಯಾಸ್ ಟರ್ಮಿನಲ್ಸ್ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್ ಕೋಸ್ಟ್ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.