ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.

ಕೊನೆಗೆ ಹೈಹೀಲ್ಡ್ ಚಪ್ಪಲಿಯಲ್ಲೇ ಎತ್ತರವಾಗಿ ಸಮಾಧಾನ ಪಟ್ಟುಕೊಂಡು ಬಿಡುತ್ತೀರ. ಆದರೆ ಎಲ್ಲರೂ ನಿಮ್ಮಂತೆ ಅಲ್ಲ. ಎತ್ತರಾಗಲಿಕ್ಕಾಗಿಯೇ ಒಂದಿಷ್ಟು ಹಾರ್ಮೋನ್ ಔಷಧಿಗಳ ಮೊರೆ ಹೋಗುತ್ತಾರೆ. ಎತ್ತರ ಹೆಚ್ಚಿಸುವ ಸಿದ್ಧ ಆಹಾರ ಪದಾರ್ಥಗಳನ್ನು ಸೇವಿಸತಕ್ಕದು.
ಆದರೆ ನಿಮಗೆ ಗೊತ್ತಾ? ಕೆಲವು ರೀತಿಯ ಆಹಾರವನ್ನು ಸೇವಿಸುವುದರಿಂದ ನಿಮ್ಮ ದೇಹದ ಎತ್ತರವನ್ನು ನೈಸರ್ಗಿಕವಾಗಿ ಹೆಚ್ಚಿಸಿಕೊಳ್ಳಬಹುದು. ಆ ಆಹಾರಗಳು ಯಾವುವೆಂದು ಇಲ್ಲಿ ತಿಳಿದುಕೊಳ್ಳಿ. ಎತ್ತರ ಹೆಚ್ಚಿಸುವ ಆಹಾರಗಳು:
ಎತ್ತರ ಹೆಚ್ಚಿಸುವ ಆಹಾರಗಳು:

ಎತ್ತರ ಹೆಚ್ಚಿಸುವಲ್ಲಿ ಅತಿ ಅಗತ್ಯವಿರುವುದು ವಿಟಮಿನ್ ಡಿ. ಕ್ಯಾಲ್ಸಿಯಂ ದೇಹಕ್ಕೆ ಹೆಚ್ಚು ಸೇರಿದಷ್ಟು ಮೂಳೆಗಳ ಬೆಳವಣಿಗೆಗೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಆದ್ದರಿಂದ ವಿಟಮಿನ್ ಡಿ ಅಂಶವನ್ನು ಹೊಂದಿರುವ ಮೀನು, ಧಾನ್ಯಗಳು, ಮೊಟ್ಟೆ, ಟೋಫು, ಸೋಯಾ ಹಾಲು, ಸೋಯಾ ಬೀನ್, ಅಣಬೆ, ಬಾದಾಮಿ ಸೇವನೆ ಒಳ್ಳೆಯದು.

ಎತ್ತರ ಏರಬೇಕೆಂದರೆ ದೇಹಕ್ಕೆ ಪ್ರೊಟೀನ್ ಅಂಶ ಅತ್ಯವಶ್ಯಕ. ಪ್ರೊಟೀನ್ ಹೆಚ್ಚಿದ್ದಷ್ಟು ಹೊಸ ಜೀವಕೋಶಗಳು ಉತ್ಪತ್ತಿಯಾಗುತ್ತದೆ. ಆದ್ದರಿಂದ ಪ್ರೊಟೀನ್ ಹೆಚ್ಚಿರುವ ಹಾಲು, ಚೀಸ್, ಬೀನ್ಸ್, ಕುಂಬಳಕಾಯಿ, ಕಲ್ಲಂಗಡಿಯ ಬೀಜ ಇವುಗಳನ್ನು ತಿನ್ನಬಹುದು. ಚಿಕನ್, ಓಟ್ ಮೀಲ್, ಸೊಯಾ ಬೀನ್ ಮತ್ತು ಇನ್ನಿತರ ದವಸಗಳು ಎತ್ತರವನ್ನು ಹೆಚ್ಚಿಸುತ್ತದೆ.

ದೇಹದ ಅಂಗಗಳು ಆರೋಗ್ಯಕರವಾಗಿ ಕಾರ್ಯನಿರ್ವಹಿಸಬೇಕೆಂದರೆ ವಿಟಮಿನ್ ಎ ಸಹಾಯ ಬೇಕೇ ಬೇಕು. ವಿಟಮಿನ್ ಎ ಪೂರಿತ ಆಹಾರ ಸೇವನೆಯಿಂದ ಹೊಳೆಯುವ ತ್ವಚೆಯನ್ನೂ ಪಡೆಯಬಹುದು. ಪಾಲಾಕ್, ಬೀಟ್ ರೂಟ್, ಕ್ಯಾರೆಟ್, ಚಿಕನ್, ಪಪ್ಪಾಯ, ಪೀಚ್, ಹಾಲು, ಟೊಮೆಟೊ, ಬಟಾಣಿ, ಅಪ್ರಿಕಾಟ್ ಮುಂತಾದವುಗಳಲ್ಲಿ ವಿಟಮಿನ್ ಎ ಹೆಚ್ಚಿದೆ. ಟೊಮೆಟೊ, ಕ್ಯಾರೆಟ್, ಬೀಟ್ ರೂಟ್ ಇವುಗಳ ಜ್ಯೂಸ್ ಗಳನ್ನೂ ಸೇವಿಸಬಹುದು.

ಕ್ಯಾಲ್ಸಿಯಂ ಮೂಳೆಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಹಾಲು, ಚೀಸ್, ಮೊಟ್ಟೆಯನ್ನು ಪ್ರತಿ ದಿನ ಸೇವಿಸುತ್ತಿದ್ದರೆ ಎತ್ತರ ಹೆಚ್ಚುತ್ತದೆ. ಈ ಆಹಾರಗಳು ರುಚಿಕರ ಮತ್ತು ಹೊಟ್ಟೆ ತುಂಬುವುದಷ್ಟೇ ಅಲ್ಲ, ಆರೋಗ್ಯವನ್ನು ಹೆಚ್ಚಿಸುತ್ತದೆ.

ದೈಹಿಕ ಬೆಳವಣಿಗೆಗೆ ಖನಿಜಾಂಶದ ಅಗತ್ಯ ಹೆಚ್ಚಿದೆ. ಇದು ದೇಹದಲ್ಲಿ ರಕ್ತ ಸಂಚಲನವನ್ನೂ ಅಭಿವೃದ್ಧಿ ಪಡಿಸುತ್ತದೆ. ಆದ್ದರಿಂದ ಖನಿಜಾಂಶ ಹೆಚ್ಚಿರುವ ಬೀನ್ಸ್, ಬ್ರೊಕೊಲಿ, ಪಾಲಾಕ್, ಹೂಕೋಸು, ಕುಂಬಳಕಾಯಿ, ಕ್ಯಾರೆಟ್, ಬಾಳೆಹಣ್ಣು, ದ್ರಾಕ್ಷಿ ಇಂತಹ ಆಹಾರಗಳನ್ನು ಸೇವಿಸಿದರೆ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್, ಹೆಸರಿನ ಹಕ್ಕು (naming rights)…
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.
ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…
ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್ಗಟ್ಟೆ ಕಂಪ್ಲೆಂಟ್ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…
ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…