ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.

ಕೊನೆಗೆ ಹೈಹೀಲ್ಡ್ ಚಪ್ಪಲಿಯಲ್ಲೇ ಎತ್ತರವಾಗಿ ಸಮಾಧಾನ ಪಟ್ಟುಕೊಂಡು ಬಿಡುತ್ತೀರ. ಆದರೆ ಎಲ್ಲರೂ ನಿಮ್ಮಂತೆ ಅಲ್ಲ. ಎತ್ತರಾಗಲಿಕ್ಕಾಗಿಯೇ ಒಂದಿಷ್ಟು ಹಾರ್ಮೋನ್ ಔಷಧಿಗಳ ಮೊರೆ ಹೋಗುತ್ತಾರೆ. ಎತ್ತರ ಹೆಚ್ಚಿಸುವ ಸಿದ್ಧ ಆಹಾರ ಪದಾರ್ಥಗಳನ್ನು ಸೇವಿಸತಕ್ಕದು.
ಆದರೆ ನಿಮಗೆ ಗೊತ್ತಾ? ಕೆಲವು ರೀತಿಯ ಆಹಾರವನ್ನು ಸೇವಿಸುವುದರಿಂದ ನಿಮ್ಮ ದೇಹದ ಎತ್ತರವನ್ನು ನೈಸರ್ಗಿಕವಾಗಿ ಹೆಚ್ಚಿಸಿಕೊಳ್ಳಬಹುದು. ಆ ಆಹಾರಗಳು ಯಾವುವೆಂದು ಇಲ್ಲಿ ತಿಳಿದುಕೊಳ್ಳಿ. ಎತ್ತರ ಹೆಚ್ಚಿಸುವ ಆಹಾರಗಳು:
ಎತ್ತರ ಹೆಚ್ಚಿಸುವ ಆಹಾರಗಳು:

ಎತ್ತರ ಹೆಚ್ಚಿಸುವಲ್ಲಿ ಅತಿ ಅಗತ್ಯವಿರುವುದು ವಿಟಮಿನ್ ಡಿ. ಕ್ಯಾಲ್ಸಿಯಂ ದೇಹಕ್ಕೆ ಹೆಚ್ಚು ಸೇರಿದಷ್ಟು ಮೂಳೆಗಳ ಬೆಳವಣಿಗೆಗೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಆದ್ದರಿಂದ ವಿಟಮಿನ್ ಡಿ ಅಂಶವನ್ನು ಹೊಂದಿರುವ ಮೀನು, ಧಾನ್ಯಗಳು, ಮೊಟ್ಟೆ, ಟೋಫು, ಸೋಯಾ ಹಾಲು, ಸೋಯಾ ಬೀನ್, ಅಣಬೆ, ಬಾದಾಮಿ ಸೇವನೆ ಒಳ್ಳೆಯದು.

ಎತ್ತರ ಏರಬೇಕೆಂದರೆ ದೇಹಕ್ಕೆ ಪ್ರೊಟೀನ್ ಅಂಶ ಅತ್ಯವಶ್ಯಕ. ಪ್ರೊಟೀನ್ ಹೆಚ್ಚಿದ್ದಷ್ಟು ಹೊಸ ಜೀವಕೋಶಗಳು ಉತ್ಪತ್ತಿಯಾಗುತ್ತದೆ. ಆದ್ದರಿಂದ ಪ್ರೊಟೀನ್ ಹೆಚ್ಚಿರುವ ಹಾಲು, ಚೀಸ್, ಬೀನ್ಸ್, ಕುಂಬಳಕಾಯಿ, ಕಲ್ಲಂಗಡಿಯ ಬೀಜ ಇವುಗಳನ್ನು ತಿನ್ನಬಹುದು. ಚಿಕನ್, ಓಟ್ ಮೀಲ್, ಸೊಯಾ ಬೀನ್ ಮತ್ತು ಇನ್ನಿತರ ದವಸಗಳು ಎತ್ತರವನ್ನು ಹೆಚ್ಚಿಸುತ್ತದೆ.

ದೇಹದ ಅಂಗಗಳು ಆರೋಗ್ಯಕರವಾಗಿ ಕಾರ್ಯನಿರ್ವಹಿಸಬೇಕೆಂದರೆ ವಿಟಮಿನ್ ಎ ಸಹಾಯ ಬೇಕೇ ಬೇಕು. ವಿಟಮಿನ್ ಎ ಪೂರಿತ ಆಹಾರ ಸೇವನೆಯಿಂದ ಹೊಳೆಯುವ ತ್ವಚೆಯನ್ನೂ ಪಡೆಯಬಹುದು. ಪಾಲಾಕ್, ಬೀಟ್ ರೂಟ್, ಕ್ಯಾರೆಟ್, ಚಿಕನ್, ಪಪ್ಪಾಯ, ಪೀಚ್, ಹಾಲು, ಟೊಮೆಟೊ, ಬಟಾಣಿ, ಅಪ್ರಿಕಾಟ್ ಮುಂತಾದವುಗಳಲ್ಲಿ ವಿಟಮಿನ್ ಎ ಹೆಚ್ಚಿದೆ. ಟೊಮೆಟೊ, ಕ್ಯಾರೆಟ್, ಬೀಟ್ ರೂಟ್ ಇವುಗಳ ಜ್ಯೂಸ್ ಗಳನ್ನೂ ಸೇವಿಸಬಹುದು.

ಕ್ಯಾಲ್ಸಿಯಂ ಮೂಳೆಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಹಾಲು, ಚೀಸ್, ಮೊಟ್ಟೆಯನ್ನು ಪ್ರತಿ ದಿನ ಸೇವಿಸುತ್ತಿದ್ದರೆ ಎತ್ತರ ಹೆಚ್ಚುತ್ತದೆ. ಈ ಆಹಾರಗಳು ರುಚಿಕರ ಮತ್ತು ಹೊಟ್ಟೆ ತುಂಬುವುದಷ್ಟೇ ಅಲ್ಲ, ಆರೋಗ್ಯವನ್ನು ಹೆಚ್ಚಿಸುತ್ತದೆ.

ದೈಹಿಕ ಬೆಳವಣಿಗೆಗೆ ಖನಿಜಾಂಶದ ಅಗತ್ಯ ಹೆಚ್ಚಿದೆ. ಇದು ದೇಹದಲ್ಲಿ ರಕ್ತ ಸಂಚಲನವನ್ನೂ ಅಭಿವೃದ್ಧಿ ಪಡಿಸುತ್ತದೆ. ಆದ್ದರಿಂದ ಖನಿಜಾಂಶ ಹೆಚ್ಚಿರುವ ಬೀನ್ಸ್, ಬ್ರೊಕೊಲಿ, ಪಾಲಾಕ್, ಹೂಕೋಸು, ಕುಂಬಳಕಾಯಿ, ಕ್ಯಾರೆಟ್, ಬಾಳೆಹಣ್ಣು, ದ್ರಾಕ್ಷಿ ಇಂತಹ ಆಹಾರಗಳನ್ನು ಸೇವಿಸಿದರೆ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…
ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.
ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…
ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.