ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.

ಪ್ರತಿಭೆಗೆ ವಯಸ್ಸಿನ ಮಿತಿಯಿಲ್ಲಾ ಎನ್ನುದಕ್ಕೆ ಭಟ್ಕಳ ತಾಲೂಕಿನ ತೆಂಗಿನಗುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪುನೀತ್ ವೆಂಕಟೇಶ ಗೊಂಡ ಉದಾಹರಣೆಯಾಗಿದ್ದಾನೆ. ಹೌದು, 12 ರಿಂದ 14ರ ಆಸು ಪಾಸಿನ ಪೋರ ಈ ಪುನೀತ್ ಮಾಡಿದ ಆವಿಷ್ಕಾರವನ್ನು ನೀವು ಕೇಳಿದರೇ ಶಾಕ್ ಆಗ್ತೀರಾ.

ಭಟ್ಕಳ ತಾಲೂಕಿನ ತೆಂಗಿನಗುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇನ್ನು 6ನೇ ಕ್ಲಾಸ್ ಓದುತ್ತಿರುವ ಪುನೀತ್ ಹಾಗೂ ಆತನ ಸಹಪಾಠಿಗಳು ಸೇರಿ ನೀರಿನಲ್ಲಿ ಚಲಿಸುವ ಬೈಸಿಕಲ್ನನ್ನು ಆವಿಷ್ಕಾರ ಮಾಡಿ ಅದೇ ಸೈಕಲ್ ನಿಂದ ಯಶಸ್ವಿಯಾಗಿ ಇಲ್ಲಿನ ವೆಂಕಟಾಪುರ ನದಿ ದಾಟಿ ಎಲ್ಲರಿಗೆ ಉಬ್ಬೆರುವಂತೆ ಮಾಡಿದ್ದಾನೆ.

ಈ ಆವಿಷ್ಕಾರವನ್ನು ಖ್ಯಾತ ವಿಜ್ಞಾನಿ ಆರ್ಕಿಮಿಡೀಸ್ ತತ್ವದ ತೇಲುವಿಕೆಯ ಅನ್ವಯ ಸೈಕಲ್ ಮತ್ತು ನಾಲ್ಕು ಕ್ಯಾನುಗಳನ್ನು ಬಳಸಿ ಅತ್ಯಂತ ಕಡಿಮೆ ಹಣದಲ್ಲಿ ನೀರಿನ ಮೇಲೆ ಚಲಿಸುವ ಸೈಕಲ್ ತಯಾರಿಸಲಾಗಿದೆ.
ಸ್ವಚ್ಛ ಭಾರತ ಅಭಿಯಾನದ ಬೆಂಬಲವಾಗಿ ಈ ಆವಿಷ್ಕಾರ ರೂಪಿಸಿದ್ದು, ಮುಂಭಾಗದಲ್ಲಿ ಜಾಳಿಗಳನ್ನು ಜೋಡಿಸಿ, ಕಸ ಕಡ್ಡಿಗಳನ್ನು ತೀರದಲ್ಲಿ ಸಂಗ್ರಹಿಸಿ ತೆಗೆಯಬಹುದಾಗಿದೆ. ಸೈಕಲನ್ನು ಸ್ವಲ್ಪ ಮಾತ್ರ ಬದಲಾವಣೆ ಮಾಡಿಕೊಂಡು ಕಬ್ಬಿಣದ ಪಟ್ಟಿಯ ಮೂಲಕ ನಾಲ್ಕು ಕಡೆಗಳಲ್ಲಿ ನೀರಿನ ಕ್ಯಾನ್ ಅಳವಡಿಸಲಾಗಿದೆ.
ಕ್ಯಾನ್ ಆಳಡಡಿಕೆಯ ಮುನ್ನ ಗಾಳಿಯನ್ನು ತುಂಬಿ ಸೀಲ್ ಮಾಡಲಾಗಿದೆ ಮಾತ್ರವಲ್ಲದೆ ಕಬ್ಬಿಣದ ಪಟ್ಟಿಗೆ ಅದನ್ನು ರಬ್ಬರಿನಿಂದ ಬಿಗಿಯಲಾಗಿದೆ. ಮುಂದಿನ ಚಕ್ರವನ್ನು ಸ್ಟೇರಿಂಗ್ ಆಗಿ ಬಳಸುವಂತೆ ಸೈಕಲ್ ಚೈನ್ ಬಳಸಲಾಗಿದ್ದು, ಯಾವ ದಿಕ್ಕಿನಲ್ಲಾದರೂ ಸೈಕಲ್ ತಿರುಗಿಸುವ ವ್ಯವಸ್ಥೆ ಮಾಡಲಾಗಿದೆ.
ಈ ಆವಿಷ್ಕಾರದ ಹಿಂದಿನ ಮುಖ್ಯ ಉದ್ದೇಶವೆಂದರೆ ನೀರಿನಲ್ಲಿ ತೇಲುವ ಎಲ್ಲ ಕಸಗಳನ್ನು ಜಾಳಿ ಸಹಾಯದಿಂದ ಸಂಗ್ರಹ ಮಾಡಿ ದಡಕ್ಕೆ ಹಾಕಬಹುದು ಎನ್ನುವ ಸಾಧನೆಯನ್ನು ಪುನೀತ್ ಮಾಡಿದ್ದಾನೆ. ಚಿಕ್ಕ ವಯಸ್ಸಿನಲ್ಲೇ ಸಾಧನೆ ಮಾಡಿದ ಪುನೀತ್ ತನ್ನ ಸಾಧನೆಗೆ ಸಹಕಾರ ನೀಡಿದ್ದು ಸಹಪಾಠಿಗಳು ಹಾಗೂ ಶಿಕ್ಷಕರು ಎಂದು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾನೆ.
ಈ ಆವಿಷ್ಕಾರದ ಹಿಂದೆ ಇರುವ ಮುಖ್ಯ ಕಾರಣವೆಂದರೆ ಶಾಲೆಯ ಶಿಕ್ಷಕ ಅನಂತ ಮೋಗೇರ ಕೊಟ್ಟ ಪ್ರೇರಣೆ , ಈ ಪ್ರೇರಣೆಯಿಂದಲೇ ಸಾಧನೆ ಮಾಡಿದ್ದೇನೆ ಮತ್ತು ಸ್ವಚ್ಛ ಭಾರತ್ ಸಂದೇಶವನ್ನು ಸಾರಲು ಈ ಸೈಕಲ್ ಸಹಕಾರಿಯಾಗಲಿದೆ ಎಂಬುದು ಪುನೀತ್ ಮನದಾಳದ ಮಾತು.

ವಿದ್ಯಾರ್ಥಿ ಪುನೀತ್ ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಇನಸ್ಪೈರ್ಡ್ ಅವಾರ್ಡ್ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅತ್ಯುತ್ತಮವಾಗಿ ಭಾಗವಹಿಸಿ ಇದೀಗ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈ ಆವಿಷ್ಕಾರದಿಂದ ಆಯ್ಕೆಗೆ ಕಾರಣವು ಹೌದು.
ಡಿಸೆಂಬರ್. 7ರಂದು ದೆಹಲಿಯಲ್ಲಿ ಸ್ಪರ್ಧೆ ರಾಷ್ಟ್ರಮಟ್ಟದ ಸ್ಪರ್ಧೆ ಡಿಸೆಂಬರ್. 7ರಂದು ದೆಹಲಿಯಲ್ಲಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಪುನೀತ್ ಸೈಕಲ್ ಹೊಡೆಯುವುದರ ಮೂಲಕ ಸ್ವಚ್ಚ್ ಭಾರತ್ ಸಂದೇಶವನ್ನು ಸಾರಲಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…
ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…
ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…