ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.

ಇಂಡಿಯನ್ ಡಯಾಟೆಟಿಕ್ ಅಸೋಸಿ ಯೇ?ನ್, ಬೆಂಗಳೂರು ಚಾಪ್ಟರ್ ಇಂದು ಜನಪ್ರಿಯವಾದ ಅಷ್ಟೇನು ಆರೋಗ್ಯಕರವಲ್ಲದ ತಿನಿಸಿ ಗಿಂತ ಆರೋಗ್ಯಕರ ಕುರುಕುಲು ತಿಂಡಿಗಳ ಆಯ್ಕೆ ಯ ವಿನೂತನ ಆರೋಗ್ಯ ಉಪಕ್ರಮ- ದಿ ಹೆಲ್ತ್ ಸ್ವಾಪ್ಗೆ ಚಾಲನೆ ನೀಡಿತು. ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಕುರುಕಲು ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಕುರುಕಲು ತಿಂಡಿಗಳನ್ನು ಸೇವಿಸುತ್ತಿದ್ದರು.

ಪ್ರಸ್ತುತದ ಕುರುಕುಲು ತಿನಿಸಿನ ಪ್ರವೃತ್ತಿಯನ್ನು ಗಮನಿಸಿ ಖ್ಯಾತ ಪೌಷ್ಠಿಕ ತಜ್ಞರು, ಐಡಿಎ ಬೆಂಗಳೂರು ಚಾಪ್ಟರ್ ಅಧ್ಯಕ್ಷರು ಹಾಗೂ ಮೌಂಟ್ ಕಾರ್ಮಲ್ ಕಾಲೇಜಿನ ನ್ಯೂಟ್ರಿನ್ ಅಂಡ್ ಡಯಾಟೆಟಿಕ್ಸ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಗೀತಾ ಸಂತೋಷ್, ಡಯೆಟ್,ನ್ಯೂಟ್ರಿನ್ ಅಂಡ್ ವೆಲ್ನೆಸ್ ಕನ್ಸಲ್ಟೆಂಟ್ ಶೀಲಾ ಕೃಪಸ್ವಾಮಿ, ವೆಲ್ನೆಸ್ ಉದ್ಯಮದ ಆರ್ಡಿ, ಟ್ರಾನ್ಸ್ವ್ಯೂ ಎಂಟರ್ಪ್ರೈಸ್ನ ಜನರಲ್ ಮ್ಯಾನೇಜರ್ ಅಂಜನಾ ನಾಯರ್, ಚೀಫ್ ಕ್ಲಿನಿಕಲ್ ಡಯೆಟಿಷಿಯನ್ ಮತ್ತು ಅಪೋಲೋ
ಆಸ್ಪತ್ರೆಗಳ ಮುಖ್ಯಸ್ಥೆ ಡಾ.ಪ್ರಿಯಾಂಕ ರೋಹಟಗಿ ಭಾರತೀಯರಿಗೆ ರುಚಿಕರ, ಪೋಷಕಾಂಶ ಶಕ್ತಿಯುಳ್ಳ ಆರೋಗ್ಯಕರ ಆಯ್ಕೆಗಳ ಮೂಲಕ ಅನಾರೋಗ್ಯಕರ ಆಯ್ಕೆಗಳನ್ನು ನಿವಾರಿಸುವ ಉಪಕ್ರಮಕ್ಕೆ ಚಾಲನೆ ನೀಡಿದರು.
ಈ ಉಪಕ್ರಮ ಕುರಿತು ಡಾ.ಗೀತಾ ಸಂತೋಷ, ‘ವೇಗದ ಜೀವನದ ಯುಗ ದಲ್ಲಿ ಆರೋಗ್ಯಕರ ಕುರುಕುಲು ನಿಮ್ಮ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕುರುಕುಲು ಸೇವನೆ ಸರಿಯಾದ ಪೋಷಕಾಂಶಗಳನ್ನು ಪಡೆ ಯಲು ಮತ್ತೊಂದು ಅವಕಾಶ ನೀಡುತ್ತದೆ. ಕುರುಕುಲು ತಿನಿಸನ್ನು ಸರಿ ಯಾದ ಪ್ರಮಾಣದ ಪೋಷಕಾಂಶಗಳ ಅದರಲ್ಲೂ
ಕಾರ್ಬೊ ಹೈಡ್ರೇಟ್ಗಳು, ಪ್ರೊಟೀನ್, ವಿಟಮಿನ್ಗಳು ಮತ್ತು ಮಿನರಲ್ಗಳೊಂದಿಗೆ ಸೇವಿಸುವುದು ಸೂಕ್ತ. ಕುರುಕುಲು ತಿಂಡಿಯ ಪೌಷ್ಠಿಕತೆಯ ಅಂಶವನ್ನು ಅದರಲ್ಲಿ ಪೌಷ್ಠಿಕತೆಯ ಅಂಶ ಕುರಿತು ಓದುವುದರಿಂದ ಪಡೆಯಬಹುದು. ಉತ್ತಮ ಆರೋಗ್ಯಕ್ಕೆ ಮುಖ್ಯವಾದುದು ವ್ಯಾಯಾಮದೊಂದಿಗೆಪೋಷಕಾಂಶಯುಕ್ತ ಸಮತೋಲನದ ಆಹಾರ’ಎಂದರು.

ಡಾ.ಪ್ರಿಯಾಂಕ ರೋಹಟಗಿ, ‘ಆರೋಗ್ಯಕರ ಕುರುಕುಲು ಸೇವನೆ ಊಟದ ಅಂತರದ ನಡುವೆ ಹಸಿವನ್ನು ನಿವಾರಿಸಲು ಮಹತ್ತರ ಕ್ರಮವಾಗಿದೆ. ಇದರೊಂದಿಗೆ ಅಂತಿಮವಾಗಿ
ಹಸಿವು ಮತ್ತು ಮುಂದಿನ ಊಟದಲ್ಲಿ ಹೆಚ್ಚು ತಿನ್ನುವುದು ತಪ್ಪುತ್ತದೆ. ಇದರಿಂದ ದೇಹತೂಕ ನಿರ್ವಹಿಸಲು ನೆರವಾಗುತ್ತದೆ. ಅನಾರೋಗ್ಯಕರ ಆಹಾರವನ್ನು ಉತ್ತಮ ಆಹಾರ ಹಾಗೂ ವ್ಯಾಯಾಮದೊಂದಿಗೆ ಬದಲಾಯಿಸಿದರೆ ನಿಮ್ಮ ಜೀವನಶೈಲಿ ಬದಲಾಯಿಸುವಲ್ಲಿ ಬಹಳ ಪರಿಣಾಮ ಬೀರುತ್ತದೆ’ ಎಂದರು.

ಗ್ರಾಹಕರಿಗೆ ಆರೋಗ್ಯಕರ ಆಯ್ಕೆಗಳನ್ನು ನೀಡುವಲ್ಲಿ ಆಹಾರ ಉತ್ಪಾದಕರ ಪಾತ್ರ ಕುರಿತು ಡಾ.ಅಂಜನಾ ನಾಯರ್, ‘ಇಂದು ನಾವು ಮೊಸರು, ಪ್ರೊಟೀನ್ ಬಾರ್ಗಳು
ಇತ್ಯಾದಿ ಮಾರುಕಟ್ಟೆಯಲ್ಲಿ ಲಭ್ಯವಿವೆ. ಆದರೆ ಆರೋಗ್ಯಕರ ಕುರುಕುಲು ವಿಭಾಗದಲ್ಲಿ ಹೆಚ್ಚು ಆವಿಷ್ಕಾರ ನಡೆಯಬೇಕಿದೆ’ ಎಂದರು.
ಈ ಕುರಿತು ಶೀಲಾ ಕೃಷ್ಣಸ್ವಾಮಿ ‘ಆರೋಗ್ಯಕರವಾದ ಆಹಾರ ಸೇವಿಸುವುದು ಕಷ್ಟವಲ್ಲ. ಇದು ಸರಿಯಾದ ಆಹಾರದ ಆಯ್ಕೆಗಳನ್ನು ಮಾಡುವುದು. ನನ್ನ ವೃತ್ತಿ ಜೀವನದಲ್ಲಿ ಸಾಕಷ್ಟು ಮಂದಿ ಆಯ್ಕೆಯ ಅವಕಾಶವಿಲ್ಲದೆ ಅನಾರೋಗ್ಯಕರ ಆಹಾರ ಆಯ್ಕೆ ಮಾಡಿಕೊಳ್ಳುವುದನ್ನು ಕಂಡಿದ್ದೇನೆ. ಮೊಳಕೆಕಾಳು, ತಾಜಾ ಹಣ್ಣುಗಳು ಮತ್ತಿತರೆ ಉತ್ತಮ ಆರೋಗ್ಯ ನೀಡುತ್ತವೆ’ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…
ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.
ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.
ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.
ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ನಲ್ಲಿ ಶೂ, ರಗ್ಗಳು ಹಾಗೂ ಟಾಯ್ಲೆಟ್ ಸೀಟ್ ಕವರ್ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್ ಸೀಟ್ ಕವರ್ಗಳನ್ನು, ಶೂಗಳನ್ನು ಹಾಗೂ ರಗ್ಗಳನ್ನು ಆನ್ಲೈನ್ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…