ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ! ಮಿಳ್ಳೆ ಈಗ ಅದೃಶ್ಯವಾಗಿರುವ ಕಾರಣ ತುಪ್ಪದ ಸೇವನೆಯ ಪ್ರಮಾಣ ಮತ್ತು ನಿಮ್ಮ ಇಂದಿನ ದೇಹಸ್ಥಿತಿಯನ್ನು ಪರಿಗಣಿಸಿ ಎಷ್ಟು ಸೇವಿಸ ಬಹುದು ಎಂಬುದನ್ನು ನಿಮ್ಮ ಕುಟುಂಬ ವೈದ್ಯರು ಸಲಹೆ ನೀಡಬಲ್ಲರು. ಆ ಪ್ರಕಾರವೇ ಸೇವಿಸಿದರೆ ಉತ್ತಮ.
ಆರೋಗ್ಯದ ವಿಷಯಕ್ಕೆ ಬಂದಾಗ ತುಪ್ಪ ಮಹತ್ವದ ಪಾತ್ರ ವಹಿಸುತ್ತದೆ:–

ಜಿಡ್ಡಿನ ಪದಾರ್ಥಗಳಲ್ಲೇ ಅತಿ ಆರೋಗ್ಯಕರವಾದ ತುಪ್ಪ ಹಲವು ಉತ್ತಮ ಗುಣಗಳನ್ನು ಹೊಂದಿದೆ. ಇದರಲ್ಲಿ ಅತಿ ಹೆಚ್ಚಿನ ಪ್ರಮಾಣ ದಲ್ಲಿರುವ ಕ್ಯಾಲೋರಿಗಳು,ಇ ಪೋಷಕಾಂಶ ಗಳು, ವೈರಸ್ಸಿನ ವಿರುದ್ಧ ಹೋರಾಡುವ ಗುಣ, ಶಿಲಿಂಧ್ರ ನಿವಾರಕ, ಬ್ಯಾಕ್ಟೀರಿಯಾ ದೇಸೀ ಹಸುವಿನ ತುಪ್ಪ, ಆರೋಗ್ಯದ ಪಾಲಿನ ಸಂಜೀವಿನಿ ನಿವಾರಕ ಗುಣಗಳು ಮತ್ತು ಅಂಟಿ ಆಕ್ಸಿಡೆಂಟುಗಳ ಜೊತೆಗೆ ಕೊಂಚ ಕೊಬ್ಬಿನ ತೈಲವೂ ಇವೆ. ಆದರೆ ಎಮ್ಮೆಯ ಹಾಲಿನಿಂದ ತಯಾರಿಸಿದ ತುಪ್ಪದಲ್ಲೂ ಬಹುತೇಕ ಈ ಗುಣಗಳಿದ್ದರೂ ಕೊಬ್ಬಿನ ಪ್ರಮಾಣ ಅಪಾರ ವಾದುದರಿಂದ ಎಮ್ಮೆ ಹಾಲಿನ ತುಪ್ಪಕ್ಕಿಂತ ಹಸುವಿನ ಹಾಲಿನ ತುಪ್ಪವೇ ಉತೃಷ್ಕವಾಗಿದೆ. ಸಾಮಾನ್ಯವಾಗಿ ಅನ್ನ, ಚಪಾತಿ, ಸಿಹಿ ಮೊದಲಾದ ಯಾವುದೇ ಆಹಾರದೊಂದಿಗೆ ಕೊಂಚ ತುಪ್ಪವನ್ನು ಬೆರೆಸಿ ತಿಂದರೆ ಆ ಖಾದ್ಯದ ರುಚಿ ಬಹಳಷ್ಟು ಹೆಚ್ಚುತ್ತದೆ. ಅಷ್ಟೆ ಅಲ್ಲ, ಹಸುವಿನ ತುಪ್ಪವನ್ನು ಉಪಯೋಗಿಸಿ ಮೈಯನ್ನು ಮಸಾಜ್ ಮಾಡಿದರೆ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.
ಸುಟ್ಟ ಗಾಯಕ್ಕೆ, ಚಿಕ್ಕ ಪುಟ್ಟ ತರಚು ಗಾಯಗಳಿಗೆ ತುಪ್ಪವನ್ನು ಹಚ್ಚುವ ಮೂಲಕ ಗಾಯಗಳು ಬೇಗನೇ ಮಾಗುತ್ತವೆ. ಅಷ್ಟೆ ಅಲ್ಲ ಇದರ ನಿಯಮಿತ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ತೊಲಗಿಸಲೂ ಸಾಧ್ಯವಾಗುತ್ತದೆ. ಜೀವರಾಸಾಯನಿಕ ಕ್ರಿಯೆ ಹೆಚ್ಚಿಸುವುದು, ಕೂದಲು ಉದುರುವುದನ್ನು ತಡೆಗಟ್ಟುವುದು, ಹೃದಯ ಕ್ಷಮತೆಯನ್ನು ಹೆಚ್ಚಿಸುವುದು ಮೊದಲಾದ ಆರೋಗ್ಯ ಕರ ಪ್ರಯೋಜನಗಳಿವೆ.

ಚಿಕ್ಕ ಪ್ರಮಾಣದಲ್ಲಿ ತುಪ್ಪವನ್ನು ಪ್ರತಿ ಊಟದೊಂದಿಗೆ ಸೇವಿಸಿದರೆಜೀರ್ಣಕ್ರಿಯೆ ಸುಲಭಗೊಳ್ಳುತ್ತದೆ. ತುಪ್ಪ ಜೀರ್ಣಕ್ರಿಯೆಗೆ ಪ್ರಚೋದಕದ ರೂಪದಲ್ಲಿ ನೆರವಾಗುತ್ತದೆ.ಕೆಲವು ಸಂಶೋಧನೆಗಳ ಪ್ರಕಾರ ತುಪ್ಪದ ಸೇವನೆಯಿಂದ ಕ್ಯಾನ್ಸರ್ ಬೆಳವಣಿಕೆ ಕುಂಠಿತಗೊಳ್ಳುತ್ತದೆ. ಸಾಮಾನ್ಯವಾಗಿ ತುಪ್ಪವನ್ನು ನಿತ್ಯವೂ ಸೇವಿಸುತ್ತಾ ಬಂದಿರು ವವರಲ್ಲಿ ಕ್ಯಾನ್ಸರ್ ಪ್ರಮಾಣ ಅತಿ ಕಡಿಮೆ ಇರುವುದಕ್ಕೆ ಇದೇ ಕಾರಣವಿರಬಹುದು.

ರಾತ್ರಿ ಮಲಗುವ ಮುನ್ನ ಬಿಸಿಬಿಸಿ ಹಾಲಿಗೆ ಕೊಂಚವೇ ಕೊಂಚ ತುಪ್ಪವನ್ನು ಸೇರಿಸಿ ಕುಡಿಯುವ ಮೂಲಕ ಉತ್ತಮ ನಿದ್ದೆ ಬರುತ್ತದೆ ಹಾಗೂ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ಬೆಳಿಗ್ಗೆ ಕಲ್ಮಶಗಳು ಸುಲಭವಾಗಿ ಹೊರ ಹೋಗಲು ಸಾಧ್ಯವಾಗುತ್ತದೆ. ಸ್ಮರಣಶಕ್ತಿ ಮತ್ತು ಬುದ್ದಿಮತ್ತೆ ಹೆಚ್ಚಲು ತುಪ್ಪ ನೆರವಾಗುತ್ತದೆ ಎಂದು ಬಹಳ ಹಿಂದಿಂದಲೂ ಭಾರತ ದಲ್ಲಿ ನಂಬಿಕೊಂಡು ಬರಲಾಗಿದೆ. ಇದೇ ಕಾರಣಕ್ಕೆ ವಿದ್ಯಾರ್ಥಿ ಗಳಿಗೆ ತುಪ್ಪದ ತಿಂಡಿಗಳನ್ನು ಆಗಾಗ ನೀಡಲಾಗುತ್ತಿತ್ತು. ಮೂಗಿನಿಂದ ರಕ್ತ ಬರುತ್ತಿದ್ದರೆ ವೈದ್ಯರಿಗೆ ತೋರಿಸುವ ಮೊದಲು ತುಪ್ಪವನ್ನು ಪ್ರಯೋಗಿಸಿ ಒಂದು ಕೈ ನೋಡಬಹುದು. ಇದಕ್ಕಾಗಿ ಕರಗಿದ ತುಪ್ಪವನ್ನು ಮೂಗಿನ ತುದಿ ಮತ್ತು ಹೊಳ್ಳೆಗಳ ಒಳಗೆ, ವಿಶೇಷವಾಗಿ ರಕ್ತ ಒಸರುವೆಡೆ ದಿನಕ್ಕೆ ಮೂರು ನಾಲ್ಕು ಬಾರಿಯಂತೆ ಎರಡರಿಂದ ಮೂರು ದಿನ ಹಚ್ಚಬೇಕು.

ಇಂದು ದುಬಾರಿ ತುಪ್ಪದೊಂದಿಗೆ ಅಗ್ಗದ ಡಾಲ್ಡಾವನ್ನು ಬೆರೆಸಿ ಮಾರಾಟ ಮಾಡುವ ಖದೀಮರಿದ್ದಾರೆ. ಆದರೆ ತುಪ್ಪವನ್ನು ತಕ್ಷಣ ಪರೀಕ್ಷಿಸಲು ಕೆಲವು ಸುಲಭ ವಿಧಾನಗಳಿವೆ.
ಶುದ್ಧ ತುಪ್ಪ ಬಿಸಿ ಅಂಗೈಯಲ್ಲಿ ತಕ್ಷಣ ಕರಗುತ್ತದೆ. ಇದಕ್ಕಾಗಿ ಎರಡೂ ಹಸ್ತಗಳನ್ನು ಸುಮಾರು ಇಪ್ಪತ್ತು ಸೆಕೆಂಡ್ ಉಜ್ಜಿ ತಕ್ಷಣ ಒಂದು ಚಿಕ್ಕ ಪ್ರಮಾಣದ ಗಟ್ಟಿ ತುಪ್ಪವನ್ನು ಕೈ ಮೇಲೆ ಇಟ್ಟಾಕ್ಷವೇ ಕರಗಲು ಪ್ರಾರಂಭವಾಗಬೇಕು. ಹಾಗೂ ಕೆಲವೇ ಸೆಕೆಂಡುಗಳಲ್ಲಿ ದ್ರವವಾಗಬೇಕು. ಒಂದು ವೇಳೆ ಕರಗಲು ಹೆಚ್ಚು ಸಮಯ ತೆಗೆದುಕೊಂಡರೆ ಇದು ಅಪ್ಪಟವಲ್ಲ ಎಂದು ಖಾತ್ರಿಯಾಗುತ್ತದೆ. ಹಿರಿಯರು ಪರೀಕ್ಷಿಸಲು ಇನ್ನೊಂದು ವಿಧಾನ ಅನು ಸರಿಸುತ್ತಿದ್ದರು. ಇದಕ್ಕೆ ಶುದ್ದ ತುಪ್ಪದ ಪರಿಮಳ ನಿಮ್ಮ ನೆನಪಿನಲ್ಲಿರಬೇಕು. ಕೊಂಚ ತುಪ್ಪವನ್ನು ಹಸ್ತದ ಹಿಂಬದಿಗೆ ಸವರಿ ನಾಲ್ಕಾರು ಬಾರಿ ಉಜ್ಜಿ ಒರೆಸಿಬಿಡಬೇಕು. ಅಪ್ಪಟ ತುಪ್ಪವಾದರೆ ತುಪ್ಪದ ವಾಸನೆ ಹೆಚ್ಚು ಹೊತ್ತು ಉಳಿದಿರುತ್ತದೆ. ಡಾಲ್ಡಾ ಸೇರಿಸಿದ್ದರೆ ಈ ಪರಿಮಳ ಒಂದು ನಿಮಿಷದೊಳಗ ಖಾಲಿಯಾಗುತ್ತದೆ.

ಶುದ್ಧ ತುಪ್ಪದ ಬಾಟಲಿಯ ಮೇಲ್ಭಾಗದಲ್ಲಿ ಕರಗಿದ್ದು ಇದರ ಕೊಂಚವೇ ಕೆಳಗೆ ತುಪ್ಪ ಮರಳು ಮರಳಾಗಿರುತ್ತದೆ. ಆದರೆ ಇದು ಹಸುವಿನ ಮತ್ತು ಎಮ್ಮೆ ಹಾಲಿನ ತುಪ್ಪದಲ್ಲಿ
ಎರಡರಲ್ಲೂ ಕಂಡುಬರುತ್ತದೆ. ಒಂದು ವೇಳೆ ಡಾಲ್ಡಾ ಬೆರೆಸಿದ್ದರೆ ಮೇಲ್ಭಾಗ ಕರಗುವುದಿಲ್ಲ, ಗಟ್ಟಿಯಾಗಿಯೇ ಇರುತ್ತದೆ. ಶುದ್ಧ ತುಪ್ಪದ ದೀಪ ಯಾವುದೇ ಚಿಟಿಪಿಟಿಯಿಲ್ಲದೇ ಉರಿಯುತ್ತದೆ. ತುಪ್ಪವನ್ನು ಹತ್ತಿಯ ಬತ್ತಿಗೆ ಸವರಿ ಬೆಂಕಿ ಕೊಟ್ಟು ಉರಿಸಿ ಸೂಕ್ಷ್ಮವಾಗಿ ಗಮನಿಸಿ. ಶುದ್ದ ತುಪ್ಪವಾದರೆ ಜ್ವಾಲೆ ನೇರವಾಗಿ, ಏಕಪ್ರಕಾರವಾಗಿ ಹೊಗೆಯಿಲ್ಲದೇ ಉರಿಯುತ್ತದೆ. ಡಾಲ್ಡಾ ಬೆರೆಸಿದ್ದರೆ ಜ್ವಾಲೆ ಕೊಂಚ ಚಿಟಿಪಿಟಿ ಎನ್ನುವುದು ಅಥವಾ ವೇಗವಾಗಿ ಚಿಕ್ಕದೊಡ್ಡದಾಗುವುದು ಮತ್ತು ಜ್ವಾಲೆಯ ತುದಿಯಲ್ಲಿ ಕೊಂಚ ಕಪ್ಪು ಹೊಗೆಯಂತಿರುವುದು ಕಂಡುಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…
ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…
ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…
ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.
ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.
ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…