ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.

ಏಕೆಂದರೆ ಒಂದು ಹನಿ ಜೇನು ತುಪ್ಪ ತನ್ನಲ್ಲಿ ಅದೆಷ್ಟೋ ಆರೋಗ್ಯಕರ ಗುಣಗಳನ್ನು ಬಚ್ಚಿಟ್ಟುಕೊಂಡಿದೆ. ಸಾಮಾನ್ಯವಾಗಿ ಕಾಡುವ ಕೆಮ್ಮು, ತಲೆನೋವು, ಜ್ವರ, ಚರ್ಮತೊಂದರೆ, ಬಾಯಿಹುಣ್ಣುಗಳಂತಹ ನಾನಾ ಕಾಯಿಲೆಗಳಿಗೆ ರಾಮಬಾಣವಾಗಿದೆ. ಜೇನು ನಮ್ಮ ಆರೊಗ್ಯಕ್ಕೆ ಎಷ್ಟು ಒಳ್ಳೆಯದು ಎಂಬುದನ್ನು ಈ ಮುಂದಿನ ಅಂಶಗಳೇ ಸಾರಿ ಹೇಳುತ್ತವೆ.

ಜೇನುತುಪ್ಪದ ಆರೋಗ್ಯಕರ ಅಂಶಗಳು ಉಷ್ಣ ದಿಂದ ಬಾಯೊಳಗೆ ಹುಣ್ಣಾಗಿದ್ದರೆ ಜೇನುತುಪ್ಪ ಹಚ್ಚುವುದರಿಂದ, ನೀರಿನೊಡನೆ ಸೇರಿಸಿ ಬಾಯಿ ಮುಕ್ಕಳಿಸುವುದರಿಂದ ಹುಣ್ಣು
ವಾಸಿಯಾಗುತ್ತದೆ.ಬೊಜ್ಜು ಕರಗಿಸುವುದಕ್ಕೆ ಕುದಿಸಿ ಆರಿಸಿದ 1 ಲೋಟ ನೀರಿಗೆ 2 ಚಮಚ ಜೇನುತುಪ್ಪ ಬೆರೆಸಿ ಕುಡಿಯತ್ತಿದ್ದರೆ ತೂಕ ಕಡಿಮೆಯಾಗುತ್ತದೆ.

ನೆಗಡಿ ಅಥವಾ ಶೀತದಿಂದ ಗಂಟಲು ಕಟ್ಟಿ ಧ್ವನಿ ಸರಿಯಾಗಿ ಹೊರಡದಿದ್ದರೆ ದಿನಕ್ಕೆ 3-4 ಸಲ ಅರ್ಧ ಚಮಚದಿಂದ ಒಂದು ಚಮಚದವರೆಗೆ ಜೇನುತುಪ್ಪ ಸೇವಿಸುತ್ತಿರಬೇಕು. ಶುಂಠಿಯನ್ನು ಜೇನುತುಪ್ಪದೊಡನೆ ಸೇರಿಸಿ ದಂತಗಳಿಗೆ ಉಜ್ಜಬೇಕು. ಇದರಿಂದ ವಸಡುಗಳಿಂದ ರಕ್ತ ಸೋರುವುದು ವಸಡು ಊದಿ ಕೊಳ್ಳುವುದು ಕಡಿಮೆಯಾಗುತ್ತದೆ.

ರಕ್ತದೊತ್ತಡ ಹೆಚ್ಚಾಗಿರುವವರು ಬೆಳಗ್ಗೆ ಖಾಲಿ ಹೊಟ್ಟೆಗೆ 3 ಚಮಚ ಜೇನನ್ನು ನೀರಿನಲ್ಲಿ ಸೇರಿಸಿ ಕುಡಿಯಬೇಕು. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುವವರು
ಪೊಟ್ಯಾಷಿಯಂ ಮತ್ತು ಖನಿಜಗಳು ಅಧಿಕ ಪ್ರಮಾಣದಲ್ಲಿರುವ ಜೇನುತುಪ್ಪವನ್ನು ದಿನಕ್ಕೆ 2 ಬಾರಿ 2 ಚಮಚದಷ್ಟು ಸೇವಿಸಬೇಕು. ಪ್ರತಿದಿನ ಜೇನುತುಪ್ಪ ಸೇವಿಸಿದರೆ ಮೆದುಳಿನ ದೌರ್ಬಲ್ಯ ನಿವಾರಣೆಯಾ ಗಿ ಕಾರ್ಯನಿರ್ವಹಿಸುತ್ತದೆ. ಜೇನುತುಪ್ಪ ಉತ್ತಮ ಆರೋಗ್ಯವರ್ಧಕ ಹಾಗೂ ಚರ್ಮಕ್ಕೆ ಪ್ರಯೋಜನವಾದ ಅಂಶಗಳನ್ನು ಒಳಗೊಂಡಿದೆ ಎಂಬ ಅಂಶ ಅನಾದಿಕಾಲದಿಂದಲೂ ತಿಳಿದು ಬಂದಿದೆ.

ವಿಟಮಿನ್, ಪ್ರೊಟೀನ್ ಮತ್ತು ರೋಗನಿರೋಧಕ ಜೀವಸತ್ವಗಳಿಂದ ಸಂವೃದ್ದವಾಗಿರುವ ಜೇನುತುಪ್ಪ ನಿಸ್ಸಂಶಯವಾಗಿಯೂ ಪ್ರಯೋಜನಕಾರಿ.ಜೇನಿನಲ್ಲಿರುವ ವಿಟಮಿನ್ ಸಿ
ವಿಕಿರಣಗಳಿಂದ ಹಾನಿಗೀಡಾದ ಚರ್ಮದ ಪದರಗಳನ್ನು ಸರಿಪಡಿಸುತ್ತದೆ. ಇದರಲ್ಲಿರುವ ವಿಟಮಿನ್ ಬಿ5 ಚರ್ಮದಲ್ಲಿ ಉತ್ಪತ್ತಿಯಾಗುವ ಎಣ್ಣೆಯ ಅಂಶವನ್ನು ತಡೆಯುವುದಲ್ಲದೆ ಒಣ ಚರ್ಮವನ್ನು ಮೃದುಗೊಳಿಸುತ್ತದೆ.

ಜೇನಿನಲ್ಲೇನಿದೆ: –
ತೇವಾಂಶ : ಶೇ.17ರಿಂದ 25 ಫಲಸಕ್ಕರೆ : ಶೇ.34 ರಿಂದ 4೦ ಗ್ಲೂಕೋಸ್ : ಶೇ.32 ರಿಂದ ೩8 ಅಂಟು : ಶೇ.1 ರಿಂದ 2 ಖನಿಜಗಳು : ಕಬ್ಬಿಣ, ಮ್ಯಾಗ್ನೀ ಶಿಯಂ, ಕ್ಯಾಲ್ಸಿಯಂ, ಮ್ಯಾಂಗನೀಸ್, ತಾಮ್ರ. ಪೋಷಕ ದ್ರವ್ಯಗಳು : ವಿಟಮಿನ್ ಬಿ೧ ಬಿ೨ ಬಿ೩ ಬಿ೧೨ ಸಿ ಮುಂತಾದವುಗಳಿವೆ. ಮಕ್ಕಳು ಸೇರಿದಂತೆ ಯಾವುದೇ ವಯಸ್ಸಿನವರು ಕೂಡ ಕೆಮ್ಮಿಗೆ ಜೇನುತುಪ್ಪವನ್ನು ಬಳಸಬಹುದು. ಕೆಮ್ಮು ಪ್ರಾರಂಭಿಕ ಹಂತದಲ್ಲಿರುವಾಗ ಜೇನುತುಪ್ಪ ಸೇವಿಸಿದರೆ ಕೆಮ್ಮು ಬೇಗನೆ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…
ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…
ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.