ಕರ್ನಾಟಕ

ರಾಷ್ಟ್ರಪತಿ ಕರ್ನಾಟಕದ ಬಗ್ಗೆ ಹಾಗೂ ಕರ್ನಾಟಕದ ಗಣ್ಯರ ಬಗ್ಗೆ ಹೊಗಳಿದ್ದಾರೆ…!ತಿಳಿಯಲು ಇದನ್ನು ಓದಿ..

426

ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.

ವಿಧಾನಸೌಧದ ವಜ್ರ ಮಹೋತ್ಸವದ ಅಂಗವಾಗಿ ಬುಧವಾರ ಜಂಟಿ ಅಧಿ ವೇಶನ ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, “ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಟಿಪ್ಪು ಸುಲ್ತಾನ್’ ಎಂದು ಶ್ಲಾ ಸಿದ್ದಾರೆ.

ಇದಷ್ಟೇ ಅಲ್ಲ, ಮೈಸೂರು ರಾಕೆಟ್ ತಂತ್ರಜ್ಞಾನ ಅಭಿವೃದ್ಧಿಪಡಿಸಿ ಯುದ್ಧ ಭೂಮಿಯಲ್ಲಿ ಮೊದಲ ಬಾರಿಗೆ ಬಳಕೆ ಮಾಡಿದ ಕೀರ್ತಿಯೂ ಟಿಪ್ಪು ಸುಲ್ತಾನ್ಗೆ ಸಲ್ಲುತ್ತದೆ ಎಂದು ಕೋವಿಂದ್ ಅವರು ಟಿಪ್ಪು ಸಾಧನೆಯನ್ನು ಕೊಂಡಾಡಿದ್ದಾರೆ. ಟಿಪ್ಪು ಬಳಸಿದ ಮೇಲಷ್ಟೇ ಐರೋಪ್ಯ ದೇಶಗಳಲ್ಲಿ ಈ ತಂತ್ರಜ್ಞಾನ ಬಳಕೆ ಮಾಡಲಾಯಿತು ಎಂದೂ ಹೇಳಿದರು.

ರಾಷ್ಟ್ರಪತಿ ಮಾತಿನಿಂದ ಖುಷಿ ಗೊಂಡ ಕಾಂಗ್ರೆಸ್, ಜೆಡಿಎಸ್ ಸದ ಸ್ಯರು ಮೇಜು ಕುಟ್ಟಿ ಸ್ವಾಗತಿಸಿದರೆ, ಅನಿ ರೀಕ್ಷಿತವಾಗಿ ಎದುರಾದ “ಟಿಪ್ಪು ಬಣ್ಣನೆ’ ಬಿಜೆಪಿ ಸದಸ್ಯರಿಗೆ ಶಾಕ್ ನೀಡಿತು.

ಇದರ ಜತೆಗೆ ಸದ್ಯ ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಇನ್ನೊಂದು ವಿವಾದ “ಲಿಂಗಾಯತ’ದ ಬಗ್ಗೆಯೂ ಮಾತನಾಡಿದ ಕೋವಿಂದ್, ಸಮಾಜ ಸುಧಾರಣೆಯ “ಲಿಂಗಾಯತ’ ಚಳವಳಿ ಬಸವಾಚಾರ್ಯರ ನೇತೃತ್ವದಲ್ಲಿ ನಡೆದದ್ದು ಕರ್ನಾಟಕದಲ್ಲೇ. ಈ ಎಲ್ಲವೂ ದೇಶ ನಿರ್ಮಾಣಕ್ಕೆ ನೀಡಿದ ಕೊಡುಗೆಗಳೇ ಎಂದು ಬಣ್ಣಿಸಿದರು.

ಮಹಾವೀರ ಜೈನ, ಗೌತಮ ಬುದ್ಧ ಸ್ವೀಕರಿಸಿದ ನಾಡಿದು. ಶೃಂಗೇರಿಯಲ್ಲಿ ಆದಿ ಶಂಕರಾಚಾರ್ಯರು ಮಠ ಸ್ಥಾಪಿ ಸಿದ್ದು, ಕಲಬುರಗಿ ಸೂಪಿ ಸಂಸ್ಕೃತಿಯ ಕೇಂದ್ರವಾಗಿರುವುದು ಈ ನಾಡಿನ ವೈಶಿಷ್ಟ é ಎಂದು ಕೊಂಡಾಡಿದರು.

ರಾಷ್ಟ್ರಪತಿಯವರು ತಮ್ಮ ಭಾಷಣ ದಲ್ಲಿ ವಿಜಯನಗರ ಸಾಮ್ರಾಜ್ಯ ಆಳಿದ ಶ್ರೀಕೃಷ್ಣದೇವರಾಯ, ಬೆಂಗಳೂರು ನಿರ್ಮಾತೃ ಕೆಂಪೇಗೌಡ, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ ಅವರನ್ನು ಸ್ಮರಿಸಿಕೊಂಡರು. ಸೇನಾ ಮುಖ್ಯಸ್ಥರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ಕೆ.ಎಸ್. ತಿಮ್ಮಯ್ಯ ಅವರು ಕರ್ನಾಟಕದ ಮಕ್ಕಳು ಎಂದು ಬಣ್ಣಿಸಿದರು.

ಹೆಮ್ಮೆಯ ಕ್ಷಣ: ಕರ್ನಾಟಕ ವಿಧಾನಸಭೆ, ವಿಧಾನಪರಿಷತ್ ಬಗ್ಗೆಯೂ ಮೆಚ್ಚುಗೆ ಸೂಚಿಸಿದ ರಾಷ್ಟ್ರಪತಿ ಯವರು ನಾನು ರಾಷ್ಟ್ರಪತಿಯಾದ ಅನಂತರ ಮೊದಲ ಭೇಟಿ ಇದಾಗಿದ್ದು, ವಿಧಾನಸೌಧ ವಜ್ರ ಮಹೋತ್ಸವದಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡು ತ್ತಿರುವುದು ಹೆಮ್ಮೆ ಎಂದರು.

1956ರ ಅಕ್ಟೋಬರ್ನಲ್ಲಿ ದೇಶದ ಮೊದಲ ರಾಷ್ಟ್ರಪತಿ ಡಾ| ರಾಜೇಂದ್ರ ಪ್ರಸಾದ್ ಅವರು ಉದ್ಘಾಟಿಸಿದ್ದ ವಿಧಾನಸೌಧದಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮಕ್ಕೆ ಬಂದಿರುವುದು ನನಗೆ ಸಂತಸ ತಂದಿದೆ. ನಾನು ರಾಜೇಂದ್ರ ಪ್ರಸಾದ್ ಅವರ ಮಾರ್ಗದಲ್ಲೇ ಸಾಗುತ್ತೇನೆ ಎಂದರು.

ದೇವೇಗೌಡರ ಹೆಸರೇ ಇಲ್ಲ: ಭಾಷಣ ಸಂದರ್ಭ ವಿಧಾನ ಸೌಧ ನಿರ್ಮಾಣಕ್ಕೆ ಕಾರಣರಾದವರು, ರಾಜ್ಯಕ್ಕೆ ವಿಶೇಷ ಕೊಡುಗೆ ನೀಡಿದ ಮುಖ್ಯಮಂತ್ರಿಗಳ ಹೆಸರನ್ನೂ ರಾಷ್ಟ್ರಪತಿ ಕೋವಿಂದ್ ನೆನಪಿಸಿಕೊಂಡರು.

ಆದರೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹೆಸರೇ ಕಣ್ಮರೆಯಾಗಿದ್ದುದು ಜೆಡಿಎಸ್ ಸದಸ್ಯರ ಆಕ್ರೋ ಶಕ್ಕೂ ಕಾರಣವಾಯಿತು. ಬಳಿಕ ಅವರೇ ನೆನಪಿಸಿ ಕೊಂಡು, ನನ್ನ ಸ್ನೇಹಿತರೂ ಆಗಿರುವ ದೇವೇಗೌಡರನ್ನು ಮರೆಯುವು ದುಂಟೇ ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತಾಡಿದ್ದೇಕೆ.! ಶ್ರುತಿ ತಾಯಿ ಸಭೆಯಲ್ಲಿದ್ದ ಮಹಿಳೆಯರಿಗೆಳಿದ ಮಾತೇನು ಗೊತ್ತಾ?

    ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ಫೇಸ್‌ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…

  • ಸುದ್ದಿ

    ಈ 24 ಕಂಡೀಷನ್‌ಗಳನ್ನ ಪಾಲಿಸಿದರೆ ಸರ್ಕಾರದವರೇ ಮದುವೆ ಮಾಡಿಸ್ತಾರೆ..! ಯಾವಾಗ ಗೊತ್ತಾ?

    ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್‌ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…

  • ಸುದ್ದಿ

    ಇರುವೆ ಬಗೆಗಿನ ಈ 15 ವಿಷಯಗಳು ನಮ್ಮನ್ನ ರೋಮಾಂಚನಗೊಳಿಸುತ್ತೆ..!

    ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.

  • ಜ್ಯೋತಿಷ್ಯ

    ಈ ಸ್ಥಿತಿಯಲ್ಲಿ ಹಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

    ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…

  • ಆರೋಗ್ಯ

    ಹುಳುಕು ಹಲ್ಲಿನ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು.

    ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….

  • ಸಂಬಂಧ

    ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ !!!

    ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.