ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ. ಇದೆಲ್ಲದರ ನಡುವೆ ಉಪ್ಪಿ ರಾಜಕೀಯ ಪ್ರವೇಶದ ಬಗ್ಗೆ ಕೆಲ ಸಿನಿಮಾ ಮತ್ತು ರಾಜಕೀಯದ ಗಣ್ಯರು ಮಾತನಾಡಿದ್ದಾರೆ.

ರಾಜಕೀಯಕ್ಕೆ ಬರೋದಾಗಿ ಘೋಷಿಸಿ ತೀವ್ರ ಸಂಚಲನ ಮೂಡಿಸಿದ್ದ ರಿಯಲ್ ಸ್ಟಾರ್ ಉಪೇಂದ್ರ ಅವರು ಇವತ್ತು ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದಾರೆ.
ಇವತ್ತು ರಾಜಕೀಯ ಪಕ್ಷದ ಹೆಸರು, ಸ್ವರೂಪ, ಪ್ರಣಾಳಿಕೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಶಿವಾನಂದ ಸರ್ಕಲ್ ಬಳಿಯ ಗಾಂಧಿಭವನದಲ್ಲಿ ಪಕ್ಷದ ಹೆಸರು ಘೋಷಣೆ ಮಾಡಿದ್ದಾರೆದೆ. ಜೊತೆಗೆ ಮುಂದಿನ ಚುನಾವಣೆಯಲ್ಲಿ ಪಕ್ಷದ ಪಾತ್ರ, ಕಾರ್ಯಕಾರಿ ಸಮಿತಿ ಮತ್ತು ಪಕ್ಷದ ಪ್ರಣಾಳಿಕೆಯನ್ನೂ ಉಪೇಂದ್ರ ಘೋಷಿಸಲಿದ್ದಾರೆ.
ಪಕ್ಷದ ಹೆಸರು:-
ಇತ್ತೀಚೆಗಷ್ಟೇ ಉಪೇಂದ್ರ ಅವರ ಪಕ್ಷದ ಹೆಸರು ಫೊಷಣೆಯಾಗಿದ್ದು, ಅವರ ಪಕ್ಷದ ಹೆಸರು ಪ್ರಜಾಕಾರಣ ಅಲ್ಲ, ಪ್ರಜಾಕೀಯವೂ ಅಲ್ಲ. ಬದಲಾಗಿ `ಉತ್ತಮ ಪ್ರಜಾ ಪಾರ್ಟಿ’ ಎಂದು ತಿಳಿಸಿದ್ದರು. ಸದಸ್ಯತ್ವ ನೋಂದಣಿ ಅರ್ಜಿಯಲ್ಲೂ ಉಪ್ಪಿ ಪಕ್ಷದ ಹೆಸರು ಬಹಿರಂಗವಾಗಿತ್ತು.

ಪ್ರಜಾಕೀಯ ಆಂದೋಲನದಿಂದ ಸುದ್ದಿ ಮಾಡುತ್ತಿರುವ ಉಪ್ಪಿಯ ಹೊಸ ರಾಜಕೀಯ ಪಕ್ಷದ ಹೆಸರು ತೀವ್ರ ಕುತೂಹಲವನ್ನು ಕೆರಳಿಸಿದೆ. ಈಗಾಗಲೇ ಸಿನಿಮಾ ರಂಗದಲ್ಲಿ ನಟರಾಗಿ, ನಿರ್ದೇಶಕರಾಗಿ ಮತ್ತು ಬರಹಗಾರರಾಗಿ ಉಪ್ಪಿ ಸೇವೆ ಸಲ್ಲಿದ್ದಾರೆ. ಈಗ ಪ್ರಜಾ ಸೇವೆ ಮಾಡಲು ರಾಜಕೀಯಕ್ಕೆ ಬರುತ್ತಿದ್ದಾರೆ.
ಸಭೆ ನಡೆಸುತ್ತಿರುವ ಉಪೇಂದ್ರ:-
ಈಗಾಗಲೇ ತಮ್ಮ ಆಪ್ತರ ಜೊತೆ ಸರಣಿ ಸಭೆ ನಡೆಸುತ್ತಿರುವ ಉಪೇಂದ್ರ, ತಮ್ಮ ಹೊಸ ಪಕ್ಷದ ಸದಸ್ಯತ್ವ ಪಡೆಯಲು ಬಯಸುವವರಿಗೆ ಅರ್ಜಿ ರೆಡಿ ಮಾಡಿದ್ದಾರೆ. ಶೀಘ್ರವೇ ರಾಜ್ಯದ ವಿವಿಧೆಡೆ ಸುತ್ತಾಡಿ ಜನರ ಅಭಿಪ್ರಾಯ ಸಂಗ್ರಹಿಸಲು ಉಪೇಂದ್ರ ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಉಪ್ಪಿ ಹೊಸ ಪಕ್ಷಕ್ಕೆ ಸೇರುವವರಿಗೆ ಅರ್ಜಿಗಳನ್ನೂ ಈಗಾಗಲೆ ಸಿದ್ಧಪಡಿಸಿಕೊಳ್ಳಲಾಗಿದೆ. ಉಪ್ಪಿ ತಮ್ಮ ರಾಜಕೀಯ ಪ್ರವೇಶ ಬಗ್ಗೆ ಪ್ರಕಟಿಸುತ್ತಿದ್ದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯೂ ನಡೆದಿತ್ತು. ಉಪ್ಪಿ ರಾಜಕೀಯ ಪ್ರವೇಶದ ಬಗ್ಗೆ ಅದ್ಭುತ ಪ್ರತಿಕ್ರಿಯೆಯೂ ವ್ಯಕ್ತವಾಗಿತ್ತು.
ಬದಲಾವಣೆ ತರಲು ಉಪ್ಪಿ:-
ರಾಜಕೀಯದಲ್ಲಿ ಬದಲಾವಣೆ ತರಲು ಜನರ, ಅಭಿಮಾನಿಗಳ ಸಲಹೆ ಸೂಚನೆಗಳನ್ನು ಪಡೆಯಲು ಉಪೇಂದ್ರ ಇ-ಮೇಲ್ ವಿಳಾಸಗಳನ್ನೂ ಕೊಟ್ಟಿದ್ದರು. ಅದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಇ-ಮೇಲ್ಗಳು ಹರಿದುಬಂದಿದ್ದವು.

ನಾವು ಕಟ್ಟುವ ತೆರಿಗೆ ಹಣವನ್ನು ಪ್ರಜಾಪ್ರತಿನಿಧಿಗಳು ಸಮರ್ಥವಾಗಿ ಬಳಕೆ ಮಾಡಬೇಕು. ಅಂತಹವನ್ನು ನಾವು ಆಯ್ಕೆ ಮಾಡಬೇಕಾಗಿದೆ ಎಂದಿದ್ದರು ಉಪ್ಪಿ. ಸ್ವಚ್ಛಭಾರತದ ತರಹ ತಳಮಟ್ಟದಿಂದ ಈ ಕಾರ್ಯ ಆರಂಭವಾಗಬೇಕು ಎಂದಿರುವ ಉಪೇಂದ್ರ ತಮ್ಮ ಪಕ್ಷಕ್ಕೆ ಸೇರುವ ಎಲ್ಲರಿಗೂ ಮುಕ್ತ ಆಹ್ವಾನ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ
ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…
ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…
ಬಿಗ್ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…