ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರ್ ಪಿಚೈ ಅವರು ಮೊದಲು ಕಂಪನಿಯ ಇಂಟರ್ ನೆಟ್ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್ ಮತ್ತು ಇಂಜಿನಿಯರಿಂಗ್ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.

ಗೂಗಲ್ ಕಂಪನಿಯ ಸ್ಥಾಪಕ ಲ್ಯಾರಿ ಪೇಜ್ ಅವರು ಸುಂದರ್ ಪಿಚೈ ಅವರನ್ನು ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದ್ದಾರೆ. ಹೊಸ ಸಿಇಒ ನೇಮಕ ಮಾಡುವ ಜೊತೆಗೆ ಕಂಪನಿಯು ಇಂದು ಹೊಸ ಸಹ ಸಂಸ್ಥೆಯಾದ ‘ಆಲ್ಫಬೆಟ್’ ಕಂಪನಿಯನ್ನು ಆರಂಭಿಸಿದೆ.
ಸುಂದರ್ ಪಿಚೈ ಅವರ ಬಗ್ಗೆ ಕೆಲ ಮಾಹಿತಿ ಇಲ್ಲಿದೆ:-
* ಸುಂದರ್ ಪಿಚೈ ಅವರು ಭಾರತದ ತಮಿಳುನಾಡಿನ ಚೆನ್ನೈನಲ್ಲಿ 1972ರಲ್ಲಿ ಜನಿಸಿದರು. ಇಂದಿಗೂ ಭಾರತೀಯ ಪೌರತ್ವ ಉಳಿಸಿಕೊಂಡಿದ್ದಾರೆ.

* ಸುಂದರ್ ಪಿಚೈ ಅವರ ಪೂರ್ತಿ ಹೆಸರು ಪಿಚೈ ಸುಂದರಾಜನ್, ಜನಪ್ರಿಯ ಹೆಸರು ಸುಂದರ್ ಪಿಚೈ.
* 2004ರಲ್ಲಿ ಗೂಗಲ್ ಸೇರಿದ ಸುಂದರ್ ಅವರು ಮೊದಲಿಗೆ ಪ್ರಾಡೆಕ್ಟ್ ಹಾಗೂ ಇನ್ನೋವೇಷನ್ ಅಧಿಕಾರಿಯಾಗಿದ್ದರು.
* ಪೆನ್ನಿಸಿಲ್ವೆನಿಯಾದ ವಿಶ್ವವಿದ್ಯಾಲಯದಿಂದ ಸೈಬಲ್ ಸ್ಕಾಲರ್ ಎನಿಸಿಕೊಂಡಿದ್ದಾರೆ.
* ಖರಗ್ ಪುರದ ಐಐಟಿಯಿಂದ ಮೆಟರ್ಲರ್ಜಿ ವಿಷಯದಲ್ಲಿ ಪದವಿ ಪಡೆದುಕೊಂಡ ಪಿಚೈ ಅವರು ಆ ಬ್ಯಾಚಿನ ಬೆಳ್ಳಿ ಪದಕ ವಿಜೇತರಾಗಿದ್ದಾರೆ.

* ಅಮೆರಿಕದ ವಾರ್ಟನ್ ವಿಶ್ವವಿದ್ಯಾಲಯ ಹಾಗೂ ಸ್ಟಾನ್ ಫರ್ಡ್ ವಿಶ್ವವಿದ್ಯಾಲಯಿಂದ ಕ್ರಮವಾಗಿ ಎಂಬಿಎ ಹಾಗೂ ಎಂಎಸ್ ಪಡೆದುಕೊಂಡಿದ್ದಾರೆ.
* ಸದ್ಯ ಗೂಗಲ್ ನ ಆಪ್ಸ್, ಕ್ರೋಮ್ ಹಾಗೂ ಆಂಡ್ರಾಯ್ಡ್ ವಿಭಾಗದ ಉಪಾಧ್ಯಕ್ಷರಾಗಿದ್ದರು.
* ಗೂಗಲ್ ಡ್ರೈವ್, ಜೀಮೇಲ್ ಅಪ್ಲಿಕೇಷನ್, ಗೂಗಲ್ ವಿಡಿಯೋ ಕೊಡೆಕ್ ಎಲ್ಲದರ ಸೃಷ್ಟಿಗೆ ಬಹುತೇಕ ಸುಂದರ್ ಪಿಚೈ ಅವರೇ ಕಾರಣ.
* ಆದರೆ, ಪಿಚೈ ಅವರನ್ನು ಗೂಗಲ್ ನ ಕ್ರೋಮ್ ಆಪರೇಟಿಂಗ್ ಸಿಸ್ಟಮ್ ಹಾಗೂ ಆಂಡ್ರಾಯ್ಡ್ ಅಪ್ಲಿಕೇಷನ್ ನಿರ್ಮಾತೃವಾಗೇ ಗುರುತಿಸಲಾಗಿದೆ.
* ಟ್ವಿಟ್ಟರ್ ಸಂಸ್ಥೆ 2011ರಲ್ಲಿ ಪಿಚೈ ಅವರನ್ನು ತಮ್ಮ ಸಂಸ್ಥೆಗೆ ಸೇರಿಸಿಕೊಳ್ಳಲು ಯತ್ನಿಸಿತ್ತು. ಅದರೆ, ಗೂಗಲ್ ಅವರಿಗೆ 50 ಮಿಲಿಯನ್ ಡಾಲರ್ ಹೆಚ್ಚಿಗೆ ಮೊತ್ತ ನೀಡಿ ಗೂಗಲ್ ನಲ್ಲೇ ಉಳಿಸಿಕೊಂಡಿತ್ತು. ( ಒನ್ ಇಂಡಿಯಾ ಸುದ್ದಿ)
ಖಾಲಿ ಜೇಬಿನಲ್ಲಿ ಹುಟ್ಟಿದ ಗೂಗಲ್ ಸಿಇಒ ಸುಂದರ್ ಪಿಚೈ ಪ್ರೇಮ ಕಥೆ:-
ಅವರಿಬ್ಬರ ಪ್ರೀತಿ ಹುಟ್ಟಿಕೊಂಡಿದ್ದು ಕಾಲೇಜು ದಿನಗಳಲ್ಲಿ. ಆಕೆ ಹೆಸರು ಅಂಜಲಿ; ಆತನ ಹೆಸರು ಸುಂದರ್ ಪಿಚೈ; ಸದ್ಯ ಗೂಗಲ್ ಸಂಸ್ಥೆಯ ಸಿಇಒ. ಅವರ ಪ್ರತಿ ದಿನದ ಸಂಬಳವೇ 3.5 ಕೋಟಿ.
ಆದರೆ ಅಂಜಲಿ ಪ್ರೇಮದ ಬಲೆಯಲ್ಲಿ ಬಿದ್ದಾಗ ಪಿಚೈ ಜೇಬಿನಲ್ಲಿ ಏನೂ ಇರಲಿಲ್ಲ; ಖಾಲಿ ಜೇಬು. ಅವತ್ತಿಗೆ ಚೆನ್ನೈ ಅಪಾರ್ಟ್ಮೆಂಟ್ ಒಂದರಲ್ಲಿ ಪಿಚೈ ವಾಸವಾಗಿದ್ದರು. ಕಾರಿರಲಿಲ್ಲ, ಮನೆಯಲ್ಲೊಂದು ಟಿವಿಯೂ ಇರಲಿಲ್ಲ.

ಅಲ್ಲಿಂದ ಐಐಟಿ ಖರಗ್ ಪುರದಲ್ಲಿ ಎಂಜಿನಿಯರಿಂಗ್ ಅಭ್ಯಾಸ ಮಾಡಲು ಇಬ್ಬರೂ ತೆರಳಿದರು. ಅಲ್ಲಿ ಡೇಟಿಂಗ್ ಆರಂಭಿಸಿದರು. ಜೇಬಿನಲ್ಲಿ ಕಾಸಿಲ್ಲದಿದ್ದರೇನಂತೆ ಹೃದಯ ಶ್ರೀಮಂತವಾಗಿತ್ತು. ಪಿಚೈ ಅಂಜಲಿ ಮುಂದೆ ಮದುವೆ ಪ್ರಸ್ತಾಪ ಇಟ್ಟರು. ಅಂಜಲಿಯೂ ಅಷ್ಟೆ ಅತ್ತಿತ್ತ ನೋಡದೆ ಮದುವೆಗೆ ಒಪ್ಪಿಗೆ ನೀಡಿಯೇ ಬಟ್ಟರು. ಅಂಜಲಿಗೆ ಪಿಚೈ ಬಡತನದ ಬಗ್ಗೆ ಗೊತ್ತಿರಲಿಲ್ಲವೆಂದಲ್ಲ. ಸುಂದರ್ ಮನೆಯ ಎಲ್ಲಾ ಪರಿಸ್ಥಿತಿಯೂ ಅಂಜಲಿಗೆ ಗೊತ್ತಿತ್ತು. ಹೀಗಿದ್ದೂ ಮದುವೆಗೆ ಒಪ್ಪಿಕೊಂಡರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…
ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.
ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…
ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…
ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾರ್ಯಾರಿಗೆ ಇದೆ..? ಎಷ್ಟಿದೆ..? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…