ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆವೆರೆಂಡ್ ಎಫ್. ಕಿಟ್ಟೆಲ್ ರ ಕನ್ನಡ– ಇಂಗ್ಲೀಷ್ ನಿಘಂಟಿನಷ್ಟು ಅಪೂರ್ವವಾದದ್ದು ಕನ್ನಡದಲ್ಲಿ ಇನ್ನೊಂದಿಲ್ಲ. ಅದರ ಗಾತ್ರ, ಘನತೆ, ಸಂಗ್ರಹ, ಪದ್ಧತಿಗಳು ಅನನ್ಯವಾದವುಗಳು. ಅದರ ಪ್ರಕಟಣೆ ನೂರುವರ್ಷದ ಮೇಲಾದಾಗ್ಯೂ ಇಂದಿನ ಸಂದರ್ಭದಲ್ಲೂ ಕಿಟೆಲ್ ರು ಕನ್ನಡ ಸಾರಸ್ವತಕ್ಕೆ ಸಲ್ಲಿಸಿದ ಅಮೋಘ ಸೇವೆಯ ಸ್ಮರಣೆ ಮಾಡುವುದು ಔಚಿತ್ಯಪೂರ್ಣವಾಗಿದೆ.

ಅವರು ಕ್ರೈಸ್ತ ಮತ ಪ್ರಚಾರಕ್ಕಾಗಿಯೇ ೧೮೫೩ ರಲ್ಲಿ ಬಾರತಕ್ಕೆ ಬಂದವರು. ಮೊದಲು ಧಾರವಾಡ, ಮಂಗಳೂರು, ಹುಬ್ಬಳ್ಳಿ ಯಲ್ಲಿ ಮತಪ್ರಚಾರದ ಕಾರ್ಯ ನಡೆಸಿದರು. ಭಾಷಾ ಪ್ರಚಾರಕ್ಕೆ ಮುಖ್ಯವಾದದ್ದು ಅಲ್ಲಿನ ದೇಸಿ ಭಾಷೆ. ಅದಕ್ಕಾಗಿ ಅವರು ಎಲ್ಲಕ್ಕಿಂತ ಮೊದಲೇ ಕನ್ನಡಭಾಷೆಯನ್ನು ಕಲಿತರು. ಧರ್ಮಪ್ರಚಾರವನ್ನು ಸ್ವಲ್ಪ ಕಾಲ ಬದಿಗಿಟ್ಟು ದೇಸಿ ಭಾಷೆ, ಸಾಹಿತ್ಯ, ಸಂಸ್ಕೃತಿ ಇತ್ಯಾದಿಗಳನ್ನು ಕಲಿತಿದ್ದಲ್ಲದೆ ಅದರಲ್ಲಿ ಪ್ರಾವೀಣ್ಯತೆಯನ್ನೂ ಪಡೆದರೆಂಬುದು ಇಲ್ಲಿ ನಾವು ಗಮನಿಸಬೇಕಾದ ಸಂಗತಿ.

ಕಿಟ್ಟೆಲ್ ರು ಜರ್ಮನಿಯ ‘ಹ್ಯಾನ್ ವರ್ ‘ನಲ್ಲಿ ೧೮೩೨ ನೆಯ ಏಪ್ರಿಲ್ ೭ ರಂದು ಜನಿಸಿದರು. ಅವರ ಫಾಸ್ಟರ್ ತಂದೆಯೂ ಮತಪ್ರಚಾರ ಮಾಡುತ್ತಿದ್ದರು. ಹೀಗೆ ತಮ್ಮ ಚಿಕ್ಕಂದಿನಲ್ಲೇ ಅವರು ಮತಪ್ರಚಾರವನ್ನು ಸ್ವೀಕರಿಸಲೇಬೇಕಾಯಿತು. ಕಿಟ್ಟಲ್ ಮಂಗಳೂರಿನ ‘ಪಾಲೆನಿತ್” ಎಂಬ ಹುಡುಗಿಯೊಡನೆ ೧೮೬೦ ರಲ್ಲಿ ವಿವಾಹವಾದರು.
ಕನ್ನಡ ಸಾಹಿತ್ಯಕ್ಕೆ ಅವರ ಸೇವೆ ಅಪಾರ :–
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.

ಅವರ ಕನ್ನಡ ಭಾಷಾ ಪ್ರೇಮ ಶ್ಲಾಘನೀಯವಾದದ್ದು. ‘ಶಬ್ದ ಮಣಿ ದರ್ಪಣ’ ಎಂಬ, ಗ್ರಂಥವನ್ನು (೯ ಹಸ್ತಪ್ರತಿಗಳ ಆಧಾರದಿಂದ) ಶಾಸ್ತ್ರೀಯವಾಗಿ ಸಂಪಾ ದಿಸಿದ್ದಾರೆ. ಅದರ ಪ್ರಸ್ತಾವನೆ, ಟಿಪ್ಪಣಿಗಳು ವಿದ್ವಾಂಸರನ್ನು ಇಂದಿಗೂ ಕಾಡಿವೆ. ೧೫ ಹಸ್ತಪ್ರತಿಗಳ ಆಧಾರದಿಂದ ‘ಛಂದೋಂಬುಧಿ’ ಎಂಬ ನಾಗವರ್ಮನ ಕಾವ್ಯವನ್ನು ಸಂಪಾದಿಸಿ, ವಿಸ್ತಾರವಾದ ಪೀಠಿಕಾ ಟಿಪ್ಪಣಿಯನ್ನು ತಯಾರಿಸಿದ್ದಾರೆ. ‘ ಶಬ್ದಮಣಿದರ್ಶನ’ ವನ್ನು ಮೂಲವಾಗಿಟ್ಟುಕೊಂಡು ಭಾಷಾಶಾಸ್ತ್ರಕ್ಕೆ ಸಹಾಯಮಾಡುವಂತಹ ರಚನೆ.

೧೯೦೩ ರಲ್ಲಿ, ರೆವರೆಂಡ್ ಎಫ್.ಕಿಟೆಲ್ ತಮ್ಮ ತಾಯ್ನಾಡಿನಲ್ಲೆ ದೈವಾಧೀನರಾದರು. ೨೦೦೩ ರಲ್ಲಿ ಅವರ ಮರಣಶತಮಾನೋತ್ಸವ ದಿನವನ್ನು ಜರ್ಮನಿ ಮತ್ತು ಕರ್ನಾಟಕದಲ್ಲಿ ಆಚರಿಸಲಾಯಿತು. ಕಿಟೆಲ್ಲರ ಕನ್ನಡ ಭಾಷೆಯ ಪ್ರೇಮ ಮತ್ತು ಅದನ್ನು ಕಾರ್ಯಗತಗೊಳಿಸಲು ಜೀವನವಿಡೀ ತಮ್ಮ ಅಮೂಲ್ಯ ಸಮಯವನ್ನು ಮುಡಿಪಾಗಿಟ್ಟರು.

ಬೆಂಗಳೂರಿನ ಆಸ್ಟಿನ್ ಟೌನ್ ಪ್ರದೇಶವನ್ನು “ರೆವರೆಂಡ್ ಕಿಟೆಲ್ ನಗರ” ವೆಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಈ ಮಹಾನುಭಾವರ ನೆನಪಿಗಾಗಿ ಧಾರವಾಡದಲ್ಲಿ ಕಿಟೆಲ್ ಕಾಲೇಜು ಸ್ಥಾಪನೆಯಾಗಿದೆ. ‘ಇವು ಕರ್ನಾಟಕದ ಜನತೆ, ಕಿಟೆಲ್ ರವರ ಜ್ಞಾಪಕಾರ್ಥವಾಗಿ ಅರ್ಪಿಸಿದ ಅನುಪಮ ಶ್ರದ್ಧಾಂಜಲಿಗಳು’.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್ನಲ್ಲಿ(ಯುಪಿಎಸ್ಇ)ಯಲ್ಲಿ ಕೆಲಸ ಮಾಡುತ್ತಿದ್ದರು….
ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…
ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…
ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ.