ಆರೋಗ್ಯ

‘ಸೀತಾಫಲ’ದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

551

ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್‌ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ. ಇದನ್ನು ನಿತ್ಯ ನಾವು ಆಹಾರದ ಭಾಗವಾಗಿ ತಿನ್ನುವುದರಿಂದ ನಮಗೆ ಅದೆಷ್ಟೋ ವಿಧದ ಅನಾರೋಗ್ಯಗಳು ದೂರವಾಗುತ್ತವೆ. ಸೀತಾಫಲವಷ್ಟೇ ಅಲ್ಲ ಇದರ ಎಲೆಗಳು, ತೊಗಟೆ, ಬೇರು… ಹೀಗೆ ಎಲ್ಲಾ ಭಾಗಗಳು ನಮಗೆ ಸಾಕಷ್ಟು ಉಪಯುಕ್ತ.

ಸೀತಾಫಲ  ಲಾಭಗಳ:-

  • ದೇಹದ ಮೇಲೆ ಬೆವರಿನ ಗುಳ್ಳೆಗಳಾದರೆ ಸೀತಾಫಲ ಎಲೆಗಳನ್ನು ತೆಗೆದುಕೊಂಡು, ಅರೆದು ಆ ಮಿಶ್ರಣವನ್ನು ಕಟ್ಟಬೇಕು. ಇದರಿಂದ ಬೆವರಿನ ಗುಳ್ಳೆಗಳ ಸಮಸ್ಯೆ ನಿವಾರಣೆಯಾಗುತ್ತದೆ.
  • ಸೀತಾಫಲದ ಎಲೆಗಳಿಂದ ತೆಗೆದ ರಸವನ್ನು ನಿತ್ಯ ಬೆಳಗ್ಗೆ ಒಂದು ಟೀಸ್ಫೂನ್ ಪ್ರಮಾಣದಲ್ಲಿ ಕುಡಿಯುತ್ತಿದ್ದರೆ ಮಹುಮೇಹ ನಿಯಂತ್ರಣಕ್ಕೆ ಬರುತ್ತದೆ. ಅಷ್ಟೇ ಅಲ್ಲದೆ ತೂಕ ಸಹ ಕಡಿಮೆಯಾಗುತ್ತಾರೆ.

  • ಸೀತಾಫಲದ ಗಿಡದಿಂದ ತೆಗೆದ ತೊಗಟೆಯನ್ನು ನೀರಿನಲ್ಲಿ ಹಾಕಿ ಅದರಿಂದ ಕಷಾಯ ಮಾಡಿಕೊಂಡು ಕುಡಿದರೆ ಡಯೇರಿಯಾದಂತಹ ಅನಾರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತವೆ.
  • ಸೀತಾಫಲ ಎಲೆಗಳನ್ನು ನೀರಿನಲ್ಲಿ ಹಾಕಿ ಕಷಾಯ ಮಾಡಿಕೊಂಡು ಕುಡಿದರೆ ನೆಗಡಿ ಕಡಿಮೆಯಾಗುತ್ತದೆ.ವಿಟಮಿನ್ ಎ ಹೆಚ್ಚಾಗಿ ಇರುವುದರಿಂದ ಕಣ್ಣಿನ ರೋಗಗಳು ನಿವಾರಣೆಯಾಗುತ್ತವೆ. ದೃಷ್ಟಿ ಸಮಸ್ಯೆಗಳು ದೂರವಾಗುತ್ತವೆ.

 

  • ಸೀತಾಫಲದಲ್ಲಿರುವ ಮೆಗ್ನಿಷಿಯಂ ಹೃದಯ ಕಾಯಿಲೆಗಳು ಬರದಂತೆ ತಡೆಯುತ್ತದೆ. ಇವುಗಳಲ್ಲಿ ಇರುವ ಪೋಷಕಗಳು ದೇಹದಲ್ಲಿ ಸೇರಿಕೊಂಡ ಕೊಬ್ಬನ್ನು ಕರಗಿಸುತ್ತದೆ.
  • ಸೀತಾಫಲವನ್ನು ನಿತ್ಯ ಸೇವಿಸಿದರೆ ಹೊಟ್ಟೆಯಲ್ಲಿರುವ ಜಂತುಹುಳುಗಳ ಸಾಯುತ್ತವೆ. ಅಲ್ಸರ್ ನಿವಾರಣೆಯಾಗುತ್ತದೆ. ಗ್ಯಾಸ್, ಅಸಿಡಿಟಿ, ಅಜೀರ್ಣ, ಮಲಬದ್ಧತೆಯಂತಹ ಜೀರ್ಣ ಸಂಬಂಧಿ ಸಮಸ್ಯೆಗಳು ಗುಣವಾಗುತ್ತವೆ.

  • ರಕ್ತ ಕಡಿಮೆ ಇರುವವರು ಸೀತಾಫಲ ತಿನ್ನುವುದು ಉತ್ತಮ. ಇದರಿಂದ ರಕ್ತ ಹೆಚ್ಚುತ್ತದೆ.
  • ದೇಹ ತುಂಬಾ ಬಿಸಿಯಾಗಿರುವವರು ಸೀತಾಫಲವನ್ನು ತಿಂದರೆ ಕೂಡಲೆ ಉಷ್ಣತೆಯಿಂದ ಉಪಶಮನ ಪಡೆಯಬಹುದು.
  • ಸೀತಾಫಲದ ತಿರುಳನ್ನು ತೆಗೆದುಕೊಂಡು ರಸದಂತೆ ಮಾಡಿ ಅದಕ್ಕೆ ಹಾಲು ಬೆರೆಸಿ ಮಕ್ಕಳಿಗೆ ಕುಡಿಸಬೇಕು. ಇದರಿಂದ ಅವರಿಗೆ ಶಕ್ತಿ ಲಭಿಸುತ್ತದೆ.
  • ಸೀತಾಫಲ ಎಲೆಗಳನ್ನು ನುಣ್ಣಗೆ ಅರೆದು ಹಚ್ಚಿಕೊಂಡರೆ ಗಾಯಗಳು, ಕಜ್ಜಿ, ಗಜಕರ್ಣದಂತಹ ಸಮಸ್ಯೆಗಳು ನಿವಾರಣೆಯಾಗುತ್ತದೆ.
  • ಇವುಗಳ ಎಲೆಗಳನ್ನು ನುಣ್ಣಗೆ ಅರೆದು ಬೋರಿಕ್ ಪೌಡರ್ ಬೆರೆಸಿ ಮಂಚ, ಕುರ್ಚಿಗಳ ಮೂಲೆಗಳಲ್ಲಿ ಇಟ್ಟರೆ ತಿಗಣೆ ಸಮಸ್ಯೆ ಇರಲ್ಲ.

  • ಸೀತಾಫಲವನ್ನು ಅತಿಯಾಗಿ ಒಮ್ಮೆಲೆ ತಿನ್ನಬಾರದು. ಇದರಿಂದ ಹೊಟ್ಟೆಯಲ್ಲಿ ಉರಿ, ಉಬ್ಬಸ ಉಂಟಾಗುತ್ತದೆ. ಅಂತಹ ಸಂದರ್ಭದಲ್ಲಿ ಬಿಸಿ ನೀರು ಕುಡಿದರು, ಅರ್ಧ ಸ್ಫೂನು ಓಂಕಾಳು ಅಥವಾ ಸ್ವಲ್ಪ ಉಪ್ಪು ಜಗಿದರೂ ಫಲಿತಾಂಶ ಇರುತ್ತದೆ. ಅದೇ ರೀತಿ ಮಧುಮೇಹ ಇರುವವರು, ಸ್ಥೂಲಕಾಯ ಸಮಸ್ಯೆ ಇರುವವರು ಈ ಹಣ್ಣನ್ನು ವೈದ್ಯರ ಸಲಹೆ ಮೇರೆಗೆ ತಿನ್ನಬೇಕು. ಇಲ್ಲದಿದ್ದರೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ ಎಟಿಎಂ ನಿಂದ ಕ್ಯಾಶ್ ವಿತ್ ಡ್ರಾ ಮಾಡಲು ಈ ನಿಯಮವನ್ನು ತಪ್ಪದೆ ಪಾಲಿಸಬೇಕು…!

    ಬ್ಯಾಂಕ್ ನಿಂದ  ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…

  • inspirational

    24 ಸಾವಿರದ ವಾಚ್ ಗೆ 5 ಕೋಟಿ ಕೊಡ್ತೀವಿ ಅಂತಿದ್ದಾರೆ ಯಾಕೆ ಈ ವಾಚಿನಲ್ಲಿ ಅಂತದ್ದೇನಿದೆ? ವಾಚಿನ ರಹಸ್ಯ ಏನು ಗೊತ್ತಾ.

    ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…

  • Health

    ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ…?

    ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…

  • ಉಪಯುಕ್ತ ಮಾಹಿತಿ

    ಗ್ರೀನ್ ಟೀ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ ಬೇರೆಯವರಿಗೂ ಉಪಯೋಗವಾಗಲಿ…

    ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆ, ಒಂದು ಕಪ್ ‘ಗ್ರೀನ್ ಟೀ’ ಸೇವಿಸಿ… ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ…

  • ಸುದ್ದಿ

    ಮದುವೆಯನ್ನೇ ಕ್ಯಾನ್ಸಲ್ ಮಾಡಿದ ವಧು ಕಾರಣ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.