News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಹಳೆಯ 500, 1 ಸಾವಿರ ರೂ. ನೋಟುಗಳು ಈಗ ದಕ್ಷಿಣ ಆಫ್ರಿಕಾ ಚುನಾವಣೆಯಲ್ಲಿ ಬಳಕೆಯಾಗಲಿದೆ..!ತಿಳಿಯಲು ಈ ಲೇಖನ ಓದಿ…

693

ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.

ಹೌದು. 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ವೇಳೆ ಇಲ್ಲಿಯ ಪ್ರಚಾರ ಕಾರ್ಯಗಳಲ್ಲಿ ಹಾರ್ಡ್ ಬೋರ್ಡ್ ಗಳನ್ನು ಬಳಸಲಾಗುತ್ತದೆ. ಈ ಹಾರ್ಡ್ ಬೋರ್ಡ್ ಗಳನ್ನು ಭಾರತದಲ್ಲಿ ನಿಷೇಧಗೊಂಡಿರುವ ನೋಟುಗಳನ್ನು ತಯಾರಿಸಿ ನಿರ್ಮಾಣ ಮಾಡಲಾಗುತ್ತಿದೆ.

ದಕ್ಷಿಣ ಆಫ್ರಿಕಾಗೆ ಹೇಗೆ ಹೋಗುತ್ತೆ?
ನಿಷೇಧಗೊಂಡಿರುವ ನೋಟುಗಳನ್ನು ಸುಟ್ಟರೆ ಪರಿಸರ ಮಾಲಿನ್ಯವಾಗುವ ಕಾರಣ ಆರ್‍ಬಿಐ ಕೇರಳದ ಕಣ್ಣೂರಿನಲ್ಲಿರವ ವೆಸ್ಟರ್ನ್ ಇಂಡಿಯಾ ಪ್ಲೈವುಡ್(ಡಬ್ಲ್ಯೂಐಪಿ) ಕಂಪೆನಿಯನ್ನು ಸಂಪರ್ಕಿಸಿತ್ತು. ಬಳಿಕ ಕಂಪೆನಿ ಹಳೆಯ ನೋಟುಗಳನ್ನು ಬಳಸಿ ಈಗ ಪ್ಲೈವುಡ್ ಹಾರ್ಡ್ ಬೋರ್ಡ್ ಗಳನ್ನು ತಯಾರಿಸಿದೆ.

ಕಂಪನಿಯ ಪ್ರಧಾನ ವ್ಯವಸ್ಥಾಪಕ ಟಿಐ ಬಾವ ಪ್ರತಿಕ್ರಿಯಿಸಿ, ನೋಟ್ ನಿಷೇಧಗೊಂಡ ಬಳಿಕ ತಿರುವನಂತಪುರಂನಲ್ಲಿರುವ ಆರ್‍ಬಿಐ ಕಚೇರಿ ನಮ್ಮನ್ನು ಸಂಪರ್ಕಿಸಿತು. ಬಳಿಕ ನಾವು ನೋಟಿನ ಸ್ಯಾಂಪಲ್ ನೀಡುವಂತೆ ಕೇಳಿದ್ವಿ. ನಮ್ಮ ರಿಸರ್ಚ್ ತಂಡ ನೋಟುಗಳನ್ನು ಬಳಸಿ ಪ್ಲೈವುಡ್ ತಯಾರಿಸುವುದು ಹೇಗೆ ಎನ್ನುವುದನ್ನು ಕಂಡುಹಿಡಿದರು. ಬಳಿಕ ಈ ನೋಟುಗಳನ್ನು ಬಳಸಿ ಪ್ಲೈವುಡ್ ತಯಾರಿಸಲಾಗಿದ್ದು, ಇವುಗಳು 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ ಎಂದು ಹೇಳಿದರು.

ಹೇಗೆ ಹಾರ್ಡ್ ಬೋರ್ಡ್ ತಯಾರಿಸುತ್ತೀರಿ ಎಂದು ಕೇಳಿದ ಪ್ರಶ್ನೆಗೆ, ಹೆಚ್ಚಿನ ಶಾಖದಲ್ಲಿ ನೋಟಿನ ಚೂರುಗಳನ್ನು ಕುದಿಸಿ ಹಿಟ್ಟು ಮಾಡಲಾಗುತ್ತದೆ. ಈ ಹಿಟ್ಟಿನ ಜೊತೆ ಮರದ ಹಿಟ್ಟನ್ನು ಮಿಶ್ರಣ ಮಾಡಿ ಪ್ಲೈವುಡ್ ಬೋರ್ಡ್ ತಯಾರಿಸಲಾಗಿದೆ. ಇಂತಹ ಬೋರ್ಡ್ ಗಳಿಗೆ ಆಫ್ರಿಕಾ ಸೇರಿದಂತೆ ಮಧ್ಯಪ್ರಾಚ್ಯ ದೇಶಗಳಲ್ಲಿ ಬೇಡಿಕೆಯಿದೆ ಎಂದು ಬಾವ ಉತ್ತರಿಸಿದರು.

ಪ್ರಸ್ತುತ ಭಾರತದಲ್ಲಿ ನೋಟನ್ನು ಸಂಸ್ಕರಿಸಿ ಅದನ್ನು ಪ್ಲೈವುಡ್ ಮಾಡುವ ತಂತ್ರಜ್ಞಾನ ಡಬ್ಲ್ಯೂಐಪಿ ಕಂಪೆನಿ ಬಳಿ ಮಾತ್ರ ಇದೆ. ಇದೂವರೆಗೆ 750 ಟನ್ ಹಳೆಯ ನೋಟುಗಳನ್ನು ನಾವು ಸ್ವೀಕರಿಸಿದ್ದೇವೆ. ಒಂದು ಟನ್ ನೋಟಿಗೆ 128 ರೂ. ನೀಡಿದ್ದೇವೆ. ಈ ಎಲ್ಲ ಪ್ರಕ್ರಿಯೆ ಕಣ್ಣೂರಿನ ವಾಲಪಟ್ಟನಂಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆದಿದೆ ಎಂದು ಅವರು ವಿವರಿಸಿದರು.

ನಾವು ತಯಾರಿಸಿದ ಹಾರ್ಡ್ ಬೋರ್ಡ್ ಗಳು ಮಾರುಕಟ್ಟೆಯಲ್ಲಿ ದುಬಾರಿ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಈ ಬೋರ್ಡ್ ನೋಟ್ ನಿಂದ ತಯಾರಿಸಲಾಗಿದೆ. ಹೀಗಾಗಿ ಇದಕ್ಕೆ ಬೆಲೆ ಜಾಸ್ತಿ ಎಂದು ಹೇಳಿ ಮಾರಾಟ ಮಾಡುತ್ತಿದ್ದಾರೆ. ಆದರೆ ನಾವು ಆ ರೀತಿ ಮಾಡದೇ ಒಂದೇ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಹೇಳಿದರು..

ಆರ್‍ಬಿಐಗೆ  ಎಷ್ಟು ನೋಟು ಬಂದಿದೆ?


ರದ್ದಾಗಿರುವ 500 ಮತ್ತು 1 ಸಾವಿರ ರೂ. ಮುಖಬೆಲೆಯ 15.44 ಲಕ್ಷ ರೂ. ಮೌಲ್ಯದ ನೋಟುಗಳ ಪೈಕಿ 15.28 ಲಕ್ಷ ಕೋಟಿ ರೂ. ಮೌಲ್ಯದ ನೋಟುಗಳು ಆರ್‍ಬಿಐಗೆ ವಾಪಸ್ ಬಂದಿದೆ. 16 ಸಾವಿರ ಕೋಟಿ ರೂ. ಮೌಲ್ಯದ ನೋಟುಗಳು ಅಥವಾ ಶೇ.1.4 ರಷ್ಟು ನೋಟುಗಳು ವಾಪಸ್ ಬಂದಿಲ್ಲ. ಶೇ.98.6ರಷ್ಟು ನೋಟುಗಳು ವಾಪಸ್ ಬಂದಿದೆ ಎಂದು ಆರ್‍ಬಿಐ ಆಗಸ್ಟ್ 30ರಂದು ಮಾಹಿತಿ ನೀಡಿತ್ತು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ 4 ಆರೋಪಿಗೆ ಜೀವಿತಾವಧಿವರೆಗೂ ಸಜೆ

    ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್‌ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…

  • ವಿಚಿತ್ರ ಆದರೂ ಸತ್ಯ

    ಒಂದೇ ದಿನದಲ್ಲಿ 36 ಮೊಟ್ಟೆ ಇಟ್ಟ ಕೋಳಿ..!ಇದು ನಿಜ…ನಂಬಲೇಬೇಕು…ಶಾಕ್ ಆಗ್ಬೇಡಿ ಮುಂದೆ ಓದಿ…

    ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್‌ಗೇಟ್‌ನಲ್ಲಿರುವ ಹುಝೂರಿ ಛೋಟಾ ಪಾರ್ಕ್‌ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ  ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….

  • ವಿಸ್ಮಯ ಜಗತ್ತು

    ಇವರು ನಮ್ಮ ಇಂಡಿಯನ್ ರಿಯಲ್ ಸ್ಪೈಡರ್ ಮ್ಯಾನ್!ಅಲಿಯಾಸ್ ಕೋತಿ ರಾಜ್.ಇವರ ಸಾಹಸದ ಬಗ್ಗೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ!

    ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!

  • ಸುದ್ದಿ

    ಹೊಟ್ಟೆಯ ಬೊಜ್ಜು ಕರಗಿಸುವಂತಹ ಸುಲಭ ಉಪಾಯಗಳು,.ಇದನ್ನೊಮ್ಮೆ ಅನುಸರಿಸಿ ನೋಡಿ,.!

    ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್​ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…