News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ತಂತ್ರಜ್ಞಾನ

ಪಾಡ್ ಕಾರ್ ಸೇವೆ ಈಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಆರಂಭ..!ತಿಳಿಯಲು ಈ ಲೇಖನಓದಿ…

880

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ. ಹೀಗಾಗಿ ಐಟಿ ಬಿಟಿ ಜನರಿಗೆ ನೇರವಾಗಬಲ್ಲ ಪಾಡ್ ಕಾರ್ ಸೇವೆಯನ್ನು ಪರಿಚಯಿಸಲಾಗುತ್ತಿದ್ದು, ಅಂದುಕೊಂಡಂತೆ ಎಲ್ಲವೂ ನಡೆದರೆ ವಷಾಂತ್ಯಕ್ಕೆ ಹೊಸ ಯೋಜನೆಗೆ ಚಾಲನೆ ಸಿಗಲಿದೆ.

ಬಿಬಿಎಂಪಿ ಕೂಡಾ ಪಿಆರ್‌ಟಿಎಸ್‌ ಯೋಜನೆ ಅನುಷ್ಠಾನದ ಬಗ್ಗೆ ಹೆಚ್ಚು ಉತ್ಸುಕವಾಗಿದ್ದು, ದೇಶದ ಮೊದಲ “ಖಾಸಗಿ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಪರ್ಸನಲ್‌ ರ್ಯಾಪಿಡ್‌ ಟ್ರಾನ್ಸಿಟ್‌ ಸಿಸ್ಟಂ) ಅನ್ನು ಆರಂಭಿಸುವ ಮೂಲಕ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಹೇಳುವ ಇರಾದೆಯಲ್ಲಿದೆ.

ಯೋಜನೆಯ ವೆಚ್ಚ:-

ಪ್ರತಿ ಕಿ.ಮೀ. ಪಿಆರ್‌ಟಿಎಸ್‌ ನಿರ್ಮಾಣಕ್ಕೆ 25 ಕೋಟಿ ರೂ. ವೆಚ್ಚವಾಗಲಿದ್ದು, ಈ ಯೋಜನೆ ಅನುಷ್ಠಾನದಲ್ಲಿ ಬಿಬಿಎಂಪಿಯಿಂದ ಯಾವುದೇ ಹೂಡಿಕೆ ಇರುವುದಿಲ್ಲ. ಬದಲಿಗೆ ಪಾಲಿಕೆಗೆ ಈ ಮಾದರಿಯ ಟ್ಯಾಕ್ಸಿ ಓಡಿಸುವ ಸಂಬಂಧ ಪರವಾನಗಿ ಶುಲ್ಕ ಹಾಗೂ ಕಾರ್ಯಾಚರಣೆಯಿಂದ ಬರುವ ಆದಾಯದಲ್ಲಿ ಇಂತಿಷ್ಟು ಲಾಭಾಂಶ ಬರಲಿದೆ.

ತಜ್ಞರ ಸೂಚನೆಯಂತೆ ಬಿಬಿಎಂಪಿಯು ಯೋಜನೆ ಅನುಷ್ಠಾನಕ್ಕೆ ತೀರ್ಮಾನಿಸಿದ್ದು, ಈ ಸಂಬಂಧ ಮುಂದಿನ ವಾರದಲ್ಲಿ ಟೆಂಡರ್‌ ಕರೆಯಲಿದೆ. ಜೊತೆಗೆ ಮೆಟ್ರೋ ಮಾದರಿಯಲ್ಲಿ ಆರ್‌ಸಿಸಿ ಕಂಬಗಳು ಮತ್ತು ಸ್ಲಾಬ್‌ ನಿರ್ಮಿಸಿ ಅದರ ಮೇಲೆ ಪಾಡ್‌ ಟ್ಯಾಕ್ಸಿಗಳ ಮಾರ್ಗ ನಿರ್ಮಿಸುವ ತಂತ್ರಜ್ಞಾನ ಸೂಕ್ತ ಎಂದು ತಜ್ಞರು ನಿರ್ಧರಿಸಿದ್ದಾರೆ.

ಏನಿದು ಪಿಆರ್‌ಟಿಎಸ್‌?

ಇದೊಂದು ಸಾರ್ವಜನಿಕ ಸಾರಿಗೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ನಿಗದಿತ ದೂರವನ್ನು ನಿರ್ದಿಷ್ಟ ಸಮಯದಲ್ಲಿ ಇದು ಕ್ರಮಿಸುತ್ತದೆ. ಇದಕ್ಕಾಗಿ ಪ್ರತ್ಯೇಕ ಕಾರಿಡಾರ್‌ ಇರುವುದರಿಂದ ಸಂಚಾರದಟ್ಟಣೆ ಕಿರಿಕಿರಿ ಇಲ್ಲ. ಮೆಟ್ರೋ ರೈಲು ಮುಖ್ಯರಸ್ತೆಗಳಲ್ಲಿ ಮಾತ್ರ ಸಂಚರಿಸುತ್ತದೆ.

ಎಲ್ಲಿಂದ ಎಲ್ಲಿಯವರಿಗೆ?

ಮೂಲಗಳ ಪ್ರಕಾರ ಬೆಂಗಳೂರಿನಲ್ಲಿ ಅತಿ ಹೆಚ್ಚು ಜನದಟ್ಟಣೆ ಪ್ರದೇಶವಾಗಿರುವ ಎಂಜಿ ರೋಡ್ ಬಳಿಯ ಟ್ರಿನಿಟಿ ಸರ್ಕಲ್‌ನಿಂದ ವೈಟ್‌ಫೀಲ್ಡ್ ತನಕ ಪಾಡ್ ಕಾರ್ ಸೇವೆಯು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ.

ವೈಟ್‌ಫೀಲ್ಡ್‌ ಯಾಕೆ?

ನಗರದ ಅತ್ಯಧಿಕ ವಾಹನದಟ್ಟಣೆ, ಜನದಟ್ಟಣೆ ಇರುವ ಪ್ರದೇಶ ವೈಟ್‌ಫೀಲ್ಡ್‌.

ನಿತ್ಯ ಪೀಕ್‌ ಅವರ್‌ನಲ್ಲಿ ಜನ ಅಲ್ಲಿ ಪರದಾಡುತ್ತಾರೆ. ಜತೆಗೆ ಐಟಿ-ಬಿಟಿ ಕಂಪನಿಗಳು ಹೆಚ್ಚಾಗಿರುವುದರಿಂದ, ಇಲ್ಲಿ ಬಳಕೆ ಪ್ರಮಾಣ ಬೇರೆಡೆಗಿಂತ ಹೆಚ್ಚಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

ಹೀಗಿರುತ್ತೆ ಪಾಡ್‌ ಕಾರ್:-

ವಂಡರ್‌ಲಾನಲ್ಲಿ ಸಾಮಾನ್ಯವಾಗಿ ಕಂಡುಬರುವ ಡ್ಯಾಷಿಂಗ್‌ ಕಾರುಗಳಂತೆಯೇ ಇರುವ ಈ ಪಾಡ್‌ ಟ್ಯಾಕ್ಸಿಗಳು ಮ್ಯಾಗ್ನೆಟಿಕ್‌ ವ್ಹೀಲ್‌ ಮೂಲಕ ಕಾರ್ಯಾಚರಣೆ ಮಾಡುತ್ತವೆ.

ಇವುಗಳ ಉದ್ದ 4 ಮೀ. ಇರುತ್ತದೆ. ಮಾರ್ಗದಲ್ಲಿ ಪ್ರತಿ 10 ಮೀಟರ್‌ ಅಂತರದಲ್ಲಿ ಒಂದರಂತೆ ಕಾರ್ಯಾಚರಣೆ ಮಾಡುತ್ತದೆ.

ಪ್ರಯಾಣ ದರ ಕಡಿಮೆ?

ಆಟೋ, ಆ್ಯಪ್‌ ಆಧಾರಿತ ಟ್ಯಾಕ್ಸಿಗಳಿಗೆ ಹೋಲಿಸಿದರೆ, ಪಿಆರ್‌ಟಿಎಸ್‌ ಟ್ಯಾಕ್ಸಿಗಳ ದರ ಅರ್ಧಕ್ಕರ್ಧ ಕಡಿಮೆ ಎನ್ನಲಾಗಿದೆ. ಆಟೋ ಪ್ರತಿ ಕಿ.ಮೀ.ಗೆ 20 ರೂ. ಆಗುತ್ತದೆ. ಟ್ಯಾಕ್ಸಿಗಳಲ್ಲಿ ಕಿ.ಮೀಗೆ 18 ರೂ. ಆಗುತ್ತದೆ. ಆದರೆ, ಪಾಡ್‌ ಟ್ಯಾಕ್ಸಿ ಪ್ರಯಾಣ ದರ ಕಿ.ಮೀಗೆ 9ರಿಂದ 10 ರೂ. ಇರಲಿದೆ ಎಂದು ಅಂದಾಜಿಸಲಾಗಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ವಶೀಕರಣದ ರಹಸ್ಯ ತಿಳಿಯಬೇಕಾ! ಈ ಮಾಹಿತಿ ನೋಡಿ.

    ಪಂಡಿತ್ 1 ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ವಶೀಕರಣವೆಂದರೆ ಒಬ್ಬ ವ್ಯಕ್ತಿ ನಮ್ಮನ್ನು ಇಷ್ಟಪಡುವ ರೀತಿಯಲ್ಲಿ ,…

  • Animals

    ಯಾವುದೀ ಮುಧೋಳ ನಾಯಿ? ಏನೀದರ ಸ್ಪೆಷಾಲಿಟಿ? ಇಲ್ಲಿದೆ ನೋಡಿ ಮಾಹಿತಿ

    ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್‌ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್‌ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…

  • ದೇಶ-ವಿದೇಶ

    ನಮ್ಮವರು 200 ಜನ ಸಾಯುವುದೇ ನಿಜವಾದಲ್ಲಿ,ಇನ್ನು ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾ ಸುಟ್ಟುಬಿಡುತ್ತೇನೆ!ಎಂದಿತ್ತು ಈ ಪುಟ್ಟ ದೇಶ ಇಸ್ರೇಲ್…

    ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !

  • inspirational

    ಕರ್ನಾಟಕದಲ್ಲಿ ಮಹತ್ವದ ರಜೆ ಬದಲಾವಣೆ ಸುದ್ದಿ – ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನ

    ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…

  • ಉಪಯುಕ್ತ ಮಾಹಿತಿ

    ಮೊಡವೆ ಕಲೆಗಳು ಒಂದೇ ದಿನದಲ್ಲಿ ಮಾಯವಾಗಲು ಆಲ್ಮಂಡ್ ನಿಂದ ಈಗೆ ಮಾಡಿದರೆ ಸಾಕು,.!

    ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…

  • ಸಿನಿಮಾ

    ಆಟೋ ಚಾಲಕನಿಂದ ಉಪ್ಪಿಗೆ ಬಂದ,ಈ ಪತ್ರದಲ್ಲಿ, ಇದ್ದ ಅಸಲಿ ವಿಷಯ ಏನು ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.