ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..

MR ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ L ಪದ್ಮನಾಭ ರವರು ಅದ್ಧೂರಿಯಾಗಿ ನಿರ್ಮಾಣ ಮಾಡಿರುವ ಕಾಲೇಜ್ ಕುಮಾರ್ ಚಿತ್ರದಲ್ಲಿಪ್ರಕಾಶ್ಬೆಳವಾಡಿ, ಶ್ರುತಿ, ರವಿಶಂಕರ್, ಸಾಧು ಕೋಕಿಲ, ವನ್ನವಳ್ಳಿ ಕೃಷ್ಣ, ಸಿಲ್ಲಿ ಲಲ್ಲಿಯ ವಿಶಾಲು, ಅಚ್ಯುತ್ ಕುಮಾರ್ ಹೀಗೇ ದೊಡ್ಡ ತಾರಾ ಬಳಗವೇ ಇದೆ.
ಒಬ್ಬ ಮಿಡಲ್ ಕ್ಲಾಸ್ ಫ್ಯಾಮಿಲಿಯ ಚಿತ್ರಣವನ್ನು ಹಾಸ್ಯಭರಿತವಾಗಿ ಹೆಣೆದು ಎಷ್ಟು ಮನರಂಜಿಸಬಹುದೊ ಅಷ್ಟು ಪ್ರಯತ್ನಪಟ್ಟು ಯಶಸ್ವಿಯಾಗಿದ್ದಾರೆ..

ಆಫೀಸರ್ ಮಾಡಬೇಕೆಂಬ ಅಪ್ಪನ ಕನಸು..ಕಾಲೇಜ್ ನಲ್ಲಿ ತನ್ನದೇ ಗ್ಯಾಂಗ್ ಕಟ್ಟಿಕೊಂಡು ಅಡ್ಡಾಡುವ ಮಗ.. ಗಂಡ ಹಾಗೂ ಮಗ ಇಬ್ಬರನ್ನು ನಿಭಾಯಿಸುವ ಅಮ್ಮ.. ಇದರ ಮಧ್ಯೆ ಕಾಲೇಜ್ ಕುಮಾರನ ಲವ್ ಅಲ್ಲಿ ಬೀಳಿಸುವ ಕಥಾ ನಾಯಕಿ.. ಎಲ್ಲರ ಅಭಿನಯ ಮನ ಮುಟ್ಟುವಂತಿದೆ.ಇನ್ನು ಈ ಕಥೆಯಲ್ಲಿ ಬರುವ ಎಲ್ಲಾ ಪಾತ್ರದಾರಿಗಳೂ ತಮ್ಮ ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ಮಾಡಿ ಜನರ ಮೆಚ್ಚುಗೆಯನ್ನು ಪಡೆಯುತ್ತಾರೆ..

ಕಾಲೇಜ್ ನಲ್ಲಿ ಮಗ ಪೊರ್ಕಿಯಾಗಿರುವ ವಿಷಯ ತಿಳಿದ ತಂದೆ ಏನು ಮಾಡುತ್ತಾನೆ?? ಅದೇ ಈ ಚಿತ್ರದ ದೊಡ್ಡ ಟ್ವಿಸ್ಟ್.. ಯಾರೂ ಊಹಿಸಲಾಗದ ಈ ಕಥೆ ಮನಸ್ಸಿಗೆ ಬೇಜಾರು ಒತ್ತಡ ಅಥವಾ ಇನ್ಯಾವುದೇ ಇರಲಿ.. ಎಲ್ಲರನ್ನೂ ಮನರಂಜಿಸದೇ ಕಳಿಸಲಾರದು..
ರವಿಶಂಕರ್ ಹಾಗೂ ವಿಕ್ಕಿ ರವರ ಅಭಿನಯ ಹೈಲೈಟ್ ಆಗುತ್ತದೆ.. ಎಲ್ಲರೂ ನಗೆ ಗಡಲಲ್ಲಿ ತೇಲುವುದಂತೂ ಸತ್ಯ..

ಅರ್ಜುನ್ ಜನ್ಯ ಮ್ಯೂಸಿಕ್ ಇರುವ ಈ ಸಿನಿಮಾದ ಎಲ್ಲಾ ಹಾಡುಗಳು ಹಿಟ್ ಆಗಿ ಅದರಲ್ಲೂ ಯೂಟ್ಯೂಬ್ ನಲ್ಲಿ ಟ್ರೆಂಡ್ ನಲ್ಲಿ ಇದ್ದದ್ದು ವಿಶೇಷ.. ಸುಮ್ಮ ಸುಮ್ಮನೆ ಬೇಡದ ಸನ್ನಿವೇಶದಲ್ಲಿ ಹಾಡುಗಳು ಬರದೆ ಸಂಧರ್ಭಕ್ಕೆ ತಕ್ಕ ಹಾಗೆ ಹಾಡುಗಳು ಬಂದು ಎಲ್ಲರಿಗೂ ಇಷ್ಟವಾಗುತ್ತದೆ..
ಇನ್ನು ಈ ಚಿತ್ರದ ಸೆಕೆಂಡ್ ಆಫ್ ನಲ್ಲಿ ಬರುವ ಟ್ವಿಸ್ಟ್ ನಿಂದಾಗಿ ಸಿನಿಮಾ ನೋಡಿದ ಪ್ರೇಕ್ಷಕರು ಇನ್ನಷ್ಟು ಜನರಿಗೆ ಹೇಳಿ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಕಳುಹಿಸುವುದಂತು ಸತ್ಯದ ಮಾತು..

ಚಿತ್ರದ ನಾಯಕ ನಾಯಕಿಯರಿಬ್ಬರದೂ ಇದು ಎರಡನೇ ಸಿನಿಮಾ.. ವಿಕ್ಕಿ ವರುನ್ ಈಗಾಗಲೇ ಕೆಂಡಸಂಪಿಗೆಯ ಮೂಲಕ ಎಲ್ಲರ ಮನ ಗೆದ್ದ ನಾಯಕ.. ಇನ್ನೂ ಕಿರಿಕ್ ಪಾರ್ಟಿಯ ಸಂಯುಕ್ತ ಕಿರಿಕ್ ಹುಡುಗಿ ಎಂದೇ ಹೆಸರುವಾಸಿ.. ಇವರಿಬ್ಬರ ಕಾಂಬಿನೇಷನ್ ತುಂಬಾ ಚೆನ್ನಾಗಿ ಮೂಡಿ ಬಂದಿದೆ..
ಚಿತ್ರಮಂದಿರದಿಂದ ಹೊರಗೆ ಬರುವ ಪ್ರೇಕ್ಷಕನ ಮುಖದಲ್ಲಿ ಮಂದಹಾಸ ಬೀರುವುದಂತೂ ಸತ್ಯ..
ಏನೇ ಆಗಲಿ ಕನ್ನಡದಲ್ಲಿ ಇಂತಹ ಸದಭಿರುಚಿಯ ಸಿನಿಮಾಗಳು ಬಂದಾಗ ನಮ್ಮ ಪ್ರೇಕ್ಷಕರು ಗೆಲ್ಲಿಸುತ್ತಾರೆ ಎಂಬುದಕ್ಕೆ ಈಗ ಕಾಲೇಜ್ ಕುಮಾರ ಕೂಡ ಒಂದು ನಿದರ್ಶನ.. ಕೊಟ್ಟ ದುಡ್ಡಿಗೆ ಎರಡರಷ್ಟು ಮನರಂಜಿಸುವ ಸಿನಿಮಾ ನೀವು ನಿಮ್ಮ ಸ್ನೇಹಿತರು ಕುಟುಂಬದ ಜೊತೆ ಹೋಗಿ ನೋಡಿ ಬನ್ನಿ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.
ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…
ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…
ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…
ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್ ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…