ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ. ಅದಕ್ಕೆ ಟೀಚರ್…’ ಮಕ್ಕಳೆ ನಾಳೆ ಬೆಳಿಗ್ಗೆ ಶಾಲೆಗೆ ಬೇಗ ಬನ್ನಿ …ನಿಮಗೆ ಸ್ವರ್ಗ ಹಾಗೂ ನರಕಗಳನ್ನು ತೋರಿಸುತ್ತೇನೆ’ ಎಂದು ಹೇಳುತ್ತಾರೆ. ಅವುಗಳನ್ನು ನೋಡಿದ ಮೇಲೆ ಅವುಗಳ ವ್ಯತ್ಯಾಸ ನಿಮಗೇ ತಿಳಿಯುತ್ತದೆ. ಎನ್ನುತ್ತಾರೆ.

ಮಾರನೇ ದಿನ ಮಕ್ಕಳೆಲ್ಲರೂ ಬೇಗ ಶಾಲೆಗೆ ಬರುತ್ತಾರೆ.ಅವರಲ್ಲಿ ಸ್ವರ್ಗ ಹಾಗೂ ನರಕಗಳ ಬಗ್ಗೆ ತಿಳಿದುಕೊಳ್ಳುವ ಕುತೂಹಲವಿರುತ್ತದೆ.ಭೋಜನ ವಿರಾಮದ ಸಮಯದಲ್ಲಿ … ನರಕದಲ್ಲಿ ಇರುವವರೆಲ್ಲರೂ ಊಟ ಮಾಡಲು ಕುಳಿತುಕೊಳ್ಳುತ್ತಾರೆ. ಅವರ ತಟ್ಟೆಗಳಲ್ಲಿ ಪಂಚ ಭಕ್ಷ್ಯ ಪರಮಾನ್ನಗಳಿರುತ್ತವೆ. ಆದರೆ, ಯಾರಿಂದಲೂ ತಿನ್ನಲು ಸಾಧ್ಯವಾಗುತ್ತಿಲ್ಲ. ಕಾರಣವೇನೆಂದರೆ… ಅವರೆಲ್ಲರ ಕೈಗಳಿಗೆ ಮುಳ್ಳುಗಳಿಂದ ಕೂಡಿರುವ ಬಳೆಗಳನ್ನು ಹಾಕಿರುತ್ತಾರೆ. ಪದಾರ್ಥಗಳನ್ನು ತಿನ್ನಲು ಮುಂದಾದಾಗ ,ಬಳೆಯ ಮುಳ್ಳುಗಳು ತುಟಿಗಳಿಗೆ ಚುಚ್ಚುತ್ತವೆ. ಹಾಗಾಗಿ ತಮ್ಮ ಎದುರು ಪಂಚ ಭಕ್ಷ್ಯ ಪರಮಾನ್ನಗಳಿದ್ದರೂ ಅವುಗಳನ್ನು ತಿನ್ನಲಾಗುವುದಿಲ್ಲ. ಅರ್ಧ ಹಸಿವೆಯಿಂದಲೇ ಕಾಲ ಕಳೆಯ ಬೇಕಾಗಿದೆ.

ಈಗ ಟೀಚರ್ ಮಕ್ಕಳನ್ನು… ಸ್ವರ್ಗಕ್ಕೆ ಕರೆದುಕೊಂಡು ಹೋಗುತ್ತಾರೆ. ಇಲ್ಲಿಯೂ ಸಹ ಅವರ ತಟ್ಟೆಗಳಲ್ಲಿ ಪಂಚಭಕ್ಷ್ಯ ಪರಮಾನ್ನಗಳಿರುತ್ತವೆ. ಎಲ್ಲರ ಕೈಗಳಿಗೂ ಮುಳ್ಳುಗಳಿಂದ ಕೂಡಿದ ಬಳೆಗಳಿರುತ್ತವೆ. ಆದರೆ, ಇವರು ಯಾವುದೇ ತೊಂದರೆ ಪಡದೆ ತಮ್ಮ ಮುಂದಿರುವ ಆಹಾರವನ್ನು ಹೊಟ್ಟೆ ತುಂಬಾ ತಿನ್ನುತ್ತಾರೆ.

ಈಗ ಟೀಚರ್ ಮಕ್ಕಳಲ್ಲಿ…ಮಕ್ಕಳೇ ನೀವೇ ನೋಡಿದಿರಲ್ಲಾ..?ಎಂದು ಕೇಳುತ್ತಾರೆ. ನರಕದಲ್ಲಿರುವವರ ಕೈಗಳಲ್ಲಿ ಮುಳ್ಳುಗಳಿಂದ ಕೂಡಿದ ಬಳೆಗಳಿವೆ , ಸ್ವರ್ಗದಲ್ಲಿರುವವರ ಕೈಯಲ್ಲೂ ಇವೆ. ಆದರೆ, ಅವರಿಂದ ತಿನ್ನಲಾಗಲಿಲ್ಲ. ಇವರು ಹೊಟ್ಟೆ ತುಂಬಾ ತಿಂದರು.
ಇದು ಹೇಗೆ ಸಾಧ್ಯವಾಯಿತೆಂದರೆ…ನರಕದಲ್ಲಿರುವವರು ತಮ್ಮ ಕೈಗಳಿಂದ ಅಹಾರವನ್ನು ತಿನ್ನಲು ಹೋದಾಗ ಬಳೆಗಳಲ್ಲಿದ್ದ ಮುಳ್ಳುಗಳು ಅವರ ಮೂತಿಗೆ ಚುಚ್ಚಿಕೊಳ್ಳುತ್ತಿದ್ದವು. ಆದರೆ, ಸ್ವರ್ಗದಲ್ಲಿರುವವರು… ಪ್ರತಿಯೊಬ್ಬರೂ ತಾವೇ ತಿನ್ನದೆ…ತಮ್ಮ ಎದುರಿಗೆ ಕುಳಿತವರಿಗೆ ತಿನ್ನಿಸುತ್ತಿದ್ದರು. ಹಾಗಾಗಿ ಮುಳ್ಳುಗಳು ಚುಚ್ಚಿಕೊಳ್ಳುವ ಪ್ರಶ್ನೆಯೇಯಿಲ್ಲ.

ಅಂದರೆ…ಮನುಷ್ಯ ಪರೋಪಕಾರದಿಂದ ಜೀವಿಸುವುದೇ ಸ್ವರ್ಗ. ಸ್ವಾರ್ಥದಿಂದ ಜೀವಿಸುವುದೇ ನರಕ. ಎಂದು ಟೀಚರ್ ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಅರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.
ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…
ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…
ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ. ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ…
ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…