ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಂಗಳವಾರವೂ ಖಾಸಗಿ ಆಸ್ಪತ್ರೆಗಳು ಮುಚ್ಚಿದ್ದರಿಂದ ರೋಗಿಗಳ ಪರಿಸ್ಥಿತಿ ಬಿಗಡಾಯಿಸಿತ್ತು. ರೋಗಿಗಳು ತುರ್ತು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಮುಗಿ ಬೀಳುವ ಸ್ಥಿತಿ ನಿರ್ಮಾಣವಾಯಿತು. ಸರ್ಕಾರಿ ಆಸ್ಪತ್ರೆಗಳಲ್ಲಿ ಪರಿಸ್ಥಿತಿ ನಿಭಾಯಿಸಲು ಸೂಕ್ತ ವ್ಯವಸ್ಥೆ ಮಾಡಲಾಗಿತ್ತು.ಬೆಂಗಳೂರು, ಮೈಸೂರು ಮತ್ತು ಮಂಗಳೂರು ನಗರಗಳ ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ವಿಭಾಗ ಎಂದಿನಂತೆ ಕಾರ್ಯ ನಿರ್ವಹಿಸಿದವು.
ಮಧುಮೇಹದಿಂದ ಬಾಲಕಿ ಸಾವು:-
ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕು ಇಂಗಳಗಾಂವ ಗ್ರಾಮದ ಬಾಲಕಿ ಕಲ್ಲವ್ವ ಶ್ರೀಶೈಲ ಅಂಬಿ (12) ತುರ್ತು ಚಿಕಿತ್ಸೆ ಲಭಿಸದೆ ಮಂಗಳವಾರ ಮೃತಪಟ್ಟಿದ್ದಾಳೆ. ಹುಟ್ಟಿನಿಂದಲೇ ಬರುವ ಮಧುಮೇಹದಿಂದ ಬಳಲುತ್ತಿದ್ದ ಆಕೆ, ಸೋಮವಾರ ರಾತ್ರಿ ತೀವ್ರ ರಕ್ತದೊತ್ತಡದಿಂದಾಗಿ ಅರೆಪ್ರಜ್ಞಾವಸ್ಥೆ ತಲುಪಿದ್ದಳು. ಸಕಾಲಕ್ಕೆ ಯಾವ ವೈದ್ಯರೂ ಸಿಗಲಿಲ್ಲ. ತಡರಾತ್ರಿ ಅಥಣಿಯ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಬಾಲಕಿ ಮೃತಪಟ್ಟಳು ಎಂದು ಮುಖ್ಯ ವೈದ್ಯಾಧಿಕಾರಿ ಡಾ.ಸಂಜುಕುಮಾರ ಗುಂಜಿಗಾಂವಿ ತಿಳಿಸಿದರು.

ಡೆಂಗಿ ಜ್ವರದಿಂದ ಬಳಲುತ್ತಿದ್ದಳು ಎನ್ನಲಾದ ಧಾರವಾಡದ ವೈಷ್ಣವಿ ಜಾಧವ (9) ಸಕಾಲಕ್ಕೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾಳೆ. ಬಾಲಕಿಯನ್ನು ದಾಖಲಿಸಿಕೊಳ್ಳಲು ಖಾಸಗಿ ಆಸ್ಪತ್ರೆಗಳ ಸಿಬ್ಬಂದಿ ನಿರಾಕರಿಸಿದ್ದರಿಂದ ಸೋಮವಾರ ತಡರಾತ್ರಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ರಾತ್ರಿಯೇ ಮೃತಪಟ್ಟಿದ್ದಾಳೆ.
ಪಿಡಿಒ ಸಾವು:-
ಹೃದಯಾಘಾತಕ್ಕೆ ಒಳಗಾಗಿದ್ದ ಗಂಗಾವತಿ ತಾಲ್ಲೂಕಿನ ಮುಕ್ಕುಂಪಿ ಗ್ರಾಮದ ಪಿಡಿಒ ಗ್ಯಾನಪ್ಪ ಬುಡ್ನಾಳ್ (56) ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ಮಂಗಳವಾರ ಮೃತಪಟ್ಟಿದ್ದಾರೆ.

ಹಾಸನದಲ್ಲಿ 3 ತಿಂಗಳ ಮಗುವಿನ ಸಾವು:-
ಹಾಸನ ನಗರದಲ್ಲಿ ಮೂರು ತಿಂಗಳ ಮಗು ಅನಾರೋಗ್ಯದಿಂದ ಮಂಗಳವಾರ ಮೃತಪಟ್ಟಿದೆ. ಇಲ್ಲಿನ ಸಿದ್ದಯ್ಯನಗರದ ನದೀಂ-ಫರ್ಹಾನಾ ದಂಪತಿ ಪುತ್ರ ಇಬ್ರಾಹಿಂ, ನಾಲ್ಕು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿತ್ತು. ಹೆರಿಗೆಗೆಂದು ತವರೂರು ತುಮಕೂರು ಜಿಲ್ಲೆಯ ತಿಪಟೂರಿಗೆ ತೆರಳಿದ್ದ ಫರ್ಹಾನಾ, ಅಲ್ಲಿಯೇ ಚಿಕಿತ್ಸೆ ಕೊಡಿಸಿದ್ದರು.
ಆದರೆ ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರದಿಂದ ಸರಿಯಾದ ಚಿಕಿತ್ಸೆ ದೊರಕಲಿಲ್ಲಮಗುವಿನ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ, ತಿಪಟೂರಿನಿಂದ ಸಾರಿಗೆ ಬಸ್ ನಲ್ಲಿ ಬೆಳಿಗ್ಗೆ ಹಾಸನಕ್ಕೆ ಮರಳಿ ಕರೆತರುವಾಗ ಮಾರ್ಗಮಧ್ಯೆ ಸಾವನ್ನಪ್ಪಿದೆ.
ತುಮಕೂರಿನಲ್ಲಿ ವಿದ್ಯಾರ್ಥಿನಿ ಸಾವು:-
ತುಮಕೂರು ನಗರದ ವರದರಾಜ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಜ್ಯೋತಿ (23) ಹೃದಯ ಸಂಬಂಧಿ ಕಾಯಿಲೆಯಿಂದ ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ರೋಗಿಗಳ ಸಂಖ್ಯೆ ದುಪ್ಪಟ್ಟು:-
ಹಾವೇರಿ ಜಿಲ್ಲೆಯಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮಂಗಳವಾರ ರೋಗಿಗಳ ದಟ್ಟಣೆ ಹೆಚ್ಚಾಗಿತ್ತು. ‘ಹಾವೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಬರುತ್ತಿರುವ ರೋಗಿಗಳ ಸಂಖ್ಯೆ ದುಪ್ಪಟ್ಟಾಗಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ತಮ್ಮ ಕನಸು ಈಡೇರಿಸಿಕೊಳ್ಳಲು ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ. ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ. ವೀಡಿಯೊ ಮಾಡಿ ಸ್ಟಾರ್ ಆದ:- ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್ …
ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…
ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..
ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ಗುಜರಾತ್ನ ಜಾಮ್ನಗರದಲ್ಲಿ ಇದೇ ರೀತಿಯ ಲವ್ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…