ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್ ಹೈಪರ್ಲೂಪ್ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್ ಸಮ್ಮಿಟ್ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ವರ್ಜಿನ್ ಹೈಪರ್ಲೂಪ್ ಒನ್ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.

ಈ ಒಪ್ಪಂದದ ಪ್ರಕಾರ, ಬೆಂಗಳೂರು, ತುಮಕೂರು, ಹುಬ್ಬಳ್ಳಿ-ಧಾರವಾಡ ಮತ್ತು ಹೊಸೂರುಗಳಲ್ಲಿ ಈ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಪರಿಶೋಧನೆ ಮಾಡುವುದಲ್ಲದೇ, ಆರ್ಥಿಕವಾಗಿಯೂ ಇದು ಪ್ರಯೋಜನಕ್ಕೆ ತರುತ್ತದೆಯೇ ಎಂಬ ಬಗ್ಗೆಯೂ ಅಧ್ಯಯನ ನಡೆಸಲಿದೆ.
ಒಂದೊಮ್ಮೆ ಈ ಯೋಜನೆ ಜಾರಿಯಾಗಲು ಅರ್ಹವೆಂದು ಕಂಡುಬಂದಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿ ನಡುವಿನ ವೇಗ ಕೇವಲ ಅರ್ಧಗಂಟೆಗೆ ಇಳಿಯಲಿದೆ. ಅಂದರೆ, ವಿಮಾನ ಪ್ರಯಾಣಕ್ಕಿಂತಲೂ ಕಡಿಮೆ ಸಮಯದಲ್ಲಿ ಈ ನಗರಗಳ ನಡುವೆ ಸಂಚಾರ ಮಾಡಬಹುದಾಗಿದೆ.

ಒಪ್ಪಂದದ ನಂತರ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, “”ಬೆಂಗಳೂರು ಐಟಿ ಹಬ್ ಆಗಿದ್ದು, ದೇಶದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಇಲ್ಲಿ ಜಗತ್ತಿನ ಅತ್ಯಂತ ಪ್ರಮುಖ ಐಟಿ ಕಂಪನಿಗಳು ಕಾರ್ಯಾಚರಣೆ ನಡೆಸುತ್ತಿವೆ. ಒಂದು ವೇಳೆ ಹೈಪರ್ಲೂಪ್ನಂಥ ನವ ತಂತ್ರಜ್ಞಾನವನ್ನು ರಾಜ್ಯದಲ್ಲಿ ಅಳವಡಿಸಿದ್ದೇ ಆದರೆ, ಕರ್ನಾಟಕದ ಪ್ರಗತಿಯ ವೇಗ ಮತ್ತಷ್ಟು ಹೆಚ್ಚುತ್ತದೆ,” ಎಂದಿದ್ದಾರೆ.

ಹೈಪರ್ಲೂಪ್ ಯೋಜನೆಗಾಗಿ ಕೇವಲ ಕರ್ನಾಟಕವಷ್ಟೇ ಅಲ್ಲ, ಮಹಾರಾಷ್ಟ್ರ, ಆಂಧ್ರ ಪ್ರದೇಶ ರಾಜ್ಯಗಳೂ ವರ್ಜಿನ್ ಹೈಪರ್ಲೂಪ್ ಒನ್ ಕಂಪನಿ ಜತೆ ಒಡಂಬಡಿಕೆ ಮಾಡಿಕೊಂಡಿವೆ. ಈ ಕಂಪನಿ ಪ್ರಾಥಮಿಕವಾಗಿ ಸ್ಥಳ ಮತ್ತು ಯೋಜನೆಯ ಅಗತ್ಯತೆ ಬಗ್ಗೆ ಅಧ್ಯಯನ ನಡೆಸಲಿದೆ.
ಏನಿದು ಹೈಪರ್ಲೂಪ್?
ವಿಶೇಷವಾಗಿ ನಿರ್ಮಿಸಲಾದ ಕೊಳವೆಯೊಂದರಲ್ಲಿ ಪಾಡ್(ಪುಟ್ಟ ವಾಹನಗಳು)ಗಳು ಸಾಗುವಂತೆ ಮಾಡುವುದು. ಈ ಕೊಳವೆಯನ್ನು ನೆಲದಿಂದ ಕೊಂಚ ಮೇಲೆಯೇ ನಿರ್ಮಿಸಲಾಗಿರುತ್ತದೆ. ಅಯಸ್ಕಾಂತೀಯ ಗುಣದೊಂದಿಗೆ ಈ ಕೊಳವೆಯ ಯಾವುದೇ ಬದಿಗೂ ಪಾಡ್ ತಗುಲದಂತೆ ಮಾಡಲಾಗುತ್ತದೆ.

ಇನ್ನೂ ವಿಶೇಷವೆಂದರೆ, ಈ ಕೊಳವೆಗೆ ಹೊರಗಿನಿಂದ ಗಾಳಿ ಹೋಗದಂತೆ ನಿರ್ಮಿಸಲಾಗುತ್ತದೆ. ಅಲ್ಲದೆ, ಇದೇ ಕಾಂತೀಯ ಶಕ್ತಿಯಿಂದಲೇ ಇದನ್ನು ಚಲಿಸುವಂತೆ ಮಾಡಲಾಗುತ್ತದೆ. ಆರಂಭದಲ್ಲಿ ಗಂಟೆಗೆ 640 ಕಿ.ಮೀ. ವೇಗ ಎಂದು ಹೇಳಲಾಗಿತ್ತಾದರೂ, ಇದೀಗ ಪ್ರಯೋಗ ಯಶಸ್ವಿಯಾದ ಬಳಿಕ ಗಂಟೆಗೆ ಒಂದು ಸಾವಿರ ಕಿ.ಮೀ. ವೇಗವಾಗಿ ಹೋಗಬಹುದು ಎಂದು ಹೇಳಲಾಗುತ್ತಿದೆ.
ಎಲ್ಲೆಲ್ಲಿ ಯೋಜನೆ?

ಅಮೆರಿಕ, ಬ್ರಿಟನ್, ಕೆನಡಾ, ಯುಎಇ, ಫಿನ್ಲಂಡ್ ಮತ್ತು ಭಾರತ. ಭಾರತದಲ್ಲಿ ಬೆಂಗಳೂರು, ತುಮಕೂರು, ಹೊಸೂರು, ಹುಬ್ಬಳ್ಳಿ, ಮುಂಬೈ, ಪುಣೆ ನಗರಗಳಲ್ಲಿ ಯೋಜನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು,…
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.
ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…