ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

ಅಷ್ಟಲ್ಲದೇ ಉರಿಯೂತಕ್ಕೆ ಸಂಬಂಧಿಸಿದ ಯಾವ್ದೇ ತರದ ತೊಂದ್ರೆ ಇದ್ರೆ ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಕಮ್ಮಿ ಮಾಡ್ಸತ್ತೆ. ಪ್ರೋಟೀನ್ ಮತ್ತೆ ನಾರಿನ ಅಂಶ ಸಕ್ಕತ್ತಾಗಿ ಇರೋದ್ರಿಂದ ಮಧುಮೇಹ ಕಾಯಿಲೆಯನ್ನ ಕಮ್ಮಿ ಮಾಡ್ಸತ್ತೆ.
ಇದೇ ತರ ಇನ್ನೂ 09 ಉಪಯೋಗಗಳಿದೆ
1. ಇದ್ರಲ್ಲಿರೋ ಪೌಷ್ಟಿಕಾಂಶಗಳು ಮಂಡಿ ನೋವು ಕಮ್ಮಿಮಾಡತ್ತೆ:-
ಬಟಾಣಿಗಳಲ್ಲಿ ಬೇರೆ ಬೇರೆ ತರದ ಬಟಾಣಿಗಳಿವೆ. ಫ್ಲಾವನೊಯ್ಡ್ ಗುಂಪಿನ ಬಟಾಣಿಗಳಲ್ಲಿ ಕ್ಯಟಾಚಿನ್ ಮತ್ತೆ ಎಪಿಕ್ಯಟಾಚಿನ್ ಅನ್ನೋ ಆಂಟಿ ಆಕ್ಸಿಡೆಂಟ್ ಇದೆಯಂತೆ.

ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಇ, ಮಿನ್ರಲ್, ಜಿಂಕ್, ಒಮೆಗಾ 3 ಫ್ಯಾಟಿ ಆಸಿಡ್, ಇದೆಲ್ಲದ್ರ ಭಂಡಾರಾನೇ ಬಟಾಣಿಗಳಲ್ಲಿ ಅಡ್ಗಿದೆಯಂತೆ. ಇದೆಲ್ಲದ್ರ ಸಹಾಯದಿಂದ ಮಧುಮೇಹ , ಹೃದಯದ ತೊಂದ್ರೆ , ಮಂಡಿ ನೋವ್ಗಳನ್ನ ಕಮ್ಮಿ ಮಾಡ್ತದಂತೆ.
2. ರಕ್ತದಲ್ಲಿರೋ ಸಕ್ಕರೆ ಪ್ರಮಾಣ ಕಮ್ಮಿ ಮಾಡತ್ತೆ:-
ರಕ್ತದಲ್ಲಿರೋ ಸಕ್ಕರೆ ಪ್ರಮಾಣವನ್ನ ಕಮ್ಮಿ ಮಾಡ್ಸಕ್ಕೆ ಬಟಾಣಿ ಒಂದೊಳ್ಳೆ ಆಹಾರ ಅಂತ ಕೆಲ್ವು ಆಹಾರ ತಜ್ಞರು ಹೇಳಿದ್ದನ್ನ ಕೇಳಿದ್ ನೆನಪಿದೆ. ಆದ್ರೆ ಹೇಗ್ ಕಮ್ಮಿ ಮಾಡ್ಸತ್ತೆ ಅಂತ ಗೊತ್ತಿರ್ಲಿಲ್ಲ.

ಇವಾಗ ಗೊತ್ತಾಗಿದ್ ಹೊಸ್ ವಿಷ್ಯ ಎನಂದ್ರೆ ಇದ್ರಲ್ಲಿರೋ ಪ್ರೋಟೀನ್ ಮತ್ತೆ ನಾರಿನ ಅಂಶ ಪಿಷ್ಟವನ್ನ ತುಂಡ್ಮಾಡಿ ಕಾರ್ಬೋಹೈಡ್ರೇಟ್ಸಗಳನ್ನ ಜೀರ್ಣಾಂಗವ್ಯೂಹದ ಕಡೆಗೆ ತಳ್ಳತ್ತೆ. ಈ ಕಾರ್ಬೋಹೈಡ್ರೇಟ್ಸಗಳು ರಕ್ತದಲ್ಲಿರೋ ಸಕ್ಕರೆಯ ಪ್ರಮಾಣಾನ ಕಡ್ಮೆ ಮಾಡ್ಸತ್ತೆ.
3. ಇದ್ರಲ್ಲಿರೋ ವಿಟಮಿನ್ ಬಿ ಅಂಶ ಹೃದಯ ಚನ್ನಾಗಿ ಕೆಲಸ ಮಾಡೋ ಹಾಗೆ ನೋಡ್ಕೊಳತ್ತೆ:-
ಹಾಳು ಮೂಳನ್ನೆಲ್ಲಾ ತಿಂದು ಹೊಟ್ಟೆ ಬರ್ಸಕೊಂಡು ಆಮೇಲೆ ನಿಧಾನವಾಗಿ ಬೇಡ್ದೇ ಇರೋ ಕೊಬ್ಬನ್ನ ಹೆಚ್ಸಿಕೊಂಡ್ರೆ ಹೃದಯದ ಕಾಯ್ಲೆ ಸಾಮಾನ್ಯ. ಬಟಾಣಿಯಲ್ಲಿರೋ ನಿಯಾಸಿನ್ ಅನ್ನೋ ಅಂಶ ಈ ಕೆಟ್ಟ್ ಕೊಬ್ಬನ್ನ ಕರ್ಗಸತ್ತೆ. ಇದ್ರ ಜೊತೆಗೆ ನಾನು ಸಾಥ್ ಕೊಡ್ತೀನಿ ಅಂತ ಒಮೆಗಾ 3 ಫ್ಯಾಟಿ ಆಸಿಡ್ ಬೇರೆ ಇದೆ. ಕೆಟ್ಟ್ ಕೊಬ್ಬಿನ ಜೊತೆ ಹೋಮೋ ಸಿಸ್ಟಿನ್ ಅನ್ನೋದ್ಬೇರೆ ಕೂಡ್ಕಂಡು ತುಂಬಾನೇ ತೊಂದ್ರೆ ಕೊಡತ್ತೆ.
4. ಆಂಟಿ ಆಕ್ಸಿಡೆಂಟ್ಸ್ ಸಹಾಯದಿಂದ ಹೊಟ್ಟೆ ಕ್ಯಾನ್ಸರ್ ಬರೋದನ್ನ ತಡೆಗಟ್ಟತ್ತೆ:-
ಒತ್ತಡ ಮತ್ತು ತಲೆಬಿಸಿ ಜಾಸ್ತಿ ಮಾಡ್ಕೊಳೋದ್ರಿಂದ ಕ್ಯಾನ್ಸರ್ ಬೆಳೀಬೋದು. ನಿಮ್ ದೇಹದಲ್ಲಿ ಆಂಟಿ ಆಕ್ಸಿಡೆಂಟ್ ಕಮ್ಮಿ ಇದ್ರೆ ಈ ಸಮಸ್ಯೆನಾ ಪರಿಹರ್ಸಕ್ಕೆ ಆಗಲ್ಲ.

ಆಗ್ಲೇ ಹೇಳ್ದಾಗೆ ಬಟಾಣಿ ಆಂಟಿ ಆಕ್ಸಿಡೆಂಟ್ಗಳ ಭಂಡಾರಾವೇ ಆಗಿರೋದ್ರಿಂದ ಹೊಟ್ಟೆ ಕ್ಯಾನ್ಸರ್ ಇಂದ ನಮ್ಮನ್ನ ಕಾಪಾಡತ್ತೆ.
5. ಬಟಾಣೀಲಿ ಕ್ಯಾಲೋರಿ ಕಮ್ಮಿ ಇರೋದ್ರಿಂದ ತೂಕ ಇಳಿಸ್ಕೊಳಕ್ಕೆ ಸಹಾಯ ಮಾಡತ್ತೆ:-
ಒಳ್ಳೆ ಪೋಷಕಾಂಶ ಮತ್ತೆ ಕಮ್ಮಿ ಕ್ಯಾಲೋರಿಯನ್ನ ಹೊಂದಿರೋ ಬಟಾಣಿ ನಿಮ್ ತೂಕ ಇಳ್ಸೋದ್ರಲ್ಲಿ ಅನುಮಾನಾನೇ ಇಲ್ಲ. ಒಂದು ಕಪ್ ಬಟಾಣಿಯಲ್ಲಿ ಸುಮಾರು 118 ಕ್ಯಾಲೋರಿಗಳು ಮಾತ್ರ ಇರತ್ತೆ. ಹಾಗೇ ನೀವ್ ಬಟಾಣಿ ತಿಂದಾದ್ಮೇಲೆ ಇನ್ನೇನ್ ತಿನ್ನೋಕೂ ಮನ್ಸ್ ಬರಲ್ಲ. ಯಾಕಂದ್ರೆ ನಿಮ್ ಹೊಟ್ಟೆ ಅದಾಗ್ಲೇ ತುಂಬಿರತ್ತೆ. ಬಟಾಣಿಗೆ ಸ್ವಲ್ಪ ಮಟ್ಟಿಗೆ ಉಪ್ಪನ್ನ ಹಾಕ್ಬಿಟ್ಟು ತಿಂದ್ರೆ ಸಕ್ಕತ್ತಾಗ್ ಶಕ್ತಿನೂ ಸಿಗತ್ತೆ.

6. ಇದ್ರಲ್ಲಿರೋ ನಾರಿನಂಶ ಹೊಟ್ಟೆ ಕಟ್ಕೊಳ್ದೆ ಇರೋ ಹಾಗೆ ನೋಡ್ಕೊಳತ್ತೆ:-
ಮಲಬದ್ದತೆ ಇದ್ಯಲ್ಲಾ… ಅದು ಎಲ್ಲಾ ಕಾಯ್ಲೆಗೂ ಇಲ್ ಜಾಗ ಇದೆ ಬಾರಪ್ಪಾ ಅನ್ನತ್ತೆ. ಬಟಾಣಿಯಲ್ಲಿ ಹೆಚ್ಚಿನ ಪ್ರಮಾಣದ ನಾರಿನಂಶ ಇರೋದ್ರಿಂದ ಎಷ್ಟೋ ದಿನ್ಗಳಿಂದ ಕೂಡ್ಕಂಡಿರೋ ತ್ಯಾಜ್ಯಗಳನ್ನ ಹೊರ್ಗಹಾಕ್ಲಿಕ್ಕೆ ಸಹಾಯ ಮಾಡತ್ತೆ. ಹಾಗೇ ಬಟಾಣಿ ಜೀರ್ಣಾಂಗ ವ್ಯವಸ್ಥೆಗೆ ತುಂಬಾನೇ ಸಾಥ್ ಕೊಡೋದೂ ಇದಕ್ಕೆ ಕಾರಣ ಇರ್ಬೋದು.
7. ಕೂದಲಿನ ಅಂದ ಕಾಪಾಡೋಕೆ ಇದ್ರಲ್ಲಿರೋ ವಿಟಮಿನ್ ಬಿ ಸಹಾಯ ಮಾಡತ್ತೆ:-
ಬಟಾಣಿಯಲ್ಲಿರೋ ವಿಟಮಿನ್ ಬಿ , ಫೋಲೆಟ್ , ವಿಟಮಿನ್ ಬಿ 6 ಕೂದಲು ಬೇರಿನಿಂದ ಗಟ್ಟಿಯಾಗೋ ಹಾಗೆ ನೋಡ್ಕೊಳತ್ತೆ. ವಿಟಮಿನ್ ಸಿ ಅನ್ನೋದು ಕೂದ್ಲು ಉದ್ರದೇ ಇರೋ ಹಾಗೆ ಕಾಪಾಡತ್ತೆ.

8.ಆಗಾಗ ಹುಷಾರ್ ತಪ್ಪಿ ಬೀಳದೆ ಇರೋ ಹಾಗೆ ನೋಡ್ಕೊಳತ್ತೆ:-
ನಮ್ ದೇಹದಲ್ಲಿರೋ ವ್ಯಾಧಿ ಕ್ಷಮತ್ವ ನಿರ್ಧಾರ ಆಗೋದೇ ವಿಟಮಿನ್ ಎ ಮೂಲಕ. ಒಂದು ತಟ್ಟೇ ಬಟಾಣಿಯಲ್ಲಿ ಸುಮಾರು 22 % ವಿಟಮಿನ್ ಎ ನಮ್ ದೇಹಕ್ಕೆ ಸಿಗತ್ತಂತೆ. ಅದ್ಕೊಸ್ಕರ ಇಮ್ಯುನಿಟಿ ಇಲ್ಲಾಂತ ಕೊರಗ್ಬೇಡಿ. ಬಟಾಣಿ ತಿನ್ನಿ. ಉಸಿರಾಟದ ತೊಂದ್ರೆ ಆಗ್ದೆ ಇರಕ್ಕೂ ವಿಟಮಿನ್ ಎ ಬೇಕಾಗತ್ತೆ.
9. ಚರ್ಮ ಹೊಳಿಯೋ ಹಾಗೆ ಮಾಡಿ ಚಿಕ್ಕೋರ ತರ ಕಾಣೋಹಾಗೆ ಮಾಡತ್ತೆ:-

ನಮ್ ದೇಹದಲ್ಲಿ ಫ್ರೀ ರಾಡಿಕಲ್ ಅನ್ನೋ ಅಂಶ ಇಲ್ದೇ ಹೋಗಿದ್ರೆ ಬಿಸ್ಲು , ಚಳಿ , ಮಳೆಯಂತ ನಮ್ ಚರ್ಮ ಬೇಗನೇ ಸುಕ್ಕು ಗಟ್ತಿತ್ತು. ಬಟಾಣಿಯಲ್ಲಿರೋ ಆಂಟಿ ಆಕ್ಸಿಡೆಂಟ್ ಈ ಫ್ರೀ ರಾಡಿಕಲ್ಗಳ ಆಯಸ್ಸು ಮತ್ತು ಅದ್ರ ಶಕ್ತಿಯನ್ನ ಜಾಸ್ತಿ ಮಾಡ್ಸತ್ತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ. .ನಿಮ್ಮ ಸಮಸ್ಯೆ.ಏನೇ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷಸ್ನೇಹಿತರು ವ್ಯಾಪಾರ ಪಾಲುದಾರರು…
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ
ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…
ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…
ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?