ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.

ಅಮೆರಿಕದ ಹ್ಯೂಸ್ಟನ್ನಲ್ಲಿರುವ ಮಕ್ಕಳ ಆಸ್ಪತ್ರೆಯ ಸರ್ಜನ್ಗಳಾದ ಡ್ಯಾರೆಲ್ ಕಾಸ್ ಮತ್ತು ಒಲುಯಿಂಕ್ ಒಲ್ಟೊಯಿ ಅವರು ಕಳೆದ ವರ್ಷ ಸೋನೊಗ್ರಾಮ್ ಪರೀಕ್ಷೆಯಲ್ಲಿ ಆಗ ಕೇವಲ 23 ವಾರ ಪ್ರಾಯವಾಗಿದ್ದ ಲಿನ್ಲೀ ಹೋಪ್ಳ ಮಿದುಳು ಬಳ್ಳಿಯ ಬುಡದಲ್ಲಿ ಭಾರೀ ಗಡ್ಡೆಯೊಂದು ಬೆಳೆದಿರುವುದು ಪತ್ತೆಯಾದ ಬಳಿಕ ಆ ಶಿಶುವನ್ನು ತಾಯಿ ಮಾರ್ಗರೆಟ್ ಬೋಮರ್(38)ಳ ಗರ್ಭಕೋಶದಿಂದ ಹೊರಕ್ಕೆ ತೆಗೆದಿದ್ದರು. ಆಗ ಮೊದಲ ಬಾರಿಗೆ ಶಿಶು ಈ ಧರೆಗಿಳಿದಿತ್ತು.

ಅದು(ಗಡ್ಡೆ) ಹೆಚ್ಚುಕಡಿಮೆ ಇನ್ನೊಂದು ತಲೆಯಂತೆ ಕಾಣುತ್ತಿತ್ತು ಎಂದು ಮಾರ್ಗರೆಟ್ ನೆನಪಿಸಿಕೊಂಡಿದ್ದಾಳೆ.ಗರ್ಭಕೋಶದಲ್ಲಿನ ಶಿಶುವಿನ ಮಿದುಳು ಬಳ್ಳಿಯಲ್ಲಿದ್ದ ಗಡ್ಡೆ ಇನ್ನೂ ಬೆಳೆಯುತ್ತಲೇ ಇತ್ತು. ಗಡ್ಡೆಯ ಬೃಹತ್ ಗಾತ್ರದಿಂದಾಗಿ ಈ ಶಿಶು ಬದುಕುಳಿಯುವುದಿಲ್ಲ ಎಂದು ವೈದ್ಯರು ಮಾರ್ಗರೆಟ್ಗೆ ತಿಳಿಸಿದ್ದರು.
ಸ್ಯಾಕ್ರೋಕೊಸಿಜೀಲ್ ಟೆರಾಟೋಮಾ ಎಂದು ವೈದ್ಯಕೀಯ ಭಾಷೆಯಲ್ಲಿ ಹಣೆಪಟ್ಟಿ ಅಂಟಿಸಿಕೊಂಡಿದ್ದ ಈ ಟ್ಯೂಮರ್ ಭ್ರೂಣದಿಂದ ರಕ್ತವನ್ನು ಸೆಳೆಯುತ್ತಿತ್ತು ಮತ್ತು ಇದರಿಂದಾಗಿ ಹೃದಯಾಘಾತದ ಅಪಾಯ ಹೆಚ್ಚಾಗಿತ್ತು.
ಅದು ಎಂತಹ ಬಿಕ್ಕಟ್ಟನ್ನು ಸೃಷ್ಟಿಸಿತ್ತೆಂದರೆ ವೈದ್ಯರು ಕಾಯುವಂತಿರಲಿಲ್ಲ, ಶಿಶು ಬದುಕುಳಿಯಬೇಕೆಂದರೆ ಅವರು ತಕ್ಷಣವೇ ಶಸ್ತ್ರಚಿಕಿತ್ಸೆಯನ್ನು ನಡೆಸಲೇಬೇಕಾಗಿತ್ತು.
ವೈದ್ಯರ ತಂಡ ಶಿಶುವನ್ನು ತಾಯಿಯ ಗರ್ಭಕೋಶದಿಂದ ಹೊರಗೆ ತೆಗೆದಿದ್ದರು. ಐದು ಗಂಟೆಗಳ ಸುದೀರ್ಘ ಅವಧಿಯ ಶಸ್ತ್ರಚಿಕಿತೆಯನ್ನು ನಡೆಸುತ್ತಿದ್ದಾಗ ಮಗುವಿನ ಸಾವು-ಬದುಕಿನ ಸಾಧ್ಯತೆ 50:50ರಷ್ಟಿತ್ತು.

ಪೂರ್ತಿ 20 ನಿಮಿಷಗಳ ಕಾಲ ಶಿಶು ತಾಯಿಯ ಶರೀರದಿಂದ ಹೊರಗಿತ್ತು ಮತ್ತು ಟ್ಯೂಮರ್ನ್ನು ಬೇರ್ಪಡಿಸಿದಾಗ ಅದರ ತೂಕ ಕೇವಲ ಒಂದು ಪೌಂಡ್ ಮೂರು ಔನ್ಸ್ ಅಂದರೆ 538.64 ಗ್ರಾಮ್ಗಳಷ್ಟಿತ್ತು. ಶಸ್ತ್ರಚಿಕಿತ್ಸೆ ಪೂರ್ಣಗೊಂಡ ಬಳಿಕ ಭ್ರೂಣವನ್ನು ಅತ್ಯಂತ ಎಚ್ಚರಿಕೆಯಿಂದ ತಾಯಿಯ ಗರ್ಭಾಶಯದಲ್ಲಿ ಮರು ಸ್ಥಾಪಿಸಲಾಗಿತ್ತು.
ಮೂರು ತಿಂಗಳುಗಳ ಬಳಿಕ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಮೂಲಕ ಲಿನ್ಲೀ ಎರಡನೇ ಬಾರಿ, ಅಂದರೆ ಈ ಬಾರಿ ಅಧಿಕೃತವಾಗಿ ಜನಿಸಿದಾಗ ಐದು ಪೌಂಡ್ ಐದು ಔನ್ಸ್(2.410 ಕೆ.ಜಿ) ತೂಗುತ್ತಿದ್ದಳು.
ಈಗ ಒಂದು ವರ್ಷ ಪ್ರಾಯವಾಗಿರುವ ಲಿನ್ಲೀ ಯಾವುದೇ ಆರೋಗ್ಯ ಸಮಸ್ಯೆಯಲ್ಲದೆ ಸೊಂಪಾಗಿ ಬೆಳೆಯುತ್ತಿದ್ದಾಳೆ. ತನ್ನ ಮಗು ಎಷ್ಟೊಂದು ಜಾಣೆಯಾಗಿದ್ದಾಳೆ ಎಂದು ತಾಯಿ ಮಾರ್ಗರೆಟ್ಗೆ ಹೆಮ್ಮೆಯೋ ಹೆಮ್ಮೆ.

ಅವಳು ನಡೆಯುವುದನ್ನು ಮತ್ತು ಓಡುವುದನ್ನು ಇಷ್ಟಪಡುತ್ತಾಳೆ. ಇದೊಂದು ದೊಡ್ಡ ಪವಾಡವಾಗಿದೆ. ಅವಳು ನಮ್ಮ ಪಾಲಿಗೆ ಅದ್ಭುತ ಆನಂದವಾಗಿದ್ದಾಳೆ ಎನ್ನುತ್ತಾಳೆ ಆಕೆ.
ವರ್ಷದಲ್ಲಿ ಎರಡು ಬಾರಿ ಹುಟ್ಟುಹಬ್ಬ ಆಚರಿಸುತ್ತಿರುವ ಲಿನ್ಲೀಯ ಭವಿಷ್ಯ ಉಜ್ವಲವಾಗಿದೆ. ಆಕೆ ತನ್ನ ಮನಸ್ಸಿಗೆ ಬಂದಿದ್ದನ್ನು ಮಾಡಲಿ, ಅವಳಿಗೆ ಯಾವುದೇ ಮಿತಿಯಿಲ್ಲ ಎನ್ನುತ್ತಾಳೆ ಮಾರ್ಗರೆಟ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…
ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…
ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ
ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್ಗಳು. ಮತ್ತೇಕೆ ತಡ? ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ? ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ….
ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು. ಧ್ರುವನ್ ಅವರು…
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ