ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು.

ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು, ರಕ್ತದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಮತ್ತು ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸಲು- ಮೊದಲಾದ ರೀತಿಯಲ್ಲಿ ಈ ಕೆಂಪುಕೆಂಪಾದ ಗಡ್ಡೆ ನಮ್ಮ ನೆರವಿಗೆ ಬರುತ್ತದೆ. ಅತ್ಯಂತ ಮುಖ್ಯವಾಗಿ ನಮ್ಮ ರಕ್ತದಲ್ಲಿ ಕೆಂಪು ರಕ್ತಕಣಗಳ ಕೊರತೆಯಿಂದಾಗಿ ಉಂಟಾಗುವ ಅನೀಮಿಯಾ ಸ್ಥಿತಿಗೂ ಬೀಟ್ರೂಟ್ ನೀಡುವ ನೆರವು ಯಾವುದೇ ಬೇರೆ ಆಹಾರದಲ್ಲಿಲ್ಲ. ಇಂತಹ ಉತ್ತಮ ತರಕಾರಿ ಗುಣಗಳ ಸಾರಾಂಶವನ್ನು ಇಲ್ಲಿ ನೀಡಲಾಗಿದೆ.
ರಕ್ತದಲ್ಲಿನ ಹೀಮೋಗ್ಲೋಬಿನ್ ಹೆಚ್ಚಿಸುತ್ತದೆ:-
ಈ ತರಕಾರಿಯನ್ನು ಹಸಿಯಾಗಿ ಸೇವಿಸಬಹುದಾದರೂ ಬೇಯಿಸಿ ತಿಂದರೆ ಇದರ ಗರಿಷ್ಟ ಪ್ರಯೋಜನವನ್ನು ಪಡೆಯಬಹುದು.

ಇದರಲ್ಲಿ ಅತಿಹೆಚ್ಚಿರುವ ಕಬ್ಬಿಣದ ಅಂಶದ ಕಾರಣ ರಕ್ತಹೀನತೆ ಹೋಗಲಾಡಿಸಲು ಅತ್ಯಂತ ಸಮರ್ಥವಾದ ಆಹಾರವಾಗಿದ್ದು ಬಾಣಂತಿಯರಿಗೆ ಮತ್ತು ಮಹಿಳೆಯರ ಮಾಸಿಕ ದಿನಗಳಲ್ಲಿ ಸೇವಿಸಲು ಅತ್ಯಂತ ಸೂಕ್ತವಾದ ಆಹಾರವಾಗಿದೆ.
ವಿವಿಧ ತರಕಾರಿಗಳ ಮಿಶ್ರಣದೊಂದಿಗೆ:-
ಸಾಮಾನ್ಯವಾಗಿ ಭಾರತೀಯ ಅಡುಗೆಗಳಲ್ಲಿ ಎಲ್ಲಾ ತರಕಾರಿಗಳನ್ನು ಕೊಂಚಕೊಂಚವಾಗಿ ಸೇರಿಸಿ ಸಾಂಬಾರ್, ಪಲ್ಯ, ಉಪ್ಪಿನಕಾಯಿ ಮೊದಲಾದವುಗಳನ್ನು ಮಾಡುತ್ತಾರೆ. ಇದರಿಂದ ಪ್ರತಿ ತರಕಾರಿಯ ಉತ್ತಮ ಗುಣಗಳು ಇತರ ತರಕಾರಿಯ ಗುಣಗಳೊಂದಿಗೆ ಸೇರಿ ಒಟ್ಟಾರೆಯಾಗಿ ಒಂದು ಪ್ರಬಲ ಆಹಾರವಾಗಿರುತ್ತದೆ.

ಅಂತೆಯೇ ಬೀಟ್ರೂಟ್ ಸಹಾ ಸೇರಿಸಿದ ವಿವಿಧ ತರಕಾರಿಗಳ ಪಲ್ಯ, ಸಾರುಗಳು ಪೋಷಕಾಂಶಗಳ ಆಗರವಾಗಿದ್ದು ಹಲವು ರೀತಿಯಲ್ಲಿ ಆರೋಗ್ಯವನ್ನು ವೃದ್ಧಿಸುತ್ತವೆ. ಬೀಟ್ರೂಟಿನಲ್ಲಿರುವ ಬೀಟಾಸಯಾನಿನ್ ಎಂಬ ಪೋಷಕಾಂಶದ ಕಾರಣ ಇದಕ್ಕೆ ರಕ್ತದ ಬಣ್ಣ ಬಂದಿದ್ದು ಒಂದು ಪ್ರಬಲ ಆಂಟಿ ಆಕ್ಸಿಡೆಂಟ್ ಆಗಿದೆ.
ಬೀಟ್ರೂಟ್ ಜ್ಯೂಸ್:-
ಬೇಯಿಸಿ ತಿಂದಂತೆಯೇ ಹಸಿ ಬೀಟ್ರೂಟ್ ನ ರಸವೂ ಆರೋಗ್ಯವನ್ನು ಹಲವು ರೀತಿಯಿಂದ ರಕ್ಷಿಸುತ್ತದೆ. ನಿಮಿರು ದೌರ್ಬಲ್ಯವಿದ್ದವರ ರಕ್ತದಲ್ಲಿ ನೈಟ್ರೇಟುಗಳ ಪ್ರಮಾಣ ಹೆಚ್ಚಾಗಿದ್ದು ಇದು ವಿಶೇಷವಾಗಿ ಜನನಾಂಗದ ನರಗಳಲ್ಲಿ ರಕ್ತ ತುಂಬಿಕೊಳ್ಳಲು ಅಡ್ಡಿಯಾಗುತ್ತದೆ.

ಬೀಟ್ರೂಟ್ ರಸದಲ್ಲಿರುವ ಪೋಷಕಾಂಶಗಳು ಈ ನೈಟ್ರೇಟುಗಳ ಪ್ರಭಾವ ಕಡಿಮೆಗೊಳಿಸುವ ಮೂಲಕ ನಿಮಿರುದೌರ್ಬಲ್ಯ ಕಡಿಮೆಯಾಗಲು ಸಾಧ್ಯವಾಗಿಸುತ್ತದೆ
ಬೀಟ್ರೂಟ್ ಸಿಪ್ಪೆ ಯಿಂದ ಕೂಡ ಸಾಕಷ್ಟು ಪ್ರಯೋಜನಗಳಿವೆ:-
ಸಿಪ್ಪೆ ಸುಲಿದ ಬಳಿಕ ಈ ಸಿಪ್ಪೆಗಳನ್ನು ಸಾಮಾನ್ಯವಾಗಿ ನಾವೆಲ್ಲರೂ ಕಸದ ಬುಟ್ಟಿಗೆ ಎಸೆಯುತ್ತೇವೆ. ಆದರೆ ಇದೊಂದು ಉತ್ತಮ ಸೌಂದರ್ಯವರ್ಧಕವಾಗಿದೆ.

ಈ ಸಿಪ್ಪೆಗಳನ್ನು ಮಿಕ್ಸಿಯಲ್ಲಿ ಅರೆದು ಈ ಲೇಪನವನ್ನು ತೆಳ್ಳಗೆ ಮುಖಕ್ಕೆ ಹಚ್ಚಿ ಕೊಂಚ ಹೊತ್ತಿನ ಬಳಿಕ ತಣ್ಣೀರಿನಿಂದ ತೊಳೆದುಕೊಂಡರೆ ನಯವಾದ, ಕಲೆಯಿಲ್ಲದ ಮತ್ತು ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯವಾಗುತ್ತದೆ.
ಬೀಟ್ರೂಟ್ ಫ್ರೈ:-
ಬೀಟ್ರೂಟ್ ಅನ್ನು ಸ್ವಲ್ಪ ನೀರಿನಲ್ಲಿ ಬೇಯಿಸಿ, ಆ ನೀರು ಸಂಪೂರ್ಣವಾಗಿ ಆವಿಯಾಗುವವರೆಗೆ ಕಾಯಿಸಿ. ಆಲೂಗಡ್ಡೆ, ಬೆಳ್ಳುಳ್ಳಿ, ಜೀರಿಗೆ ಮತ್ತು ಸ್ವಲ್ಪ ಸೋಯಾ ಸಾಸ್ ತೆಗೆದುಕೊಳ್ಳಿ.

ಅದನ್ನು ಬೀಟ್ರೂಟ್ ಮತ್ತು ಆಲೀವ್ ಎಣ್ಣೆಯ ಜೊತೆಗೆ ಉರಿದುಕೊಳ್ಳಿ ಮತ್ತು ಮೇಲೆ ಹೇಳಿದ ಉರಿದುಕೊಂಡ ಮಿಶ್ರಣವನ್ನು ಇದಕ್ಕೆ ಬೆರೆಸಿ. ಎಳ್ಳನ್ನು ಇದರ ಮೇಲೆ ಅಲಂಕಾರಕ್ಕೆ ಚಿಮುಕಿಸಿಕೊಂಡು, ಸೇವಿಸಿ
ಕ್ಯಾನ್ಸರ್ ಬರುವುದರಿಂದ ತಡೆಯುತ್ತದೆ:-
ಬೀಟ್ರೂಟ್ನಲ್ಲಿರುವ ಬೀಟಾಸಯಾನಿನ್ ಪೋಷಕಾಂಶ ರಕ್ತದಲ್ಲಿರುವ ಕ್ಯಾನ್ಸರ್ ಕಾರಕ ಕಣಗಳನ್ನು ಹೊಡೆದೋಡಿಸಲು ನೆರವಾಗುತ್ತದೆ. ಸಾಮಾನ್ಯವಾಗಿ ಪ್ರಾರಂಭಿಕ ಹಂತದಲ್ಲಿರುವ ಕ್ಯಾನ್ಸರ್ ಪೂರ್ಣವಾಗಿ ಗುಣವಾಗಬಲ್ಲದು.(ವಿಕೋಪಕ್ಕೆ ತಿರುಗಿದ ಕ್ಯಾನ್ಸರ್ ಚಿಕಿತ್ಸೆಗೆ ಹೆಚ್ಚಿನ ಸಮಯಾವಕಾಶ ಅಗತ್ಯವಿದೆ).

ಕ್ಲುಪ್ತಕಾಲದಲ್ಲಿ ಕ್ಯಾನ್ಸರ್ ಇರುವಿಕೆಯನ್ನು ಗುರುತಿಸಿ ಚಿಕಿತ್ಸೆ ಪಡೆದು ಗುಣಮುಖರಾದವರಿಗೂ ಬೀಟ್ರೂಟ್ ಅಗತ್ಯವಾಗಿದೆ. ಏಕೆಂದರೆ ಇವರ ದೇಹದಲ್ಲಿ ಮತ್ತೊಮ್ಮೆ ಈ ಕ್ಯಾನ್ಸರ್ ಕಾರಕ ಕಣಗಳು ಉತ್ಪತ್ತಿಯಾಗದಂತೆ ಬೀಟಾಸಯಾನಿನ್ ತಡೆಯುತ್ತದೆ. ಪರಿಣಾಮವಾಗಿ ಉತ್ತಮ ಆರೋಗ್ಯವನ್ನು ಮತ್ತು ಆಯಸ್ಸನ್ನು ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…
ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…
ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…
ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…
ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.