ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.

ಇಂದು ಭಾರತದಂತಹ ವಿವಿಧ ಸಂಸ್ಕೃತಿಗಳ ದೇಶದಲ್ಲಿ ಯುವಜನತೆ ವೈವಾಹಿಕ ಸಂಬಂಧಕ್ಕೆ ಧುಮುಕುವ ಮುನ್ನ ಮುಂದಿನ ದಿನಗಳಲ್ಲಿ ತಮ್ಮ ಜೋಡಿ ಸಮರ್ಪಕವಾಗಬಹುದೇ ಎಂದು ಪ್ರಮಾಣಿಸಿ ನೋಡಿದ ಬಳಿಕವೇ ಮುಂದಡಿಯಿಡುವ ಪರಿಯನ್ನು ನಿಧಾನವಾಗಿ ಅನ್ವಯಿಸಿಕೊಳ್ಳುತ್ತಿದೆ.

ಆದರೆ ರಾಜಸ್ಥಾನದ ಗ್ರಾಮವೊಂದರಲ್ಲಿ ಮಗುವಾದ ಬಳಿಕವೇ ವಿವಾಹ ಮಾಡಿಸುವ ಸಂಪ್ರದಾಯ ಬೆಳೆದುಕೊಂಡು ಬಂದಿದೆ. ಗರಾಸಿಯಾ ಎಂಬ ಜನಾಂಗಕ್ಕೆ ಸೇರಿದ ಜನರು ತಮ್ಮ ವಿಶಿಷ್ಟ ಸಂಪ್ರದಾಯದಿಂದಲೇ ಹೆಸರುವಾಸಿಯಾಗಿದ್ದಾರೆ. ಯುವಜನತೆ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವನ್ನು ಹೊಂದಿದ್ದು, ವಿವಾಹ ಬಂಧನದ ಗೊಡವೆಯೇ ಇಲ್ಲದೆ ಜೊತೆಯಾಗಿ ಇರಲೂ ಅವಕಾಶವಿದೆ. ಇದು ಮಹಿಳಾ ಪ್ರಧಾನ ಜನಾಂಗವಾಗಿದ್ದು, ಇಲ್ಲಿ ಅತ್ಯಾಚಾರ, ವರದಕ್ಷಿಣೆ ಕಿರುಕುಳದಂತಹ ಪ್ರಕರಣಗಳೇ ಕಂಡುಬರುವುದಿಲ್ಲ. ಮೂಲತಃ ಕೃಷಿಕರಾಗಿರುವ ಇವರು ಜೀವನ ನಡೆಸುವಷ್ಟು ಹಣ ಸಂಗ್ರಹಿಸಿಕೊಂಡ ಬಳಿಕ ಮದುವೆ ಮಾಡಿಕೊಳ್ಳುತ್ತಾರೆ.

ಇತ್ತೀಚೆಗಷ್ಟೇ ವೃದ್ಧೆಯೊಬ್ಬರು ಮದುವೆಯಾಗಿದ್ದರು. ಇಷ್ಟು ವರ್ಷ ಈಕೆ ತನ್ನ ಜೀವನ ಸಂಗಾತಿ ಜೊತೆ ಲಿವಿಂಗ್ ಟು ಗೆದರ್ ಸಂಬಂಧದಲ್ಲಿದ್ದು, ವಯಸ್ಸಾದ ಬಳಿಕ ಮದುವೆಯಾಗಿದ್ದಾರೆ. ಆದರೆ ಈ ಜೋಡಿಗೆ ಮೂವರು ಗಂಡು ಮಕ್ಕಳಿದ್ದು, ಮೂವರೂ ಒಟ್ಟಿಗೇ ಮದುವೆಯಾಗಿದ್ದಾರೆ.

ಅಲ್ಲದೆ ಈ ಜನಾಂಗದವರು ವಿಚಿತ್ರ ಸಂಪ್ರದಾಯವೊಂದನ್ನು ಆಚರಿಸಿಕೊಂಡು ಬರುತ್ತಿದ್ದು, ಹದಿಹರೆಯದಲ್ಲಿರುವ ಹೆಣ್ಣು ಮಕ್ಕಳನ್ನು ಹದಿಹರೆಯದ ಗಂಡು ಮಕ್ಕಳು ಆಯ್ಕೆ ಮಾಡಿಕೊಳ್ಳಲು ಎರಡು ದಿನದ ಮೇಳ ಆಯೋಜಿಸಲಾಗುತ್ತದೆ. ಈ ಜನಾಂಗಕ್ಕೆ ಸೇರಿದ ಎಲ್ಲರೂ ತಮ್ಮ ಮಕ್ಕಳನ್ನು ಮೇಳಕ್ಕೆ ಕರೆತಂದು ಮಕ್ಕಳನ್ನು ಅಲ್ಲಿಯೇ ಬಿಟ್ಟು ದೊಡ್ಡವರೆಲ್ಲ ತೆರಳುತ್ತಾರೆ. ಬಳಿಕ ಯುವಕರು ತಮಗಿಷ್ಟವಾದವರನ್ನು ಆಯ್ಕ ಮಾಡಿಕೊಂಡು ವಾಪಸ್ ತಮ್ಮ ಮನೆಗಳಿಗೆ ತೆರಳುತ್ತಾರೆ. ಬಳಿಕ ಇವರು ಲಿವಿಂಗ್ ಟು ಗೆದರ್ ಸಂಬಂಧದಲ್ಲೋ, ಅಥವಾ ಮದುವೆಯಾಗಿಯೋ ಜೀವನ ಸಾಗಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.
ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…
ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.
ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು. ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…