ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್. ಆದಾಗ್ಯೂ, ಆಧುನಿಕ ವೈದ್ಯಕೀಯ ಕ್ಷೇತ್ರವು ಎಷ್ಟೊoದು ಮುಂದುವರೆದಿದೆ ಎಂದರೆ, ಒಂದು ವೇಳೆ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿದರೆ ಅದನ್ನು ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ.

ಧೂಮಪಾನ, ಮದ್ಯಪಾನಗಳಂತಹ ದುಶ್ಚಟಗಳೊoದಿಗೆ, ನಮ್ಮ ಆಹಾರಕ್ರಮವೂ ಕೂಡ ಅನೇಕ ಬಾರಿ ಕ್ಯಾನ್ಸರ್ಗೆ ಕಾರಣವಾಗಬಹುದು. ಆದ್ದರಿಂದ ಕ್ಯಾನ್ಸರ್ ಅನ್ನು ದೂರವಿರಿಸಲು ನೆರವಾಗುವ ಆಹಾರಕ್ರಮವು ಯಾವುದೆಂದು ತಿಳಿಯರಿ.
ಈರುಳ್ಳಿ ಮತ್ತು ಬೆಳ್ಳುಳ್ಳಿ:-
ಭಾರತೀಯ ಅಡುಗೆಗಳಲ್ಲಿ ಪ್ರಮುಖ ಪಾತ್ರವನ್ನು ಪಡೆದಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಔಷಧೀಯ ಗುಣಗಳು ಇದೆ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರವಾಗಿದೆ. ಹಲವಾರು ಶತಮಾನಗಳಿಂದಲೂ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಮನೆಮದ್ದಾಗಿ ಬಳಸಿಕೊಳ್ಳುತ್ತಾ ಇದ್ದಾರೆ. ಈರುಳ್ಳಿ ಮತ್ತು ಬೆಳ್ಳುಳ್ಳಿ ಕೆಲವರಿಗೆ ಇಷ್ಟವಾಗಲ್ಲ.

ಯಾಕೆಂದರೆ ಇದರ ಘಾಟು ವಾಸನೆ. ಅಲ್ಲಿಯುಮ್ಸ್ ಪ್ರಭೇದಕ್ಕೆ ಸೇರಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಕ್ಯಾನ್ಸರ್ ಅನ್ನು ತಡೆಯುವ ಗುಣಗಳು ಇವೆಯಂತೆ. ಇದರಲ್ಲಿ ಇರುವಂತಹ ಕೆಲವೊಂದು ನೈಸರ್ಗಿಕ ರಾಸಾಯನಿಕಗಳು ಕೆಲವು ಬಗೆಯ ಕ್ಯಾನ್ಸರ್ನ್ನು ತಡೆಯುತ್ತದೆ. ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಇರುವಂತಹ ಆ್ಯಂಟಿಆಕ್ಸಿಡೆಂಟ್ಗಳು ಡಿಎನ್ ಎ ಕೋಶಗಳಿಗೆ ಹಾನಿಯುಂಟು ಮಾಡುವ ಫ್ರೀ ರ್ಯಾಡಿಕಲ್ ಅನ್ನು ತಡೆಯುತ್ತದೆ.
ಎಲೆಕೋಸು:-
ಪ್ರತಿದಿನ ಎಲೆಕೋಸನ್ನು ಆಹಾರ ಕ್ರಮದಲ್ಲಿ ಸೇರಿಸಿಕೊಂಡರೆ ಅದರಿಂದ ನಮ್ಮ ದೇಹವು ಹೆಚ್ಚಿನ ಪೋಷಕಾಂಶಗಳನ್ನು ಪಡೆದುಕೊಂಡು ಕ್ಯಾನ್ಸರ್ ಕಾಯಿಲೆಯಿಂದ ನಮ್ಮನ್ನು ಕಾಪಾಡುತ್ತದೆ. ಇದಕ್ಕೆಲ್ಲಾ ಕಾರಣ ಎಲೆಕೋಸಿನಲ್ಲಿ ಸಲ್ಫೋರಫನೆ ಎನ್ನುವ ಅಂಶವಿದ್ದು, ಇದು ಕ್ಯಾನ್ಸರ್ನಿಂದ ರಕ್ಷಿಸುತ್ತದೆ.

ಎಲೆಕೋಸಿನಲ್ಲಿ ಇರುವಂತಹ ಅತ್ಯಂತ ಶಕ್ತಿಶಾಲಿ ಆ್ಯಂಟಿಆಕ್ಸಿಡೆಂಟ್ ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಗೆ ಕಾರಣವಾಗುವಂತಹ ಫ್ರೀ ರ್ಯಾಡಿಕಲ್ ಗಳನ್ನು ನಿವಾರಣೆ ಮಾಡುತ್ತದೆ.
ಹಸಿರು ಬಟಾಣಿ:-
ಹಸಿರು ಬಟಾಣಿಗಳು ಕ್ಯಾನ್ಸರನ್ನು ನಿಯಂತ್ರಿಸಲು ಇರುವ ಅತ್ಯಂತ ಶಕ್ತಿಶಾಲಿ ತರಕಾರಿಗಳಾಗಿವೆ. ಅದರಲ್ಲೂ ಮುಖ್ಯವಾಗಿ ಜಠರದ ಕ್ಯಾನ್ಸರ್ ನಿವಾರಿಸಲು ಇವು ಸಹಾಯ ಮಾಡುತ್ತವೆ.

ಇದರಲ್ಲಿ ಪೊಟಾಶಿಯಂ, ಕಬ್ಬಿಣಾಂಶ ಮತ್ತು ವಿಟಮಿನ್ಗಳು ಯಥೇಚ್ಛವಾಗಿದ್ದು, ಜೀರ್ಣಾಂಗ ವ್ಯವಸ್ಥೆಯನ್ನು ಶುದ್ಧಗೊಳಿಸಲು ಇವು ನೆರವು ನೀಡುತ್ತವೆ.
ಬೀನ್ಸ್:-
ಬೀನ್ಸ್ಗಳಲ್ಲಿ ವಿಟಮಿನ್ ಬಿಗಳು ಅಧಿಕ ಪ್ರಮಾಣದಲ್ಲಿರುತ್ತವೆ. ಇದು ಕ್ಯಾನ್ಸರ್ ನಿಯಂತ್ರಿಸಲು ಗಣನೀಯವಾದ ಕೊಡುಗೆಯನ್ನು ನೀಡುತ್ತದೆ.

ಇವುಗಳು ಕಾರ್ಸಿನೊಜೆನ್ಗಳನ್ನು ನಿವಾರಿಸುವ ಲುಲುಟೇನ್ ಮತ್ತು ವೈಯೊಲಕ್ಸಂಥಿನ್ ಮತ್ತು ಬೀಟಾ-ಕೆರೊಟಿನ್ಗಳು ಅಧಿಕ ಪ್ರಮಾಣದಲ್ಲಿರುತ್ತವೆ.
ಪಾಲಕ್ ಸೊಪ್ಪು:-
ಪಾಲಕ್ ಸೊಪ್ಪು ಸಹ ಪ್ರಪಂಚದಲ್ಲಿರುವ ಅತ್ಯಂತ ಆರೋಗ್ಯಕಾರಿ ಆಹಾರ ಪದಾರ್ಥಗಳಲ್ಲಿ ಒಂದಾಗಿದೆ. ಅದರಲ್ಲೂ ಇದು ಕ್ಯಾನ್ಸರನ್ನು ನಿಯಂತ್ರಿಸುವ ಆಹಾರ ಪದಾರ್ಥವಾಗಿರುವುದು ಸಹ ಇದರ ಹೆಚ್ಚುಗಾರಿಕೆ.

ಸ್ಪೈನಚ್ನಲ್ಲಿ ಪೊಟಾಶಿಯಂ, ಸತು, ವಿಟಮಿನ್ ಕೆ, ಇ, ಮತ್ತು ಎ ಗಳು ಅಧಿಕ ಪ್ರಮಾಣದಲ್ಲಿರುತ್ತವೆ.
ಬೀಟ್ರೂಟ್ಗಳು:-
ಬೀಟ್ರೂಟ್ಗಳು ರಕ್ತ ಪರಿಚಲನೆಯನ್ನು ಮತ್ತು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ಸುಸ್ಥಿತಿಯಲ್ಲಿಡಲು ನೆರವಾಗುತ್ತವೆ. ಇವುಗಳು ರಕ್ತದೊತ್ತಡವನ್ನು ನಿವಾರಿಸುವ ಅಂಶಗಳನ್ನು ಸಹ ಹೊಂದಿರುತ್ತವೆ.

ತರಕಾರಿ ಮತ್ತು ಹಣ್ಣನ್ನು ಹೆಚ್ಚು ಹೆಚ್ಚು ಸೇವಿಸಿರಿ:-
ತಾಜಾ ತರಕಾರಿ ಮತ್ತು ಹಣ್ಣುಗಳನ್ನು ನಿಮ್ಮ ದಿನನಿತ್ಯದ ಆಹಾರದ ಕ್ರಮದಲ್ಲಿ ಸೇರಿಸಿಕೊಳ್ಳುವುದರ ಮೂಲಕ ನಿಮ್ಮ ಶರೀರಕ್ಕೆ ಅವಶ್ಯಕವಾಗಿರುವ ಪೋಷಕಾಂಶಗಳು ಮತ್ತು ವಿಟಮಿನ್ ಗಳನ್ನು ಒದಗಿಸಬಹುದು. ಈ ಪೋಷಕಾಂಶಗಳು ಮತ್ತು ವಿಟಮಿನ್ಗಳು , ನಿಮ್ಮ ರೋಗನಿರೋಧಕ ಮಟ್ಟವನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಸೋಂಕುಗಳು ಮತ್ತು ಕ್ಯಾನ್ಸರ್ ನ ವಿರುದ್ಧ ಕಾದಾಡಲೂ ಕೂಡ ಸಹಕಾರಿಯಾಗಿವೆ. ಅಲ್ಲದೇ, ಇವು ಜಂಕ್ ಮತ್ತು ಕೊಬ್ಬುಯುಕ್ತ ಆಹಾರಗಳ ಬಗೆಗಿನ ನಿಮಗಿರುವ ಹಸಿವನ್ನು ತನ್ನಿಂತಾನಾಗಿಯೇ ಕಡಿಮೆ ಮಾಡುತ್ತವೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…
ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…
ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್ ಲ್ಯಾಂಚ್ಶೈರ್ನ ಬ್ಲ್ಯಾಕ್ಬರ್ನ್ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…
ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್ಮಹಲ್ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್ಭಾಗಕ್ಕೆ ಹಾನಿಯಾಗಿದ್ದು, ತಾಜ್ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…
ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…