ಆರೋಗ್ಯ

ಕಾಲುಗಳ ಸೆಳೆತದಿಂದ ನಿಮ್ಮ ನಿದ್ದೆ ಹಾಳಾಗಿದೆಯೇ..? ಪರಿಹಾರ ತಿಳಿಯಲು ಈ ಲೇಖನ ಓದಿ ..

1022

ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು. ಇದರಿಂದ ನಿಮ್ಮ ರಾತ್ರಿಯ ನಿದ್ದೆ ಹಾಳಾಗುತ್ತಿದೆಯೇ…? ಹಾಗಾದರೆ, ಇಲ್ಲಿದೆ ನೋಡಿ ಸುಲಭ ಪರಿಹಾರ.

ವಿಂಟರ್ ಗ್ರೀನ್ ಆಯಿಲ್ :-
ಮೀಥೈಲ್ ಸಿಲಿಕೇಟ್ ಹೊಂದಿರುವ ವಿಂಟರ್ ಗ್ರೀನ್ ಆಯಿಲ್ ನೋವು ನಿವಾರಕವಾಗಿ ಕೆಲಸಮಾಡುತ್ತದೆ. ಮೀಥೈಲ್ ಸಿಲಿಕೇಟ್ ರಕ್ತ ಪ್ರಸರಣವನ್ನು ಉತ್ತೇಜಿಸುತ್ತದೆ.

ಈ ಎಣ್ಣೆಯೊಂದಿಗೆ ಸ್ವಲ್ಪ ಆಲೀವ್ ಅಯಿಲ್ ಅಥವಾ ಬಾದಾಮಿ ಎಣ್ಣೆ ಬೆರೆಸಿ ಕಾಲುಗಳನ್ನು ಮಸಾಜ್ ಮಾಡುವುದರಿಂದ ಸೆಳೆತ ಕಡಿಮೆಯಾಗುತ್ತದೆ.

ವಿಟಮಿನ್-ಇ :-

ಮುಚ್ಚಿಕೊಂಡಿರುವ ನರಗಳಲ್ಲಿ ರಕ್ತ ಪ್ರಸರಣ ಸರಿಯಾಗಿ ಆಗದೆ, ರಾತ್ರಿವೇಳೆ ಕಾಲುಗಳ ಸೆಳೆತ ಉಂಟಾಗುತ್ತದೆ. ವಿಟಮಿನ್ -ಇ ಅಧಿಕವಾಗಿರುವ ಬಾದಾಮಿ, ಸ್ಪಿನಾಚ್ ಹಾಗೂ ಅವಕಾಡೋ ಗಳನ್ನು ತಿನ್ನುವುದರಿಂದ , ನರಗಳಲ್ಲಿ ರಕ್ತ ಪ್ರಸಾರ ಸುಗಮವಾಗುತ್ತದೆ. ವಿಟಮಿನ್-ಇ ಸಪ್ಲಿಮೆಂಟ್ ಗಳನ್ನೂ ಉಪಯೋಗಿಸಬಹುದು.

ನೀರು :- ಪ್ರತೀದಿನ 8 ಲೋಟ ಶುದ್ಧನೀರಿನೊಂದಿಗೆ ನಿಂಬೆ ರಸ ಬೆರೆಸಿ ಕುಡಿಯಬೇಕು. ಒಂದು ಲೋಟದಲ್ಲಿ ನಿಂಬೆ ರಸ ಬೆರೆಸಿರುವ ನೀರನ್ನು ನಿಮ್ಮ ಬಳಿ ಇಟ್ಟುಕೊಂಡು ಬಾಯರಿಕೆ ಆದಾಗಲೆಲ್ಲಾ ಸ್ವಲ್ಪ ಸ್ವಲ್ಪ ಕುಡಿಯಬೇಕು

ಶಾಖ : –ಕಾಲು ಸೆಳೆತದಿಂದ ನೋವು ಕಡಿಮೆಯಾಗಲು ವಿದ್ಯುತ್ ಪ್ಯಾಡ್ ಗಳನ್ನು ಉಪಯೋಗಿಸಿ. ಇದರಿಂದ ರಕ್ತ ಪ್ರಸಾರ ಹೆಚ್ಚಾಗುತ್ತದೆ.

15-20 ನಿಮಿಷಗಳ ಕಾಲ ಉಪಯೋಗಿಸಿದರೆ ಸಾಕು. ಬಿಸಿ ನೀರಿಗೆ ಸ್ವಲ್ಪ ಎಪ್ಸಮ್ ಸಾಲ್ಟ್ ಬೆರೆಸಿ ಶಾಖ ನೀಡುವುದರಿಂದಲೂ ನೋವು ಕಡಿಮೆಯಾಗುತ್ತದೆ.

ಎಲೆಕ್ಟ್ರೋಲೈಟ್ :-

ದೇಹಕ್ಕೆ ಎಲೆಕ್ಟ್ರೋಲೈಟ್ ಗಳು ಅತ್ಯವಶ್ಯಕ. ಸೋಡಿಯಮ್, ಪೊಟಾಶಿಯಮ್,ಕ್ಯಾಲ್ಶಿಯಮ್ ಹಾಗೂ ಮೆಗ್ನೀಶಿಯಮ್ ಮುಂತಾದ ಖನಿಜಗಳ ಕೊರತೆಯಿಂದಾಗಿ ಕಾಲುಗಳ ಸೆಳೆತ ಉಂಟಾಗುತ್ತದೆ. ಈ ಎಲ್ಲಾ ಎಲೆಕ್ಟ್ರೋಲೈಟ್ ಗಳನ್ನು ಒಳಗೊಂಡಿರುವ ಆಹಾರ ಸೇವಿಸುವುದು ಉತ್ತಮ.

ಸ್ಟ್ರೆಚಿಂಗ್ : –ಒಂದು ವೇಳೆ ನಿಮಗೆ ಕಾಲಿನ ಸೆಳೆತವುಂಟಾಗಿ ರಾತ್ರಿಯಲ್ಲಿ ಎಚ್ಚರವಾದರೆ, ಕಾಲುಗಳನ್ನು ಸ್ಟ್ರೆಚ್ ಮಾಡಬೇಕು. ಇದು ಸ್ವಲ್ಪ ನೋವನ್ನು ಉಂಟುಮಾಡುತ್ತದೆ. ಪಾದಗಳನ್ನು ಹಿಂದೆ,ಮುಂದೆ ಆಡಿಸಬೇಕು. ಹೀಗೆ ಮಾಡುವುದರಿಂದ ಕಾಲುಗಳ ಸೆಳೆತ ಕಡಿಮೆಯಾಗುತ್ತದೆ.

ಕಾಲುಗಳ ಸೆಳೆತ ನಿಮ್ಮ ರಾತ್ರಿ ನಿದ್ದೆಯನ್ನು ಹಾಳುಗೆಡವುತ್ತದೆ. ಸಾಕಷ್ಟು ಶುದ್ದನೀರು, ಸತ್ವಯುತ ಆಹಾರ ಸೇವನೆ, ಸ್ಟ್ರೆಚ್ಚಿಂಗ್, ಮಸಾಜು ಮಾಡುವುದು ಮುಂತಾದುವುಗಳಿಂದ ಸೆಳೆತವನ್ನು ಕಡಿಮೆ ಮಾಡಿಕೊಂಡು ಆರಾಮವಾಗಿರಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

    ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…

  • ಸುದ್ದಿ

    ಕಣ್ಣಲ್ಲಿ ನೀರು ತುಂಬುತ್ತೆ ಆ ಪುಟ್ಟ ಬಾಲಕನ ಮನಕಲಕುವ ಕಥೆ…..!

    ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ‌ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ‌ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…

  • inspirational

    ತಾನು’ಮುಟ್ಟಾಳ ಅಲ್ಲ’ಎಂದು ಸಾಬೀತು ಪಡಿಸಿದ ಮನೋಜ್..! ಮನೋಜ್ ಗೆದ್ದ ಮೊತ್ತ ಎಷ್ಟು.?

    ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್  ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…

  • ಉದ್ಯೋಗ

    ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ‘ಮೈಜಾಬ್’ ಆ್ಯಪ್ ಲೋಕಾರ್ಪಣೆ..!ತಿಳಿಯಲು ಈ ಲೇಖನ ಓದಿ..

    ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್‍ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…

  • ವಿಸ್ಮಯ ಜಗತ್ತು, ಸುದ್ದಿ

    ಇದು ನೋಡಲು ಜಲಪಾತದಂತೆ ಕಾಣುತ್ತದೆ..ಆದರೆ, ಜಲಪಾತ ಅಲ್ಲ …!ಮತ್ತಿನ್ನೇನು ಗೊತ್ತಾ?

    ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು  ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ  ಹಾರುತ್ತದೆ ಎಂದರೆ  ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…