ಆರೋಗ್ಯ

ನರುಲಿಗಳನ್ನು ನಿವಾರಿಸಲು ಇಲ್ಲಿವೆ ಸುಲಭದ ಉಪಾಯಗಳು..!ತಿಳಿಯಲು ಈ ಲೇಖನ ಓದಿ …

1025

ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.

ಮುಖದ ಮೇಲಿದ್ದರಂತೂ ತುಂಬ ರೇಜಿಗೆ ಹುಟ್ಟಿಸುತ್ತವೆ. ಈ ನರುಲಿಗಳಿಂದ ಪಾರಾಗಲು ಸುಲಭದ ಪರಿಣಾಮಕಾರಿ ನೈಸರ್ಗಿಕ ವಿಧಾನಗಳಿಲ್ಲಿವೆ.

ತುಳಸಿ:-

ತುಳಸಿಯು ನುರುಲಿಗಳನ್ನು ನಿರ್ಮೂಲಿಸಬಲ್ಲ ಬ್ಯಾಕ್ಟೀರಿಯಾ ನಿರೋಧಕಗಳ ಮೂಲವಾಗಿದೆ. ಕೆಲವು ತುಳಸಿ ಎಲೆಗಳನ್ನು ಗ್ರೈಂಡರ್‌ನಲ್ಲಿ ಹಾಕಿ ಪುಡಿ ಮಾಡಿಕೊಳ್ಳಿ. ಬಳಿಕ ಈ ಪುಡಿಗೆ ಅಗತ್ಯ ಪ್ರಮಾಣದಲ್ಲಿ ನೀರನ್ನು ಬೆರೆಸಿ ಪೇಸ್ಟ್ ತಯಾರಿಸಿ.

ಈ ಪೇಸ್ಟ್‌ನ್ನು ನರೂಲಿಯ ಮೇಲೆ ಸಂಪೂರ್ಣವಾಗಿ ಲೇಪಿಸಿ 10 ನಿಮಿಷಗಳ ಕಾಲ ಬಿಡಿ. ಇದನ್ನು ಪ್ರತಿದಿನವೂ ಪುನರಾವರ್ತಿಸಿದರೆ ನರೂಲಿಗಳಿಂದ ಶೀಘ್ರ ಬಿಡುಗಡೆ ಸಾಧ್ಯ.

ಬೇಕಿಂಗ್ ಪೌಡರ್:-

ನರುಲಿಗಳನ್ನು ತೆಗೆಯಲು ಬಹಳ ಹಿಂದಿನಿಂದಲೂ ಬಳಕೆಯಾಗುತ್ತಿರುವ ಮನೆಮದ್ದು ಎಂದರೆ ಬೇಕಿಂಗ್ ಪೌಡರ್ ಆಗಿದೆ. ಪ್ರಬಲ ಬ್ಯಾಕ್ಟೀರಿಯಾ ಪ್ರತಿರೋಧಕ ಸಂಯುಕ್ತಗಳನ್ನು ಹೊಂದಿರುವ ಬೇಕಿಂಗ್ ಪೌಡರ್ ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ಒಂದು ಚಿಟಿಕೆಯಷ್ಟು ಬೇಕಿಂಗ್ ಪೌಡರ್‌ನ್ನು ಒಂದು ಚಮಚ ಡಿಸ್ಟಿಲ್ಡ್ ವಾಟರ್‌ನೊಂದಿಗೆ ಬೆರೆಸಿ, ಈ ಪೇಸ್ಟ್‌ನ್ನು ನರುಲಿಗೆ ಲೇಪಿಸಿ 10 ನಿಮಿಷಗಳ ಕಾಲ ಒಣಗಲು ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.

*ಕಿತ್ತಳೆ ಹಣ್ಣಿನ ಸಿಪ್ಪೆ:-

ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಹೇರಳ ಪ್ರಮಾಣದಲ್ಲಿರುವ ವಿಟಾಮಿನ್ ಸಿ ನರುಲಿಗಳನ್ನು ನಿವಾರಿಸುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ಕಿತ್ತಳೆ ಹಣ್ಣಿನ ಸಿಪ್ಪೆಗಳನ್ನು ಒಣಗಿಸಿ ಪುಡಿ ಮಾಡಿಕೊಳ್ಳಿ.

ಅರ್ಧ ಚಮಚ ಪುಡಿಯನ್ನು ಒಂದು ಚಮಚ ರೋಸ್ ವಾಟರ್ ಅಥವಾ ಪನ್ನೀರಿನೊಂದಿಗೆ ಬೆರೆಸಿ ಅದನ್ನು ನರುಲಿಗೆ ಲೇಪಿಸಿ, ಹತ್ತು ನಿಮಿಷಗಳ ಕಾಲ ಹಾಗೆಯೇ ಬಿಡಿ.

*ಅಲೋವೆರಾ ಜೆಲ್:-

ಅಲೋವೆರಾ ಕೂಡ ಬ್ಯಾಕ್ಟೀರಿಯಾ ನಿರೋಧಕ ಗುಣಗಳನ್ನು ಹೊಂದಿದ್ದು, ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ತಾಜಾ ಅಲೋವೆರಾ ಜೆಲ್ ಅನ್ನು ಪೀಡಿತ ಭಾಗಗಳ ಮೇಲೆ ಲೇಪಿಸಿ ಒಂದು ಗಂಟೆ ಕಾಲ ಹಾಗೆಯೇ ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.

*ಬಾಳೇಹಣ್ಣಿನ ಸಿಪ್ಪೆ:-

ಬಾಳೇಹಣ್ಣಿನ ಸಿಪ್ಪೆಯಲ್ಲಿರುವ ಕೆಲವು ಪೌಷ್ಟಿಕಾಂಶಗಳು ನರುಲಿಗಳನ್ನು ನಿವಾರಿಸಲು ಸಹಾಯಕವಾಗಿವೆ.

ನರುಲಿ ಎದ್ದಿರುವ ಭಾಗದ ಮೇಲೆ ಬಾಳೇಹಣ್ಣಿನ ಸಿಪ್ಪೆಯಿಂದ ಮೃದುವಾಗಿ ಉಜ್ಜಿರಿ. ದಿನಕ್ಕೊಂದು ಬಾರಿ ಇದನ್ನು 5-10 ನಿಮಿಷಗಳ ಕಾಲ ಮಾಡಿ ಬಳಕ ತಣ್ಣೀರಿನಿಂದ ತೊಳೆದುಕೊಳ್ಳಿ.

ಬೆಳ್ಳುಳ್ಳಿ:-

ಬೆಳ್ಳುಳ್ಳಿಯಲ್ಲಿರುವ ಬ್ಯಾಕ್ಟೀರಿಯಾ ನಿರೋಧಕ ಗುಣಗಳು ನರುಲಿಯನ್ನು ನಿವಾರಿಸುವ ಜೊತೆಗೆ ಅವು ಮರುಕಳಿಸದಂತೆ ನೋಡಿಕೊಳ್ಳುತ್ತವೆ.

ಬೆಳ್ಳುಳ್ಳಿಯ ಒಂದು ಎಸಳನ್ನು ಕೈಯಲ್ಲಿ ಜಜ್ಜಿ ಅದನ್ನು ನೀರಿನೊಂದಿಗೆ ಬೆರೆಸಿ ಪೇಸ್ಟ್ ತಯಾರಿಸಿಕೊಳ್ಳಿ. ಬಳಿಕ ಅದನ್ನು ನರುಲಿಗೆ ಸವರಿ ಹತ್ತು ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ವಾರಕ್ಕೊಂದು ಬಾರಿ ಹೀಗೆ ಮಾಡಿದರೆ ನರುಲಿಗಳು ಮಾಯವಾಗುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ, ಸಿನಿಮಾ, ಸುದ್ದಿ

    ಬಯಲಾಯ್ತು ವಿನೋದ್ ಮದುವೆ! ಮದುವೆ ಯಾಕೆ ಆಗಿಲ್ಲ ಗೊತ್ತಾ?

    ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…

  • ಸಿನಿಮಾ

    ಭಾರತದ ಸಾವಿರಾರು ತಿಯೇಟರ್ ಗಳಲ್ಲಿ ರಿಲೀಜ್ ಆಗುತ್ತಿರುವ KGF ಚಿತ್ರಕ್ಕೆ, ಚಿತ್ರೀಕರಣ ನಡೆದ KGFನಲ್ಲೇ ಈ ಚಿತ್ರದ ಬಿಡುಗಡೆ ಭಾಗ್ಯವಿಲ್ಲ..!

    ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್‍ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್‍ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…

  • ಸುದ್ದಿ

    7 ವರ್ಷಗಳಲ್ಲಿ 7 ಬಾರಿ ಗರ್ಭಪಾತ ; ಕರಳು ಚಿಮ್ಮುತ್ತೆ ಮಹಿಳೆಯ ಹೃದಯ ವಿದ್ರಾವಕ ಕಥೆ….

    ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ. ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು…

  • ಸ್ಪೂರ್ತಿ

    ಈ 15 ವರ್ಷದ ಬಾಲಕ ತನ್ನ ತಾಯಿಯ ಕಷ್ಟ ನೋಡಲಾರದೆ ಮಾಡಿದ್ದೇನು ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…

  • ಗ್ಯಾಜೆಟ್

    ಜಿಯೋ ಗ್ರಾಹಕರಿಗೆ ಮತ್ತೊಂದು ಬಂಪರ್ ಆಫರ್!ಮಾಹಿತಿಗೆ ಈ ಸುದ್ದಿ ನೋಡಿ

    ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…

  • ಸುದ್ದಿ

    ಇನ್ಮುಂದೆ ನಿಮ್ಮ ಮೊಬೈಲ್ ಕಳ್ಳತನವಾದರೆ ಸುಲಭವಾಗಿ ಹಿಂಪಡೆಯಬಹುದು,. ಇಲ್ಲಿದೆ ನೋಡಿ ಟ್ರಿಕ್ಸ್, ನೀವು ಓದಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ,..!!

    ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್‌ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ರಾವ್‌ ಹೇಳಿದರು.  ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್‌ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್‌ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್‌ ಬಳಕೆದಾರರು ಜಿಪಿಎಸ್‌ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್‌ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…