ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.

ಮುಖದ ಮೇಲಿದ್ದರಂತೂ ತುಂಬ ರೇಜಿಗೆ ಹುಟ್ಟಿಸುತ್ತವೆ. ಈ ನರುಲಿಗಳಿಂದ ಪಾರಾಗಲು ಸುಲಭದ ಪರಿಣಾಮಕಾರಿ ನೈಸರ್ಗಿಕ ವಿಧಾನಗಳಿಲ್ಲಿವೆ.
ತುಳಸಿ:-
ತುಳಸಿಯು ನುರುಲಿಗಳನ್ನು ನಿರ್ಮೂಲಿಸಬಲ್ಲ ಬ್ಯಾಕ್ಟೀರಿಯಾ ನಿರೋಧಕಗಳ ಮೂಲವಾಗಿದೆ. ಕೆಲವು ತುಳಸಿ ಎಲೆಗಳನ್ನು ಗ್ರೈಂಡರ್ನಲ್ಲಿ ಹಾಕಿ ಪುಡಿ ಮಾಡಿಕೊಳ್ಳಿ. ಬಳಿಕ ಈ ಪುಡಿಗೆ ಅಗತ್ಯ ಪ್ರಮಾಣದಲ್ಲಿ ನೀರನ್ನು ಬೆರೆಸಿ ಪೇಸ್ಟ್ ತಯಾರಿಸಿ.

ಈ ಪೇಸ್ಟ್ನ್ನು ನರೂಲಿಯ ಮೇಲೆ ಸಂಪೂರ್ಣವಾಗಿ ಲೇಪಿಸಿ 10 ನಿಮಿಷಗಳ ಕಾಲ ಬಿಡಿ. ಇದನ್ನು ಪ್ರತಿದಿನವೂ ಪುನರಾವರ್ತಿಸಿದರೆ ನರೂಲಿಗಳಿಂದ ಶೀಘ್ರ ಬಿಡುಗಡೆ ಸಾಧ್ಯ.
ಬೇಕಿಂಗ್ ಪೌಡರ್:-
ನರುಲಿಗಳನ್ನು ತೆಗೆಯಲು ಬಹಳ ಹಿಂದಿನಿಂದಲೂ ಬಳಕೆಯಾಗುತ್ತಿರುವ ಮನೆಮದ್ದು ಎಂದರೆ ಬೇಕಿಂಗ್ ಪೌಡರ್ ಆಗಿದೆ. ಪ್ರಬಲ ಬ್ಯಾಕ್ಟೀರಿಯಾ ಪ್ರತಿರೋಧಕ ಸಂಯುಕ್ತಗಳನ್ನು ಹೊಂದಿರುವ ಬೇಕಿಂಗ್ ಪೌಡರ್ ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ಒಂದು ಚಿಟಿಕೆಯಷ್ಟು ಬೇಕಿಂಗ್ ಪೌಡರ್ನ್ನು ಒಂದು ಚಮಚ ಡಿಸ್ಟಿಲ್ಡ್ ವಾಟರ್ನೊಂದಿಗೆ ಬೆರೆಸಿ, ಈ ಪೇಸ್ಟ್ನ್ನು ನರುಲಿಗೆ ಲೇಪಿಸಿ 10 ನಿಮಿಷಗಳ ಕಾಲ ಒಣಗಲು ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಕಿತ್ತಳೆ ಹಣ್ಣಿನ ಸಿಪ್ಪೆ:-
ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಹೇರಳ ಪ್ರಮಾಣದಲ್ಲಿರುವ ವಿಟಾಮಿನ್ ಸಿ ನರುಲಿಗಳನ್ನು ನಿವಾರಿಸುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ಕಿತ್ತಳೆ ಹಣ್ಣಿನ ಸಿಪ್ಪೆಗಳನ್ನು ಒಣಗಿಸಿ ಪುಡಿ ಮಾಡಿಕೊಳ್ಳಿ.

ಅರ್ಧ ಚಮಚ ಪುಡಿಯನ್ನು ಒಂದು ಚಮಚ ರೋಸ್ ವಾಟರ್ ಅಥವಾ ಪನ್ನೀರಿನೊಂದಿಗೆ ಬೆರೆಸಿ ಅದನ್ನು ನರುಲಿಗೆ ಲೇಪಿಸಿ, ಹತ್ತು ನಿಮಿಷಗಳ ಕಾಲ ಹಾಗೆಯೇ ಬಿಡಿ.
*ಅಲೋವೆರಾ ಜೆಲ್:-
ಅಲೋವೆರಾ ಕೂಡ ಬ್ಯಾಕ್ಟೀರಿಯಾ ನಿರೋಧಕ ಗುಣಗಳನ್ನು ಹೊಂದಿದ್ದು, ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ತಾಜಾ ಅಲೋವೆರಾ ಜೆಲ್ ಅನ್ನು ಪೀಡಿತ ಭಾಗಗಳ ಮೇಲೆ ಲೇಪಿಸಿ ಒಂದು ಗಂಟೆ ಕಾಲ ಹಾಗೆಯೇ ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಬಾಳೇಹಣ್ಣಿನ ಸಿಪ್ಪೆ:-
ಬಾಳೇಹಣ್ಣಿನ ಸಿಪ್ಪೆಯಲ್ಲಿರುವ ಕೆಲವು ಪೌಷ್ಟಿಕಾಂಶಗಳು ನರುಲಿಗಳನ್ನು ನಿವಾರಿಸಲು ಸಹಾಯಕವಾಗಿವೆ.

ನರುಲಿ ಎದ್ದಿರುವ ಭಾಗದ ಮೇಲೆ ಬಾಳೇಹಣ್ಣಿನ ಸಿಪ್ಪೆಯಿಂದ ಮೃದುವಾಗಿ ಉಜ್ಜಿರಿ. ದಿನಕ್ಕೊಂದು ಬಾರಿ ಇದನ್ನು 5-10 ನಿಮಿಷಗಳ ಕಾಲ ಮಾಡಿ ಬಳಕ ತಣ್ಣೀರಿನಿಂದ ತೊಳೆದುಕೊಳ್ಳಿ.
ಬೆಳ್ಳುಳ್ಳಿ:-
ಬೆಳ್ಳುಳ್ಳಿಯಲ್ಲಿರುವ ಬ್ಯಾಕ್ಟೀರಿಯಾ ನಿರೋಧಕ ಗುಣಗಳು ನರುಲಿಯನ್ನು ನಿವಾರಿಸುವ ಜೊತೆಗೆ ಅವು ಮರುಕಳಿಸದಂತೆ ನೋಡಿಕೊಳ್ಳುತ್ತವೆ.

ಬೆಳ್ಳುಳ್ಳಿಯ ಒಂದು ಎಸಳನ್ನು ಕೈಯಲ್ಲಿ ಜಜ್ಜಿ ಅದನ್ನು ನೀರಿನೊಂದಿಗೆ ಬೆರೆಸಿ ಪೇಸ್ಟ್ ತಯಾರಿಸಿಕೊಳ್ಳಿ. ಬಳಿಕ ಅದನ್ನು ನರುಲಿಗೆ ಸವರಿ ಹತ್ತು ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ವಾರಕ್ಕೊಂದು ಬಾರಿ ಹೀಗೆ ಮಾಡಿದರೆ ನರುಲಿಗಳು ಮಾಯವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ..
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…
ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…
ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ.
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….