ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಮಧ್ಯಮ ವರ್ಗದ ಸಾಕಷ್ಟು ಯುವಕರಿಗೆ ಬೈಕ್ ಖರೀದಿಸುವುದು ಹೆಚ್ಚು ಖುಷಿಯ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಅದರಲ್ಲಿಯೂ ಸೂಕ್ತ ಸಮಯಕ್ಕೆ ಬಜೆಟ್ ಹೊಂದಾಣಿಕೆಯಾದರಂತೂ ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಸರ್ವಜ್ಞ ..! ಹಣ ಹೊಂದಾಣಿಕೆಯಾಯಿತು, ಹಾಗಾದ್ರೆ ಯಾವ ವಾಹನ ಖರೀದಿ ಮಾಡಲಿ ಎಂದು ಗೊಂದಲ ಇರುವವರು ಇದನ್ನು ಓದಿ..
ಯಮಹಾ ಎಫ್ಝೆಡ್-ಎಸ್ ಎಫ್ಐ :-

2008ರಲ್ಲಿ ಬಿಡುಗಡೆಗೊಂಡ ಯಮಹಾ FZ16 ಬೈಕ್, ನಿಜವಾಗಿಯೂ ಮಾರುಕಟ್ಟೆಯ ಆಟವನ್ನು ಬದಲಾಯಿತು ಎನ್ನಬಹುದು. ಒಂದು ಕಾಲದಲ್ಲಿ ತನ್ನ 150 ಸಿಸಿ ವಿಭಾಗದಲ್ಲಿ ಪ್ರಾಬಲ್ಯವನ್ನು ಹೊಂದಿತ್ತು. ಹೆಚ್ಚು ಬಲಿಷ್ಠವಾಗಿರುವ ಈ ಮೋಟಾರ್ ಬೈಕ್, ಅತ್ಯುತ್ತಮ ನಿರ್ವಹಣೆ ಗುಣಲಕ್ಷಣ ಮತ್ತು ನವೀನ ರೀತಿಯ ವಿನ್ಯಾಸ ಶೈಲಿಯನ್ನು ಪಡೆದುಕೊಂಡಿದೆ.
ಬಜಾಜ್ ಅವೆಂಜರ್ 220 :-
2005ರಿಂದ ಅವೆಂಜರ್ ವಾಹನದೊಂದಿಗೆ ಬಜಾಜ್ ಸಂಸ್ಥೆಯು ಕ್ರೂಸರ್ ವಿಭಾಗದಲ್ಲಿ ಹೆಚ್ಚು ಹೆಸರುಗಳಿಸಿದೆ ಎನ್ನಬಹುದು. ಪ್ರಸ್ತುತ ಈ ಬೈಕ್, 150 ಸಿಸಿ ಮತ್ತು 220 ಸಿಸಿ ಆಯ್ಕೆಯಲ್ಲಿ ಲಭ್ಯವಿದೆ. ಎವೆಂಜರ್ 220 ಬೈಕ್, ಪಲ್ಸರ್ 220ಯಲ್ಲಿರುವ ಕಾರ್ಬ್ಯುರೇಟೆಡ್ 220 ಸಿಸಿ, ಸಿಂಗಲ್ ಸಿಲಿಂಡರ್, ಏರ್ ಮತ್ತು ಆಯಿಲ್ ಕೋಲ್ಡ್, ಡಿಟಿಎಸ್-ಐ ಮೋಟರ್ ಎಂಜಿನ್ ಬಳಸುತ್ತದೆ.

ಪಲ್ಸರ್ ಬೈಕಿಗೆ ಹೋಲಿಸಿದರೆ, ಈ ಬೈಕಿನ ಪವರ್ ಮತ್ತು ಟಾರ್ಕ್ ಸ್ವಲ್ಪಮಟ್ಟಿನ ಇಳಿಮುಖವಾಗಿದೆ ಎನ್ನಬಹುದು. ಈ ಬೈಕ್ ಸ್ಟ್ರೀಟ್ ಮತ್ತು ಕ್ರೂಸ್ ಎಂಬ ಎರಡು ಟ್ರಿಮ್ ಆಯ್ಕೆಯಲ್ಲಿ ಮಾರಾಟಗೊಳುತ್ತಿದೆ. ಈ ಬೈಕ್, 19.03 ಬಿಎಚ್ಪಿ ಮತ್ತು 17.5 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ ಹಾಗು ರೂ.87,738(ದೆಹಲಿ) ಬೆಲೆ ಪಡೆದುಕೊಂಡಿದೆ.
ಬಜಾಜ್ ಪಲ್ಸರ್ 200 ಎನ್ಎಸ್ :-
ಈ ಪಟ್ಟಿಯಲ್ಲಿ ಎರಡನೇ ಸ್ತನವನ್ನು ಈ ಬೈಕ್ ತನ್ನದಾಗಿಸಿಕೊಂಡಿದೆ. ಬಿಎಸ್-IV ಮಾದರಿಯಾಗಿ ಮಾರುಕಟ್ಟೆಗೆ ಮತ್ತೆ ಲಗ್ಗೆ ಇಟ್ಟಿರುವ ಹೊಸ ಪಲ್ಸರ್ 200 ಎನ್ಎಸ್ ಬೈಕ್, ಸದ್ಯ ಓಡುವ ಕುದುರೆ ಎನ್ನಬಹುದು. 199.5 ಸಿಸಿ ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೋಲ್ಡ್ ಪಡೆದಿರುವ ಈ ಬೈಕ್, ಕೆಟಿಎಂನೊಂದಿಗೆ ಸ್ಪರ್ಧೆ ನೆಡೆಸಲಿದೆ.

ಹೆಚ್ಚು ಸಮರ್ಥವಾದ ನಿರ್ವಹಣೆಯನ್ನು ಪಡೆದಿರುವ ಈ ಬೈಕ್, ನಗರ, ಹೆದ್ದಾರಿ ಅಥವಾ ಟ್ವಿಸ್ಟಿ ಪರ್ವತ ರಸ್ತೆಯ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುತ್ತದೆ. ಹೊಸದಾಗಿ ಬಿಡುಗಡೆಯಾದ ಪಲ್ಸರ್ 200 ಎನ್ಎಸ್ ಎಬಿಎಸ್ ರೂಪಾಂತರವು ರೂ.1 ಲಕ್ಷ ತಡೆಯಾಜ್ಞೆಯನ್ನು ದಾಟಿದರೂ ಸಹ ಉತ್ತಮ ಬೈಕ್ ಎನ್ನಬಹುದು.
ಸುಜುಕಿ ಜಿಕ್ಸರ್ ಎಸ್ಎಫ್ :-

ಭಾರತದಲ್ಲಿ ಅಗ್ಗದ ಕ್ರೀಡಾ ಬೈಕ್ ಗಳಲ್ಲಿ ಒಂದಾಗಿರುವ ಜಿಕ್ಸರ್ ಎಸ್ ಎಫ್ ಮಾದರಿಯು ಕಾರ್ಯಕ್ಷಮತೆ, ರೋಡ್ ಗ್ರಿಪ್ ಮತ್ತು ವಿನ್ಯಾಸದಿಂದ ಜನರ ಮೆಚ್ಚುಗೆ ಗಳಿಸಿಕೊಂಡಿದೆ.
ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ :-
ಸ್ಟ್ಯಾಂಡರ್ಡ್ ಪಿರೆಲಿ ಟೈರ್ ವ್ಯವಸ್ಥೆಯೊಂದಿಗೆ ಮಾರಾಟವಾಗುವ ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ ಬೈಕ್, ಹೊರ ವಿನ್ಯಾಸದಲ್ಲಿ ಸಖತ್ ಲುಕ್ ಪಡೆದುಕೊಂಡಿದೆ.

ಈ ಬೈಕ್, ಬಿಎಸ್ IV ಎಂಜಿನ್ ಹಾಗೂ AHO (ಆಟೋಮೆಟಿಕ್ ಹೆಡ್ಲ್ಯಾಂಪ್ ಆನ್) ವ್ಯವಸ್ಥೆಯನ್ನು ಕೂಡಾ ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…
ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್ ಮಾಡಿದ್ದೇವೆ. ಸೆಪ್ಟೆಂಬರ್ 9ರಿಂದ ಶೂಟಿಂಗ್ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್ ಸಿನಿಮಾದ ಬಂದ ನಂತರ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್ ಸ್ಯಾಂಡಲ್ವುಡ್ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್ ಕುಮಾರ್ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…
ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…
ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ ಆರಂಭವಾಗಿದೆ. ಚಳಿಯಿ೦ದ ಕೂಡಿದ ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…
ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…