ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು. ಅವು ನಿಧಾನವಾಗಿ ಗಂಭೀರ ಸಮಸ್ಯೆಗಳಾಗಿ ಪರಿವರ್ತನೆ ಹೊಂದುವವು.
ಇತ್ತೀಚೆಗೆ ನಡೆಸಿದ ಕೆಲವು ಸಂಶೋಧನೆ ಹಾಗೂ ಅಧ್ಯಯನದ ಪ್ರಕಾರ ಧೂಮಪಾನದಿಂದ ಕರುಳಿಗೆ ಹಾನಿ ಉಂಟಾಗುವುದು. ಕೊಲೈಟಿಸ್ ಅಪಾಯವನ್ನು ಹೆಚ್ಚಿಸುವುದು. ಸಿಗರೇಟ್ ಹೊಗೆಯಿಂದ ದೇಹದಲ್ಲಿರುವ ಬಿಳಿ ರಕ್ತಕಣಗಳ ಸಂಖ್ಯೆ ಕಡಿಮೆಯಾಗುವುದು. ಪ್ರೋಟೀನ್ಗಳು ಇಳಿಮುಖ ಹೊಂದುವವು. ಸ್ನಾಯುಗಳಲ್ಲಿ ಹಾಗೂ ಆಂತರಿಕ ವ್ಯವಸ್ಥೆಯಲ್ಲಿ ಉರಿಯೂತ ಉಂಟಾಗುವುದು. ಧೂಮಪಾನವು ಕ್ರೋನ್ಸ್ ಕಾಯಿಲೆ, ಕರುಳಿನ ಉರಿಯೂತ ಮತ್ತು ಕೊಲೈಟಿಸ್ನಂತಹ ಅಪಾಯವನ್ನುಂಟು ಮಾಡುವುದು.
ಧೂಮಪಾನ ಎನ್ನುವ ಭಯಾನಕ ಚಟದಿಂದ ದೂರವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಆದರೆ ಒಮ್ಮೆ ಚಟ ಆರಂಭವಾದಮೇಲೆ ಅದರಿಂದ ಬಿಡುಗಡೆ ಹೊಂದುವುದು ಅಷ್ಟು ಸುಲಭವಲ್ಲ. ಆದರೆ ಕೆಲವು ಮನೆ ಮದ್ದು ಮಾಡುವುದರ ಮೂಲಕ ಧೂಮಪಾನದಿಂದ ದೂರ ಸರಿಯಬಹುದು ಎನ್ನುವುದನ್ನು ಕೆಲವು ಸಂಶೋಧನೆಯು ದೃಢಪಡಿಸಿದೆ. ಹಾಗಾದರೆ ಆ ಮನೆಮದ್ದು ಯಾವುದು ಎನ್ನುವುದನ್ನು ನೀವು ತಿಳಿದುಕೊಳ್ಳಬೇಕು ಎನ್ನುವುದಾದರೆ ಲೇಖನದ ಮುಂದಿನ ಭಾಗವನ್ನು ಓದಿ..
ನೀರು:-
ನೀರು ನೈಸರ್ಗಿಕ ಡಿಟೊಕ್ಸಿಫೈಯರ್ಗಳಲ್ಲಿ ಒಂದಾಗಿದೆ. ದೇಹದಿಂದ ವಿಷಕಾರಿ ಪದಾರ್ಥಗಳನ್ನು ತೊಡೆದುಹಾಕಲು ಮತ್ತು ಧೂಮಪಾನದ ಚಟದಿಂದ ದೂರವಾಗಲು ಸಾಕಷ್ಟು ನೀರನ್ನು ಕುಡಿಯಬೇಕು.
ನೀರು ಸೇವನೆಯು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ.
ಜೇನುತುಪ್ಪ:-
ಧೂಮಪಾನದಿಂದ ದೂರ ಸರಿಯಲು ಸಹಾಯ ಮಾಡುವ ಇನ್ನೊಂದು ನೈಸರ್ಗಿಕ ಉತ್ಪನ್ನವೆಂದರೆ ಜೇನುತುಪ್ಪ. ಜೇನುತುಪ್ಪವು ಜೀವಸತ್ವ, ಕಿಣ್ವಗಳು ಮತ್ತು ಪ್ರೋಟೀನ್ಗಳನ್ನು ಒಳಗೊಂಡಿರುತ್ತದೆ.
ಇದರ ಸೇವನೆಯಿಂದ ಧೂಮಪಾನದ ಅಭ್ಯಾಸವನ್ನು ಬಿಡಬಹುದು. ಧೂಮಪಾನದ ಪ್ರಚೋದನೆ ಉಂಟಾದಾಗ ಇದನ್ನು ಸೇವಿಸಿ ನೀರು ಕುಡಿಯಬೇಕು. ಆಗ ಧೂಮಪಾನದ ಬಯಕೆಯು ಕಡಿಮೆಯಾಗುವುದು.
ಶುಂಠಿ:-
ಧೂಮಪಾನ ತೊರೆದಾಗ ಕೆಲವರಿಗೆ ವಾಕರಿಕೆ ಸಂವೇಧನೆ ಉಂಟಾಗುತ್ತದೆ. ಅಂತಹ ಸಮಯದಲ್ಲಿ ಚಿಕ್ಕ ಶುಂಠಿ ಚೂರನ್ನು ಜಗೆಯುವುದು ಅಥವಾ ಶುಂಠಿ ಚಹಾ ಸೇವಿಸುವುದರಿಂದ ವಾಕರಿಕೆ ಉಂಟಾಗುವುದನ್ನು ತಡೆಯಬಹುದು.
ಅಲ್ಲದೆ ಧೂಮಪಾನ ಮಾಡಲು ಮನಸ್ಸಾಗದಂತೆ ಪ್ರೇರೇಪಿಸುತ್ತದೆ.
ಕ್ಯಾಮೋಮೈಲ್ ಟೀ:-
ನಿಕೋಟಿನ್ ಅಗತ್ಯತೆಯ ಬೇಡಿಕೆಯನ್ನು ಕಡಿಮೆಗೊಳಿಸುವ ಮತ್ತು ನರಗಳಿಗೆ ಪ್ರಶಾಂತತೆ ನೀಡುವ ಏಕಮಾತ್ರ ಪದಾರ್ಥವೆಂದರೆ ಕ್ಯಾಮೋಮೈಲ್ ಟೀ, ಹೀಗೆಂದು Molecular Medicine Reports ಎಂದ ವೈದ್ಯಕೀಯ ಪತ್ರಿಕೆ ತಿಳಿಸಿದೆ. ಇದರಲ್ಲಿ ಉತ್ತಮ ಪ್ರಮಾಣದ ಆಂಟಿ ಆಕ್ಸಿಡೆಂಟುಗಳಿದ್ದು ಧೂಮಪಾನದ ಮೂಲಕ ದೇಹದಲ್ಲಿ ಉತ್ಪತ್ತಿಯಾಗಿರುವ ಫ್ರೀ ರ್ಯಾಡಿಕಲ್ ಎಂಬ ಕ್ಯಾನ್ಸರ್ ಕಾರಕ ಕಣಗಳ ಪ್ರಭಾವದಿಂದ ದೇಹಕ್ಕೆ ಹಾನಿಯಾಗದಂತೆ ತಡೆಯುತ್ತದೆ.
ಜಿನ್ಸೆಂಗ್:-
ಒಂದು ವರದಿಯ ಪ್ರಕಾರ ಜಿನ್ಸೆಂಗ್ ಎಂಬ ಶುಂಠಿಯಂತಹ ಗಡ್ಡೆಯ ರಸದ ಸೇವನೆಯಿಂದ ಡೋಪಮೈನ್ ಎಂಬ ನರಪ್ರಚೋದಕ ಹಾರ್ಮೋನೊಂದು ಬಿಡುಗಡೆಯಾಗುತ್ತದೆ.
ಇದು ಸಿಗರೇಟು ಸೇದಿದಾಗ ಸಿಗುವಂತಹ ಪರಿಣಾಮವನ್ನೇ ನೀಡುವ ಕಾರಣ ಸಿಗರೇಟು ಸೇದುವ ಬಯಕೆಯುಂಟಾಗುವುದಿಲ್ಲ. ಇದು ಧೂಮಪಾನ ತ್ಯಜಿಸುವವರಿಗೆ ವರದಾನವಾಗಿದೆ.
ವಿಟಮಿನ್ ಸಿ ಹೆಚ್ಚಾಗಿರುವ ಆಹಾರಗಳು:-
ಸಿಗರೇಟಿನ ಹೊಗೆಯ ಮೂಲಕ ರಕ್ತಕ್ಕೆ ಧಾವಿಸಿದ ನಿಕೋಟಿನ್ ಅನ್ನು ನಿಭಾಯಿಸಲು ದೇಹಕ್ಕೆ ಅತಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಅಗತ್ಯವಿದೆ. ಇದು ಲಭ್ಯವಿರುವ ವಿಟಮಿನ್ ಸಿ ಪ್ರಮಾಣವನ್ನೆಲ್ಲಾ ಕಬಳಿಸಿ ಬಿಡುತ್ತದೆ.
ಇದೇ ಕಾರಣದ ವ್ಯತಿರಿಕ್ತ ಪರಿಣಾಮವಾಗಿ ದೇಹದಲ್ಲಿ ವಿಟಮಿನ್ ಸಿ ಕೊರತೆಯಾದಾಗಲೆಲ್ಲಾ ಸಿಗರೇಟು ಸೇದುವಂತೆ ಮೆದುಳಿಗೆ
ಸೂಚನೆ ಹೋಗುತ್ತದೆ ಎಂಬ ವಿಷಯವನ್ನು American Journal of Public Health ಎಂಬ ಪತ್ರಿಕೆಯಲ್ಲಿ ವರದಿ ಮಾಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್ನ ನೂರಾರು ಜನ ಕಾರ್ಮಿಕರು ಸಿಎಂ ಬಸ್ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…
ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…
ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…
ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…
ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ.. ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್ ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು…