ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ಮರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.

ಬಳ್ಳಾರಿ ಮೃಗಾಲಯದಲ್ಲಿ 7 ವರ್ಷದ ಹಿಂದೆ ಸುಂದರಿ ಎಂಬ ಜಿಂಕೆಮರಿ ಜನ್ಮ ತಾಳಿತ್ತು, ಬಳ್ಳಾರಿ ಮೃಗಾಲಯದಲ್ಲಿದ್ದ 6೦ ಬ್ಲಾಕ್ ಬಕ್ಸ್ ಪೈಕಿ ಸುಂದರಿ ಕೂಡ ಒಬ್ಬಳಾಗಿದ್ದಳು. ಈಗ ಅವುಗಳನ್ನು ಸದ್ಯ ಹಂಪಿ ಬಳಿಯಿರುವ ಬಿಳಿಕ್ಕಲ್ ಮೃಗಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಬಳ್ಳಾರಿ ಮೃಗಾಲಯದಲ್ಲಿ ಬಸವರಾಜ್ ಪ್ರಾಣಿಗಳಿಗೆ ಆಹಾರ ನೀಡುವ ಹಾಗೂ ಊಟ ತಿನ್ನಿಸುವ ಮೇಲ್ವಿಚಾರಕರಾಗಿದ್ದರು. ಅರಣ್ಯ ಇಲಾಖೆಯ ವಾರ್ಷಿಕ ವರ್ಗಾವಣೆ ನಿಯಮದಂತೆ ಬಸವರಾಜ್ ಅವರನ್ನು ಕಮಲಪುರ ಪ್ರದೇಶಕ್ಕೆ ವರ್ಗಾವಣೆ ಮಾಡಲಾಯಿತು. ಸದ್ಯ ಬಸವರಾಜ್ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದ ಪ್ರಾಣಿಗಳಿಗೆ ಆಹಾರ ತಿನ್ನಿಸುವ ಮೇಲ್ವಿಚಾರಕರಾಗಿ ವರ್ಗಾವಣೆ ಗೊಂಡಿದ್ದಾರೆ.

ನವೆಂಬರ್ 3 ರಿಂದ ಈ ಮೃಗಾಲಯ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ, ಇಲ್ಲಿಯೇ ವಾಸವಿರುವ ಸುಂದರಿ ಆಕಸ್ಮಿಕವಾಗಿ ತನ್ನ ಕೇರ್ ಟೇಕರ್ ನೋಡಿ, ಅವರನ್ನು ಗುರುತಿಸಿ ಆತನ ಹಿಂದೆ ಹಿಂದೆಯೇ ಸುತ್ತುತ್ತಿದ್ದಾಳೆ. 7 ವರ್ಷಗಳ ಹಿಂದೆ ಸುಂದರಿ ಹುಟ್ಟಿದಾಗ ತನಗೆ ಹಾಲು ಕುಡಿಸಿ ಬೆಳೆಸಿದ್ದ ಬಸವರಾಜ್ ನನ್ನು ಆಕೆ ಮರೆತಿಲ್ಲ, ಬಸವರಾಜ್ ಆಹಾರ ನೋಡಲು ಹೋದರೆ ಉಳಿದೆಲ್ಲಾ ಜಿಂಕೆಗಳು ಹೆದರಿ ದೂರ ಓಡುತ್ತಿದ್ದವು. ಆದರೆ ಸುಂದರಿ ಮಾತ್ರ ಬಸವರಾಜ್ ಹಿಂದಿಂದೆಯೇ ಸುತ್ತುತ್ತಿದ್ದಳು.

ಈ ಸುಂದರಿ ಜಿಂಕೆ ಯಾವಾಗಲು ನನ್ನ ಹಿಂದೆಯೇ ಇರುತಾ ಇತ್ತು , ನಾನು ಗೇಟ್ ಬಾಗಿಲು ಮುಚ್ಚಿದರೇ, ಸುಮಾರು ಅರ್ಧ ಗಂಟೆಗಳ ಕಾಲ ಕಾದು ನಂತರ ಬೇರೆ ಜಿಂಕೆಗಳ ಜೊತೆ ಹೋಗುತಿತ್ತು . ಪ್ರಾಣಿಗಳ ಈ ವರ್ತನೆ ನನಗೆ ತುಂಬಾ ಭಿನ್ನವೆನಿಸುತ್ತಿದೆ.ಈ ಜಿಂಕೆ ಮರಿ ನನ್ನನ್ನು ಇಷ್ಟೋಂದು ನೆನಪಿನಲ್ಲಿಟ್ಟುಕೊಂಡಿರುವುದು ನನಗೆ ಆಶ್ಚರ್ಯ ತರಿಸಿದೆ ಎಂದು ಬಸವರಾಜ್ ಹೇಳಿದ್ದಾರೆ. ಬಳ್ಳಾರಿಯ ಗುದ್ದೂರು ಮೂಲದ ಬಸವರಾಜ್ ಅರಣ್ಯ ಇಲಾಖೆಯ ನೌಕರರಾಗಿದ್ದಾರೆ, ಬಸವರಾಜ್ ಸದ್ಯ ಕಾವಲುಗಾರನಾಗಿ
ನೇಮಕಗೊಂಡಿದ್ದಾರೆ.

ಪ್ರಾಣಿಗಳನ್ನು ಪ್ರೀತಿಸುವ ಅವರು ಅವುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ, ಈಗ ಸುಂದರಿ ಜೊತೆ ಅವರಿಗೆ ವಿಶೇಷ ಪ್ರೀತಿ ವಾತ್ಸಲ್ಯ ಬೆಳೆದಿದೆ. ಸುಂದರಿಯನ್ನು ಬಸವರಾಜ್ ಸುಂದರಿ ಎಂದು ಕರೆಯುತ್ತಾರೆ, ಸುಂದರಿ ಎಂದು ಕರೆದ ಕೂಡಲೇ ಜಿಂಕೆ ಮರಿ ಪ್ರತಿಕ್ರಿಯಿಸುತ್ತದೆ. ಸುಂದರಿ ನನ್ನ ಮಗಳಿದ್ದಂತೆ ಎಂದು ಬಸವರಾಜ್ ಹೇಳಿದ್ದಾರೆ. ಬ್ಲ್ಯಾಕ್ ಬಕ್ಸ್ ಗುಜರಾತ್, ರಾಜಸ್ತಾನ, ಮಧ್ಯ ಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದ ಒಣ ಭೂಮಿಯಲ್ಲಿ ಕಂಡುಬರುವ ಪ್ರಾಣಿಯಾಗಿದೆ ಅಳಿವಿನಂಚಿನಲ್ಲಿರುವ ಪ್ರಬೇಧದ
ಜಿಂಕೆಗಳನ್ನ ವನ್ಯ ಜೀವಿ ಕಾಯಿದೆ ಪ್ರಕಾರ ರಕ್ಷಿಸಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.
ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.
2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ