ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ಮರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.

ಬಳ್ಳಾರಿ ಮೃಗಾಲಯದಲ್ಲಿ 7 ವರ್ಷದ ಹಿಂದೆ ಸುಂದರಿ ಎಂಬ ಜಿಂಕೆಮರಿ ಜನ್ಮ ತಾಳಿತ್ತು, ಬಳ್ಳಾರಿ ಮೃಗಾಲಯದಲ್ಲಿದ್ದ 6೦ ಬ್ಲಾಕ್ ಬಕ್ಸ್ ಪೈಕಿ ಸುಂದರಿ ಕೂಡ ಒಬ್ಬಳಾಗಿದ್ದಳು. ಈಗ ಅವುಗಳನ್ನು ಸದ್ಯ ಹಂಪಿ ಬಳಿಯಿರುವ ಬಿಳಿಕ್ಕಲ್ ಮೃಗಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಬಳ್ಳಾರಿ ಮೃಗಾಲಯದಲ್ಲಿ ಬಸವರಾಜ್ ಪ್ರಾಣಿಗಳಿಗೆ ಆಹಾರ ನೀಡುವ ಹಾಗೂ ಊಟ ತಿನ್ನಿಸುವ ಮೇಲ್ವಿಚಾರಕರಾಗಿದ್ದರು. ಅರಣ್ಯ ಇಲಾಖೆಯ ವಾರ್ಷಿಕ ವರ್ಗಾವಣೆ ನಿಯಮದಂತೆ ಬಸವರಾಜ್ ಅವರನ್ನು ಕಮಲಪುರ ಪ್ರದೇಶಕ್ಕೆ ವರ್ಗಾವಣೆ ಮಾಡಲಾಯಿತು. ಸದ್ಯ ಬಸವರಾಜ್ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದ ಪ್ರಾಣಿಗಳಿಗೆ ಆಹಾರ ತಿನ್ನಿಸುವ ಮೇಲ್ವಿಚಾರಕರಾಗಿ ವರ್ಗಾವಣೆ ಗೊಂಡಿದ್ದಾರೆ.

ನವೆಂಬರ್ 3 ರಿಂದ ಈ ಮೃಗಾಲಯ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ, ಇಲ್ಲಿಯೇ ವಾಸವಿರುವ ಸುಂದರಿ ಆಕಸ್ಮಿಕವಾಗಿ ತನ್ನ ಕೇರ್ ಟೇಕರ್ ನೋಡಿ, ಅವರನ್ನು ಗುರುತಿಸಿ ಆತನ ಹಿಂದೆ ಹಿಂದೆಯೇ ಸುತ್ತುತ್ತಿದ್ದಾಳೆ. 7 ವರ್ಷಗಳ ಹಿಂದೆ ಸುಂದರಿ ಹುಟ್ಟಿದಾಗ ತನಗೆ ಹಾಲು ಕುಡಿಸಿ ಬೆಳೆಸಿದ್ದ ಬಸವರಾಜ್ ನನ್ನು ಆಕೆ ಮರೆತಿಲ್ಲ, ಬಸವರಾಜ್ ಆಹಾರ ನೋಡಲು ಹೋದರೆ ಉಳಿದೆಲ್ಲಾ ಜಿಂಕೆಗಳು ಹೆದರಿ ದೂರ ಓಡುತ್ತಿದ್ದವು. ಆದರೆ ಸುಂದರಿ ಮಾತ್ರ ಬಸವರಾಜ್ ಹಿಂದಿಂದೆಯೇ ಸುತ್ತುತ್ತಿದ್ದಳು.

ಈ ಸುಂದರಿ ಜಿಂಕೆ ಯಾವಾಗಲು ನನ್ನ ಹಿಂದೆಯೇ ಇರುತಾ ಇತ್ತು , ನಾನು ಗೇಟ್ ಬಾಗಿಲು ಮುಚ್ಚಿದರೇ, ಸುಮಾರು ಅರ್ಧ ಗಂಟೆಗಳ ಕಾಲ ಕಾದು ನಂತರ ಬೇರೆ ಜಿಂಕೆಗಳ ಜೊತೆ ಹೋಗುತಿತ್ತು . ಪ್ರಾಣಿಗಳ ಈ ವರ್ತನೆ ನನಗೆ ತುಂಬಾ ಭಿನ್ನವೆನಿಸುತ್ತಿದೆ.ಈ ಜಿಂಕೆ ಮರಿ ನನ್ನನ್ನು ಇಷ್ಟೋಂದು ನೆನಪಿನಲ್ಲಿಟ್ಟುಕೊಂಡಿರುವುದು ನನಗೆ ಆಶ್ಚರ್ಯ ತರಿಸಿದೆ ಎಂದು ಬಸವರಾಜ್ ಹೇಳಿದ್ದಾರೆ. ಬಳ್ಳಾರಿಯ ಗುದ್ದೂರು ಮೂಲದ ಬಸವರಾಜ್ ಅರಣ್ಯ ಇಲಾಖೆಯ ನೌಕರರಾಗಿದ್ದಾರೆ, ಬಸವರಾಜ್ ಸದ್ಯ ಕಾವಲುಗಾರನಾಗಿ
ನೇಮಕಗೊಂಡಿದ್ದಾರೆ.

ಪ್ರಾಣಿಗಳನ್ನು ಪ್ರೀತಿಸುವ ಅವರು ಅವುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ, ಈಗ ಸುಂದರಿ ಜೊತೆ ಅವರಿಗೆ ವಿಶೇಷ ಪ್ರೀತಿ ವಾತ್ಸಲ್ಯ ಬೆಳೆದಿದೆ. ಸುಂದರಿಯನ್ನು ಬಸವರಾಜ್ ಸುಂದರಿ ಎಂದು ಕರೆಯುತ್ತಾರೆ, ಸುಂದರಿ ಎಂದು ಕರೆದ ಕೂಡಲೇ ಜಿಂಕೆ ಮರಿ ಪ್ರತಿಕ್ರಿಯಿಸುತ್ತದೆ. ಸುಂದರಿ ನನ್ನ ಮಗಳಿದ್ದಂತೆ ಎಂದು ಬಸವರಾಜ್ ಹೇಳಿದ್ದಾರೆ. ಬ್ಲ್ಯಾಕ್ ಬಕ್ಸ್ ಗುಜರಾತ್, ರಾಜಸ್ತಾನ, ಮಧ್ಯ ಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದ ಒಣ ಭೂಮಿಯಲ್ಲಿ ಕಂಡುಬರುವ ಪ್ರಾಣಿಯಾಗಿದೆ ಅಳಿವಿನಂಚಿನಲ್ಲಿರುವ ಪ್ರಬೇಧದ
ಜಿಂಕೆಗಳನ್ನ ವನ್ಯ ಜೀವಿ ಕಾಯಿದೆ ಪ್ರಕಾರ ರಕ್ಷಿಸಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…
ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…
ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…
2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….