ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್ ಶರಣ್ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.

ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಶ್ಯಾಮ್ ಅವರು, ಮಂಡಿ ಲೋಕಸಭಾಕ್ಕೆ ಸೇರುವ ಕಿನ್ನೌರ್ನಲ್ಲಿ ಅ.25, 1951ರಂದು ನಡೆದ ಸ್ವತಂತ್ರ ಭಾರತದ ಮೊದಲ ಚುನಾವಣೆಯಲ್ಲಿ ಪ್ರಥಮ ಮತ ಹಾಕುವ ಮೂಲಕ “ಸ್ವತಂತ್ರ ಭಾರತದ ಮೊದಲ ಮತದಾರ”ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಆಗ ಅವರಿಗೆ 33ರ ಪ್ರಾಯ.

1951ರಿಂದ ಇಂದಿನವರೆಗೂ ಅವರು 17 ಬಾರಿ ಲೋಕಸಭಾ ಚುನಾವಣೆಯ ಮತ ಚಲಾಯಿಸಿದ್ದಾರೆ. ರಾಜ್ಯ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಯಾವುದನ್ನೂ ತಪ್ಪಿಸದ ನೇಗಿ, ತಮ್ಮ ಸುತ್ತಮುತ್ತಲಿನವರನ್ನೂ ಮತ ಹಾಕಿ, ಪ್ರಜಾಪ್ರಭುತ್ವ ಚಿಂತನೆ ಸಾಕಾರಗೊಳಿಸುನವಂತೆ ಪ್ರೇರೇಪಿಸುತ್ತಲೇ ಬಂದಿದ್ದಾರೆ.

ಹಿಮಾಚಲ ರಾಜ್ಯ ಚುನಾವಣಾ ಆಯೋಗವು, ಇವರ ಇಚ್ಛಾಶಕ್ತಿ ಗಮನಿಸಿ ಬುಡಕಟ್ಟು ಪ್ರದೇಶಗಳಲ್ಲಿ ಜನರಿಗೆ ಮತದ ಮಹತ್ವ ತಿಳಿಸಲು, ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿತ್ತು.

2010ರಲ್ಲಿ ಚುನಾವಣಾ ಆಯೋಗದ ವಜ್ರ ಮಹೋತ್ಸವದ ಪ್ರಯುಕ್ತ ಆಗಿನ ಮುಖ್ಯ ಚುನಾವಣಾ ಆಯುಕ್ತ ನವೀನ್ ಚಾವ್ಲಾ ಅವರು ಶಿಮ್ಲಾದಿಂದ 250 ಕಿ.ಮೀ. ದೂರದ ಕಲ್ಪದಲ್ಲಿರುವ ತಾತನ ಮನೆಗೇ ಹೋಗಿ ಅವರನ್ನು ಗೌರವಿಸಿದ್ದರು.

ಇತ್ತೀಚಿಗೆ ನಡೆದ ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ 97ರ ವಯಸ್ಸಿನಲ್ಲೂ ಶ್ಯಾಮ್ ಶರಣ್ ನೇಗಿ ಅವರು ವೋಟ್ ಮಾಡಿದ್ದು ವಿಶೇಷವಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.
ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…
ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…
ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….