ದಿನಕ್ಕೊಂದು ನೀತಿ ಕಥೆ

ಭೂಮಿ ಮೇಲೆ ಯಾರು ಹೆಚ್ಚು ಸುಖೀ?ರಾಜನಿಗೆ ಕಾಡಿದ ಈ ಪ್ರಶ್ನೆಗೆ ಉತ್ತರ ಕೊಟ್ಟವರು ಯಾರು ಗೊತ್ತಾ..?ತಿಳಿಯಲು ಈ ಕಥೆ ಓದಿ…

484

ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ. ರಾಜ್ಯದ ಹಳ್ಳಿ, ಹಳ್ಳಿಗಳನ್ನು ಸುತ್ತುತ್ತಾ, ಅಲ್ಲಿನ ಜನರನ್ನು ಮಾತಾಡಿಸುತ್ತಾ, ಅವರ ಕಷ್ಟ-ಸುಖಗಳನ್ನು, ಆಲಿಸುತ್ತಾ, ಸಮಾಧಾನವನ್ನೋ, ಪರಿಹಾರವನ್ನೋ ಹೇಳುತ್ತಾ ನಡೆದ.

ಒಂದು ರಾತ್ರಿ ದೂರದ ಹಳ್ಳಿಯೊಂದರ ಜಗಲಿಯಲ್ಲಿ ಕುಳಿತು ಆನಂದದಿಂದ ಹಾಡುತ್ತಿದ್ದ ರೈತನೊಬ್ಬ ಕಾಣಿಸಿದ. ಮಾರುವೇಷದಲ್ಲಿದ್ದ ರಾಜನಿಗೆ ಆತನನ್ನು ಕಂಡು ಅಚ್ಚರಿಯಾಯಿತು. ಆತನ ಕುಶಲ ವಿಚಾರಿಸಿ, ಬಹಳ ಸಂತೋಷದಿಂದ ಹಾಡುತ್ತಿರುವ ಕಾರಣ ಕೇಳಿದ. ಅದಕ್ಕೆ ರೈತನ ಉತ್ತರ ಹೀಗಿತ್ತು; “ದಿನವೂ ಕಷ್ಟಪಟ್ಟು ಹೊಲದಲ್ಲಿ ದುಡಿಯುತ್ತೇನೆ. ಭಗವಂತನ ದಯೆಯಿಂದ ಸಿಕ್ಕ ಫ‌ಲದಲ್ಲಿ ಅರ್ಧ ಭಾಗವನ್ನು ಮಾತ್ರ ನನ್ನ ದೈನಂದಿನ ಜೀವನದ ನಿರ್ವಹಣೆಗೆ ಖರ್ಚು ಮಾಡುತ್ತೇನೆ. ಉಳಿದ ಅರ್ಧಭಾಗದಲ್ಲಿ ಕಾಲು ಭಾಗವನ್ನು ಸಾಲ ತೀರಿಸಲು, ಇನ್ನುಳಿದ ಕಾಲು ಭಾಗವನ್ನು ಸಾಲ ಕೊಡುವುದಕ್ಕೂ ವ್ಯಯಿಸುತ್ತೇನೆ. ಹೀಗಾಗಿ ನನ್ನ ಆದಾಯದ ಮಿತಿಯಲ್ಲಿ ನಾನು ಜೀವಿಸುತ್ತಾ ನನ್ನ ಕುಟುಂಬದವರೊಟ್ಟಿಗೆ ಸುಖ- ಸಂತೋಷದಿಂದಿದ್ದೇನೆ’ ಎಂದ.

ರೈತನ ಈ ಮಾತು ರಾಜನಿಗೆ ಒಗಟಾಗಿ ಕಂಡಿತು. “ಸಾಲ ಕೊಡುವುದು, ಸಾಲ ತೀರಿಸುವುದು ಹೀಗಂದರೇನು? ಕೊಂಚ ಬಿಡಿಸಿ ಹೇಳು ಮಹರಾಯ’ ಎಂದ. ರಾಜನ ಮಾತಿಗೆ ನಗುತ್ತ ರೈತನೆಂದ; “ಸಾಲ ಕೊಡುವುದೆಂದರೆ, ನನ್ನ ದುಡಿಮೆಯ ಕಾಲು ಭಾಗವನ್ನು ನಾನು ನನ್ನ ತಂದೆ- ತಾಯಿಯರನ್ನು ಸಾಕಲು ವ್ಯಯಿಸುತ್ತೇನೆ. ಕಾರಣ ಅವರು ನನ್ನನ್ನು ತಮ್ಮ ಕಷ್ಟದಲ್ಲೂ ನನ್ನನ್ನು ಸಾಕಿ- ಸಲಹಿ ದೊಡ್ಡವನನ್ನಾಗಿ ಮಾಡಿ¨ªಾರೆ. ಅವರ ಋಣ ನನ್ನ ಮೇಲಿದೆ. ಹೀಗಾಗಿ ವೃದ್ಧರಾದ ಅವರನ್ನು ನೋಡಿಕೊಳ್ಳುವುದು ನನ್ನ ಹೊಣೆ. ಇದು ನಾನು ಪಡೆದ ಸಾಲ ತೀರಿಸುವ ರೀತಿ. ಇನ್ನು ನಿಮ್ಮ ಅನುಮಾನ ಸಾಲ ಕೊಡುವ ಕುರಿತದ್ದು; ಅದೂ ಹೀಗೆಯೇ, ನಾನು ನನ್ನ ಮಕ್ಕಳನ್ನು ಸಾಕಿ-ಸಲಹಿ, ಸಶಕ್ತರನ್ನಾಗಿ ಮಾಡುತ್ತಿದ್ದೇನೆ. ಇದು ಒಂದು ರೀತಿ ಸಾಲ ಕೊಟ್ಟಂತೆ; ಅಂದರೆ ಅವರು ಮುಂದೆ ನನಗೆ ಮತ್ತು ನನ್ನ ಹೆಂಡತಿಗೆ ವಯಸ್ಸಾದಾಗ ದಿಕ್ಕಾಗುತ್ತಾರೆ. ಇನ್ನು ಉಳಿದ ಅರ್ಧಭಾಗದಲ್ಲಿ ನನ್ನ ದೈನಂದಿನ ಜೀವನ ಹೇಗೋ ಸಾಗುತ್ತದೆ.

ಹೀಗಾಗಿ ನನ್ನ ನೆಮ್ಮದಿಯ ಜೀವನಕ್ಕೆ ಭಂಗವಿಲ್ಲ’ ಎಂದು ನಗೆ ಬೀರಿದ. ರೈತನ ಜೀವನೋತ್ಸಾಹದ ಮಾತು ರಾಜನಲ್ಲಿ ಹೊಸ ಅರಿವನ್ನೇ ಹುಟ್ಟಿಸಿತು. ಸರಳ ಜೀವನ ಹಾಗೂ ಇದ್ದುದರ ತೃಪ್ತಿ ಹೊಂದುವ ಗುಣ ಇವೇ ಬದುಕಿನ ಸುಖ-ಸಂತೋಷದ ಮೂಲ ಎನ್ನುವ ಸತ್ಯ ಗೊತ್ತಾಯಿತು. ಆಗಲೇ ರಾಜನನ್ನು ಕಾಡುತ್ತಿದ್ದ ಪ್ರಶ್ನೆಗೆ ಉತ್ತರವೂ ದೊರಕಿತು.

ಮೂಲ:- 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಸಿದ್ದರಾಮಯ್ಯ ಮಣಿಸಲು ಕೋಲಾರ ಜನ ಶಪಥ! ಸಂಸದ ಮುನಿಸ್ವಾಮಿ

    ‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘ವರ್ತೂರು ಪ್ರಕಾಶ್‌ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ…

  • ನೀತಿ ಕಥೆ

    ನಿಮ್ಮ ಹೆಸರಿನ ಬಗ್ಗೆ ನೀವು ತುಂಬಾ ತಲೆ ಕೆಡಿಸಿಕೊಂಡಿದ್ದೀರಾ..?ಹಾಗಾದ್ರೆ ಈ ‘ದುಷ್ಟ’ನ ಕತೆ ಓದಿ…

    ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • ಸುದ್ದಿ

    ಅಣ್ಣನಿಗೆ ಬಿಸಿಲು ತಾಗಬಾರದೆಂದು ಮಂಟಪವನ್ನು ಕಟ್ಟಿಸಿದ ಧ್ರುವ ಸರ್ಜಾ.

    ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…

  • ಸ್ಪೂರ್ತಿ

    ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಕೆ ಪಿಎಚ್‍ಡಿ ಮಾಡಿದ್ದಾರೆ..!ತಿಳಿಯಲು ಇದನ್ನು ಓದಿ..

    ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್‌ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್‍ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್‌ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್‌ಗೆ ಟ್ರಾನ್ಸ್‌ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…

  • ಸುದ್ದಿ

    ಸಾವಿನಲ್ಲಿಯೂ ಸಹ ಸಾರ್ಥಕತೆ, ಮೆದುಳು ನಿಷ್ಕ್ರಿಯಗೊಂಡ ಉಡುಪಿ ಯುವಕನ ಅಂಗಾಂಗ ದಾನ…!

    ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…