ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಗೃಹ ಉಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.

1.ಏರ್ ಫ್ರೆಶ್ನೆರ್:-
ಈ ಏರ್ ಫ್ರೆಶ್ನೆರ್ ಸ್ಪ್ರೇ, ಜೆಲ್ ಹೀಗೆ ಬೇರೆ ಬೇರೆ ರೂಪದಲ್ಲಿ ಸಿಗುತ್ತೆ. ಮನೆ ಒಳಗೆ, ಕಾರ್ ಒಳಗೆ ಘಮ ಘಮ ಅನ್ಲಿ ಅಂತ ಸಾಮಾನ್ಯವಾಗಿ ಇದನ್ನ ಬಳಸ್ತಾರೆ. ಇದ್ರಲ್ಲಿ ನಮ್ಮ ದೇಹಕ್ಕೆ ಹಾನಿ ಮಾಡೋ ವಿಷಾದ ಅಂಶ ಇರುತ್ತೆ.

ಅದ್ರಲ್ಲಿರೋ ಪಾಥಲಾಟ್ಸ್ ಅನ್ನೋ ಪದಾರ್ಥದಿಂದ ನಮ್ಮ ಸಂತಾನೋತ್ಪತ್ತಿ ಶಕ್ತಿಯನ್ನ ಹಾಳುಮಾಡೊದಲ್ದೆ ಅಸ್ತಮಾದಂತಹ ಕಾಯಿಲೆ ಗಂಭೀರ ರೂಪ ಪಡೆಯೋಹಾಗೆ ಮಾಡುತ್ತೆ.
2.ಸುವಾಸನೆಭರಿತ ಮೇಣದ ಬತ್ತಿ:-
ಈ ಸುವಾಸನೆಭರಿತ ಮೇಣದ ಬತ್ತಿ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ, ಹುಟ್ಟು ಹಬ್ಬ, ಮದುವೆ ವಾರ್ಷಿಕೋತ್ಸವ, ಹಬ್ಬದಲ್ಲಿ ಹೀಗೆ ಹಲವಾರು ಸಲ ಇದನ್ನ ಉಪಯೋಗಿಸ್ತೀವಿ. ಕೆಲವೊಬ್ರು ಬೇರೆ ಫ್ರೆಶ್ನೆರ್ಗೆ ನೋಡಿದ್ರೆ ಇದು ಸ್ವಲ್ಪ ಕಡಿಮೆ ಬೆಲೆಗೆ ಸಿಗೋದ್ರಿಂದ ಇದನ್ನ ಬಚ್ಚಲಮನೇಲೇ ಇತ್ತು ಅಲ್ಲಿನ ವಾಸನೆ ಹೋಗಿಸೋದಕ್ಕೆ ಉಪಯೋಗಿಸ್ತಾರೆ.

ಇದ್ರಲ್ಲೂ ಕೂಡ ವಿಷಪದಾರ್ಥ ಇರಬಹುದು, ಯಾಕೆ ಅಂದ್ರೆ ಬಹಳಷ್ಟು ಜನ ಇದರ ಬತ್ತಿಯನ್ನ ಸೀಸದಿಂದ ಮಾಡಿರ್ತಾರೆ., ಒಂದುಸಲ ನೋಡ್ಕೊಳೋದು ಒಳ್ಳೇದು. ಹೇಗೆ ಪರೀಕ್ಷೆ ಮಾಡೋದು ಅಂದ್ರ ? ಒಂದು ಬಿಳಿ ಪೇಪರ್ ತೊಗೊಂಡು ಆ ಕ್ಯಾಂಡೆಲ್ನ ಬತ್ತಿ ತುದಿಯಿಂದ ಒಂದು ಲೈನ್ ಬರೆದಹಾಗೆ ಮಾಡಿ, ನಿಮಗೆ ಯಾವುದೇ ಲೈನ್ ಕಾಣಿಸಲಿಲ್ಲ ಅಂದ್ರೆ ಸೀಸ ಇಲ್ಲ ಅಂತ. ಅಕಸ್ಮಾತ್ ಲೈನ್ ಕಾಣಿಸಿದ್ರೇ ಇದ್ರಲ್ಲಿ ವಿಷಪದಾರ್ಥಗಳು ಇರೋದು ಗ್ಯಾರಂಟಿ.
3.ಬಚ್ಚಲುಮನೆಯ ಕರ್ಟನ್:-
ಇತ್ತೀಚಿನ ದಿನಗಳಲ್ಲಿ ಬಚ್ಚುಲು ಮನೇಲಿ ಶವರ್ ಇದ್ದೆ ಇರುತ್ತೆ. ತುಂಬಾ ಮನೆಗಳಲ್ಲಿ ಈ ಶವರ್ನಲ್ಲಿ ಸ್ನಾನ ಮಾಡೋವಾಗ ನೀರು ಹಾರದೆ ಇರೋ ಹಾಗೆ ಕರ್ಟನ್ ಹಾಕ್ತಾರೆ. ಈ ಕರ್ಟನ್ ನಲ್ಲಿ ಪ್ಲಾಸ್ಟಿಕ್ ಹಾಗೂ PVC ಇರುತ್ತೆ. ಈ ಕಾರ್ಸಿನೋಜೆನಿಕ್ ಅನ್ನೋ ವಿಷಕಾರಿ ಪದಾರ್ಥನ ಹೊರ ಹಾಕುತ್ತೆ.

ಇದು ಪರಿಸರಕ್ಕೂ ತುಂಬಾ ಹಾನಿಮಾಡುತ್ತೆ. ಬಿಸಿ ನೀರಿನ ಶಾಖಕ್ಕೆ ಈ ವಿಷಾದ ಪದಾರ್ಥ ಹೊರಬರುತ್ತಲ್ಲ ಅದು ನಮ್ಮ ಉಸಿರಾಟ ಹಾಗೆ ಸಂತಾನೋತ್ಪತ್ತಿ ಕ್ರಿಯೆಗೆ ಹಾನಿ ಮಾಡುತ್ತೆ. ಇದರ ಬದಲು ಕಾಟನ್ ಕರ್ಟನ್ ಬಳಸೋದು ಒಳ್ಳೇದು.
4.ಕಾರ್ಪೆಟ್ ಕ್ಲೀನರ್:-
ಕಾರ್ಪೆಟ್ ಗೆ ಅಂಟಿಕೊಂಡಿರು ಕಲೆ ಹೋಗ್ಬೇಕು ಅಂತ ಈ ವಸ್ತು ತಾಯಾರಿಸೋದಕ್ಕೆ ಅತ್ಯಂತ ಹೆಚ್ಚು ಹಾನಿಕಾರಿಕ ಕೆಮಿಕಲ್ ಉಪಯೋಗಿಸಿರ್ತಾರೆ. ಪರ್ಕ್ಲೋರೆಥೈಲಿನ್ ಮತ್ತು ನಾಫ್ಥಲೀನ್ ಅನ್ನೋ ಕೆಮಿಕಲ್ ಇದ್ರಲ್ಲಿ ಇರೋದ್ರಿಂದ ಇದನ್ನ ಉಸಿರಾಡಿದಾಗ ಶ್ವಾಸಕೋಶದ ಕ್ಯಾನ್ಸರ್ ಬಾರೋ ಸಾಧ್ಯತೆ ಹೆಚ್ಚು. ಈ ನುಸಿ ಗುಳಿಗೇಲೂ ಈ ಪದಾರ್ಥ ಇರುತ್ತೆ.

ಈ ಕಾರ್ಪೆಟ್ ಕ್ಲೀನ್ ಮಾಡಕ್ಕೆ ಅಡುಗೆ ಸೋಡಾ ಹಾಗೂ ವಿನೆಗರ್ ಮಿಶ್ರಣ ಉಪಯೋಗಿಸಿ ನೋಡಿ. ಇದ್ರಿಂದ ಯಾವುದೇ ತೊಂದರೆ ಇರಲ್ಲ.
5.ಡ್ರೈ ಕ್ಲೀನ್ ಮಾಡಕ್ಕೆ ಉಪಯೋಗಿಸೋ ವಸ್ತುಗಳು:-
ಡ್ರೈ ಕ್ಲೀನ್ ಮಾಡಕ್ಕೆ ಉಪಯೋಗಿಸೋ ವಸ್ತುಗಳಲ್ಲಿ ಎಟ್ರಾಕ್ಲೋರೆಥೈಲಿನ್ ಅಥವಾ ಪರ್ಚ್ಲೋರೆಥೈಲಿನ್ ಅನ್ನೋ ಕೆಮಿಕಲ್ ಇರುತ್ತೆ. ಇದನ್ನ ಬಳಸಿ ಕ್ಲೀನ್ ಮಾಡಿರೋ ಬಟ್ಟೆ ಹಾಕ್ಕೊಂಡ್ರೆ ಹಾನಿಕಾರಕ ಕಾರ್ಸಿನೋಜೆನ್ಸ್ ನಮ್ಮ ದೇಹಕ್ಕೆ ಸುಲಭವಾಗಿ ಹೋಗುತ್ತೆ.

ಇದ್ರಿಂದ ಹಲವಾರು ರೀತಿಯ ಕ್ಯಾನ್ಸರ್ ಆಗೋ ಸಾಧ್ಯತೆ ಇರೋದ್ರಿಂದ ಡ್ರೈ ಕ್ಲೀನ್ ಮಾಡಕ್ಕೆ ಕೊಡೋದಕ್ಕೆ ಮುಂಚೆ ಈ ವಿಷಕಾರಿ ಅಂಶ ಇರೋ ವಸ್ತು ಬಳಸಬೇಡಿ ಅಂತ ಹೇಳೋದು ಒಳ್ಳೇದು.
6.ಕೀಟನಾಶಕಗಳು.
ಎಲ್ಲರೂ ಒಂದಲ್ಲ ಒಂದುಸಲ ರೈತರು ಕ್ರಿಮಿ, ಕೀಟನಾಶಕ ಸಿಂಪಡಿಸೋವಾಗ ತೊಂದರೆ ಆಗಿ ಸತ್ರು, ಯಾವುದೊ ಸಮಸ್ಯೆಗೆ ಸಿಲುಕಿ ಇದನ್ನ ಕುಡಿದು ಆತ್ಮ ಹತ್ಯೆ ಮಾಡ್ಕೊಂಡ್ರು ಅಂತ ಓದಿರ್ತೀವಿ, ಕೇಳಿರ್ತೀವಿ. ಇದು ಬರಿ ಕ್ರಿಮಿ, ಕೀಟಗಳಿಗೆ ಅಷ್ಟೆ ಅಲ್ಲ ನಮಗೂ ಹಾಗೆ ನಮ್ಮ ಮುದ್ದಿನ ಸಾಕು ಪ್ರಾಣಿಗಳಿಗೂ ಹಾನಿ ಮಾಡುತ್ವೆ.

ಇದ್ರಲ್ಲಿ ಆರ್ಗನೋಫಾಸ್ಫೇಟ್ ಕೀಟನಾಶಕಗಳು, ಪೆರೆಥೆರಿನ್ ಮತ್ತು ಕಾರ್ಬಮೆಟ್ಗಳು ಇರುತ್ತೆ , ಇವುಗಳು ತುಂಬಾನೇ ಅಪಾಯಕಾರಿ ಮತ್ತು ಮನುಷ್ಯರಿಗೆ ಕ್ಯಾನ್ಸರ್ ತರೋ ಸಾಧ್ಯತೆ ಹೆಚ್ಚು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.
RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್ಗಳು, NBFC ಗಳು, ಸಹಕಾರಿ ಬ್ಯಾಂಕ್ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…
ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?
ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ? ತೂಕ ನಷ್ಟ ಮತ್ತು ವ್ಯಾಯಾಮ :- ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ. ಮಲಗುವ ಸ್ಥಿತಿ ಬದಲಿಸಿ :- ಒಂದು ಬದಿಯಲ್ಲಿ ನಿದ್ರಿಸುವುದನ್ನು…
ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಸವ ಪೀಠದ ಅಧ್ಯಕ್ಷೆ 74 ವರ್ಷದ ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ. ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ. ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು…