ತಂತ್ರಜ್ಞಾನ

ಭಾರತ ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಎಲ್ಲಿದೆಯೆಂದು ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

288

ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.

ನೀವ್​ ಅಲ್ಲಿಗೆ ಹೋದ್ರೆ ಅಲ್ಲಿನ ಸಿಬ್ಬಂದಿ ಬಂದು ನಿಮಗೆ ಫುಡ್​ ಸಪ್ಲೈ ಮಾಡಲ್ಲ. ಬದಲಿಗೆ ನಿಮಗೆ ಬೇಕಾದ ವೆರೈಟಿ ವೆರೈಟಿ ಫುಡ್​ ಸಪ್ಲೈ ಮಾಡೋದು ರೋಬೋಗಳು.

ಇದು ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಎನ್ನಲಾಗ್ತಿದೆ. ವೆಂಕಟೇಶ್ ರಾಜೇಂದ್ರನ್ ಹಾಗೂ ಕಾರ್ತಿಕ್ ಕನ್ನನ್ ಸೇರಿ ಈ ರೆಸ್ಟೋರೆಂಟ್ ತೆರೆದಿದ್ದಾರೆ. ಪ್ರತಿ ಟೇಬಲ್ ಗೂ ಟ್ಯಾಬ್ ಇದೆ. ಈ ಟ್ಯಾಬ್ ಮೂಲಕ ಗ್ರಾಹಕರು ಆಹಾರವನ್ನು ಆರ್ಡರ್ ಮಾಡಬೇಕು. ಅದು ನೇರವಾಗಿ ಕಿಚನ್ ತಲುಪುತ್ತದೆ.

ತಕ್ಷಣ ನೀಮಗೆ ಬೇಕಾದ ಫುಡ್​ ನಿಮ್ಮ ಟೇಬಲ್​ ಬಳಿ ಬರುತ್ತೆ.ವಿದೇಶಗಳಲ್ಲಿ ಮನುಷ್ಯರ ತರ ರೋಬೋಗಳು ಹೋಟೆಲ್​ನಲ್ಲಿ ಕೆಲಸ ಮಾಡೋದನ್ನು ಕೇಳಿದ್ದೀವಿ..ಆದ್ರೆ ನಮ್ಮ ಚೆನ್ನೈಗೂ ಇಂತಹ ರೋಬೋಟ್​ಗಳು ಎಂಟ್ರಿಕೊಟ್ಟಿವೆ. ಸೆನ್ಸಾರ್​ ಮೂಲಕ ಕೆಲಸ ಮಾಡುವ ಈ ರೋಬೋಗಳು ಪ್ರತೀ ಗ್ರಾಹಕರ ಬಳಿ ಹೋಗಿ ಫುಡ್​ ಸಪ್ಲೈ ಮಾಡುತ್ತವೆ.. ಹಸಿದಿದ್ದ ಗ್ರಾಹಕರಿಗೆ ಆತ್ಮೀಯವಾಗಿ ಆಹಾರ ನೀಡುತ್ತವೆ.

ಆಹಾರ ಸಿದ್ಧವಾದ ಮೇಲೆ ರೋಬೋಟ್ ಗ್ರಾಹಕರಿಗೆ ಆಹಾರವನ್ನು ಸರ್ವ್ ಮಾಡುತ್ತದೆ. ಇಲ್ಲಿರುವ ಎಲ್ಲ ರೋಬೋಟ್ ಗಳು ಬ್ಯಾಟರಿ ಮೂಲಕ ಕೆಲಸ ಮಾಡುತ್ತವೆ. ಯಾರಾದ್ರೂ ರೋಬೋಟ್ ದಾರಿಗೆ ಅಡ್ಡ ಬಂದ್ರೆ ಅದು ಅಲ್ಲೇ ನಿಲ್ಲುತ್ತದೆ. ದೇಶದಾದ್ಯಂತ ಈ ರೆಸ್ಟೋರೆಂಟ್ ಬಗ್ಗೆ ಚರ್ಚೆಯಾಗ್ತಿದೆ. ಹಾಗಾಗಿ ಮಾಲೀಕರು ಇನ್ನೂ ಅನೇಕ ಕಡೆ ಶಾಖೆ ತೆರೆಯುವ ತಯಾರಿಯಲ್ಲಿದ್ದಾರೆ.

ವಿಡಿಯೋ ನೋಡಲು ಕ್ಲಿಕ್ ಮಾಡಿ:-https://youtu.be/7_zOtVrMejg

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್‌ಗಳಿಂದ –…

  • ಕ್ರೀಡೆ

    ಮದುವೆ ಆಗಲಿದ್ದಾಳೆ ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿಯಾದ ಕನ್ನಡತಿ..ಹುಡುಗ ಯಾರು ಗೊತ್ತಾ?

    ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…

  • ದೇಶ-ವಿದೇಶ

    ಭಾರತದಲ್ಲಿ ಪತ್ನಿಯನ್ನು ಬಿಟ್ಟು ವಿದೇಶಗಳಿಗೆ ಹೋಗುವ ಪತಿಯರಿಗೆ ದೊಡ್ಡ ಶಾಕ್..!ತಿಳಿಯಲು ಈ ಲೇಖನ ಓದಿ…

    ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್‌ಆರ್‌ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್‌ಆರ್‌ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಂಬೆ ರಸಕ್ಕೆಅರಿಶಿನ ಬೆರೆಸಿ ಕುಡಿಯುವುದರಿಂದ ಆಗುವ 9 ಅದ್ಬುತ ಲಾಭಗಳು..!

    ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀದಿನ ಊಟದ ಜೊತೆಗೆ ತುಪ್ಪ ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…

  • ಸುದ್ದಿ

    ಕೆಮಿಕಲ್ ಗೋಡಾನ್‍ನಲ್ಲಿ ಅಗ್ನಿ ಅನಾಹುತ

    ಕೆಮಿಕಲ್ ಗೋಡಾನ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಬ್ರಿಡ್ಜ್‍ನಲ್ಲಿ ನಡೆದಿದೆ. ಇಂದು ನಸುಕಿನ ಜಾವ 2 ಗಂಟೆಗೆ ಗೋಡಾನ್‍ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವಿಷಯ ತಿಳಿದು 20 ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಜಗನ್ನಾಥ್ ಘಾಟ್‍ನಲ್ಲಿ ಗೋಡಾನ್ ಇದ್ದು, ಇಂದು ಬೆಳಗ್ಗೆ ಬೆಂಕಿ ಹೊತ್ತಿಗೊಂಡಿದೆ. ಈಗ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಸಚಿವ…