ಕಾನೂನು

ನಿಮ್ಮ ಜಮೀನು ವ್ಯವಹಾರಕ್ಕೆ ಇದು ಕಡ್ಡಾಯವಲ್ಲ..?ಇದು ಕೇವಲ ವದಂತಿ ಎಂದ ಕೇಂದ್ರ ಸರ್ಕಾರ..!

603

ಆಸ್ತಿ ವಹಿವಾಟಿಗೆ ಆಧಾರ್‌ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಈ ಕುರಿತ ಲಿಖಿತ ಉತ್ತರ ನೀಡಿದ ವಸತಿ ಖಾತೆ ರಾಜ್ಯ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಅವರು, 1908ರ ನೋಂದಣಿ ಕಾಯಿದೆಯ ನಿಬಂಧನೆಗಳಡಿ ಆಸ್ತಿ ನೋಂದಾಯಿಸಲು ಸಮ್ಮತಿಯೊಂದಿಗೆ ಆಧರ್ ಬಳಸಿಕೊಳ್ಳುವ ಬಗ್ಗೆ ಪರಿಶೀಲಿಸುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಲಾಗಿದೆ ಎಂದರು.

ಬೇನಾಮಿ ಆಸ್ತಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಲ್ಲ ಸ್ಥಿರಾಸ್ತಿಗಳನ್ನು ಆಧಾರ್‌ ಸಂಖ್ಯೆಯೊಂದಿಗೆ ಜೋಡಣೆ ಮಾಡಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ ಎಂಬ ವದಂತಿ ಕೆಲವು ದಿನಗಳಿಂದ ದಟ್ಟವಾಗಿತ್ತು.

ಇಲ್ಲಿ ಓದಿ:-ನಿಮ್ಮ ಜಮೀನಿನ ಪಹಣಿ (RTC)ಯನ್ನು ಈಗ ನೀವು ನಿಮ್ಮ ಮೊಬೈಲಿನಲ್ಲೇ ನೋಡಿ ಪಡೆಯಬಹುದು..!ಹೇಗೆಂದು ತಿಳಿಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ…

ಈ ಮುಂಚೆ ಪ್ರಧಾನಿ ನರೇಂದ್ರ ಮೋದಿ ಅವರು ಸಹ ‘ಆಧಾರ್‌ ಸಂಖ್ಯೆಯ ಮೂಲಕ ಬೇನಾಮಿ ಆಸ್ತಿ ಪತ್ತೆ ಮಾಡಲಾಗುವುದು ಎಂದು ಹೇಳಿದ್ದರು. ಹೀಗಾಗಿ ಆಸ್ತಿ ವ್ಯವಹಾರಕ್ಕೆ ಆಧಾರ್ ಕಡ್ಡಾಯಗೊಳಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬಂದಿದ್ದವು.

‘ಆಸ್ತಿ ವಹಿವಾಟಿಗೆ ಆಧಾರ್ ಸಂಪರ್ಕ ಕಲ್ಪಿಸುವ ಯೋಚನೆಯೇ ಸರ್ಕಾರಕ್ಕೆ ಇಲ್ಲ ಎಂದ ಮೇಲೆ ಗಡುವು ವಿಸ್ತರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

 ವದಂತಿ ಹರಡಿದ್ದು ಹೇಗೆ..?

ಬ್ಯಾಂಕ್‌ ಖಾತೆ, ಮೊಬೈಲ್‌ ಸಂಖ್ಯೆಗಳ ರೀತಿಯಲ್ಲಿಯೇ ಆಸ್ತಿ ನೋಂದಣಿಗೂ ಆಧಾರ್‌ ಸಂಪರ್ಕ ಕಡ್ಡಾಯಗೊಳಿಸುವುದು ನಿಜಕ್ಕೂ ಒಳ್ಳೆಯ ಕಲ್ಪನೆ’ ಎಂದು ಸಚಿವ ಹರ್‌ದೀಪ್‌ ಸಿಂಗ್‌ ಪುರಿ  ನವೆಂಬರ್‌ನಲ್ಲಿ ಹೇಳಿದ್ದರು.

ಆಧಾರ್‌ ಜೋಡಣೆಯೊಂದಿಗೆ ಬೇನಾಮಿ ಆಸ್ತಿಗಳಿಗೆ ಕಡಿವಾಣ ಬೀಳಲಿದ್ದು, ಭೂ ಮತ್ತು ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆ ಕಾಣಿಸಿಕೊಳ್ಳಲಿದೆ ಎಂದು ಹೇಳಲಾಗಿತ್ತು.

ಈ ಸುದ್ದಿ ಭೂಗಳ್ಳರಲ್ಲಿ ನಡುಕ ಹುಟ್ಟಿಸಿತ್ತು.ಭೂ ವಹಿವಾಟುಗಳ ಅಕ್ರಮಕ್ಕೆ ತೆರೆ ಬೀಳಲಿದೆ ಎಂಬ ಆಶಾಭಾವನೆಯನ್ನು ಜನಸಾಮಾನ್ಯರಲ್ಲಿ ಹುಟ್ಟುಹಾಕಿತ್ತು.

ಇಬ್ಬರ ನಡುವಿನ ಆಸ್ತಿ ವ್ಯವಹಾರದ ಮೇಲೆ ನಿಗಾ ಇಡಬಹುದು ಮತ್ತು ಮತ್ತೊಬ್ಬರ ಹೆಸರಿನಲ್ಲಿ ಆಸ್ತಿ ನೋಂದಣಿ ತಪ್ಪಿಸಬಹುದು ಎಂದು ನಗರಾಭಿವೃದ್ಧಿ ಸಚಿವಾಲಯದ ಅಧಿಕಾರಿಯೊಬ್ಬರು ಈ ಹಿಂದೆ ತಿಳಿಸಿದ್ದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    256 ವರ್ಷ ಬದುಕಿದ ವ್ಯಕ್ತಿ ಎಷ್ಟು ಪತ್ನಿಯರ ಅಂತ್ಯ ಸಂಸ್ಕಾರ ಮಾಡಿದ್ದ ಗೊತ್ತಾ? ತಿಳಿಯಲು ಈ ಲೇಖನ ಓದಿ ..

    ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.

  • ಸುದ್ದಿ

    ಹಳಿಗಳಲ್ಲಿ ಇನ್ಮುಂದೆ ಕಂಪನಿ ರೈಲು ಸಂಚಾರ…!

    ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್‌ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್‌ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದ‌ಕ್ಕೂ ಮುನ್ನ…

  • ಸುದ್ದಿ

    ಜಾನ್ಸನ್ ಬೇಬಿ ಪೌಡರ್ ನಿಂದಾಗಿ ಮಹಿಳೆಗೆ ಸಿಕ್ತು 286 ಕೋಟಿ ರೂ. ಹೇಗೆ ಗೊತ್ತಾ,.!!

    ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…

  • ಜ್ಯೋತಿಷ್ಯ

    ಏಪ್ರಿಲ್ ನಲ್ಲಿ ಹುಟ್ಟಿದ ತಿಂಗಳು ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಹೀಗಿರುತ್ತೆ ನೋಡಿ!

    ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(8 ನವೆಂಬರ್, 2018) ಹರ್ಷಚಿತ್ತದಿಂದಿರಿ ಹಾಗೂ ಪ್ರೀತಿಯಲ್ಲಿನ ಏಳುಬೀಳುಗಳನ್ನು ಎದುರಿಸುವ ಧೈರ್ಯ ಹೊಂದಿರಿ. ಇಂದುಮಾಡಿದ…

  • ಸುದ್ದಿ

    ಕೇವಲ 12 ವರ್ಷಗಳಲ್ಲಿ 9 ಸಿನಿಮಾ ; ಶಂಕ್ರಣ್ಣ ನಿರ್ದೇಶಿಸಿದ ಸಿನಿಮಾಗಳಿಗೆ ಸಿಕ್ಕಿದ ಬಿರುದುಗಳೆಷ್ಟು ಗೊತ್ತಾ?

    ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್‌ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್  ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್‌, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…