News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಬುದ್ದಿವಂತ ಉಪ್ಪಿಯ 24 ಅಂಶಗಳ ಈ ಸೂಪರ್ ಪ್ರಣಾಳಿಕೆಯಲ್ಲಿ ಏನೇನಿವೆ ಗೊತ್ತಾ..?ನಾನುಗೆ ನೀವೂ ಕೂಡ ಸಲಹೆ ನೀಡಲು ಇಲ್ಲಿದೆ ಮೊಬೈಲ್ ನಂಬರ್ ವಿಳಾಸ…

1901

ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ  ರಿಯಲ್​ ಸ್ಟಾರ್​ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.

 

24 ಅಂಶಗಳಿರುವ ಈ ಪ್ರಣಾಳಿಕೆಯಲ್ಲಿ ಸಂಪೂರ್ಣ ಪಾರದರ್ಶಕ ಆಡಳಿತ ನೀಡುವ ಬಗ್ಗೆ ಆಶ್ವಾಸನೆ ನೀಡಲಾಗಿದೆ. ಈ ಪ್ರಣಾಳಿಕೆಯನ್ನು ಸಂಪೂರ್ಣವಾಗಿ ಓದಿದ್ರೆ, ನಿಮಗೆ ಅನ್ನಿಸಬಹುದು ಇದು ಯಾವುದೋ ಫಿಲ್ಮಗೆ ಬರೆದ ಸ್ಕ್ರಿಪ್ಟ್ ನಂತೆ ಇದೆಯಲ್ಲಾ ಎಂದು. ಯಾಕೆಂದ್ರೆ ಈ ರೀತಿ ಅಂಶಗಳನ್ನು ನಾವು ಚಲನಚಿತ್ರಗಳಲ್ಲಿ ಮಾತ್ರ ನೋಡಲಿಕ್ಕೆ ಸಾದ್ಯ.ಉಪೇಂದ್ರರವರು ಗೆದ್ದು ಈ ಪ್ರನಾಳಿಕೆಯಲ್ಲಿರುವಂತೆ ಆಡಳಿತ ಮಾಡಿದ್ದೇ ಆದಲ್ಲಿ ನಮ್ಮ ರಾಜ್ಯ 2020ಗೆ “ಸೂಪರ್ ರಾಜ್ಯ” ಆಗೋದ್ರಲ್ಲಿ ಡವ್’ಟೆ ಬೇಡ…

 

ಇಲ್ಲಿವೆ ನೋಡಿ ಈ ಪ್ರಣಾಳಿಕೆಯಲ್ಲಿರುವ 24 ಅಂಶಗಳು:-

  • ಪ್ರಜೆಗಳನ್ನು ಸೇರಿಸಿಕೊಂಡು ಸಂಪೂರ್ಣ ಪಾರದರ್ಶಕ ಆಡಳಿತ ಸರಳ, ಹೊಣೆಗಾರಿಕೆಯುಳ್ಳ, ಮಿತವ್ಯಯೀ ಹಾಗೂ ಪ್ರಜೆಗಳನ್ನೊಳಗೊಂಡ ಆಡಳಿತ.
  • ಪ್ರಜೆಗಳ ನೇರ ಸಂಪರ್ಕಕ್ಕಾಗಿ ಟಿವಿ, ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್, ಟ್ವಿಟರ್, ವೆಬ್‍ಸೈಟ್, ಯುಟ್ಯೂಬ್ ಚಾನಲ್)ಮತ್ತು ಮೊಬೈಲ್ ಅಪ್ಲಿಕೇಶನ್‍ಗಳನ್ನು ಪ್ರಾರಂಭಿಸಲಾಗುವುದು.
  • ಪ್ರಜೆಗಳು ಮೊಬೈಲ್ ಅಪ್ಲಿಕೇಶನ್‍ ಮೂಲಕ ತಮ್ಮ ಕ್ಷೇತ್ರ, ಗ್ರಾಮ, ನಗರಗಳ ಸಮಸ್ಯಗಳ ಕುರಿತು ಚಿತ್ರಗಳು, ವಿಡಿಯೋ, ಲಿಖಿತ ಪತ್ರ, ಮತ್ತು ಆಡಿಯೋ ಮಾಡಿ ಆ ಕ್ಷೇತ್ರಗಳಿಗೆ ಸಂಭಂದಪಟ್ಟ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳಿಗೆ ದೂರುಗಳನ್ನು ಸಲ್ಲಿಸಬಹುದು, ಇದಕ್ಕೆ ನಿರ್ಧಿಷ್ಟ ಕಾಲಾವಧಿಯೊಳಗೆ ಪರಿಹರಿಸಲು ಸಾಧ್ಯವಾಗದಿದ್ದಲ್ಲಿ ಈ ದೂರು ಮೇಲ್ಮಟ್ಟದ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿಯವರೆಗೂ ವರ್ಗಾವಣೆಯಾಗುತ್ತದೆ.
  • ಸರಿಯಾದ ಸಮಯಕ್ಕೆ ಜನಗಳಿಗೆ ಸ್ಪಂದಿಸಿ ಅವರ ಸಮಸ್ಯಗಳನ್ನು ಪರಿಹರಿಸಿದಂತ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಅಂಕಗಳನ್ನು ನೀಡಲಾಗುವುದು. ಈ ಅಂಕಗಳೇ ಅವರ ಮುಂದಿನ ಚುನಾವಣೆಗೆ ಮತ್ತು ಅಧಿಕಾರಿಗಳ ಬಡ್ತಿಗೆ ಮಾನದಂಡವಾಗಲಿದೆ.
  • ಕಡಿಮೆ ಅಂಕಗಳಿಸಿದವರಿಗೆ ಶಿಸ್ತುಕ್ರಮ ಮತ್ತು ವೇತನ ಕಡಿತ ಮಾಡಲಾಗುವುದು.
  • ಪ್ರತಿ ಇಲಾಖೆಯ ನೌಕರರನ್ನು ಗುರುತಿಗೆ, ಆಯಾ ಇಲಾಖೆಗಳಿಗೆ ಸಂಬಂದಿಸಿದಂತೆ  ಸಮವಸ್ತ್ರ ಮತ್ತು ಇಲಾಖೆಯ ಬ್ಯಾಡ್ಜ್’ಗಳನ್ನು ಧರಿಸಬೇಕಾಗುತ್ತದೆ. ಪ್ರಜೆಗಳು ಇಲಾಖೆಗಳ ನೌಕರರನ್ನು ಗುರುತಿಸಲು ಇದು ಸಹಾಯವಾಗುತ್ತದೆ.
  • ಎಲ್ಲಾ ಸರ್ಕಾರಿ ಕಛೇರಿಗಳು ಹಾಗೂ ಇಲಾಖೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ (ರಿಜಿಸ್ಟರ್), ವೈಫೈ, ಸಿ.ಸಿ. ಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಆಳವಡಿಸಲಾಗುತ್ತದೆ.
  • ವಿಧಾನಸೌಧದ ಕಾರ್ಯ ಚಟುವಟಿಕೆ ಪರದೆ ಮೇಲೆ ಪ್ರಸಾರ ವಿಧಾನಸೌಧದಲ್ಲಿ ನಡೆಯುವಂತಹ ಪ್ರತಿಯೊಂದು ಕಾರ್ಯ ಚಟುವಟಿಕೆ, ಯೋಜನೆಗಳು, ಕಾಮಗಾರಿಗಳು, ಚರ್ಚೆಗಳು ದೃಶ್ಯ ಮಾಧ್ಯಮಗಳ ಸಾಕ್ಷಿ & ದಾಖಲೆಗಳೊಂದಿಗೆ ದೊಡ್ಡ ಪರದೆಯ ಮೇಲೆ ಬಿತ್ತರಿಸಿ ಅದರ ಆಧಾರದ ಮೇಲೆಯೇ ಚರ್ಚೆ ನಡೆಸಬೇಕು.
  • ಮಾಧ್ಯಮಗಳಲ್ಲಿ ಎಲ್ಲ ಜನಪ್ರತಿನಿಧಿಗಳು ಹಾಗೂ ಎಲ್ಲಾ ಸರ್ಕಾರಿ ಅಧಿಕಾರಿಗಳು ಯೋಜನೆಗಳ ಅಧಿಕೃತ ದಾಖಲೆ-ಪುರಾವೆಗಳೊಂದಿಗೆ ದೃಶ್ಯ ಮಾಧ್ಯಮಗಳ ಮುಖಾಂತರ ನೇರಪ್ರಸಾರದೊಂದಿಗೆ ಅಧಿವೇಶನದಲ್ಲಿ ಭಾಗವಹಿಸಬೇಕು. ಈ ಪ್ರಕ್ರಿಯೆಗಳನ್ನು ಪ್ರಜೆಗಳು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸುವಂತೆ ಮಾಡಲಾಗುವುದು ಇದೆ ಸಮಯದಲ್ಲಿ ಪ್ರಜೆಗಳು ಸಹ ನೇರ ಚರ್ಚೆಯೊಂದಿಗೆ ಭಾಗವಹಿಸಿ ತಮ್ಮ ಸಮಸ್ಯಗಳನ್ನು ಬಗೆಹರಿಸಕೊಲ್ಲಬಹುದು.
  • ಪ್ರತಿಯೊಂದು ಸರ್ಕಾರಿ ಯೋಜನೆಗಳು ಮತ್ತು ಅದರ ಪ್ರತಿಯೊಂದು ಟೆಂಡರ್ ಪ್ರಕ್ರಿಯೆಗಳ ಭಾಗವಹಿಸುವಿಕೆಯು ಸಂಪೂರ್ಣವಾಗಿ ಆನ್ ಲೈನ್ ಮೂಲಕ ಮತ್ತು ಟಿ.ವಿ ಹಾಗೂ ಸಾಮಾಜಿಕ ಜಾಲತಾಣಗಳೊಂದಿಗೆ ಪಾರದರ್ಶಕವಾಗಿ ಪ್ರಸಾರ ಮಾಡಲಾಗುವುದು.
  • ಗುತ್ತಿಗೆದಾರರಿಗೆ ಕೊಡಲಾಗುವ ಯೋಜನೆಗಳ ಖರ್ಚು- ವೆಚ್ಚಗಳನ್ನು ಅಧಿಕೃತ ದೃಶ್ಯ ದಾಖಲೆಗಳ(ಬಿಲ್) ಮತ್ತು ಹಾಜರಾತಿ ವಿವರಣೆಗಳ ಆಧಾರದ ಮೇಲೆಯೇ ಕೊಡಲಾಗುವುದು. ಕಾರ್ಮಿಕರ ಹಾಜರಾತಿ ದಾಖಲೆಗಳನ್ನು ಜಾಲತಾಣಗಳಲ್ಲಿ ಸಾರ್ವಜನಿಕರಿಗೆ ಬಹಿರಂಗಪಡಿಸತಕ್ಕದ್ದು.
  • ಪ್ರತಿ ಕಾಮಗಾರಿಯ ಪ್ರತಿ ಹಂತವೂ ಬೆಳವಣಿಗೆಗಳ ದಾಖಲೆಗಳೊಂದಿಗೆ ಪ್ರತಿ ಹಂತಗಳ ನೇರ ಪ್ರಸಾರವನ್ನು ಪಾರದರ್ಶಕವಾಗಿ ಟಿ.ವಿ ಹಾಗೂ ಸಾಮಾಜಿಕ ಜಾಲತಾಣಗಳೊಂದಿಗೆ ನೋಡಲು ಅವಕಾಶವಿರುತ್ತದೆ.
  • ಜನಪ್ರತಿನಿಧಿ, ನೌಕರರ ಕಾರ್ಯ ಟಿವಿಯಲ್ಲಿ ಮೊದಲೇ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು.
  • ತಿಂಗಳಿಗೊಮ್ಮೆ ಪ್ರಜೆಗಳು, ಜನಪ್ರತಿನಿಧಿ, ನೌಕರರ ಸಂವಾದಗಳು ಅವರವರ ಕ್ಷೇತ್ರಗಳಲ್ಲಿ ಟಿವಿ ಚಾನಲ್‍ಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅಧಿಕೃತ ದೃಶ್ಯ ದಾಖಲೆಗಳೊಂದಿಗೆ ಪ್ರಸಾರಗೊಳ್ಳುತ್ತವೆ.
  • ಸಿಎಂ, ಸಚಿವರಿಂದ ಆಗಾಗ ಪರಿಶೀಲನೆ ಮತ್ತು ಪ್ರಜೆಗಳಿಗೆ ನೇರ ಪ್ರಸಾರದ ವ್ಯವಸ್ಥೆ ಇರುತ್ತದೆ.
  • ಆಡಳಿತ ಸರ್ಕಾರವು ಯಾವುದೇ ಸರ್ಕಾರೀ ವರ್ಗಾವಣೆಗಳನ್ನು ಮಾಡುವಾಗ ಸರಿಯಾದ ಕಾರಣ, ದಾಖಲೆಗಳು ಮತ್ತು ಸಾಕ್ಷಿಗಳನ್ನು ಕೊಟ್ಟು ನೇರ ಪ್ರಸಾರದೊಂದಿಗೆ ವರ್ಗಾವಣೆಗಳನ್ನು ಮಾಡಬೇಕು.
  • ಎಲ್ಲಾ ಸರ್ಕಾರೀ ಇಲಾಖೆಗಳ ಸಂದರ್ಶನಗಳು ಹಾಗೂ ಆಯ್ಕೆಗಳ ಪ್ರಕ್ರಿಯೆಗಳು ದೃಶ್ಯ ಮಾಧ್ಯಮದಲ್ಲಿ ನೇರ ಪ್ರಸಾರ ಮಾಡಲಾಗುವುದು.
  • ತಿಂಗಳಿಗೊಮ್ಮೆ ತೆರಿಗೆ ಸಂಗ್ರಹ, ಆದಾಯ ದಾಖಲೆ ಮಾಹಿತಿಗಳನ್ನು ಸಾರ್ವಜನಿಕರಿಗೆ ತೆರೆದಿಡಲಾಗುವುದು.
  • ಮಾಹಿತಿ ಕೊಟ್ಟರೆ ಮಾತ್ರ ಚುನಾಯಿತ ಜನಪ್ರತಿನಿಧಿಗೆ ವೇತನಗಳು, ಸೌಲಭ್ಯಗಳು ದೊರೆಯುತ್ತದೆ.
  • ಪ್ರಜೆಗಳು ಗ್ಯಾಸ್ ಸಬ್ಸಿಡಿ ಬಿಟ್ಟು ಕೊಡುವಂತೆ, ಮಾಜಿ ಜನಪ್ರತಿನಿಧಿ, ನೌಕರರು ಪಿಂಚಣಿಗಳನ್ನು ಬಿಡಬಹುದು.
  • ಸ್ವಯಂಪ್ರೇರಿತರಾಗಿ ಬಿಟ್ಟುಕೊಟ್ಟ ಪಿಂಚಣಿ ಹಣದಿಂದ, ವೃದ್ಧಾಶ್ರಮ, ವಸತಿರಹಿತರ ಅಭಿವೃಧ್ಧಿ ಮಾಡಲಾಗುವುದು.
  • ಎಲ್ಲಾ ಸರ್ಕಾರಿ ಯೋಜನೆಗಳು ಸಂಪೂರ್ಣಗೊಂಡು ಸಂಬಂಧಪಟ್ಟ ಅಧಿಕಾರಿಗಳ ಪರೀಕ್ಷೆ-ಅನುಮತಿ ನಂತರ ಸಾರ್ವಜನಿಕರ ಬಳಕೆಗೆ ನೇರವಾಗಿ ತೆರೆದಿಡಲಾಗುವುದು. ಯಾವುದೇ ರೀತಿಯ ಲೋಕಾರ್ಪಣಾ ಸಮಾರಂಭ, ಸಂಭ್ರಮ, ಉದ್ಗಾಟನೆಗಳನ್ನು ನಡೆಸುವುದು ಹಾಗೂ ಜನಪ್ರತಿನಿಧಿಗಳು/ ಅಧಿಕಾರಿಗಳು ಭಾಗವಹಿಸುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗುತ್ತದೆ.
  • ಶಾಸಕಾಂಗ ವೇತನ, ಪಿಂಚಣಿ & ಭತ್ಯೆ ಕಾಯ್ದೆ 1952ರ ಕಾನೂನು ತಿದ್ದುಪಡಿ ಮಾಡಲಾಗುವುದು.
  • ಮೇಲ್ಕಂಡ ಪ್ರಣಾಳಿಕೆ ಅಂಶಗಳನ್ನು ಜಾರಿಗೆ ತರಲು ಅಗತ್ಯ ಕಾನೂನು ಜಾರಿ ಮಾಡಲಾಗುವುದು.

ಇಲ್ಲಿ ಓದಿ:-ಆಟೋ ಚಾಲಕನಿಂದ ಬುದ್ದಿವಂತನಿಗೆ ಬಂದ ಆ ಪತ್ರದಲ್ಲಿ, ಇದ್ದ ಅಸಲಿ ವಿಷಯ ಏನು ಗೊತ್ತಾ..?ತಿಳಿಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ…

ನೀವೂ ಸಲಹೆ ನೀಡಬಹುದು:-

ಇದು ಮೊದಲನೆ ಭಾಗವಾಗಿದ್ದು, ಪಕ್ಷದ ಪ್ರಣಾಳಿಕೆ ಕುರಿತು ಸಾರ್ವಜನಿಕರು ತಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಪರಿಗಣಿಸಿ ಅಂತಿಮ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ಉಪೇಂದ್ರರವರು ಹೇಳಿದ್ದಾರೆ.

ಪ್ರಣಾಳಿಕೆಗೆ ಸಲಹೆ ಮತ್ತು ಅಭಿಪ್ರಾಯ ನೀಡಲು ಮೊಬೈಲ್‌- 9845396204, 9845396804 ಮತ್ತು ideaskpjpuppi@ gmail.com

 

 

 

 

 

 

 

 

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸಂಬಂಧ

    ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನನ್ನು ತಿರಸ್ಕರಿಸುವುದಕ್ಕೆ ತೆಗೆದುಕೊಳ್ಳುವ ಸಮಯ ಕೇವಲ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?

  • ಸುದ್ದಿ

    ಬಿಹಾರದ ರಣಬಿಸಿಲಿಗೆ 117 ಜನ ಬಲಿ- ಗಯಾದಲ್ಲಿ ಸೆಕ್ಷನ್ 144 ಜಾರಿ……!

    ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್‍ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ….!ಇದನ್ನೊಮ್ಮೆ ಓದಿ..

    ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…

  • ಸುದ್ದಿ

    ಕಸ ತಂದುಕೊಟ್ಟು, ಊಟ ತಿಂಡಿ ಉಚಿತವಾಗಿ ಪಡೆಯಿರಿ:ಇದು ಗಾರ್ಬೇಜ್ ಹೋಟೆಲ್ ನ ವಿಶೇಷತೆ….!

    ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್‌ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್​ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್‌ ತ್ಯಾಜ್ಯ ಬಳಸಿ ನಗರದಲ್ಲಿ…

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…

  • ಸುದ್ದಿ

    ಸಿಎಂ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ನೀಡಿದ ಹಣ ಎಷ್ಟು ಗೊತ್ತಾ…?

    : ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್​​ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್​ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…