ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.
ಡೆತ್ ಕಣಿವೆಯಲ್ಲಿನ ಕಲ್ಲುಗಳು ತಮ್ಮದೆ ಆದ ನೌಕಾಯಾನವನ್ನು ನಡೆಸುತ್ತವೆ. ಈ ಕುರಿತು ಹಲವಾರು ಸಿದ್ಧಾಂತಗಳನ್ನು ಹಾಗೂ ವಿವರಣೆಗಳನ್ನು ನೀಡಲಾಗುತ್ತದೆ. ಆದರೆ ಅವು ಯಾವುದೂ ನಿಜವಾದ ತರ್ಕವನ್ನು ಒದಗಿಸುವಲ್ಲಿ ಯಶಸ್ವಿಯಾಗಲಿಲ್ಲ ಎಂದು ಹೇಳಲಾಗುತ್ತಿದೆ.
ಅತಿ ಹೆಚ್ಚು ಬಿಸಿ ಇರುವ ಪ್ರದೇಶ:-
ಡೆತ್ ವ್ಯಾಲಿ ಎನ್ನುವುದು ಒಂದು ಮರುಭೂಮಿಯ ಕಣಿವೆ. ಇದು ಕ್ಯಾಲಿಫೋರ್ನಿಯಾದಲ್ಲಿದೆ. ಇದನ್ನು ಡೆತ್ ವ್ಯಾಲಿ ಹಾಗೂ ಅತ್ಯಂತ ಬಿಸಿ ಅಥವಾ ತಾಪಮಾನ ಇರುವ ಪ್ರದೇಶ ಎಂದು ಹೇಳಲಾಗುತ್ತದೆ.
ಈ ಪ್ರದೇಶವು ಸುಮಾರು ಒಂದು ಶತಮಾನಗಳಷ್ಟು ಹಿಂದಿನ ರಹಸ್ಯ ಕಥೆಯನ್ನು ಒಳಗೊಂಡಿದೆ.
ಕಲ್ಲುಗಳು ತಾವಾಗಿಯೇ ಚಲಿಸುತ್ತವೆ:-
ಈ ಪ್ರದೇಶದಲ್ಲಿರುವ ಕಲ್ಲುಗಳು ತಾವಾಗಿಯೇ ಚಲಿಸುತ್ತವೆ ಎಂದು ಸಂಶೋಧಕರು ಹೇಳುತ್ತಾರೆ. ಆ ಕಲ್ಲನ್ನು ನೋಡುತ್ತಿರುವಾಗ ಅವು ಚಲಿಸುವುದಿಲ್ಲ. ಯಾರು ಇಲ್ಲದ ಸಮಯದಲ್ಲಿ ಚಲಿಸುತ್ತವೆ ಎಂದು ಹೇಳಲಾಗುತ್ತದೆ.
ಕಲ್ಲುಗಳು ಚಲಿಸುವ ಸ್ಥಳವನ್ನು “ರೇಟ್ರ್ಯಾಕ್ ಪ್ಲಾಯಾ” ಎಂದು ಕರೆಯುತ್ತಾರೆ. ಇದನ್ನು ತೇಲುವ ಕಲ್ಲುಗಳಿಗೆ ಹೆಸರಾದ ಒಣ ಸ್ಥಳ ಎಂತಲೂ ಕರೆಯುತ್ತಾರೆ.
ಇದು ರಹಸ್ಯವಾಗಿದೆ:-
ಈ ಒಣ ನೆಲದ ಮೇಲೆ ಕಲ್ಲುಗಳು ಸಾಗಿರುವ ಗುರುತನ್ನು ಕಾಣಬಹುದು. ಯಾವ ಮಾರ್ಗವಾಗಿ ಹೋಗಿದೆ ಎನ್ನುವುದನ್ನು ಸಹ ನಮಗೆ ಗೋಚರವಾಗುತ್ತದೆ. ಈ ಕಲ್ಲನ್ನು ಚಲಿಸಲು ಯಾವುದೇ ವ್ಯಕ್ತಿಯ ಬಲವನ್ನು ಬಳಸುವುದಿಲ್ಲ.
ಈ ಕ್ರಿಯೆಯು ತಾನಾಗಿಯೇ ನೈಸರ್ಗಿಕವಾಗಿ ನಡೆಯುತ್ತದೆ.
ನೋಡುವಾಗ ಕಾಣಿಸುವುದಿಲ್ಲ:-
ಯಾರಾದರೂ ನೋಡುವಾಗ ಈ ಕಲ್ಲುಗಳು ಚಲಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಇದು ನಿಜಕ್ಕೂ ಒಂದು ಆಶ್ಚರ್ಯಕರವಾದ ಸಂಗತಿಯಾಗಿದೆ. ಇನ್ನೊಂದು ವಿಚಾರವೆಂದರೆ ಇಲ್ಲಿರುವ ಎಲ್ಲಾ ಕಲ್ಲುಗಳು ಚಲಿಸುವುದಿಲ್ಲ. ಕೆಲವು ಕಲ್ಲುಗಳು ಮಾತ್ರ ಮುಂದೆ ಸಾಗುತ್ತವೆ ಎಂದು ಪರೀಕ್ಷಿಸಲಾಗಿದೆ.
ಚಲಿಸುವ ಕಲ್ಲುಗಳು ಸುಮಾರು 2-3 ವರ್ಷಗಳಿಗೊಮ್ಮೆ ಚಲಿಸುತ್ತವೆ. ಅಲ್ಲದೆ ಎಲ್ಲಾ ಕಲ್ಲುಗಳು ಒಂದೇ ಮಾರ್ಗದಲ್ಲಿ ಚಲಿಸುವುದಿಲ್ಲ. ಈ ಕಲ್ಲುಗಳು ಕಾಂತೀಯ ಪರಿಣಾಮದಿಂದ ಚಲಿಸುತ್ತದೆ ಎಂದು ನಂಬಲಾಗಿದೆ.
ವಿವಿಧ ಸಿದ್ಧಾಂತಗಳು:-
ಈ ಸ್ಥಳದಲ್ಲಿ ನಡೆಯುವ ಅಪರೂಪದ ವಿದ್ಯಮಾನದ ಬಗ್ಗೆ ಹಲವಾರು ಸಿದ್ಧಾಂತಗಳಿವೆ. ಡೆತ್ ವ್ಯಾಲಿಯಲ್ಲಿ ಬಲವಾದ ಗಾಳಿ ಬೀಸುತ್ತದೆ. ಅದರಿಂದಲೇ ಕಲ್ಲುಗಳು ಚಲಿಸುತ್ತವೆ ಎಂದು ಅನೇಕರು ಅಭಿಪ್ರಾಯಿಸುತ್ತಾರೆ.
ಗಾಳಿಗೆ ಚಲಿಸುವುದಾದರೆ ಕಲ್ಲು ಮಾತ್ರ ಏಕೆ ಚಲಿಸುತ್ತದೆ? ಎನ್ನುವುದು ಪ್ರಶ್ನೆಯಾಗಿದೆ.
ಇದು ಇನ್ನೂ ರಹಸ್ಯವಾಗಿಯೇ ಉಳಿದಿದೆ:-
ಕೆಲವು ಸಿದ್ಧಾಂತಗಳು ಮತ್ತು ಸಂಶೋಧನೆಗಳು ಗಾಳಿ ಮತ್ತು ಉಷ್ಣತೆಯ ಸಂಯೋಜನೆಯಿಂದ ಈ ವಿದ್ಯಮಾನ ಉಂಟಾಗುತ್ತದೆ ಎಂದು ಹೇಳುತ್ತವೆ.
ಈ ತೇಲುವ ಕಲ್ಲುಗಳು ಮಣ್ಣಿನ ಮೇಲ್ಮೈಗಳಲ್ಲಿ ಅಂಕುಡೊಂಕಾದ ಹಾದಿಯನ್ನು ಮಾಡುತ್ತದೆ. ಈ ವಿಚಾರವನ್ನು ತಿಳಿಯಲು ವರ್ಷಗಳಕಾಲ ಅಲ್ಲೇ ಕುಳಿತು ಅಧ್ಯಯನ ನಡೆಸಬೇಕಷ್ಟೇ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ. ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ. ”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ…
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…
ದರ್ಶನ್ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್ ಮಾಡಿದೆ ಎಂದು ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….
ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….