ಆರೋಗ್ಯ

ಪುದೀನಾ ಎಲೆಗಳಲ್ಲಿ ಇರುವ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

152

ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆರೋಗ್ಯ ಗುಣಗಳನ್ನು ಹೊರತುಪಡಿಸಿ ಪುದೀನಾ ಎಲೆಗಳು ಸೊಳ್ಳೆ ಮತ್ತು ಕೀಟಗಳನ್ನು ಓಡಿಸುವಲ್ಲಿ ಪರಿಣಾಮಕಾರಿ.

ಇದರಲ್ಲಿ ಕೀಟಾಣು ವಿರೋಧಿ ಗುಣಗಳಿವೆ. ಇಷ್ಟು ಮಾತ್ರವಲ್ಲದೆ ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು.

ಒಂದು ಲೋಟ ‘ಪುದೀನಾ ಜ್ಯೂಸ್‌’ನಲ್ಲಿದೆ ಔಷಧೀಯ ಶಕ್ತಿ! ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆರೋಗ್ಯ ಗುಣಗಳನ್ನು ಹೊರತುಪಡಿಸಿ ಪುದೀನಾ ಎಲೆಗಳು ಸೊಳ್ಳೆ ಮತ್ತು ಕೀಟಗಳನ್ನು ಓಡಿಸುವಲ್ಲಿ ಪರಿಣಾಮಕಾರಿ. ಪುದೀನಾ ಎಲೆಗಳಿಂದ ಆಗುವಂತಹ ಲಾಭಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ
ವಿಟಮಿನ್ ಸಿ ಹೆಚ್ಚಿಸುವುದು:-

ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವ ಪುದೀನಾ ಎಲೆಗಳು ಪ್ರತಿರೊಧಕ ಶಕ್ತಿ ಹೆಚ್ಚಿಸುವುದು. ನೀವು ಸೇವಿಸುವ ಆಹಾರದಲ್ಲಿ ಪುದೀನಾದ ಕೆಲವು ಎಲೆಗಳನ್ನು ಹಾಕಿದರೆ ಒಳ್ಳೆಯ ಫಲಿತಾಂಶ ಸಿಗುವುದು.

ಬಾಯಿಯ ಕೆಟ್ಟ ವಾಸನೆ ತಡೆಯುವುದು :-

ಪುದೀನಾದಲ್ಲಿ ಇರುವಂತಹ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಪುದೀನಾದ ಪ್ರಮುಖ ಆರೋಗ್ಯ ಗುಣಗಳಲ್ಲಿ ಒಂದಾಗಿದೆ.

ಕೆಲವು ಪುದೀನಾ ಎಲೆಗಳನ್ನು ತೆಗೆದುಕೊಂಡು ಜಗಿಯಿರಿ. ಇದು ಬಾಯಿಯಲ್ಲಿರುವ ಹಾನಿಕಾರಕ ಬ್ಯಾಕ್ಟೀರಿಯಾದ ನಿವಾರಣೆ ಮಾಡುವುದು.

ಅಜೀರ್ಣ ನಿವಾರಣೆ :-

ನೀವು ಅಜೀರ್ಣದಿಂದ ಬಳಲುತ್ತಾ ಇದ್ದರೆ ಪುದೀನಾ ಎಲೆಗಳು ನಿಮ್ಮ ನೆರವಿಗೆ ಬರಲಿದೆ. ಪುದೀನಾ ಎಲೆಗಳು ಜೊಲ್ಲುರಸದ ಗ್ರಂಥಿಗಳನ್ನು ಕ್ರಿಯಾತ್ಮಕಗೊಳಿಸುವುದು ಮತ್ತು ಕಿಣ್ವಗಳನ್ನು ಪ್ರೇರೇಪಿಸುವ ಮೂಲಕ ಜೀರ್ಣಕ್ರಿಯೆಗೆ ಶಕ್ತಿ ನೀಡುವುದು.

ಕೆಲವು ತಾಜಾ ಪುದೀನಾ ಎಲೆಗಳನ್ನು ತೆಗೆದುಕೊಂಡು ಅದನ್ನು ಒಂದು ಲೋಟ ನೀರಿಗೆ ಹಾಕಿ ಮತ್ತು ಐದು ನಿಮಿಷ ಕಾಲ ಹಾಗೆ ಬಿಡಿ. ಬಳಿಕ ನೀರನ್ನು ಕುಡಿಯಿರಿ.

ಶ್ವಾಸಕೋಶದ ರೋಗ ತಡೆಯುವುದು:-

ನಿಮಗೆ ಕೆಲವೊಮ್ಮೆ ಉಸಿರಾಡಲು ತುಂಬಾ ಕಷ್ಟವಾಗುತ್ತಿದೆ ಎಂದಾದರೆ ನೀವು ಕೆಲವು ಪುದೀನಾ ಎಲೆಗಳನ್ನು ತೆಗೆದುಕೊಳ್ಳಿ. ಪುದೀನಾ ಎಲೆಗಳಲ್ಲಿ ರೊಸ್ಮರಿನಿಕ್ ಆಮ್ಲವಿದೆ. ಇದು ಆ್ಯಂಟಿಆಕ್ಸಿಡೆಂಟ್ ನಿಂದ ಸಮೃದ್ಧವಾಗಿದೆ.

ಇದು ಫ್ರೀ ರ್ಯಾಡಿಕಲ್ ಅನ್ನು ತಟಸ್ಥಗೊಳಿಸುವುದು ಮತ್ತು ಉರಿಯೂತದ ರಾಸಾಯನಿಕವನ್ನು ನಿರ್ಬಂಧಿಸುವುದು. ಇದರಿಂದ ಉಸಿರಾಟದ ವ್ಯವಸ್ಥೆಗೆ ಪರಿಣಾಮವಾಗುವುದು. ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಪುದೀನಾವನ್ನು ಬಳಸಿಕೊಂಡರೆ ಉಸಿರಾಟದ ಸಮಸ್ಯೆ ನಿವಾರಣೆಯಾಗುವುದು.

ತಲೆನೋವು ಮತ್ತು ವಾಕರಿಕೆ ನಿವಾರಣೆ :-

ಪುದೀನಾ ಎಲೆಗಳಲ್ಲಿ ಉರಿಯೂತ ಶಮನಕಾರಿ ಮತ್ತು ಆ್ಯಂಟಿಆಕ್ಸಿಡೆಂಟ್ ಗುಣಗಳು ಇವೆ. ಪುದೀನಾ ಎಣ್ಣೆ ತೆಗೆದುಕೊಂಡು ಅದನ್ನು ಹಣೆಗೆ ಹಚ್ಚಿಕೊಳ್ಳಿ ಇದರಿಂದ ತಲೆನೋವು ಮತ್ತು ವಾಕರಿಕೆ ನಿವಾರಣೆಯಾಗುವುದು.

ತೂಕ ಕಳೆದುಕೊಳ್ಳಲು:-

ಪುದೀನಾ ತುಂಬಾ ಕಡಿಮೆ ಕ್ಯಾಲರಿಗಳನ್ನು ಒಳಗೊಂಡಿರುವಂತಹ ಗಿಡಮೂಲಿಕೆ ಮತ್ತು ಇದರಲ್ಲಿ ನಾರಿನಾಂಶವು ಅಧಿಕವಾಗಿದೆ. ಪುದೀನಾ ಎಲೆಗಳು ಜೀರ್ಣಕ್ರಿಯೆ ಕಿಣ್ವಗಳನ್ನು ಉತ್ತೇಜಿಸುವುದು.

ಇದರಿಂದ ಆಹಾರದಲ್ಲಿರುವ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಾಧ್ಯವಾಗುವುದು. ಕೊಬ್ಬು ದಹಿಸುವ ಮೂಲಕ ಶಕ್ತಿ ಬಿಡುಗಡೆಯಾಗುವುದು. ನಿಮಗೆ ತೂಕ ಕಳೆದುಕೊಳ್ಳಬೇಕೆಂದು ಮನಸ್ಸಿದ್ದರೆ ಪುದೀನಾವನ್ನು ದೈನಂದಿನ ಆಹಾರದಲ್ಲಿ ಬಳಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    “ನಮ್ಮದು ಮಾಟಮಂತ್ರ ಮಾಡೋ ಕುಟುಂಬ ಅಲ್ಲ, ನನಗಿನ್ನೂ ಹುಚ್ಚು ಹಿಡಿದಿಲ್ಲ” ; ಅಚ್ಚರಿಯ ಹೇಳಿಕೆ ಕೊಟ್ಟ ಕುಮಾರಸ್ವಾಮಿ….!

    ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…

  • ಜೀವನಶೈಲಿ

    ನೀವು ಮಧ್ಯಾಹ್ನ ನಿದ್ದೆ ಮಾಡ್ತೀರಾ..!ಹಾಗಾದ್ರೆ ನಿಮ್ಗೆ ಇಲ್ಲಿದೆ ನೋಡಿ ಸಖತ್ ಸುದ್ದಿ…

    ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು

  • ದೇಶ-ವಿದೇಶ

    ಅಮೇರಿಕಾವನ್ನು ಧ್ವಂಸ ಮಾಡುವುದಾಗಿ, ಬಹಿರಂಗವಾಗಿ ಸವಾಲು ಹಾಕಿದ ಈ ಸರ್ವಾಧಿಕಾರಿ!

    ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಕಡಲೆ ಕಾಯಿಯಲ್ಲಿದೆ ಈ 6 ಅದ್ಭುತ ಆರೋಗ್ಯದ ಗುಟ್ಟುಗಳು..!

    ಬಡವರ ಬಾದಾಮಿ ಎಂದೇ ಕರೆಯುವ ಕಡಲೆಕಾಯಿಯಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಸದಾ ನೀವು ಯಂಗ್ ಆಗಿ ಕಾಣುವಂತೆ ಮಾಡುವುದಲ್ಲದೆ, ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತೆ. ಹಾಗಾದ್ರೆ ಕಡಲೆ ಕಾಯಿಯನ್ನು ತಿನ್ನುವುದರಿಂದ ಇನ್ನು ಹಲವಾರು ಪ್ರಯೋಜನಗಳಿವೆ.. *ಪ್ರತಿದಿನ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಗ್ಯಾಸ್ ಮತ್ತು ಎಸಿಡಿಟಿ ಸಮಸ್ಯೆ ಶಮನವಾಗುತ್ತದೆ.ಜೊತೆಗೆ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. *ದಿನಾಲೂ ಪುರುಷ ಹಾಗೂ ಮಹಿಳೆ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಹಾರ್ಮೋನುಗಳು ಸಮತೋಲನದಲ್ಲಿದ್ದು ಅವರ ಲೈಂಗಿಕ…

  • ಸುದ್ದಿ

    ಹೈಕೋರ್ಟ್ ಮಹತ್ವದ ತೀರ್ಪು:LLR ಇದ್ದರೂ ಅಪಘಾತವಾದ ವೇಳೆ ಪರಿಹಾರ ನೀಡಬೇಕು…!

    ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಸ್ಮರಿಸುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…