ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

“ವೈಕುಂಠಏಕಾದಶಿ” ಇದರಲ್ಲಿ ಎರಡು ಪದಗಳು ಸೇರಿಕೊಂಡಿವೆ. ಒಂದು “ವೈಕುಂಠ”, ಎರಡನೆಯದು ಏಕಾದಶಿ, ಮೊದಲು ಇವುಗಳ ಸ್ಥೂಲ ಅರ್ಥ ಹೀಗಿದೆ: “ವೈಕುಂಠ” ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರು ಬರಲು ಕಾರಣ ಚಾಕ್ಷುಷ ಮನ್ವಂತರದಲ್ಲಿ ವಿಷ್ಣುವು ವಿಕುಂಠ ಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತೆಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ.
“ಏಕಾದಶಿ” ಎಂದರೆ ಹನ್ನೊಂದನೆಯ ತಿಥಿ. “ಏಕಾದಶಿ” ಒಂದು ವ್ರತ. ಏಕಾದಶಿ ದಿನದಂದು ಉಪವಾಸವಿದ್ದು, ದ್ವಾದಶಿಯ ದಿನ, ಆ ತಿಥಿಯಲ್ಲಿಯೇ ನಿತ್ಯಕರ್ಮ ಮುಗಿಸಿ ಭೋಜನ ಮಾಡಬೇಕು. ದಶಮಿಯಂದು ಅಂದರೆ ಏಕಾದಶಿಯ ಹಿಂದಿನ ದಿನ ಒಂದು ಹೊತ್ತು ಮಧ್ಯಾಹ್ನ ಊಟಮಾಡಿ, ಭೋಗಗಳನ್ನು ತ್ಯಜಿಸಿ, ಮರುದಿನ ಏಕಾದಶಿ ಉಪವಾಸಮಾಡಬೇಕು. ಇಲ್ಲಿ ಉಪವಾಸ ಎಂದರೆ ಆಹಾರ ಸೇವಿಸದಿರುವುದು ಎಂಬುದೊಂದು ಅರ್ಥವಾದರೆ ಇನ್ನೊಂದು ಅರ್ಥ ಭಗವಂತನ ಸಮೀಪದಲ್ಲಿರುವುದು. ಎಂದರೆ ಶುಚಿರ್ಭೂತನಾಗಿ ಎಡಬಿಡದೆ ಭಗವಂತನ ಸ್ಮರಣೆಮಾಡುತ್ತಿರುವುದು ಎಂದರ್ಥ.

ವೈಕುಂಠ ಏಕಾದಶಿಯ ಪ್ರಾಮುಖ್ಯತೆ ಪದ್ಮ ಪುರಾಣದಲ್ಲಿ ಉಲ್ಲೇಖವಾಗಿದೆ. ಪುರಾಣದ ಪ್ರಕಾರ ವಿಷ್ಣುವು ಏಕಾದಶಿ, ಅಂದರೆ ಹೆಣ್ಣಿನ ರೂಪ ಪಡೆದು ಮುರನ್ ಎಂಬ ರಾಕ್ಷಸನನ್ನು ಮಾರ್ಗಶಿರ ಮಾಸದಲ್ಲಿ ಕೊಲ್ಲುತ್ತಾನೆ. ಇಂದಿನ ದಿನ ವಿಷ್ಣುವನ್ನು ಯಾರು ಪೂಜಿಸುತ್ತಾರೋ ಅಂಥವರು ಸತ್ತ ಮೇಲೆ ಮೋಕ್ಷವನ್ನು ಪಡೆದು ವೈಕುಂಠವನ್ನು ಸೇರುತ್ತಾರೆ ಎಂದು ವಿಷ್ಣು ಹೇಳುತ್ತಾನೆ.

ಅಂದು ವೈಕುಂಠ ಏಕಾದಶಿ ಆಚರಣೆ ಮಾಡಲು ಇಷ್ಟ ಪಟ್ಟವರು ಹುಳಿ, ಉಪ್ಪು, ಖಾರ ಇರುವ ತಿಂಡಿಗಳನ್ನು ಸೇವಿಸಬಾರದು.ಹಾಲು,ಬಾಳೆಹಣ್ಣು,ಸಜ್ಜಿಗೆ ತಿನ್ನಬಹುದು. ಎಲ್ಲಾ ಏಕಾದಶಿಯ ದಿನಗಳ ಹಾಗೆ ಇಂದಿನ ದಿನವೂ ಜನರು ಉಪವಾಸ ಮಾಡಿ ಇಡೀ ರಾತ್ರಿ ಜಾಗರಣೆ ಮಾಡುತ್ತಾರೆ. ಕೆಲವರು ಜಪ, ತಪ್ಪಸ್ಸು ಹಾಗು ಹರಿ ಕೀರ್ತನೆಯನ್ನು ಹಾಡುತ್ತಾರೆ. ಏಕಾದಶಿಯಂದು ಅಕ್ಕಿ ಸೇವಿಸುವುದಲ್ಲಿ ಏಕೆಂದರೆ ನಂಬಿಕೆಗಳ ಪ್ರಕಾರ ಮುರನ್ ಎಂಬ ರಾಕ್ಷಸನು, ತಿಂದಿರುವ ಅನ್ನದ ಅಗಳಲ್ಲಿ ಏಕಾದಶಿಯ ದಿನ ಅವಿತುಕೊಂಡಿರುತ್ತಾನೆ.

ಇಂದಿನ ದಿನ ವೈಕುಂಠದ ಬಾಗಿಲಿಗಳು ತೆರೆದಿರುತ್ತದೆ. ವಿಷ್ಣು ದೇವಸ್ಥಾನಗಳಲ್ಲಿ ಈ ದಿನ ಅತಿ ವಿಶೇಷವಾದದ್ದು ಹಾಗು ಇಂದಿನ ದಿನ ವೈಕುಂಠ ದ್ವಾರ ಎಂಬ ಬಾಗಿಲನ್ನು ತೆರೆಯಲಾಗುತ್ತದೆ. ಗರ್ಭ ಗುಡಿಯ ಒಳಭಾಗವನ್ನು ಸುತ್ತುವರೆದಿರುವ ಈ ದ್ವಾರದ ಮೂಲಕ ಭಕ್ತರು ಪ್ರದಕ್ಷಿಣೆಯನ್ನು ಹಾಕುತ್ತಾರೆ. ವೈಕುಂಠ ಏಕಾದಶಿ ಶ್ರೀರಂಗಂ ನಲ್ಲಿರುವ ರಂಗನಾಥ ಸ್ವಾಮಿ ದೇವಸ್ಥಾನ, ತಿರುಮಲ ತಿರುಪತಿ ಬಾಲಾಜಿ ದೇವಸ್ಥಾನ, ಭದ್ರಾಚಲಂ ದೇವಸ್ಥಾನ ಹಾಗು ಮುಂತಾದ ದೇವಸ್ಥಾನಗಳಲ್ಲಿ ಬಹಳ ವಿಶೇಷ.
ಈ ದಿನ ವೈಕುಂಠದ ಬಾಗಿಲು ತೆರೆದಿರುತ್ತದೆ ಎಂದು ವೈಷ್ಣವ ಆಲಯಗಳಲ್ಲಿ ಉತ್ತರ ದ್ವಾರದ ಬಳಿ ಮುಂಜಾನೆ ಭಗವಂತನ ದರ್ಶನಕ್ಕಾಗಿ ಕಾದಿರುತ್ತಾರೆ.ವೈಕುಂಠ ಏಕಾದಶಿಯ ದಿನ ಶ್ರೀಮನ್ನಾರಾಯಣನ ದರ್ಶನ ಮಾಡಿ, ವೈಕುಂಠ ದ್ವಾರದ ಮೂಲಕ ಹೊರ ಬರಬೇಕು. ಹೀಗೆ ಮಾಡಿದ್ರೆ ಸಪ್ತ ಜನ್ಮದಲ್ಲಿ ಮಾಡಿದ ಪಾಪಗಳೂ ನಾಶವಾಗುತ್ತವೆ ಅನ್ನೋದು ನಂಬಿಕೆ.
ವೈಕುಂಠ ದ್ವಾರದಲ್ಲಿ ತೋರಿ ಹೋಗುವುದೆಂದರೆ ನಾವು ತಲೆ ಬಾಗಿ ಹೋಗಬೇಕು. ಇಲ್ಲಿ ತಲೆ ಬಾಗುವುದರ ಅರ್ಥ ಏನೆಂದರೆ,ನಮ್ಮ ಅಹಂಕಾರವನ್ನು ಕಳೆದುಕೊಳ್ಳುವುದು.ಅಂದರೆ ನಾವು ಅಹಂಕಾರ ಬಿಟ್ಟಾಗ ಮಾತ್ರ ನಿಜವಾದ ಭಗವಂತನ ದರ್ಶನವಾಗುತ್ತದೆ.

ವೈಕುಂಠ ಏಕಾದಶಿಯನ್ನು ಈ ಹೆಸರಿನಲ್ಲಿ ಕೂಡ ಕರೆಯುತ್ತಾರೆ. ಈ ದಿನದಂದು ವಿಷ್ಣುವಿನ ಆರಾಧನೆಯನ್ನು ಮಾಡುವುದು ಜನನ ಮತ್ತು ಮರಣದ ನೋವಿನಿಂದ ಮುಕ್ತಿಯನ್ನು ನೀಡುತ್ತದೆ ಎಂದಾಗಿದೆ. ಈ ಚಕ್ರದಿಂದ ಆತ್ಮವು ಬಿಡುಗಡೆ ಹೊಂದಿ, ವಿಷ್ಣುವಿನ ಪಾದದಲ್ಲಿ ಸಮಾಧಾನವನ್ನು ಹೊಂದುತ್ತದೆ ಎಂದಾಗಿದೆ. ಆದ್ದರಿಂದ ಈ ಪವಿತ್ರ ದಿನದಂದು ವಿಷ್ಣು ಭಕ್ತರು ಉಪವಾಸವನ್ನು ಕೈಗೊಳ್ಳುತ್ತಾರೆ.
ಈ ದಿನ ಮಹಾವಿಷ್ಣು ಗರುಡ ವಾಹನದ ಮೇಲೆ ಮೂರು ಕೋಟಿ ದೇವತೆಗಳೊಂದಿಗೆ ಭೂಲೋಕಕ್ಕೆ ಇಳಿದುಬಂದು ಭಕ್ತರಿಗೆ ದರ್ಶನ ನೀಡುತ್ತಾನೆ. ಆದಕಾರಣ ಇದಕ್ಕೆ ಮುಕ್ಕೋಟಿ ಏಕಾದಶಿ ಎಂಬ ಹೆಸರು . ಈ ದಿನ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜೆಗಳು , ಹೋಮ, ಹವನ ಜಪ ,ತಪಗಳು ನಡೆಯುತ್ತವೆ .ಈ ದಿನ ಉಪವಾಸ ಹಾಗು ಜಾಗರಣೆ ಮಾಡಿದರೆ ಒಳ್ಳೆಯದಂತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….
ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
https://kolarnewsepaper.blogspot.com
ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ವಿಶೇಷ ಘಟನೆಗೆ ಸಾಕ್ಷಿಯಾಗಿದೆ. ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನಕ್ಕೆ ಕಾಲಿಡಲು ಮೈಸೂರು ದಸರಾ ವೇದಿಕೆಯಲ್ಲೇ ಮುನ್ನುಡಿ ಬರೆದಿದ್ದಾರೆ. ಯುವ ದಸರಾದಲ್ಲಿ ನಿವೇದಿತಾ ಅವರಿಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ರಂಗೇರಿದ್ದು ಕಾರ್ಯಕ್ರಮ ಮುಗಿಯುವ ವೇಳೆಯಲ್ಲಿ ಚಂದನ್ ಶೆಟ್ಟಿ ವೇದಿಕೆಯಲ್ಲಿಯೇ ಐ ಲವ್ ಯು ಹೇಳಿದ್ದಾರೆ….