News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕರ್ನಾಟಕ

ರಾಷ್ಟ್ರಕವಿ ಕುವೆಂಪುರವರಿಗೆ ಗೂಗಲ್‌ ಡೂಡಲ್‌ ಗೌರವ…ಗೂಗಲ್‌ ಮುಖಪುಟದಲ್ಲಿ ರಾರಾಜಿಸುತ್ತಿರುವ ಕನ್ನಡದ ಕಂಪು…

1140

ಇಂದು ಡಿಸೆಂಬರ್‌ 29  ರಾಷ್ಟ್ರಕವಿ  ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್‌ ಕವಿಗೆ ಗೂಗಲ್‌ ವಿಶೇಷ ಡೂಡಲ್‌ ಮೂಲಕ ಗೌರವ ಸಲ್ಲಿಸಿದೆ.

ಮಲೆನಾಡಿನ ಹಚ್ಚಹಸಿರು ಪರಿಸರ, ಕಾಜಾಣ, ಕವಿಶೈಲ, ಬಂಡೆ ಕಲ್ಲಿನ ಮೇಲೆ ಕುಳಿತಿರುವ ಕುವೆಂಪು ಅವರು ಬರೆಯುವುದರಲ್ಲಿ ಮಗ್ನರಾಗಿದ್ದಾರೆ. ಚಿತ್ರದ ಹಿಂಬದಿ ಕನ್ನಡದಲ್ಲಿ ಗೂಗಲ್‌ ಎಂದು ಬರೆಯಲಾಗಿದೆ.

ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ 29, 1904 – ನವೆಂಬರ್ 11, 1994), ಕನ್ನಡದ ಅಗ್ರಮಾನ್ಯ ಕವಿ,ಕಾದಂಬರಿಕಾರ,ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು

ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ ‘ಯುಗದ ಕವಿ ಜಗದ ಕವಿ’ ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ ‘ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು.

ಬಾಲ್ಯ

ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ 29, 1904ರಲ್ಲಿ ಜನಿಸಿದರು. ತಂದೆ ವೆಂಕಟಪ್ಪಗೌಡ; ತಾಯಿ ಸೀತಮ್ಮ. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಕಳೆಯಿತು.

ಶಿಕ್ಷಣ

ಕುವೆಂಪು ಅವರ ಆರಂಭಿಕ ವಿದ್ಯಾಭ್ಯಾಸ ಕೂಲಿಮಠದಲ್ಲಿ ಆಯಿತು. ಮಾಧ್ಯಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ನಡೆಯಿತು. ನಂತರ ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ ತಮ್ಮ ಶಿಕ್ಷಣ ಮುಂದುವರಿಸಿದರು. ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿಯನ್ನೂ, ಕನ್ನಡದಲ್ಲಿ ಎಂ.ಎ. ಪದವಿಯನ್ನೂ ಪಡೆದರು. ಟಿ.ಎಸ್.ವೆಂಕಣ್ಣಯ್ಯನವರು ಇವರಿಗೆ ಗುರುಗಳಾಗಿದ್ದರು.

ವೃತ್ತಿಜೀವನ

ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ನಂತರ ಪ್ರಾಂಶುಪಾಲರೂ ಆಗಿದ್ದರು. ನಂತರ ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದರು. ತಮ್ಮ ಕಲ್ಪನೆಯ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು. ವಿಶ್ವವಿದ್ಯಾನಿಲಯವನ್ನು ಅಧ್ಯಯನಾಂಗ, ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು. ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದರು.

ವೈವಾಹಿಕ ಜೀವನ

ಕುವೆಂಪು ಅವರು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ ಅಗ್ರಮಾನ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕೋಕಿಲೋದಯ ಚೈತ್ರ ಅವರು ಇಂಜಿನಿಯರ್ ಆಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಚಿದಾನಂದಗೌಡ ಅವರು ಕುವೆಂಪು ಅವರ ಅಳಿಯ.

ನಿಧನ

ಕುವೆಂಪು ಅವರು ನವೆಂಬರ್ 11, 1994ರಂದು ಮೈಸೂರಿನಲ್ಲಿ ನಿಧನರಾದರು. ತಮ್ಮ ಹುಟ್ಟೂರಾದ ಕುಪ್ಪಳಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ ಸಮಾಧಿ ಒಂದು ಸ್ಮಾರಕವಾಗಿದೆ.

ಸಾಹಿತ್ಯ:-

ಬೊಮ್ಮನಹಳ್ಳಿ ಕಿಂದರಿ ಜೋಗಿ, ಕೊಳಲು, ಕಥನ ಕವನಗಳು, ಕಲಾ ಸುಂದರಿ, ನವಿಲು, ಪಕ್ಷಿಕಾಶಿ, ಶ್ರೀರಾಮಾಯಣ ದರ್ಶನಂ ಮಹಾಕಾವ್ಯವೂ ಸೇರಿ 30ಕ್ಕೂ ಹೆಚ್ಚು ಕಾವ್ಯ ಕೃತಿಗಳು. ಜಲಗಾರ, ಯಮನಸೋಲು, ವಾಲ್ಮೀಕಿ ಭಾಗ್ಯ ಸ್ಮಶಾನ ಕುರುಕ್ಷೇತ್ರ, ಮಹಾರಾತ್ರಿ, ರಕ್ತಾಕ್ಷಿ, ಬಿರುಗಾಳಿ, ಬೆರಳ್‌ಗೆ ಕೊರಳ್, ಶೂದ್ರ ತಪಸ್ವಿ, ಇತರೆ ನಾಟಕಗಳು, ಕಾನೂರು ಹೆಗ್ಗಡತಿ, ಮಲೆಗಳಲ್ಲಿ ಮದುಮಗಳು ಕಾದಂಬರಿಗಳು, ವಿಮರ್ಶೆ/ಕಾವ್ಯ ಮೀಮಾಂಸೆ-ಕಾವ್ಯ ,ಶಿಶುಸಾಹಿತ್ಯ ಹೀಗೆ ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ. ಜ್ಞಾನಪೀಠ, ರಾಜ್ಯ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಪದ್ಮಭೂಷಣ, ಪಂಪ ಪ್ರಶಸ್ತಿ ಸೇರಿ ಅನೇಕ ಗೌರವಗಳು ಸಂದಿವೆ.

ಮೂಲ:

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

    ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ…

  • Health

    ನೆಗಡಿ,ಡಸ್ಟ್ ಅಲರ್ಜಿ ಇದೆಯಾ ಆಗಾದರೆ ಇಲ್ಲಿದೆ ಅದಕ್ಕೆ ಸೂಕ್ತ ಪರಿಹಾರ..!

    ಬೇಸಿಗೆ ದಿನಗಳಲ್ಲಿ ಧೂಳು ಹೆಚ್ಚಾಗಿ ಅಲರ್ಜಿ ಯಾದಂತೆ ಆಗುತ್ತದೆ ಆಗ ಮೂಗಿನಲ್ಲಿ ಸೋರುವಿಕೆ ಹೆಚ್ಚಾಗಿರುತ್ತದೆ ಅಥವಾ ಸೀನುವುದು ಕೂಡ ಹೆಚ್ಚಿರುತ್ತದೆ ಮತ್ತು ಮಳೆಗಾಲದಲ್ಲಿ ಮತ್ತು ಚಳಿಗಾಲದಲ್ಲಿ ಪ್ರಕೃತಿಯಲ್ಲಿ ತಣ್ಣನೆ ವಾತಾವರಣ ಇರುವ ಕಾರಣದಿಂದಾಗಿಯೂ ಕೂಡ ಹೆಚ್ಚಿನ ಜನಕ್ಕೆ ಶೀತವಾಗುತ್ತದೆ ಹೀಗೆ ಆಗುವುದರಿಂದ ಜನರು ಬೇಗನೆ ಶಾಪ್ಗಳಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಂಡು ಬಂದು ಅದನ್ನು ನುಂಗಿ ಬಿಡುತ್ತಾರೆ ಆದರೆ ಅದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಮತ್ತು ಹೆಚ್ಚಾಗಿ ಮಾತ್ರೆಗಳನ್ನು ನುಂಗುವುದರಿಂದ ನಮ್ಮ ದೇಹದ ಇಮ್ಯೂನಿಟಿ ಪವರ್ ಅಂದರೆ…

  • ಜ್ಯೋತಿಷ್ಯ, ಭವಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

      ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ಯಾವುದೂ ಬೇಡ ಎಂದು ಮಂಕಾಗಿ ಕುಳಿತುಕೊಳ್ಳುವ ಸ್ಥಿತಿ ನಿಮ್ಮದು. ಆದರೆ ಬಹು ಪರಿವರ್ತನೆಗೆ ಕಾಲ ಉತ್ತಮವಾಗಿದೆ. ನಿರಾಸೆ ಬಿಟ್ಟು ಮುಂದಕ್ಕೆ ಅಡಿ ಇಡಿ. ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಯಾಗುವುದು….

  • ಆರೋಗ್ಯ

    ಹೆಚ್ಚು ಸಮಯ ಕಲಸಿಟ್ಟ ಹಿಟ್ಟನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ? ನೋಡಿ.

    ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು  ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…