ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ಐಟಿ ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಕೆಲ ಉದ್ಯೋಗಿಗಳನ್ನು ಕಿತ್ತು ಹಾಕಲು ಮುಂದಾಗುತ್ತಿದ್ದು, ಈಗ ಸಹೋದ್ಯೋಗಿಗಳ ನಡುವೆ ವೈಮನಸ್ಸು ತರುವ ಕೆಲಸಕ್ಕೆ ಹೈ ಹಾಕಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಅಸಮರ್ಥ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಒಂದೊಂದೆ ತಂತ್ರವನ್ನು ಅನುಸರಿಸಲು ಆರಂಭಿಸಿದೆ. ಈಗ ಉದ್ಯೋಗಿಯೊಬ್ಬ ತನ್ನ ಉದ್ಯೋಗವನ್ನು ಉಳಿಸಿಕೊಳ್ಳಲು ಬೇರೆ ಒಬ್ಬ ಉದ್ಯೋಗಿಯನ್ನು ಮನೆಗೆ ಕಳುಹಿಸಬೇಕಾದ ಸಂದರ್ಭ ಒದಗಿ ಬಂದಿದೆ, ಎಂದು ಉದ್ಯೋಗಿಗಳ ಹೇಳಿಕೆಯನ್ನು ಆಧರಿಸಿ ವರದಿಯಾಗಿದೆ.
ಕಂಪೆನಿಗೆ ವೆಚ್ಚದಾಯಕವಾಗಿರುವ ಉದ್ಯೋಗಿಗಳನ್ನು ಗುರುತಿಸಿ ಅವರನ್ನು ಕೆಲಸದಿಂದ ಕಿತ್ತು ಹಾಕುವಂತೆ ಕಂಪೆನಿಯ ಹಿರಿಯ ಅಧಿಕಾರಿಗಳು ಎಚ್ಆರ್ಗೆ ಆದೇಶಿಸಿದ್ದಾರೆ.
ಇದರಂತೆ ಕೆಲ ಕಂಪೆನಿಗಳ ಎಚ್ಆರ್ಗಳು ಕೆಲ ಉದ್ಯೋಗಿಗಳಿಗೆ ಕರೆ ಮಾಡಿ, ಕಡಿಮೆ ವೇತನ ಪಡೆದು ಕೆಲಸವನ್ನು ತೊರೆಯುವಂತೆ ಹೇಳಿದ್ದಾರೆ. ಇನ್ನು ಕೆಲ ಕಂಪೆನಿಗಳು, ನಿಮಗೆ ಇಷ್ಟೊಂದು ವೇತನ ನೀಡಲು ಕಷ್ಟವಾಗುತ್ತದೆ. ಹೀಗಾಗಿ ಒಂದೋ ನೀವು ಕಂಪೆನಿ ತೊರೆಯಿರಿ, ಇಲ್ಲವೇ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೆಂದು ರೆಫರ್ ಮಾಡಿ ಎಂದು ಹೇಳಿದ್ದಾರೆ.
ಎಚ್ಆರ್ಗಳ ಮೂಲಕ ಈ ಆಟವನ್ನು ಆಡಿ ಕಂಪೆನಿಗಳು ಮನರಂಜನೆಯನ್ನು ತೆಗೆದುಕೊಳ್ಳುತ್ತಿದ್ದರೆ, ಉದ್ಯೋಗಿಗಳು ತಮ್ಮ ನೋವಿನ ವಿಚಾರವನ್ನು ಮಾಧ್ಯಮಗಳಲ್ಲಿ ತೋಡಿಕೊಂಡಿದ್ದಾರೆ.
ಐಟಿ ಉದ್ಯೋಗಿಯೊಬ್ಬರು ಹೇಳಿರುವ ಪ್ರಕಾರ ಕಂಪೆನಿಗಳ ಆಟ ಹೇಗಿರುತ್ತೆ ಗೊತ್ತಾ?
ಬೆಂಗಳೂರಿನ ನೊಂದ ಐಟಿ ಉದ್ಯೋಗಿಯೊಬ್ಬರು ಕಂಪೆನಿ ಹೇಗೆ ಉದ್ಯೋಗಿಗಳ ಜೊತೆ ನಡೆದುಕೊಳ್ಳುತ್ತಿದೆ ಎನ್ನುವುದನ್ನು ವಿವರಿಸುತ್ತಾ, ಕಳೆದ ತಿಂಗಳ 23ರಂದು ಎಚ್ಆರ್ ಮ್ಯಾನೇಜರ್ ಅವರನ್ನು ಭೇಟಿಯಾಗುವಂತೆ ನನಗೆ ಕರೆ ಬಂತು. ಹೀಗಾಗಿ ನಾನು ಹೈದರಾಬಾದ್ನಲ್ಲಿರುವ ಎಚ್ಆರ್ ಮುಖ್ಯಸ್ಥರ ಜೊತೆ ವಿಡಿಯೋ ಚಾಟ್ ಮಾಡುತ್ತಿರುವಾಗ, “ನೀನು ಉದ್ಯೋಗವನ್ನು ತೊರೆಯಬೇಕು. ನಿನಗೆ 2 ವಾರ ಸಮಯವಕಾಶ ಮತ್ತು 2 ತಿಂಗಳ ಮೂಲ ವೇತನ ನೀಡುತ್ತೇವೆ” ಎಂದರು.
ಇದಾದ ಬಳಿಕ 29ರಂದು ಕರೆ ಮಾಡಿ “ಇನ್ನು ಯಾಕೆ ರಾಜೀನಾಮೆ ನೀಡಿಲ್ಲ” ಎಂದು ಪ್ರಶ್ನಿಸಿದರು. ನಾನು “ರಾಜೀನಾಮೆ ನೀಡುವುದಿಲ್ಲ” ಎಂದೆ. ಇದಕ್ಕೆ ಅವರು “ನಿಮ್ಮ ಕಾಂಟ್ರಾಕ್ಟ್ ಟರ್ಮಿನೇಟ್ ಮಾಡುತ್ತೇವೆ. ಈ ರೀತಿ ಮಾಡಿದರೆ ಮುಂದೆ ಬೇರೆ ಯಾವ ಕಂಪೆನಿಯಲ್ಲೂ ಕೆಲಸ ಸಿಗುವುದಿಲ್ಲ” ಎಂದು ಬೆದರಿಸಿದರು. 31 ರಂದು ಕರೆ ಮಾಡಿ, “ನಿನ್ನ ಬದಲಿಗೆ ಬೇರೊಬ್ಬ ಉದ್ಯೋಗಿಯನ್ನು ರೆಫರ್ ಮಾಡು, ಆತನನ್ನು ಕೆಲಸದಿಂದ ತೆಗೆದು ಹಾಕಲಾಗುವುದು” ಎನ್ನುವ ವಿಚಿತ್ರ ಆಫರ್ ನೀಡಿದರು.
ಅದೇ ದಿನ ನನಗೆ ಆಟೋಮೇಟೆಡ್ ಇಮೇಲ್ ಬಂತು. ಅದರಲ್ಲಿ “ಕಂಪನಿಯಲ್ಲಿ ಇದು ನಿನ್ನ ಕೊನೆಯ ದಿನ. ಇಂದಿನಿಂದ ನಿನಗೆ ನೀಡಿರುವ ಕಂಪನಿ ಇಮೇಲ್ ಐಡಿ ಹಾಗೂ ಇತರ ಸೇವೆಗಳನ್ನು ರದ್ದು ಮಾಡಲಾಗುತ್ತಿದೆ” ಎಂದು ತಿಳಿಸಲಾಗಿತ್ತು. ಆದರೆ ಈ ಮೇಲ್ ಬಗ್ಗೆ ಎಚ್.ಆರ್. ಕಡೆಯಿಂದ ಯಾವುದೇ ಅಧಿಕೃತ ಕರೆ ಬರಲಿಲ್ಲ ಎಂದು ಅವರು ತಮ್ಮ ನೋವನ್ನು ತೊಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್ಮೆಂಟ್ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…
ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.
72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕ್ರಮ ಸಂಖ್ಯೆ, ಚಿಹ್ನೆ, ಪಕ್ಷ ???????