ಸುದ್ದಿ

ಇರುವೆ ಬಗೆಗಿನ ಈ 15 ವಿಷಯಗಳು ನಮ್ಮನ್ನ ರೋಮಾಂಚನಗೊಳಿಸುತ್ತೆ..!

2431

ಇರುವೆ ಎಲ್ಲರಿಗೂ ಚಿರಪರಿಚಿತ. ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.

ಇರುವೆ ಬಗೆಗಿನ ಈ 15 ವಿಷಯಗಳು ತಿಳಿದ್ರೆ, ನಮ್ಗೆ ರೋಮಾಂಚನವಾಗ್ದೆ ಇರಲ್ಲ…

  1. ಇರುವೆಗಳು ತಮ್ಮ ಕಟ್ಟುನಿಟ್ಟಾದ ಮತ್ತು ಶಿಸ್ತುಬದ್ಧ ಕುಟುಂಬ ಜೀವನಕ್ಕೆ ಹೆಸರಾಗಿವೆ.


source

2. ಇರುವೆಗಳು ತಮ್ಮ ಶಾರೀರಿಕ ಗುಣಗಳಿಗನುಗುಣವಾಗಿ ಹೆಣ್ಣಿರುವೆಗಳು, ಗಂಡಿರುವೆಗಳು ಮತ್ತು ರಾಣಿ ಇರುವೆಗಳೆಂದು ವಿಭಾಗಿಸಲ್ಪಡುತ್ತವೆ

3. ಇರುವೆಗಳು ವಿಶ್ವದ ಬಹುತೇಕ ಎಲ್ಲಾ ಭೂಪ್ರದೇಶಗಳಲ್ಲೂ ಕಂಡುಬರುತ್ತವೆ.

4. ಒಂದು ಅಂದಾಜಿನ ಪ್ರಕಾರ ಜಗತ್ತಿನ ಎಲ್ಲಾ ಇರುವೆಗಳ ಒಟ್ಟು ತೂಕವು ಭೂಮಿಯ ನೆಲದ ಮೇಲಿನ ಪ್ರಾಣಿಗಳ ಒಟ್ಟಾರೆ ತೂಕದ 15% ದಿಂದ 25% ರಷ್ಟಾಗುವುದು.


source

5. ಇರುವೆಗಳಲ್ಲಿ 12,000 ಕ್ಕೂ ಅಧಿಕ ತಳಿಗಳಿವೆ.

6. ಥೊರಾಕ್ಸ್ ಎಂದು ಕರೆಯಲ್ಪಡುವ ಇರುವೆಯ ಮುಂಡದಲ್ಲಿ ಆರು ಕಾಲುಗಳಿರುತ್ತವೆ. ಪ್ರತಿ ಕಾಲಿನ ತುದಿಯಲ್ಲಿ ಕೊಕ್ಕೆಯಂತೆ ಬಾಗಿರುವ ಉಗುರಿನ ರಚನೆಯಿದ್ದು ಇದು ಇರುವೆಗೆ ಹತ್ತುವಲ್ಲಿ ಮತ್ತು ವಸ್ತುಗಳಿಗೆ ಜೋತುಬೀಳುವುದಕ್ಕೆ ನೆರವಾಗುತ್ತದೆ.

7. ರಾಣಿ ಇರುವೆಯು ೩೦ ವರ್ಷಗಳವರೆಗೆ ಜೀವಿಸಬಲ್ಲುದು. ಕೆಲಸಗಾರ ಇರುವೆಗಳ ಆಯುಷ್ಯ ೧ ರಿಂದ ೩ ವರ್ಷಗಳು. ಆದರೆ ಗಂಡಿರುವೆಗಳು ಕೆಲವೇ ವಾರಗಳವರೆಗೆ ಜೀವಿಸಿರುವುವು.

8. ಇರುವೆಗಳು ಕಚ್ಚುವುದರ ಮೂಲಕ ಮತ್ತು (ಕೆಲ ತಳಿಗಳಲ್ಲಿ) ಕೊಂಡಿಯಿಂದ ಕುಟುಕುವುದರ ಮೂಲಕ ಆಕ್ರಮಣ ಮತ್ತು ಸ್ವರಕ್ಷಣೆ ಎರಡನ್ನೂ ಸಾಧಿಸುತ್ತವೆ.

9. ದಕ್ಷಿಣ ಅಮೆರಿಕಾದ ಬುಲೆಟ್ ಇರುವೆಗಳ ಕುಟುಕು ಸಮಸ್ತ ಕೀಟಜಗತ್ತಿನಲ್ಲಿಯೇ ಅತಿ ತೀಕ್ಷ್ಣವಾದುದು.

10. ಆಸ್ಟ್ರೇಲಿಯಾದ ಜ್ಯಾಕ್ ಜಂಪರ್ ಇರುವೆಗಳ ಕುಟುಕುವಿಕೆಯಿಂದಾಗಿ ಕೆಲ ಮಾನವರು ಸಾವನ್ನಪಿದ್ದರೆ ಮತ್ತು ಪ್ರತಿ ವರ್ಷ ಅನೇಕ ಜನ ಆಸ್ಪತ್ರೆಗೆ ದಾಖಲಾಗುತ್ತಾರೆ.


source

11. ಮಾನವನನ್ನು ಹೊರತುಪಡಿಸಿದರೆ ಇರುವೆಯು ಆಹಾರಕ್ಕಾಗಿ ವ್ಯವಸಾಯದಲ್ಲಿ ತೊಡಗುವ ಏಕೈಕ ಪ್ರಾಣಿಯಾಗಿದೆ.

12. ಎಲ್ಲಾ ತರಹದ ಇರುವೆಗಳೂ ಸಂಘಜೀವಿಗಳಲ್ಲ. ಆಸ್ಟ್ರೇಲಿಯಾದ ಬುಲ್‌ಡಾಗ್ ಇರುವೆಯು ಅತಿ ಪ್ರಾಚೀನ ತಳಿಯಾಗಿದ್ದು ಗಾತ್ರದಲ್ಲಿ ಬಲು ದೊಡ್ಡದು. ಈ ಇರುವೆಯು ಒಂಟಿಯಾಗಿಯೇ ಬೇಟೆಯಾಡುತ್ತದೆ.

13. ಆಫ್ರಿಕಾದ ಸೈಫು ಇರುವೆಯು ಹೊಟ್ಟೆಬಾಕತನಕ್ಕೆ ಹೆಸರಾದುದು. ಇವುಗಳ ಸೈನ್ಯ ಹೊಲ ತೋಟಗಳಿಗೆ ನುಗ್ಗಿ ಅಲ್ಲಿನ ಎಲ್ಲಾ ಕೀಟಗಳನ್ನೂ ಭಕ್ಷಿಸಿ ಬಲು ಬೇಗ ಮುಂದೆ ಹೊರಟುಬಿಡುವುದರಿಂದ ಆಫ್ರಿಕಾದ ಮಸಾಯ್ ಜನಾಂಗದವರು ಇವನ್ನು ಬಲು ಗೌರವದಿಂದ ಕಾಣುವರು.


source

14. ಇರುವೆಗಳ ಜೀವನ ಕ್ರಮ ವಿಸ್ಮಯಕರಆ ಕಾರಣದಿಂದಲೇ ‘ಇರುವೆ ವಿಜ್ಞಾನ’ (ಮರ್ಮೆಕಾಲಜೀ) ಎಂಬೊಂದು ವಿಶಿಷ್ಟ ವಿಜ್ಞಾನ ಶಾಖೆಯೇ ಅಸ್ತಿತ್ವದಲ್ಲಿದೆ.

15. ಇರುವೆಗಳ ಶರೀರ ಶಕ್ತಿ ಅಸಾಮಾನ್ಯ. ಭಾರ ಎಳೆಯುವ, ಎತ್ತುವ ಸಾಮರ್ಥ್ಯ ಅವಕ್ಕೆ ವಿಪರೀತ. ತಮ್ಮ ಶರೀರಕ್ಕಿಂತ ಬಹುದೊಡ್ಡ ಗಾತ್ರದ ತಮ್ಮ ಶರೀರದ ಐವತ್ತು ಪಟ್ಟು ತೂಕದ ವಸ್ತುಗಳನ್ನು ಅವು ಸಲೀಸಾಗಿ, ವೇಗವಾಗಿ ಸಾಗಿಸುತ್ತವೆ. ತಮ್ಮ ದೇಹದ ನೂರಾರು ಮಡಿ ತೂಕದ ವಸ್ತುಗಳನ್ನು ಹೊರಬಲ್ಲ ಪ್ರಭೇದಗಳೂ ಇವೆ.

ಕೃಪೆ:-upscgk

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಕ್ಕಳು ಶುಭ ವಾರ್ತೆಯನ್ನು ತರಲಿದ್ದಾರೆ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ…

  • ಆಧ್ಯಾತ್ಮ

    ರೋಗಮುಕ್ತ ಜೀವನಕ್ಕಾಗಿ ಯೋಗಾಭ್ಯಾಸ ಮಾಡಿ

    ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…

  • Home quarantine, Lockdown, Top News

    ಕ್ವಾರಂಟೀನ್ ನಲ್ಲಿದ್ದರೂ ಒಂದುಗೂಡಿ ನಮಾಜ್…!! ಮೂರ್ಖತನ

    ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
    ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.

  • ಸುದ್ದಿ

    ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ one plus 7t…!

    ಒನ್‌ಪ್ಲಸ್‌ನ ಜನಪ್ರಿಯ  ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್‌ಪ್ಲಸ್ 7 ಸರಣಿಯ ಬಳಿಕ ಒನ್‌ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.  ಹೊಸ ಸ್ನ್ಯಾಪ್‌ಡ್ರ್ಯಾಗನ್ 855 Plus ಚಿಪ್‌ಸಹಿತ ನೂತನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ.  ಈಗಾಗಲೇ ಒನ್‌ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…

  • ಸ್ಪೂರ್ತಿ

    ಮಸೀದಿಯಲ್ಲಿ ತಯಾರದ ಶಿವ ಭಂಡಾರಾದ ಅಡುಗೆ ……!

    ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್‌ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…

  • ಸುದ್ದಿ

    ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ವಿಜಯವನ್ನು ಸಾಧಿಸಿದ ಎಂ,ಟೆಕ್ ಪದವೀಧರ,..ಇದನ್ನೊಮ್ಮೆ ಓದಿ..?

    ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…