ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.
ಕೋಳಿಮಾಂಸದ ಅಂಗಡಿಗೆ ಹೋದಾಗ ಅಂಗಡಿಯವರು ಸ್ಕಿನ್ ಔಟ್ ಅಥವಾ ಸ್ಕಿನ್ ಬರ್ನ್ ಮಾಡಬೇಕೇ ಎಂದು ಕೇಳುತ್ತಾರೆ. ಇದರ ಅರ್ಥ ಚರ್ಮವನ್ನು ಉಳಿಸಬೇಕೇ ಬೇಡವೇ ಎಂದು. ಕೆಲವರು ಚರ್ಮವನ್ನು ಉಳಿಸಿ ಎಂದು ಹೇಳುತ್ತಾರೆ.
ಆಗ ಪುಕ್ಕವನ್ನು ನಿವಾರಿಸಿ ಚರ್ಮಸಹಿತ ಮಾಂಸವನ್ನು ನೀಡುತ್ತಾರೆ. ಚರ್ಮ ಬೇಡವೆನ್ನುವವರು ಇದರಲ್ಲಿ ಕೊಬ್ಬು ಇದೆ, ಇದರಲ್ಲಿ ಕೊಲೆಸ್ಟ್ರಾಲ್ ಇದೆ, ಇದು ಹೃದಯಕ್ಕೆ ಒಳ್ಳೆಯದಲ್ಲ ಎಂಬ ಕಾರಣಗಳನ್ನು ನೀಡುತ್ತಾರೆ.
ಕೊಬ್ಬಿನ ಬಗ್ಗೆ ಅರಿಯುವುದಾದರೆ ಒಂದು ಔನ್ಸ್ ನಷ್ಟು ಚರ್ಮದಲ್ಲಿ ಕೇವಲ ಎಂಟು ಗ್ರಾಂ ಅಪರ್ಯಾಪ್ತ ಕೊಬ್ಬು ಮತ್ತು ಮೂರು ಗ್ರಾಂ ಪರ್ಯಾಪ್ತ ಕೊಬ್ಬು ಇದೆ.
ಚರ್ಮದಲ್ಲಿ ಯಾವ ಬಗೆಯ ಕೊಬ್ಬು ಇದೆ? ಚರ್ಮವನ್ನು ಪರೀಕ್ಷಿಸಿದ ತಜ್ಞರಿಗೆ ಇದರಲ್ಲಿ ಮೋನೋ ಅಪರ್ಯಾಪ್ತ ಕೊಬ್ಬು (ಅಥವಾ ಓಲಿಕ್ ಅಮ್ಲ) ಕಂಡುಬಂದಿದೆ. ಈ ಆಮ್ಲದ ಹೆಗ್ಗಳಿಕೆ ಎಂದರೆ ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸುತ್ತದೆ. ಅಂದರೆ ಇದುವರೆಗೆ ನಾವು ಹೆದರಿದಂತೆ ಹೃದಯ ಸ್ತಂಭನದ ಸಾಧ್ಯತೆಯನ್ನು ಹೆಚ್ಚಿಸುವುದಿಲ್ಲ, ಬದಲಿಗೆ ಕಡಿಮೆಗೊಳಿಸುತ್ತದೆ. ಅಲ್ಲದೇ ದೇಹದಲ್ಲಿ ಹಾರ್ಮೋನುಗಳ ಪ್ರಮಾಣವನ್ನೂ ನಿಯಂತ್ರಿಸುತ್ತದೆ.
ಕೋಳಿಮಾಂಸ ತಿನ್ನುವವರು ಕ್ಯಾಲೋರಿಗಳ ಬಗ್ಗೆ ಭಾರೀ ಚಿಂತಾಕ್ರಾಂತರಾಗಿರುತ್ತಾರೆ. ಆದರೆ ಚರ್ಮಸಹಿತ ಮತ್ತು ಚರ್ಮರಹಿತ ಮಾಂಸದಲ್ಲಿ ಕ್ಯಾಲೋರಿಗಳಲ್ಲಿ ಹೆಚ್ಚಿನ ವ್ಯತ್ಯಾಸವೇನೂ ಇರುವುದಿಲ್ಲ. ಚರ್ಮಸಹಿತ ಮಾಂಸದಲ್ಲಿ ಕೆಲವೇ ಕ್ಯಾಲೋರಿಗಳು ಹೆಚ್ಚಿರುತ್ತವೆ ಅಷ್ಟೇ.
ಇನ್ನೊಂದು ಉತ್ತಮ ಗುಣವೆಂದರೆ ಚರ್ಮಸಹಿತ ಮಾಂಸ ಕಡಿಮೆ ಎಣ್ಣೆಯನ್ನು ಹೀರಿಕೊಳ್ಳುತ್ತದೆ. ಚರ್ಮರಹಿತ ಮಾಂಸ ಎಣ್ಣೆಯನ್ನು ಹೆಚ್ಚಾಗಿ ಹೀರಿಕೊಳ್ಳುವ ಕಾರಣ ಅಡುಗೆಯ ಸಮಯದಲ್ಲಿ ಹೆಚ್ಚಿನ ಎಣ್ಣೆಯನ್ನು ಹಾಕಬೇಕಾಗುತ್ತದೆ.
ಆದರೆ ಚರ್ಮಸಹಿತ ಮಾಂಸವನ್ನು ಹೆಚ್ಚು ತಿನ್ನಬಹುದೇ? ತಜ್ಞರ ಪ್ರಕಾರ ಇಲ್ಲ! ಏಕೆಂದರೆ ಚರ್ಮದ ಪ್ರಮಾಣ ಹೆಚ್ಚಾದರೆ ಇದು ದೇಹದಲ್ಲಿ ಉರಿಯೂತವನ್ನು ಉಂಟುಮಾಡುತ್ತದೆ. ಆದ್ದರಿಂದ ಚರ್ಮದ ಪ್ರಮಾಣ ಮಿತವಾಗಿರುವುದು ತುಂಬಾ ಅಗತ್ಯ.
ಚರ್ಮಸಹಿತ ಮಾಂಸ ಸೇವಿಸಿದರೆ ಕೊಂಚ ಪ್ರಮಾಣಕ್ಕೇ ತೃಪ್ತಿಯಾಗುವ ಕಾರಣ ಹೆಚ್ಚಿನ ಪ್ರಮಾಣ ಸೇವಿಸುವ ಅಗತ್ಯವಿಲ್ಲ. ಆದರೆ ಚರ್ಮರಹಿತ ಮಾಂಸ ತಿಂದರೆ ಎಷ್ಟು ತಿಂದರೂ ತೃಪ್ತಿ ಸಿಗದ ಕಾರಣ ಹೆಚ್ಚು ಹೆಚ್ಚು ತಿನ್ನಲು ಪ್ರೇರೇಪಿಸುತ್ತದೆ.
ಒಂದು ವೇಳೆ ನೀವು ಮಾಂಸವನ್ನು ಹುರಿಯುವುದಾದರೆ ಚರ್ಮ ಗರಿಗರಿಯಾಗುವಷ್ಟು ಹುರಿಯಬೇಡಿ. ಏಕೆಂದರೆ ಕಪ್ಪಗಾದ ಚರ್ಮ ಎಲ್ಲಾ ಒಳ್ಳೆಯ ಗುಣಗಳನ್ನು ಕಳೆದುಕೊಳ್ಳುತ್ತದೆ ಹಾಗೂ ಕಪ್ಪಗಾದ ಭಾಗ ಇಂಗಾಲಕ್ಕೆ ಪರಿವರ್ತನೆಗೊಂಡು ಆರೋಗ್ಯಕ್ಕೆ ಮಾರಕವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…
ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು ಮಂಗಳೂರು ಕಟೀಲ್ ದುರ್ಗಾ ಪರಮೇಶವರೀ ದೇವಸ್ಥಾನ ಮೂಡಬಿದ್ರಿ. ಸುಮಾರು ೫ ಕೆ.ಮ್ ಅಷ್ಟು ದೂರದಲೇ ಇರುವುಧು ಈ ಮಂದಿರ. ಇತೀಹಾಸ : ಸುಮಾರು ೧೪೮೭ ಇತೀಹಾಸವೀರುವ ಗುಹಾಲಯದಲೇ ಶಿವನ ಲಿಂಗ ಇರುವುಧು. ೬೬೦ ಅಡೀ ಉದ್ದಾ ಹಾಗೂ ೨ ಅಡೀ ಯಥರ ಇರುವ ಗುಹೆಯ್ಯ್ಯ ಲೀ ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ ಬೇಕು . ಗುಹೆಯ್ಯ್ಯ ಲೀ ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ ಈ …
ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.
ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…
ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…
ನೀರಿನ ಸಂರಕ್ಷಣೆಗಾಗಿ ನ್ಯೂಸ್ 18 ಹಮ್ಮಿಕೊಂಡಿರುವ #Mission Paani ಆಂದೋಲನ ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….