ಸರ್ಕಾರದ ಯೋಜನೆಗಳು

ಈಗ ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯ ಮಾತ್ರವಲ್ಲ ಬಸ್, ರೈಲು, ವಿಮಾನ ಟಿಕೆಟ್ ಸಿಗುತ್ತೆ…!ತಿಳಿಯಲು ಇದನ್ನು ಓದಿ..

200

ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.

“ನ್ಯಾಯಬೆಲೆ ಅಂಗಡಿಗಳು ಇನ್ನು ಮುಂದೆ ಸೇವಾ ಸಿಂಧು ಕೇಂದ್ರಗಳಾಗಿ ಪರಿವರ್ತಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕ”ಸಚಿವ ಯು.ಟಿ. ಖಾದರ್‌ ಹೇಳಿದ್ದಾರೆ.ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಜೊತೆಗೆ ಬಸ್‌, ರೈಲು, ವಿಮಾನ ಟಿಕೆಟ್‌ ಸೇರಿದಂತೆ ಅಗತ್ಯ ಸೇವೆಗಳನ್ನು ಒದಗಿಸುವ ವ್ಯವಸ್ಥೆ ಕಲ್ಪಿಸಲಾಗುವುದು.

ಕೇಂದ್ರ ಸರ್ಕಾರ ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಸಿ ಎಸ್ಪಿವಿ) ಏಜೆನ್ಸಿ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ ಉಚಿತವಾಗಿ ಬ್ರಾಡ್‌ಬ್ಯಾಂಡ್‌ ಸಂಪರ್ಕ ಕಲ್ಪಿಸಿ ಕೊಡಲಾಗುತ್ತದೆ. ಇದರಿಂದ ನ್ಯಾಯಬೆಲೆ ಅಂಗಡಿಯವರಿಗೆ ಆದಾಯ ಬರುತ್ತದೆ. ರಾಜ್ಯ ಸರ್ಕಾರ ನ್ಯಾಯಬೆಲೆ ಅಂಗಡಿಯವರಿಗೆ ನೀಡುವ ಕಮಿಷನ್‌ನನ್ನು ಮೂರು ವರ್ಷಗಳವರೆಗೆ ಸಿಎಸ್ಸಿ ಎಜೆನ್ಸಿಗೆ ನೀಡಲಾಗುವುದು ಎಂದು ಹೇಳಿದರು..

ಪ್ರಾಥಮಿಕ ಹಂತದಲ್ಲಿ ಬೆಂಗಳೂರಿನ ಒಟ್ಟು 10 ನ್ಯಾಯಬೆಲೆ ಅಂಗಡಿಗಳಲ್ಲಿ ಈ ಸೇವೆ ಪ್ರಾರಂಭಗೊಳ್ಳಲಿವೆ. ಬೊಮ್ಮಸಂದ್ರ, ಮತ್ತಿಕೆರೆ, ರೆಹಮತ್​ನಗರ ನ್ಯಾಯಬೆಲೆ ಅಂಗಡಿಗಳಲ್ಲಿ ಈ ಎಲ್ಲ ಸೇವೆಗಳನ್ನು ಆಹಾರ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ.ನ್ಯಾಯಬೆಲೆ ಅಂಗಡಿ ಎಂದರೆ ಕೇವಲ ಪಡಿತರ ವಿತರಣೆ ಮಾತ್ರವಲ್ಲ, ವಿವಿಧ ಸೇವೆಗಳು ಲಭ್ಯವಾಗುವಂತೆ ಮಾಡಬೇಕು. ಆ ಮೂಲಕ ನ್ಯಾಯಬೆಲೆ ಅಂಗಡಿಗಳನ್ನು ಸೇವಾ ಕೇಂದ್ರಗಳನ್ನಾಗಿ ಪರಿವರ್ತಿಸಲು ಪ್ರಮುಖ ಹೆಜ್ಜೆಯನ್ನು ಇರಿಸಲಾಗುತ್ತಿದೆ. ಇದು ದೇಶದ ಇತಿಹಾಸದಲ್ಲಿಯೇ ಮೊದಲ ಪ್ರಯತ್ನ ಎನ್ನಲಾಗಿದೆ.

ವಿಸ್ತರಣೆ ಉದ್ದೇಶ:-

ರಾಜ್ಯದಲ್ಲಿ ಒಟ್ಟು 24 ಸಾವಿರ ನ್ಯಾಯಬೆಲೆ ಅಂಗಡಿಗಳಿವೆ. ಹಂತಹಂತವಾಗಿ ರಾಜ್ಯದ ಇತರೆ ಜಿಲ್ಲೆಗಳಿಗೂ ಯೋಜನೆ ವಿಸ್ತರಿಸಲು ಉದ್ದೇಶಿಸಲಾಗಿದೆ. ಸಾರಿಗೆ, ವಿಮಾನಯಾನ, ಬೆಸ್ಕಾಂ ಹಾಗೂ ಜನರ ನಡುವಿನ ಕೊಂಡಿಯಾಗಿ ನ್ಯಾಯಬೆಲೆ ಅಂಗಡಿಗಳು ಕಾರ್ಯ ನಿರ್ವಹಿಸಲಿವೆ. ಸಂಬಂಧಪಟ್ಟ ಇಲಾಖೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಫ್ರಾಂಚೈಸಿ ಪಡೆದುಕೊಳ್ಳಲಿವೆ. ಬೆಂಗಳೂರು ಒನ್ ಮಾದರಿ ಸೇವೆಗಳು ಇಲ್ಲಿ ಲಭ್ಯವಾಗಲಿವೆ.

ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಇದು ದೊಡ್ಡ ವರದಾನವಾಗಲಿದೆ. ಬಸ್ ಹಾಗೂ ರೈಲು ಟಿಕೆಟ್​ಗಳನ್ನು ಮುಂಗಡವಾಗಿ ಕಾಯ್ದಿರಿಸಲು ನಗರ ಪ್ರದೇಶಗಳಿಗೆ ಬರುವ ಅನಿವಾರ್ಯತೆಯನ್ನು ತಪ್ಪಿಸಲು ಸರ್ಕಾರ ಈ ಸೌಲಭ್ಯ ನೀಡುತ್ತಿದೆ.ನ್ಯಾಯಬೆಲೆ ಅಂಗಡಿಗಳನ್ನು ಸೇವಾ ಕೇಂದ್ರಗಳನ್ನಾಗಿ ಪರಿವರ್ತಿಸಿ ಎಲ್ಲ ಸೇವೆಯೂ ಒಂದೆಡೆ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಇದು ಬಹು ವಿಶೇಷ ಯತ್ನ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರತದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಜಗತ್ತಿನ ಹಲವು ನಗರಗಳು ಇನ್ನು 30 ವರ್ಷಗಳಲ್ಲಿ ಮಾಯವಾಗಲಿದೆ, ಹೇಗೆ ಗೊತ್ತಾ,?

    ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…

  • corona

    ಕೋವಿಡ್-19 ಮಾರ್ಗಸೂಚಿ ಪಾಲನೆಗೆ ಸೂಚನೆ

    ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ  (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಛೇರಿಗಳು…

  • ಉಪಯುಕ್ತ ಮಾಹಿತಿ, ದೇಶ-ವಿದೇಶ

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಕನ ಓದಿ…

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್‍ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.

  • ಆರೋಗ್ಯ

    ನೆಲ್ಲಿಕಾಯಿಯಲ್ಲಿರುವ ಔಷದಿ ಗುಣಗಳ ಬಗ್ಗೆ ..! ತಿಳಿಯಲು ಈ ಲೇಖನ ಓದಿ…

    ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…

  • ಸುದ್ದಿ

    ನೀವು ತಿರುಪತಿ ತಿಮ್ಮಪ್ಪನಿಗೆ ಮೂಡಿ ಅರ್ಪಿಸುತ್ತಿದ್ದೀರಾ ಯಾಕೆ ಅಂತ ಕಾರಣ ಗೊತ್ತಾ?ಗೊತ್ತಿಲ್ಲದಿದ್ದರೆ ತಿಳಿಯಿರಿ,!

    ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…

  • ಉಪಯುಕ್ತ ಮಾಹಿತಿ

    ನಿಮ್ಮ ಮುಖದ ಮೇಲಿನ ಅನಾವಶ್ಯಕ ಕೂದಲನ್ನು ತೆಗೆಯಲು ಹೀಗೆ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…