ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.

ಒಂದು ಕಾಲದಲ್ಲಿ ನರೇಂದ್ರ ಮೋದಿಯವರಿಗೆ ವೀಸಾ ಕೊಡೋದಿಲ್ಲ ಎಂದು ಹೇಳುತ್ತಿದ್ದ ಜಗತ್ತಿನ ದೊಡ್ಡಣ್ಣ ಅಮೇರಿಕಾ, ಅದೇ ಮೋದಿಯವರನ್ನು ತಾವಾಗೆ ಅಮೆರಿಕಾಕ್ಕೆ ಬೇಟಿ ಕೊಡಿ ಎಂದು ಆಹ್ವಾನಿಸುತ್ತಾರೆ. ಹಾಗೆ ಅಲ್ಲಿಗೆ ಹೋದ ಮೋದಿಯವರಿಗೆ ಅಭೂತಪೂರ್ವ ಸ್ವಾಗತ ಸಿಗುತ್ತೆ. ಮೊದಲಿಗಿಂತಲೂ ಈಗ ಭಾರತ ಅಮೆರಿಕಾದ ಭಾಂದವ್ಯ ಹೆಚ್ಚಾಗಿದೆ.

ಬೇರೆ ದೇಶಗಳು ಹೇಗೆ ಮೋದಿ ಮಾತುಗಳನ್ನು, ಆಜ್ಞೆಯಂತೆ ಪಾಲಿಸುತ್ತವೆ ಎಂಬುದಕ್ಕೆ, ಒಂದು ಉದಾಹರಣೆ ಹೇಳಬೇಕಂದ್ರೆ ಇತ್ತೀಚೆಗಷ್ಟೇ ಸೌದಿ ಅರೇಬಿಯಾ ದೇಶವು ಯೆಮನ್ ದೇಶದ ಮೇಲೆ ಯುದ್ದ ಸಾರಿತ್ತು. ಆಗ ಯೆಮನ್ ದೇಶದಲ್ಲಿರುವ ಭಾರತೀಯರನ್ನು ರಕ್ಷಿಸಲು ಸಚಿವೆ ಸುಶ್ಮಾಸ್ವಾರಜ್’ರವರು ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತನಾಡಿದ್ರು. ಭಾರತೀಯರ ರಕ್ಷಣೆಗಾಗಿ ಮೋದಿಯವರು, ಸೌದಿ ಅರೇಬಿಯಾ ಅಧ್ಯಕ್ಷ ಸಲ್ಮಾನ್ ಬಿನ್ ಅಬ್ದುಲಾಜಿಜ್’ವರೆಗೂ ಫೋನ್ ಕಾಲ್ ಮಾಡಿ, ತಕ್ಷಣವೇ ಯೆಮನ್ ಮೇಲಿನ ಯುದ್ದ ನಿಲ್ಲಿಸಿ, ನಮ್ಮವರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದಾಗ, ಮೋದಿಯವರ ಮಾತಿಗೆ ಎದುರಾಡದ ಸಲ್ಮಾನ್ ಬಿನ್ ಅಬ್ದುಲಾಜಿಜ್ ಯುದ್ದವನ್ನು ನಿಲ್ಲಿಸಿದ್ರು. ಇದು ಜಗತ್ತಿನ ರಾಷ್ಟ್ರಗಳು ಹೇಗೆ ಮೋದಿ ಮಾತಿಗೆ ಗೌರವ ಕೊಡುತ್ತವೆ ಎಂಬುದನ್ನು ಎತ್ತಿ ತೋರಿಸುತ್ತೆ.

ಭಾರತ ದೇಶವು ಕಳೆದೆ ವರ್ಷ ನಡೆದ ಗಡಿ ಕದನದಿಂದ ಏಷಿಯಾದಲ್ಲಿಯೇ ತಾನು ಚೀನಾಕ್ಕಿಂತ ಬಲಶಾಲಿ ಎಂಬುದನ್ನು ಹಲವಾರು ಬಾರಿ ಸಾಬೀತು ಪಡಿಸುತ್ತಾ ಬಂದಿದೆ.ಭಾರತವು ಪಕ್ಕದಲ್ಲಿರುವ ಪಾಪಿ ಪಾಕಿಸ್ತಾನವನ್ನು ಬಿಟ್ಟು, ಚೀನಾಕ್ಕಿಂತಲೂ ಉಳಿದೆಲ್ಲಾ ದೇಶಗಳೊಂದಿಗೆ ಬೆಳೆಸುತ್ತಿರುವ ಭಾಂದವ್ಯ,ಏಷಿಯಾದ ಹಿರಿಯಣ್ಣನಾಗಿ ಅಧಿಕಾರ ಪಡೆಯುವಲ್ಲಿ ಮುನ್ನುಗ್ಗುತ್ತಿದೆ.ಜಪಾನ್, ವಿಯೆಟ್ನಾಮ್, ಕೋರಿಯಾ, ತೈವಾನ್ಗಳನ್ನೆಲ್ಲ ತನ್ನೆಡೆಗೆ ಸೆಳೆದುಕೊಂಡಿರುವ ಭಾರತ, ಟಿಬೆಟ್ನಲ್ಲೂ ಕೈಯ್ಯಾಡಿಸಿ ಶಕುನಿ ಚೀನಾಕ್ಕೆ ಉಸಿರುಗಟ್ಟುವಂತೆ ಮಾಡುತ್ತಿದೆ.
ಮೋದಿ ಸರ್ಕಾರ ಬಂದಾಗಿನಿಂದ ಮೋದಿಯವರು ಬರೀ ಬೇರೆ ದೇಶಗಳನ್ನು ಸುತ್ತುವುದೇ ಆಗಿದೆ ಎಂಬ ಮಾತು ಕೇಳಿಬಂದದ್ದು ಸುಳ್ಳಲ್ಲ. ಆದ್ರೆ ಜಗತ್ತಿನ ಅನೇಕ ದೇಶಗಳನ್ನು ಭೇಟಿ ಮಾಡಿದ ಮೋದಿ ಅವರೊಂದಿಗೆ ಬಹಳ ಗಟ್ಟಿಯಾದ ಬಾಂಧವ್ಯವನ್ನು ಸ್ಥಾಪಿಸಿ ಬಂದಿದ್ದಾರೆ. ಅಮೇರಿಕ, ಜಪಾನ್, ಆಸ್ಟ್ರೇಲಿಯಾ, ಇಸ್ರೇಲ್ಗಳನ್ನೆಲ್ಲ ತಮ್ಮೆಡೆಗೆ ಸೆಳೆದುಕೊಂಡು, ಮುಂಗೋಲಿಯ, ಶ್ರೀಲಂಕಾ, ತೈವಾನ್ಗಳೂ ಚೀನಾ ವಿರುದ್ಧ ತಿರುಗಿ ಬೀಳುವಂತೆ ಮಾಡಿ ಚೀನಾಕ್ಕೆ ಮೋದಿ ಕಂಟಕಪ್ರಾಯವಾಗಿಬಿಟ್ಟಿದ್ದಾರೆ. ಶಕುನಿ ಚೀನಾ ದೇಶವು ಡೋಕ್ಲಾಂನಲ್ಲಿ ನಮ್ಮೆದುರಾಗಿ ನಿಂತು,1962ರ ಯುದ್ಧವನ್ನು ನೆನಪಿಸಿ ಭಾರತೀಯ ಸೈನಿಕರ ಆತ್ಮಸ್ತೈರವನ್ನಕೆಣಕಲು ಪ್ರಯತ್ನಿಸಿತ್ತು. ಆದ್ರೆ ಭಾರತವು ಇದಕ್ಕೆ ಪ್ರತಿಯಾಗಿ ಇದು ಇದು 1962 ಅಲ್ಲ, 2017 ಎಂದಾಗ ಚೀನಾ ದೇಶಕ್ಕೆ ಬಾಲ ಮುದುರಿದ ನಾಯಿಯಂತಾಗಿತ್ತು.
ಆಗ ಮೋದಿ ಅಮೇರಿಕಾ-ಇಸ್ರೇಲ್ ಪ್ರವಾಸದಲ್ಲಿದ್ದರು.ಇನ್ನೇನು ನಾವು ಭಾರತದಲ್ಲಿ ಯುದ್ದ ಮಾಡಿಯೇ ಬಿಡುತ್ತೇವೆ ಎಂಬ ಉತ್ಸಾಹದಲ್ಲಿತ್ತು.ಅದೇ ಟೈಮಿಗೆ ಸರಿಯಾಗಿ ದಕ್ಷಿಣ ಚೀನಾ ಸಮುದ್ರಕ್ಕೆ ಲಗ್ಗೆಯಿಟ್ಟ ಅಮೇರಿಕಾ-ಜಪಾನ್ ದೇಶದ ಹಡಗುಗಳು ಚೀನಾವನ್ನು ನಡುಗುವಂತೆ ಮಾಡಿದವು.ಈ ಹೊತ್ತಲ್ಲಿಯೇ ಭಾರತದ ಪರ ನಿಂತ ತೈವಾನ್ ದೇಶವು ಎಣ್ಣೆ ಬಾವಿ ಕೊರೆಯುವ ಒಪ್ಪಂದವನ್ನು ನವೀಕರಿಸಿ ಚೀನಾ ವಿರುದ್ದ ಸೆಟೆದು ನಿಂತಿತು.ಭಾರತವನ್ನೇ ತನ್ನ ಚಕ್ರವ್ಯೂಹದಲ್ಲಿ ಸಿಕ್ಕಿಸಲು ಹೋರಾಟ ಶಕುನಿ ಚೀನಾ, ತಾನು ಎನೆದ ಚಕ್ರವ್ಯೂಹದಲ್ಲಿ ತಾನೇ ಸಿಕ್ಕಿಹಾಕಿಕೊಂಡಿತ್ತು.

ಜಗತ್ತಿನ ಅನೇಕ ದೇಶಗಳನ್ನು ಸುತ್ತಾಡಿದ್ದ ಮೋದಿ, ತಾನು ಹೋದ ಕಡೆಯೆಲ್ಲಾಲ್ಲಾ ಭಯೋತ್ಪಾದನೆಯ ಕುರಿತಂತೆ ಮಾತನಾಡಿ ಪಾಕಿಸ್ತಾನವನ್ನು ಜಗತ್ತಿನ ಶತ್ರುವನ್ನಾಗಿ ಮಾಡಿಬಿಟ್ಟಿದ್ದರು.ಆದ್ರೆ ಪಾಪಿ ಪಾಕಿಸ್ತಾನವು ತಾನು ಭಯೋತ್ಪಾದನೆಯ ಬೆಂಬಲಿಗನಲ್ಲವೆಂದು ಸಾಬೀತುಪಡಿಸಲು ಹೋಗಿ ಜಗತ್ತಿನ ಮುಂದೆ ತಲೆತಗ್ಗಿಸಬಿಟ್ಟಿತ್ತು.ಇದೆಲ್ಲಾ ಕೇವಲ ಮೋದಿ ತಂತ್ರಗಾರಿಕೆಯಿಂದ ಮಾತ್ರ ಸಾಧ್ಯವಾಯಿತು.ಪಾಕ್ ಪತ್ರಕರ್ತರು, ಟಿವಿ ಚಾನೆಲ್ಲುಗಳು ಮೋದಿ ಪರವಾದ ಮಾತುಗಳನ್ನಾಡಲಾರಂಭಿಸಿದವು. ಇದಕ್ಕೆ ಮತ್ತೊಂದು ಉದಾಹರಣೆಯಾಗಿ ಸಿಕ್ಕಿಹಾಕಿಕೊಂಡಿದ್ದ ಹೆಣ್ಣು ಮಗಳನ್ನು ಬಿಡಿಸಿ ಕ್ಯಾಮೆರಾಕ್ಕೆ ಪೋಸು ಕೊಟ್ಟರು. ಅಲ್ಲಿನ ಮಕ್ಕಳ ಚಿಕಿತ್ಸೆಗಾಗಿ ವೀಸಾ ಕೊಡಿಸಿದರು. ಈ ರಾಜತಾಂತ್ರಿಕ ಸಂಗತಿಗಳನ್ನು ಎಷ್ಟು ಸೂಕ್ಷ್ಮವಾಗಿ ನಿಭಾಯಿಸಲಾಯಿತೆಂದರೆ ಚಿಕಿತ್ಸೆ ಪಡೆದ ಮಗುವಿನ ತಾಯಿ ಪಾಕೀಸ್ತಾನದ ಪ್ರಧಾನಿ ಸುಷ್ಮಾರೇ ಆದರೆ ಚೆನ್ನಾಗಿತ್ತು ಎಂದುಬಿಟ್ಟಿದ್ದರು.

ಭಾರತದ ವಿಶ್ವಸಂಸ್ಥೆಯ ಕಾರ್ಯದರ್ಶಿ ಯೆನಾಮ್ ಗಂಭೀರ್ ಅವರು, “ಪಾಕಿಸ್ತಾನ ಭೌಗೋಳಿಕವಾಗಿ ಉಗ್ರವಾದದ ಸಮನಾರ್ಥಕವಾಗಿ ಗುರುತಿಸಿಕೊಂಡಿದೆ. ಅದೀಗ ”ಟೆರರಿಸ್ಥಾನ್” ಆಗಿದ್ದು, ಉಗ್ರರ ಕಾರ್ಖಾನೆಗಳಲ್ಲಿ ಉಗ್ರರನ್ನು ಉತ್ಪಾದನೆ ಮಾಡಿ ಜಗತ್ತಿಗೆ ರಫ್ತು ಮಾಡುತ್ತಿದೆ. ಒಸಮಾ ಬಿನ್ ಲಾಡೆನ್, ಮುಲ್ಲಾ ಓವರ್ ಗೆ ರಕ್ಷಣೆ ನೀಡಿದ ದೇಶ, 26/11 ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಪಾಕಿಸ್ತಾನದಲ್ಲಿ ಸ್ವತಂತ್ರವಾಗಿ ತಿರುಗಾಡುತ್ತಿದ್ದಾನೆ. ಜಾಗತಿಕ ಉಗ್ರರನ್ನು ಉತ್ಪಾದಿಸುವುದು ಪಾಕಿಸ್ತಾನದ ಮುಖ್ಯ ಗುರಿಯಾಗಿದ್ದು, ಉಗ್ರರಿಗೆ ಸುರಕ್ಷಿತ ತಾಣಗಳನ್ನು ನೀಡುತ್ತಿದೆ. ಉಗ್ರ ಸಂಘಟನೆಗಳ ಮುಖಂಡರು ಪಾಕ್ ಮಿಲಿಟರಿ ಮತ್ತು ರಾಜಕಾರಣಿಗಳೊಂದಿಗೆ ಉತ್ತಮ ನಂಟು ಹೊಂದಿದ್ದಾರೆ” ಎಂದು ಪಾಕ್ ಮಾನ ಹರಾಜು ಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(6 ಜನವರಿ, 2019) ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಪ್ರೀತಿ ಕೇವಲ…
ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…
ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…