ಉಪಯುಕ್ತ ಮಾಹಿತಿ

ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿ ಆನ್‌ಲೈನ್ ಮೂಲಕ ಪಡೆಯಬಹುದು ಹೇಗೆ..?ತಿಳಿಯಲು ಈ ಲೇಖನ ಓದಿ..

1038

ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕ ಕಲ್ಪಿಸಿ, ಬಯೋಮೆಟ್ರಿಕ್ ಪದ್ಧತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗುತ್ತಿದೆ ಎಂದರು. ಸಾರ್ವಜನಿಕರು ಪಡಿತರ ಚೀಟಿಯನ್ನು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಸ್ಪೀಡ್ ಪೋಸ್ಟ್ ಮೂಲಕ ಪಡೆದುಕೊಳ್ಳಬಹುದಾಗಿದೆ ಎಂದು ಸಚಿವರು ವಿವರಿಸಿದರು. ಸರ್ಕಾರ ಬಿಪಿಎಲ್ ಮತ್ತು ಎಪಿಎಲ್ ಬದಲಾಗಿ ಆದ್ಯತಾ ಮತ್ತು ಆದ್ಯತಾ ರಹಿತ ಕುಟುಂಬಗಳೆಂದು ಗುರ್ತಿಸಲಾಗಿದ್ದು, 1.20 ಲಕ್ಷ ರೂ. ಆದಾಯ ಮಿತಿ ಹೊಂದಿರು ವವರನ್ನು ಆದ್ಯತಾ ಕುಟುಂಬವೆಂದು, ಉಳಿದಂತೆ ಆದ್ಯತಾ ರಹಿತ ಕುಟುಂಬ ಎಂದು ಗುರುತಿಸಲಾಗಿದೆ ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಗೋದಾಮುಗಳಲ್ಲಿಯೂ ಬಯೋಮೆಟ್ರಿಕ್ ಅಳವಡಿಸಲಾಗುತ್ತಿದೆ. ಇದರಿಂದ ಗೋದಾ ಮುನಿಂದ ನ್ಯಾಯಬೆಲೆ ಅಂಗಡಿಗಳಿಗೆ ಎಷ್ಟು ಆಹಾರ ಪೂರೈಕೆಯಾಗಿದೆ. ನ್ಯಾಯಬೆಲೆ ಅಂಗಡಿಗಳಿಂದ ಎಷ್ಟರ ಮಟ್ಟಿಗೆ ಆಹಾರ ವಿತರಣೆಯಾಗಿದೆ ಎಂಬ ಮಾಹಿತಿ  ದೊರೆಯಲಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಅಭಿಪ್ರಾಯ ಪಟ್ಟರು.

ರಾಜ್ಯದಲ್ಲಿ ಹತ್ತೂವರೆ ಲಕ್ಷ ಬೋಗಸ್ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದರಿಂದ ನಕಲಿ ಕಾರ್ಡ್‌ಗಳಿಗೆ
ಅವಕಾಶವಿರುವುದಿಲ್ಲ ಎಂದರು. ಆದರೂ ಬೋಗಸ್ ಕಾರ್ಡ್ ಪಡೆದಿರುವ ಬಗ್ಗೆ ಮಾಹಿತಿ ನೀಡಿದರೆ ಅಂತವರಿಗೆ 4೦೦ ರೂ., ಹಾಗೆಯೇ ಕಾಳಸಂತೆ ಆಹಾರ ಪತ್ತೆ ಹಚ್ಚುವವರಿಗೆ ಬಹುಮಾನ ನೀಡಲಾಗುವುದು ಎಂದು ಸಚಿವರು ನುಡಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸೌಲಭ್ಯಗಳು ಆದ್ಯತಾ ಹಾಗೂ ಆದ್ಯತಾ ರಹಿತ ಕುಟುಂಬಗಳಿಗೆ ತಲುಪಬೇಕು ಎಂದರು. ಯಾವುದೇ ರೀತಿಯ ದೂರುಗಳು ಕೇಳಿ ಬರದಂತೆ ನೋಡಿಕೊಳ್ಳಲಾಗುವುದು.ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಿದರೆ ಒಂದು ವಾರದಲ್ಲಿ ಪಡಿತರ ಚೀಟಿ ನೀಡಬೇಕು. ಈಗಾಗಲೇ ಈ ಪ್ರಕ್ರಿಯೆಯು ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ  ಆರಂಭಗೊಂಡಿದೆ ಎಂದು ಸಚಿವರು ಮಾಹಿತಿ ನೀಡಿದರು.

ಎಲ್ಲಾ ಪಡಿತರ ಚೀಟಿಗೆ ಆಧಾರ್ ಜೋಡಣಾ ಕಾರ್ಯವು ನಡೆದಿದೆ. ಜಿಲ್ಲೆಯಲ್ಲಿ ಶೇ.50ರಷ್ಟು ಕಾರ್ಯ ಪೂರ್ಣಗೊಂಡಿದೆ ಎಂದು ಸಚಿವರು ತಿಳಿಸಿದರು. ಹಾಗೆಯೇ ಸಿರಿಧಾನ್ಯ ಬೆಳೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಆ ನಿಟ್ಟಿನಲ್ಲಿ ರಾಗಿ ಮತ್ತು ಜೋಳ ಖರೀದಿ ಮಾಡಲಾಗುತ್ತಿದೆ. ಬೇಡಿಕೆ ಇರುವ ಕಡೆ ರಾಗಿ ಮತ್ತು ಜೋಳವನ್ನು ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಲಾಗುವುದು ಎಂದರು.

ಮುಖ್ಯಮಂತ್ರಿ ಅವರ ಅನಿಲಭಾಗ್ಯ ಯೋಜನೆಯಡಿ ಫಲಾನುಭವಿಗಳ ಪಟ್ಟಿ ಪಡೆಯ ಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ  ಪಂಗಡ ಹಾಗೂ ಕಾರ್ಮಿಕರಿಗೆ ಈ ಸೌಲಭ್ಯ
ನೀಡಲಾಗುತ್ತದೆ ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಮಿಲಿಯನ್ ಬಳಕೆದಾರರಿಗೆ ಜಿಯೋ ಕ್ರಿಸ್‌ಮಸ್’ಗೆ ನೀಡುತ್ತಿದೆ ಹೊಸ ಸೇವೆ.! ತಿಳಿಯಲು ಈ ಲೇಖನ ಓದಿ…

    ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್‌ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಶುಂಠಿ ನೀರನ್ನು ಕುಡಿಯೋದ್ರಿಂದ ಆಗೋ ಪ್ರಯೋಜನಗಳನ್ನು ಕೇಳಿದ್ರೆ ಈಗ್ಲೇ ಕುಡಿಯೋದಕ್ಕೆ ಸ್ಟಾರ್ಟ್ ಮಾಡ್ತೀರಾ..!

    ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…

  • ಸುದ್ದಿ

    ಎರಡನೇ ಪತ್ನಿಯಿಂದ ಸಿಎಂ ಕುಮಾರಸ್ವಾಮಿಗೆ ಸಂಕಷ್ಟ..!ಈ ಸುದ್ದಿ ನೋಡಿ…

    ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಯಾಯ್ವರು ಸಾಕಷ್ಟು ಏಳು ಬೀಳುಗಳ ನಡುವೆಯೂ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಿರುವ ಮುಖ್ಯಮಂತ್ರಿಗಳಿಗೆ ಈಗೊಂದು ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಕಳೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಈ ದೂರು ಪುರಸ್ಕರಿಸಿರುವ ನ್ಯಾಯಾಲಯ, ದೂರಿನ ವಿಚಾರಣೆಯನ್ನು ಬರುವ ಮೇ 2ಕ್ಕೆ ಮುಂದೂಡುವಂತೆ ಮಂಗಳವಾರ ಆದೇಶಿಸಿದೆ.ಕಳೆದ 2018ರಲ್ಲಿ ನಡೆದ ವಿಧಾನಸಭಾ…

  • ಸುದ್ದಿ

    ಗಣಪತಿಗೆ ಮಾನವ ಮುಖ ಇರುವ ಜಗತ್ತಿನ ಏಕೈಕ ದೇವಾಲಯ! ಇಲ್ಲಿ ಗಜಮುಖನಿಗಲ್ಲ ನರ ಮುಖದ ಗಣಪತಿಗೆ ನಡೆಸಲಾಗುತ್ತದೆ ಪೂಜೆ…!!

    ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….