ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.

ಈ ಪೈಕಿ ಜೀವಸತ್ವ ‘ಎ’ ಹಾಲು, ಬೆಣ್ಣೆ, ಕೆನೆ, ಮೊಟ್ಟೆಯ ಹಳದಿ, ಹಸಿರು ಮತ್ತು ಹಳದಿ/ಕೇಸರಿ ಬಣ್ಣದ ಹಣ್ಣು, ತರಕಾರಿಗಳಾದ ಕ್ಯಾರೆಟ್, ಮಾವು, ಪಪ್ಪಾಯಿ, ಕುಂಬಳಕಾಯಿಯಲ್ಲಿ ಹೇರಳವಾಗಿದ್ದು ನಮ್ಮ ಕಣ್ಣಿನ ಆರೋಗ್ಯಕ್ಕೆ ಅತ್ಯವಶ್ಯ. ಕಣ್ಣಿನ ದೃಷ್ಟಿ ಬಲಗೊಳ್ಳಲು, ಕತ್ತಲು ಮತ್ತು ಬೆಳಕಿನಲ್ಲಿ ದೃಷ್ಟಿಯ ಸಮತೋಲನ ಕಾಪಾಡಲು ಚರ್ಮದ ಮೇಲ್ಮೈ ಆರೋಗ್ಯಕರವಾಗಿ ಕಾಂತಿಯುಕ್ತವಾಗಿರಲು, ಗಂಡಸರಲ್ಲಿ ಆರೋಗ್ಯಪೂರ್ಣ ವೀರ್ಯ ಉತ್ಪಾದನೆಯಾಗಲು ಮತ್ತು ಅನ್ನನಾಳ, ವಾಯುನಾಳ, ಮೂತ್ರನಾಳಗಳ ಆರೋಗ್ಯ ಕಾಪಾಡಲು ‘ಎ’ ಜೀವಸತ್ವ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ‘ಇ’ ಸೊಪ್ಪು, ಕಾಯಿ/ಬೀಜ, ತರಕಾರಿ, ಅಡುಗೆ ಎಣ್ಣೆ, ಮೊಟ್ಟೆಯಲ್ಲಿ ಹೇರಳವಾಗಿದೆ. ನಮ್ಮ ದೇಹದಲ್ಲಿ ನಡೆಯುವ ಹಲವಾರು ಪರಿವರ್ತನಾ ಕ್ರಿಯೆಗಳಿಂದ ಉತ್ಪತ್ತಿಯಾಗುವ ವಿಷಕಾರಿ ಅಂಶಗಳು ಜೀವಕಣಗಳಿಗೆ ಹಾನಿಮಾಡಿ ಕ್ಯಾನ್ಸರ್ ಮತ್ತಿತರ ಮಾರಣಾಂತಿಕ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದೆ. ‘ಇ’ ಜೀವಸತ್ವ ಎಲ್ಲ ಜೀವಕಣ ಮತ್ತು ಅಂಗಗಳನ್ನು ಈ ವಿಷಕಾರಿ ಅಂಶಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ದೃಢಪಟ್ಟಿದೆ.

ಇನ್ನು ನೀರಿನಲ್ಲಿ ಕರಗುವ ಜೀವಸತ್ವಗಳ ಗುಂಪಿನಲ್ಲಿ ‘ಬಿ’ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ವಿವಿಧ ಜೀವಸತ್ವಗಳಿವೆ. ಈ ಪೈಕಿ ಜೀವಸತ್ವ ‘ಬಿ1’ ಪಾಲಿಷ್ ಮಾಡದ ಅಕ್ಕಿ, ಕಾಳುಗಳಲ್ಲಿ ಯಥೇಚ್ಚವಾಗಿದ್ದು, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್ನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅತಿ ಮುಖ್ಯ ಪಾತ್ರ ವಹಿಸುತ್ತದೆ.

ಇನ್ನು ಮೊಟ್ಟೆ, ಮಾಂಸ, ಕಾಳು ಮತ್ತು ಹಾಲಿನಲ್ಲಿ ಹೇರಳವಾಗಿರುವ ‘ಬಿ2’ ಜೀವಸತ್ವ, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್ ಮತ್ತು ಕೊಬ್ಬಿನ ಅಂಶ ಶಕ್ತಿಯಾಗಿ ಪರಿರ್ತನೆಗೊಳ್ಳಲು ಅತ್ಯವಶ್ಯ. ಈ ಜೀವಸತ್ವದ ಕೊರತೆಯುಂಟಾದಾಗ ಬಾಯಿ, ತುಟಿ, ನಾಲಗೆಯಲ್ಲಿ ಹುಣ್ಣುಗಳಾಗುತ್ತವೆ ಮತ್ತು ರೋಗಿಗಳು ಚರ್ಮಕ್ಕೆ ಸಬಂಧಪಟ್ಟ ಕಾಯಿಲೆಗಳಿಂದಲೂ ನರಳುತ್ತಾರೆ. ಜೀವಸತ್ವ ‘ಬಿ3’ ಬೇಳೆಕಾಳು, ಧಾನ್ಯಗಳು, ಹಾಲು, ಮಾಂಸದಲ್ಲಿ ಹೇರಳವಾಗಿದ್ದು; ಆಹಾರದಲ್ಲಿನ ಕಾರ್ಬೋಹೈಡ್ರೇಟ್, ಕೊಬ್ಬು ಮತ್ತು ಪ್ರೋಟೀನ್ಗಳ ಪರಿವರ್ತನೆಗೆ ಸಹಕಾರಿ. ‘ಬಿ3’ ಜೀವಸತ್ವದ ಕೊರತೆಯಾದಾಗ ಪರಿವರ್ತನಾ ಕಾರ್ಯಗಳಿಗೆ ಧಕ್ಕೆಯುಂಟಾಗಿ, ದೇಹದಲ್ಲಿ ಶಕ್ತಿಯ ಉತ್ಪಾದನೆ ಕುಂಠಿತಗೊಳ್ಳುತ್ತದೆ. ಪರಿಣಾಮ ರೋಗಿಗಳು ಚರ್ಮ, ನರಮಂಡಲ ಮತ್ತು ಜೀರ್ಣಕ್ರಿಯೆಗೆ ಸಂಬಂಧಪಟ್ಟ ಕಾಯಿಲೆಗಳಿಂದ ನರಳುತ್ತಾರೆ.

ಬಯೊಟಿನ್ ಜೀವಸತ್ವವು ಕಾಳು, ಬೀಜ ಮತ್ತು ಮೊಟ್ಟೆಯಲ್ಲಿ ಹೇರಳವಾಗಿದ್ದು; ಇದು ಆಹಾರದಲ್ಲಿನ ಕೊಬ್ಬು ಮತ್ತು ಅಂಗಾರಕ ವನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅವಶ್ಯ. ಬಯೊಟಿನ್ನ ಕೊರತೆಯುಂಟಾದಾಗ ತುಟಿ, ನಾಲಗೆ, ಚರ್ಮಕ್ಕೆ ಸಂಬಂಧಪಟ್ಟ ಕಾಯಿಲೆಗಳು ತಲೆ ದೋರುತ್ತವೆ ಮತ್ತು ರೋಗಿಗಳು ಮಾಂಸಖಂಡಗಳ ನೋವು, ಅಜೀರ್ಣ, ಖಿನ್ನತೆಯಿಂದ ನರಳುತ್ತಾರೆ. ಹಸಿರು ತರಕಾರಿ, ಸೊಪ್ಪು, ಕಾಳುಗಳಲ್ಲಿ ಹೇರಳವಾಗಿರುವ ಫೋಲಿಕ್ ಆಮ್ಲವು ರಕ್ತಕಣಗಳು ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ಬಿ12 ಮೊಟ್ಟೆ, ಮಾಂಸ ಮತ್ತು ಹಾಲಿನಲ್ಲಿ ಹೇರಳವಾಗಿದ್ದು, ರಕ್ತಕಣ ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಕೊರತೆಯುಂಟಾದರೆ ರಕ್ತಹೀನತೆ, ಕೈ-ಕಾಲು ಅದರಲ್ಲೂ ಅಂಗೈ-ಪಾದಗಳಲ್ಲಿ ಜೋಮು ಹಿಡಿಯುವುದು, ಸ್ಪರ್ಶಹೀನತೆ, ನರಗಳ ದೌರ್ಬಲ್ಯ, ವಿಪರೀತ ಕಿರಿಕಿರಿಯಿಂದ ರೋಗಿಗಳು ನರಳುತ್ತಾರೆ. ಜೀವಸತ್ವ ‘ಸಿ’ ಟೊಮೆಟೊ, ಬೆಟ್ಟದ ನೆಲ್ಲಿ, ಕಿವಿಹಣ್ಣು, ಇನ್ನಿತರ ಹುಳಿ ಹಣ್ಣು ಮತ್ತು ತರಕಾರಿಗಳಲ್ಲಿ ಹೇರಳವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…
ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…
ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…
ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…
ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್ಎಟಿಎಫ್ ಅಲ್ಲಿ…