ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.

ಈ ಪೈಕಿ ಜೀವಸತ್ವ ‘ಎ’ ಹಾಲು, ಬೆಣ್ಣೆ, ಕೆನೆ, ಮೊಟ್ಟೆಯ ಹಳದಿ, ಹಸಿರು ಮತ್ತು ಹಳದಿ/ಕೇಸರಿ ಬಣ್ಣದ ಹಣ್ಣು, ತರಕಾರಿಗಳಾದ ಕ್ಯಾರೆಟ್, ಮಾವು, ಪಪ್ಪಾಯಿ, ಕುಂಬಳಕಾಯಿಯಲ್ಲಿ ಹೇರಳವಾಗಿದ್ದು ನಮ್ಮ ಕಣ್ಣಿನ ಆರೋಗ್ಯಕ್ಕೆ ಅತ್ಯವಶ್ಯ. ಕಣ್ಣಿನ ದೃಷ್ಟಿ ಬಲಗೊಳ್ಳಲು, ಕತ್ತಲು ಮತ್ತು ಬೆಳಕಿನಲ್ಲಿ ದೃಷ್ಟಿಯ ಸಮತೋಲನ ಕಾಪಾಡಲು ಚರ್ಮದ ಮೇಲ್ಮೈ ಆರೋಗ್ಯಕರವಾಗಿ ಕಾಂತಿಯುಕ್ತವಾಗಿರಲು, ಗಂಡಸರಲ್ಲಿ ಆರೋಗ್ಯಪೂರ್ಣ ವೀರ್ಯ ಉತ್ಪಾದನೆಯಾಗಲು ಮತ್ತು ಅನ್ನನಾಳ, ವಾಯುನಾಳ, ಮೂತ್ರನಾಳಗಳ ಆರೋಗ್ಯ ಕಾಪಾಡಲು ‘ಎ’ ಜೀವಸತ್ವ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ‘ಇ’ ಸೊಪ್ಪು, ಕಾಯಿ/ಬೀಜ, ತರಕಾರಿ, ಅಡುಗೆ ಎಣ್ಣೆ, ಮೊಟ್ಟೆಯಲ್ಲಿ ಹೇರಳವಾಗಿದೆ. ನಮ್ಮ ದೇಹದಲ್ಲಿ ನಡೆಯುವ ಹಲವಾರು ಪರಿವರ್ತನಾ ಕ್ರಿಯೆಗಳಿಂದ ಉತ್ಪತ್ತಿಯಾಗುವ ವಿಷಕಾರಿ ಅಂಶಗಳು ಜೀವಕಣಗಳಿಗೆ ಹಾನಿಮಾಡಿ ಕ್ಯಾನ್ಸರ್ ಮತ್ತಿತರ ಮಾರಣಾಂತಿಕ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದೆ. ‘ಇ’ ಜೀವಸತ್ವ ಎಲ್ಲ ಜೀವಕಣ ಮತ್ತು ಅಂಗಗಳನ್ನು ಈ ವಿಷಕಾರಿ ಅಂಶಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ದೃಢಪಟ್ಟಿದೆ.

ಇನ್ನು ನೀರಿನಲ್ಲಿ ಕರಗುವ ಜೀವಸತ್ವಗಳ ಗುಂಪಿನಲ್ಲಿ ‘ಬಿ’ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ವಿವಿಧ ಜೀವಸತ್ವಗಳಿವೆ. ಈ ಪೈಕಿ ಜೀವಸತ್ವ ‘ಬಿ1’ ಪಾಲಿಷ್ ಮಾಡದ ಅಕ್ಕಿ, ಕಾಳುಗಳಲ್ಲಿ ಯಥೇಚ್ಚವಾಗಿದ್ದು, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್ನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅತಿ ಮುಖ್ಯ ಪಾತ್ರ ವಹಿಸುತ್ತದೆ.

ಇನ್ನು ಮೊಟ್ಟೆ, ಮಾಂಸ, ಕಾಳು ಮತ್ತು ಹಾಲಿನಲ್ಲಿ ಹೇರಳವಾಗಿರುವ ‘ಬಿ2’ ಜೀವಸತ್ವ, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್ ಮತ್ತು ಕೊಬ್ಬಿನ ಅಂಶ ಶಕ್ತಿಯಾಗಿ ಪರಿರ್ತನೆಗೊಳ್ಳಲು ಅತ್ಯವಶ್ಯ. ಈ ಜೀವಸತ್ವದ ಕೊರತೆಯುಂಟಾದಾಗ ಬಾಯಿ, ತುಟಿ, ನಾಲಗೆಯಲ್ಲಿ ಹುಣ್ಣುಗಳಾಗುತ್ತವೆ ಮತ್ತು ರೋಗಿಗಳು ಚರ್ಮಕ್ಕೆ ಸಬಂಧಪಟ್ಟ ಕಾಯಿಲೆಗಳಿಂದಲೂ ನರಳುತ್ತಾರೆ. ಜೀವಸತ್ವ ‘ಬಿ3’ ಬೇಳೆಕಾಳು, ಧಾನ್ಯಗಳು, ಹಾಲು, ಮಾಂಸದಲ್ಲಿ ಹೇರಳವಾಗಿದ್ದು; ಆಹಾರದಲ್ಲಿನ ಕಾರ್ಬೋಹೈಡ್ರೇಟ್, ಕೊಬ್ಬು ಮತ್ತು ಪ್ರೋಟೀನ್ಗಳ ಪರಿವರ್ತನೆಗೆ ಸಹಕಾರಿ. ‘ಬಿ3’ ಜೀವಸತ್ವದ ಕೊರತೆಯಾದಾಗ ಪರಿವರ್ತನಾ ಕಾರ್ಯಗಳಿಗೆ ಧಕ್ಕೆಯುಂಟಾಗಿ, ದೇಹದಲ್ಲಿ ಶಕ್ತಿಯ ಉತ್ಪಾದನೆ ಕುಂಠಿತಗೊಳ್ಳುತ್ತದೆ. ಪರಿಣಾಮ ರೋಗಿಗಳು ಚರ್ಮ, ನರಮಂಡಲ ಮತ್ತು ಜೀರ್ಣಕ್ರಿಯೆಗೆ ಸಂಬಂಧಪಟ್ಟ ಕಾಯಿಲೆಗಳಿಂದ ನರಳುತ್ತಾರೆ.

ಬಯೊಟಿನ್ ಜೀವಸತ್ವವು ಕಾಳು, ಬೀಜ ಮತ್ತು ಮೊಟ್ಟೆಯಲ್ಲಿ ಹೇರಳವಾಗಿದ್ದು; ಇದು ಆಹಾರದಲ್ಲಿನ ಕೊಬ್ಬು ಮತ್ತು ಅಂಗಾರಕ ವನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅವಶ್ಯ. ಬಯೊಟಿನ್ನ ಕೊರತೆಯುಂಟಾದಾಗ ತುಟಿ, ನಾಲಗೆ, ಚರ್ಮಕ್ಕೆ ಸಂಬಂಧಪಟ್ಟ ಕಾಯಿಲೆಗಳು ತಲೆ ದೋರುತ್ತವೆ ಮತ್ತು ರೋಗಿಗಳು ಮಾಂಸಖಂಡಗಳ ನೋವು, ಅಜೀರ್ಣ, ಖಿನ್ನತೆಯಿಂದ ನರಳುತ್ತಾರೆ. ಹಸಿರು ತರಕಾರಿ, ಸೊಪ್ಪು, ಕಾಳುಗಳಲ್ಲಿ ಹೇರಳವಾಗಿರುವ ಫೋಲಿಕ್ ಆಮ್ಲವು ರಕ್ತಕಣಗಳು ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ಬಿ12 ಮೊಟ್ಟೆ, ಮಾಂಸ ಮತ್ತು ಹಾಲಿನಲ್ಲಿ ಹೇರಳವಾಗಿದ್ದು, ರಕ್ತಕಣ ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಕೊರತೆಯುಂಟಾದರೆ ರಕ್ತಹೀನತೆ, ಕೈ-ಕಾಲು ಅದರಲ್ಲೂ ಅಂಗೈ-ಪಾದಗಳಲ್ಲಿ ಜೋಮು ಹಿಡಿಯುವುದು, ಸ್ಪರ್ಶಹೀನತೆ, ನರಗಳ ದೌರ್ಬಲ್ಯ, ವಿಪರೀತ ಕಿರಿಕಿರಿಯಿಂದ ರೋಗಿಗಳು ನರಳುತ್ತಾರೆ. ಜೀವಸತ್ವ ‘ಸಿ’ ಟೊಮೆಟೊ, ಬೆಟ್ಟದ ನೆಲ್ಲಿ, ಕಿವಿಹಣ್ಣು, ಇನ್ನಿತರ ಹುಳಿ ಹಣ್ಣು ಮತ್ತು ತರಕಾರಿಗಳಲ್ಲಿ ಹೇರಳವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…
ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್ಬೈಕ್ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….
ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು
ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…
ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…