ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ಆಧುನಿಕ ಜೀವನ ಶೈಲಿಯಲ್ಲಿ ಸಂಸ್ಕೃತಿ ಮರೆತು ಹೋಗಿರುವ ಸಂದರ್ಭವಿದು.. ಆದರೆ ತಮ್ಮ ಶಾಲೆಯ ಮಕ್ಕಳಿಗೆ ಹಳ್ಳಿಯ ಜೀವನ.. ಅಲ್ಲಿನ ರೈತರು.. ಗೋಮಾತೆ, ಹಳ್ಳಿಗಳಲ್ಲಿ ಆಚರಿಸುವ ಹಬ್ಬದ ರೀತಿ ನೀತಿಗಳ ಪರಿಚಯ ಮಾಡಲು ನಾಗಶೆಟ್ಟಿಹಳ್ಳಿಯ ತಮ್ಮ ಶಾಲೆಯಲ್ಲಿ ಅದ್ಭುತವಾಗಿ ಹಳ್ಳಿಯನ್ನೇ ಮರುನಿರ್ಮಾಣ ಮಾಡಿದ್ದರು..

ಶಾಲೆಯ ತುಂಬೆಲ್ಲಾ ಸಾಂಸ್ಕೃತಿಕ ಉಡುಗೆ ತೊಡುಗೆಯಲ್ಲಿ ಮಿಂಚಿದ ಮಕ್ಕಳು.. ಅಲ್ಲಲ್ಲಿ ಕಬ್ಬಿನ ರಾಶಿ.. ತರಕಾರಿ ಅಂಗಡಿಗಳ ಅಣುಕುಗಳು… ಭಕ್ತಿಯಿಂದ ನಡೆದ ಗೋಪೂಜೆ.. ಅಂಗಳ ತುಂಬೆಲ್ಲಾ ಸಗಣಿಯಿಂದ ತಾರಸಿ ಬಿಟ್ಟ ರಂಗೋಲಿಗಳು.. ಮಡಿಕೆಯಲ್ಲಿ ಅಲ್ಲೇ ತಯಾರು ಮಾಡಿದ ಪೊಂಗಲ್.. ನಿಜವಾಗಿಯೂ ನೋಡಲೆರೆಡು ಕಣ್ಣು ಸಾಲದು..

ಶಿಕ್ಷಕರ ಸಹಕಾರದಿಂದ ಶಾಲೆಯನ್ನು ಹಳ್ಳಿಯ ರೀತಿ ಸಿಂಗರಿಸಿ ಸಗಣಿಯಿಂದ ಸಾರಸಿ, ರಂಗೋಲಿಯನ್ನು ಹಾಕಿ, ಮಾವಿನ ತೋರಣ, ಬಾಳೆಕಂದುಗಳನ್ನು ಕಟ್ಟಿ, ಕೃತಕ ಸಂತೆಯನ್ನು ಸೃಷ್ಟಿಸಿದ್ದು ನೋಡುಗರ ಮನ ತಣಿಸುವುದರ ಜೊತೆಗೆ ನಮ್ಮ ಹಳ್ಳಿಯ ಸಂಸ್ಕೃತಿಯ ಬಗ್ಗೆ ಹೆಮ್ಮೆ ಪಡುವಂತಿತ್ತು..

ರೈತರು, ದೇವರೆಂದು ಪೂಜಿಸುವ ಸುಗ್ಗಿ ರಾಶಿಯನ್ನು ನಿರ್ಮಾಣ ಮಾಡಿ ಅದಕ್ಕೆ ಪೂಜೆ ಮಾಡಿದ್ದು ವಿಶೇಷವಾಗಿತ್ತು..

ಇಷ್ಟೇ ಅಲ್ಲದೇ ಸುನಿತಾ ಮಂಜುನಾಥ್ ರವರು ಶಾಲಾ ಶಿಕ್ಷಕರೊಡಗೂಡಿ ಸಾಮೂಹಿಕವಾಗಿ ಶಾಲಾ ಆವರಣದಲ್ಲೇ ಪೊಂಗಲ್ ಅನ್ನು ತಯಾರು ಮಾಡಿ ಮಕ್ಕಳಿಗೆ ಬಡಿಸಿದರು..

ಕೃತಕವಾಗಿ ನೆಲ್ಲು ಹುಲ್ಲಿನ ಗುಡಿಸಲನ್ನು ನಿರ್ಮಾಣ ಮಾಡಿ ಅಲ್ಲಿ ಹಬ್ಬದ ಅಂಗವಾಗಿ ಗೋಮಾತೆಗೆ ಭಕ್ತಿಯಿಂದ ಪೂಜೆಯನ್ನು ಮಾಡಿ ಮಕ್ಕಳಿಗೆ ಕಾಮಧೇನು ವಿನ ಮಹತ್ವವನ್ನು ತಿಳಿಸಿಕೊಟ್ಟರು..

ಸಾಮಾಜಿಕ ಕೆಲಸಗಳಲ್ಲಿ ಯಾವತ್ತಿದ್ದರೂ ಮುಂದು ಎನಿಸಿಕೊಳ್ಳುವ ಪ್ರಥಮ್ ರವರು ಸುನಿತಾ ಮಂಜುನಾಥ್ ರವರ ಮಾತಿಗೆ ಓಗೊಟ್ಟು ಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಕ್ಕಳಿಗೆ ಅರಿವು ಮೂಡಿಸುತ್ತಿರುವ ರೀತಿಯನ್ನು ನೋಡಿ ಖುಷಿ ಪಟ್ಟರು..

ಈ ರೀತಿಯಾದ ಒಂದು ಅದ್ಭುತವಾದ ಪರಿಕಲ್ಪನೆಯನ್ನು ವಾಸ್ತವ ರೂಪಕ್ಕೆ ತಂದು ಮಕ್ಕಳಿಗೆ ನಮ್ಮ ರೈತರ ಜೀವನ ಶೈಲಿಯನ್ನು ತೋರಿಸುವುದರ ಜೊತೆಗೆ ಸಂಕ್ರಾಂತಿ ಹಬ್ಬದ ಸುಗ್ಗಿ ಪೂಜೆಯ ಮಹತ್ವವನ್ನು ತಿಳಿಸಿಕೊಟ್ಟ *ಸುನಿತಾ ಮಂಜುನಾಥ್* ರವರಿಗೆ ನಮ್ಮ ಕಡೆಯಿಂದ ಧನ್ಯವಾದಗಳು..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…
ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.
ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…
ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.