News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಈ ಭಯಾನಕ ಕೋಳಿ ಜ್ವರದ ಬಗ್ಗೆ ನಿಮಗೆಷ್ಟು ಗೊತ್ತು?ಈ ರೋಗದ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಗೊತ್ತಾ..?ಉಪಯುಕ್ತ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

1443

ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್‌ಫ್ಲೂಯೆನ್‌ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.ಇದು ಟರ್ಕಿ ಕೋಳಿ,ಗಿಣಿ ಕೋಳಿ,ಬಾತು ಕೋಳಿ,ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ.ಇದೊಂದು ಸಾಂಕ್ರಾಮಿಕ ಖಾಯಿಲೆಯಾಗಿದ್ದು,ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ.ಕೆಲವೊಮ್ಮೆ ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು.

ಈ ರೋಗ ಹೇಗೆ ಹರಡುತ್ತದೆ…

ರೋಗ ಪೀಡಿತ ಕೋಳಿ ಅಥವಾ ಹಕ್ಕಿಗಳ ಮಾಂಸವನ್ನು ಸರಿಯಾಗಿ ಬೇಯಿಸದೇ ತಿನ್ನುವುದರಿಂದ ಸೋನ್ಕಿರುವ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು, ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಶಿತಗೊಂಡಾಗ ಈ ಖಾಯಿಲೆ ಹರಡುತ್ತದೆ ಮತ್ತು ಕೆಲವು ಸಂದರ್ಭಗಳಲ್ಲಿ ಗಾಳಿಯ ಮೂಲಕವೂ ಮನುಷ್ಯರಿಗೆ ಹರಡುತ್ತದೆ. ಸೋಂಕಿಗೆ ಒಳಗಾದ ಹಕ್ಕಿಯ ಮಲ, ಮೂತ್ರ, ಸಿಂಬಳ ಮತ್ತು ಉಸಿರು ರೋಗಾಣುಗಳಿಂದ ತುಂಬಿರುತ್ತದೆ. ಹಕ್ಕಿ ವಾಸಿಸುವ ಸ್ಥಳ, ಅಲ್ಲಿನ ಗಾಳಿ, ಸಾಕಣೆಗೆ ಬಳಸುವ ಉಪಕರಣ ಎಲ್ಲವೂ ವೈರಸ್‌ಮಯವಾಗಿರುತ್ತವೆ. ಇವುಗಳ ಸಂಪರ್ಕಕ್ಕೆ ಬರುವ ಎಲ್ಲ ಪಕ್ಷಿಗಳಿಗೂ ಸೋಂಕು ತಗುಲುತ್ತದೆ. ಕೋಳಿ ಫಾರಂನಲ್ಲಿ ಒಂದು ಕೋಳಿಗೆ ಸೋಂಕು ಉಂಟಾದರೆ ಕೆಲವೇ ಗಂಟೆಗಳಲ್ಲಿ ಎಲ್ಲ ಕೋಳಿಗಳಿಗೂ ಕಾಯಿಲೆ ಅಂಟಿಕೊಳ್ಳುತ್ತದೆ. ಪಕ್ಷಿಗಳಿಗೆ ಹಂದಿಯಿಂದ, ಹಂದಿಗಳಿಗೆ ಪಕ್ಷಿಗಳಿಂದ ಸೋಂಕು ಅಂಟುವುದೂ ಉಂಟು. ಅತಿ ಅಪರೂಪವಾಗಿ ಪಕ್ಷಿಗಳ ಕಾಯಿಲೆ ಮಾನವನಿಗೆ ಅಂಟುವುದೂ ಇದೆ. ಹೀಗಾಗಿ ಕೋಳಿ ಫಾರಂನಲ್ಲಿ ಕೆಲಸ ಮಾಡುವವರು, ಕೋಳಿ ಸಾಕಿರುವ ಮನೆಯವರು ಹಕ್ಕಿ ಜ್ವರಕ್ಕೆ ಸೆರೆಯಾಗುತ್ತಾರೆ. ಪಕ್ಷಿಗಳನ್ನು, ಮೊಟ್ಟೆಯನ್ನು ಮಾರುವವರಿಗೂ, ಕತ್ತರಿಸುವವರಿಗೂ, ಕೋಳಿ ಮಾಂಸದ ಅಡುಗೆ ಮಾಡುವವರಿಗೂ ಹಕ್ಕಿ ಜ್ವರ ಅಂಟುವ ಸಂಭವ ಇರುತ್ತದೆ. ರೋಗಾಣುಗಳು ಮುಖ್ಯವಾಗಿ ಉಸಿರಾಡುವ ಗಾಳಿಯೊಂದಿಗೆ ಮಾನವನ ದೇಹ ಸೇರುತ್ತವೆ. ಮನುಷ್ಯನಿಗೆ ಅಂಟಿದ ಸೋಂಕು ಮತ್ತೊಬ್ಬರಿಗೆ ಅಂಟುವುದಿಲ್ಲ. ಹಾಗೇನಾದರೂ ಆಗಿದ್ದರೆ ಸೋಂಕು ಅತ್ಯಂತ ತೀವ್ರಗತಿಯಲ್ಲಿ ಹರಡಿ ಮನುಷ್ಯರ ಮಾರಣಹೋಮವೇ ನಡೆದುಹೋಗುತ್ತಿತ್ತು.

ಈ ರೋಗದ ಲಕ್ಷಣಗಳು:-

ಹಕ್ಕಿ ಜ್ವರದ ಲಕ್ಷಣಗಳು ಸಾಮಾನ್ಯವಾಗಿ ಹೆಚ್1ಏನ್1 ಜ್ವರದ ಲಕ್ಷಣಗಳನ್ತಯೇ ಇರುತ್ತವೆ.

  • ಈ ರೋಗದ ಸೋಂಕಿಗೆ ಒಳಗಾದ ವ್ಯಕ್ತಿಗಳಲ್ಲಿ 2-3 ದಿನದಲ್ಲಿ ರೋಗ ಲಕ್ಷಣಗಳು ಪ್ರಕಟವಾಗುತ್ತವೆ.
  • ಜ್ವರ,ಕೆಮ್ಮು,ಶೀತ,ತಲೆನೋವು,ಗಂಟಲು ಕೆರೆತ,ನೆಗಡಿ,ಸ್ನಾಯುಗಳಲ್ಲಿ ನೋವು,ಮತ್ತು ಆಯಾಸ ಕಾಣಿಸಿಕೊಳ್ಳುತ್ತದೆ.
  • ಕೆಲವೊಮ್ಮೆ ವಾಂತಿ ಮತ್ತು ಭೇದಿ ಆಗಬಹುದು.ಉಸಿರಾಟದಲ್ಲಿ ತೊಂದರೆ ಕಾಣಿಸಬಹುದು.
  • ಹಕ್ಕಿ ಜ್ವರದಿಂದ ಉಸಿರಾಟ ಸಮಸ್ಯೆ ಎದುರಾಗಿ ಸಾವು ಸಂಭವಿಸಬಹುದು.
  • ಕಾಯಿಲೆ ಆರಂಭದ 48 ಗಂಟೆಗಳಲ್ಲಿ ಔಷಧ ತೆಗೆದುಕೊಂಡರೆ ಪರಿಣಾಮ ಹೆಚ್ಚು.

ಮುನ್ನೆಚ್ಚರಿಕೆ ಕ್ರಮಗಳು:-

ಹಕ್ಕಿ ಜ್ವರ ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಜನರು ಕೆಲವು ಮುನ್ನೆಚ್ಚರಿಕ ಕ್ರಮಗಳನ್ನು ಕೈ ಗೊಂಡರೆ ಹಕ್ಕಿ ಜ್ವರದ ಸೋಂಕು ಹರಡದಂತೆ ತಡೆಯಬಹುದು…

  • ಶಂಕಿತ ಹಕ್ಕಿ ಜ್ವರ ಪೀಡಿತ ಕೋಳಿಗಳು,ಹಕ್ಕಿಗಳು ಹಾಗೂ ಬಾತು ಕೋಳಿಗಳ ಸಂಪರ್ಕಕ್ಕೆ ಬರದಂತೆ ಎಚ್ಚರವಹಿಸಬೇಕು.
  • ಬೇರೆಯವರ ಮನೆಗೆ ಭೇಟಿ ನೀಡಿದಾಗ ಅಲ್ಲಿರುವ ಶಂಕಿತ ಹಕ್ಕಿ ಜ್ವರ ಪೀಡಿತ ಕೋಳಿ ಅಥವಾ ಹಕ್ಕಿಗಳನ್ನು ಮುಟ್ಟಬಾರದು.
  • ಕೋಳಿ ಮತ್ತು ಹಕ್ಕಿಗಳ ಮಾಂಸವನ್ನು ಹಾಗೂ ಮೊಟ್ಟೆಗಳನ್ನು ಸೂಕ್ತ ರೀತಿಯಲ್ಲಿ ಬೇಯಿಸಿ ತಿನ್ನುವುದು ಸುರಕ್ಷಿತ.
  • ಕೋಳಿ ಮತ್ತು ಹಕ್ಕಿಗಳನ್ನು ಮನೆಯಲ್ಲಿಯೇ ಕತ್ತರಿಸಬೇಡಿ. ಇವುಗಳನ್ನು ಮನೆಯಲ್ಲಿಯೇ ಕತ್ತರಿಸಿ ಕೊಲ್ಲುವುದರಿಂದ ಸೋಂಕು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ.
  • ಹಕ್ಕಿಜ್ವರದ ಚಿಕಿತ್ಸೆಯಲ್ಲಿ “ಟ್ಯಾಮಿಫ್ಲೂ’ ಮಾತ್ರೆ ಬಳಸಲಾಗುತ್ತದೆ. ಮಾತ್ರೆಗಳ ಸ೦ಗ್ರಹ ಸಾಕಷ್ಟು ಇರುವುದರಿ೦ದ ಚಿಕಿತ್ಸೆಗೂ ಯಾವುದೇ ತೊ೦ದರೆಯಾಗುವುದಿಲ್ಲ ಎ೦ದು ಆರೋಗ್ಯ ಇಲಾಖೆ ಸಹ ಮಾಹಿತಿ ನೀಡಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…

  • ಆರೋಗ್ಯ

    ದೇಹದಲ್ಲಿ ರಕ್ತ ಕಡಿಮೆ ಇದೆಯೇ? ರಕ್ತ ಹೆಚ್ಚಾಗಲು ಈ ಟಿಪ್ಸ್ ಫಾಲೋ ಮಾಡಿ ಸಾಕು.

    ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…

  • ಸಿನಿಮಾ

    ಕನ್ನಡದಲ್ಲಿ ಆರ್ಭಟಿಸುತ್ತಿರುವ ಕಾಲೇಜ್ ಕುಮಾರ್ ಟ್ರೈಲರ್..!ತಿಳಿಯಲು ಈ ಲೇಖನ ಓದಿ..

    ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.

  • ಉಪಯುಕ್ತ ಮಾಹಿತಿ

    ಮಲಗುವ ರೀತಿ ನೋಡಿ ನಿಮ್ಮ ಗುಣಗಳನ್ನು ತಿಳಿಯಬಹುದು..!ಹೇಗೆ ಗೊತ್ತಾ..?

    ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….

  • ಸುದ್ದಿ

    ಬೆಂಗಳೂರು ಅಲ್ಲ ರಾಜ್ಯವ್ಯಾಪಿ ಐ ಎಂ ಎ ಇಂದ ಮೋಸ ಹೋದಂತಹ ಪ್ರಜೆಗಳು…!

    ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…